Homeಚಳವಳಿಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು - ಮರೀಚಿಕೆಯಾದ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಎಷ್ಟು ವರ್ಷ ನಾವು ಹೀಗೆ ಪರದಾಡಬೇಕು ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯರು

- Advertisement -
- Advertisement -

ಮುಂಗಾರು ಆರಂಭವಾಗಿ ರಭಸದಿಂದ ಸುರಿಯುತ್ತಿದೆ. ಆಗಲೆ ಮಲೆನಾಡಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತದ ವರದಿಗಳು ಬರುತ್ತಿವೆ. ಮುನ್ನೆಚ್ಚರಿಸಿ ವಹಿಸಿ, ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಜನರಿಗೆ ನೋಟಿಸ್ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪ್ರತಿ ದಿನ ದೊಡ್ಡ ಮಳೆ  ಸುರಿಯುತ್ತಿದ್ದು, ಅಲ್ಲಿನ ಬಡಜನರು ಭಯಭೀತರಾಗಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಸರಣಿ ವರದಿ ಮಾಡಲು ಮುಂದಾಗಿದೆ. ಅದರ ಮೊದಲ ಕಂತು ಇಲ್ಲಿದೆ.

ಈ ಮೇಲಿನ ಚಿತ್ರ ನೋಡಿ. ಇದು ಕಳೆದ ವರ್ಷ ಸುರಿದ ಮಳೆಗೆ ಮನೆ ಪಕ್ಕದಲ್ಲಿಯೇ ಭೂಕುಸಿತ ಸಂಭವಿಸಿರುವುದು. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕಿನ, ಮೇಗುಂದ ಹೋಬಳಿ ಬಳಿಯ ಗುಡ್ಡೇತೋಟ ಗ್ರಾಮದಲ್ಲಿ ವಾಸವಾಗಿರುವ ನಾರಾಯಣ್ ಮತ್ತು ಸುಮತಿ ಎಂಬ ದಂಪತಿಗಳಿಗೆ ಸೇರಿದ ಮನೆ ಇದಾಗಿದೆ. ಈ ಘಟನೆ ನಡೆದ ವರ್ಷವಾದರೂ ಅವರಿಗೆ ಯಾವುದೇ ಪುನರ್ವಸತಿ ಕಲ್ಪಿಸಲಾಗಿಲ್ಲ. ಈಗ ಆ ಭಾಗದಲ್ಲಿ ಪುನರಸ ಮಳೆ ಆರಂಭವಾಗಿದೆ. ಈ ಬಾರಿ ಮಳೆಗೆ ಮನೆಯೆ ಕುಸಿಯಬಹುದು ಎಂಬುದು ಅವರ ಆತಂಕ. ಸದ್ಯಕ್ಕೆ ಅವರೀಗ ಗ್ರಾಮದ ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದಾರೆ. ಎಷ್ಟು ದಿನ ಎಂದು ಹೀಗೆಯೇ ಬದುಕುವುದು? ನಮಗೆ ನೆಮ್ಮದಿಯಿಂದ ಬದುಕುವ ಹಕ್ಕಿಲ್ಲವೇ? ಸರ್ಕಾರ, ಅಧಿಕಾರಿಗಳಿಗೆ ನಮ್ಮ ಕಷ್ಟ ತಿಳಿಯುವುದಿಲ್ಲವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದು ಅವರೊಬ್ಬರ ಪ್ರಶ್ನೆ ಮಾತ್ರ ಅಲ್ಲ. ಬದಲಿಗೆ ಗುಡ್ಡೆ ತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 16 ಕುಟುಂಬಗಳು ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬಹುತೇಕ ಕೂಲಿ ಕೆಲಸ ಮಾಡುವ ಇವರಿಗೆ ಮನೆ ಬಿಟ್ಟರೆ ಬೇರೆ ಯಾವುದೇ ಜಮೀನು ಇಲ್ಲ. ಪ್ರತಿ ವರ್ಷ ಮಳೆಗಾಲ ಬಂತೆದ್ದರೆ ಸಾಕು ಸಾವಿನ ದವಡೆಗೆ ಹೋದ ಅನುಭವ ಅವರದು. ಹೇಗಾದರೂ ಮಾಡಿ ನಮ್ಮನ್ನು ಇಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ. ಬದುಕಲು ಒಂದು ಚಿಕ್ಕ ಸೂರು ಕಟ್ಟಿಸಿಕೊಡಿ ಎಂಬುದು ಅವರ 5 ವರ್ಷದ ಬೇಡಿಕೆ. ಅದಕ್ಕಾಗಿ ಕಂಡ ಕಂಡವರ ಕಾಲು ಹಿಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರ ನೋವು ಕೇಳಬೇಕಾದವರು ಕಂಡು ಕಾಣದಂತಿದ್ದಾರೆ.

“ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ ಕಳೆದ ಒಂದು ವಾರದ ಮಳೆಯಿಂದ ಗುಡ್ಡೇತೋಟದ ಸೈಟ್ ಮನೆಯ ಹಿಂದಿನ ಮತ್ತು ಮುಂದಿನ ಧರೆಗಳು ಜರಿದು ಮನೆಗಳಿಗೆ ಅನಾಹುತವಾಗಿರುವುದರಿಂದ, ಹಾಗೂ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದ್ದು, ತಮ್ಮಗಳ ಮನೆಗಳಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಗಳಿದ್ದು, ನೀವು ಗ್ರಾಮ ಪಂಚಾಯಿತಿಯಿಂದ ಸೂಚಿಸುವವರೆಗೂ ತಮ್ಮ ವಾಸದ ಮನೆಯಿಂದ ಪಂಚಾಯ್ತಿಯಿಂದ ಸೂಚಿಸಿದ ಸ್ಥಳಗಳಿಗೆ ಸ್ಥಳಾಂತರವಾಗಬೇಕಾಗಿ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ವಾಸದ ಮನೆಗಳಲ್ಲಿ ವಾಸ ಇರಬಾರದಾಗಿ ಈ ಮೂಲಕ ಸೂಚಿಸಿದೆ”

ಇದು ಪ್ರತಿ ವರ್ಷ ಮಳೆಗಾಲ ಬಂದಾಗ ಅಧಿಕಾರಿಗಳು ಗ್ರಾಮಪಂಚಾಯತ್ ಮೂಲಕ ಮನೆ ಮನೆಗಳಿಗೆ ಅಂಟಿಸುವ ಎಚ್ಚರಿಕೆಯ ನೋಟಿಸ್. ಈ ನೋಟೀಸ್ ಅಂಟಿಸಿ ಅವರು ತಮ್ಮ ಜವಾಬ್ದಾರಿಗಳಿಂದ ಕೈ ತೊಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲೆಗಳಲ್ಲಿ ಉಳಿದುಕೊಳ್ಳಿ ಎಂದು ತಿಳಿಸಿದ್ದು ಬಿಟ್ಟರೆ, ಅವರಿಗೆ ಯಾವುದೇ ಸರಿಯಾದ ಸೌಕರ್ಯಗಳನ್ನು ಒದಗಿಸುವುದಿಲ್ಲ ಎಂಬುದು ನಿವಾಸಿಗಳ ಅಳಲು.

ನಮ್ಮ ಈ 16 ಕುಟುಂಬಗಳಿಗೆ ಒಂದು ಬಸ್‌ ಸ್ಟ್ಯಾಂಡ್ ಇಲ್ಲ. ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಕೆಲವರ ಮನೆ ಕುಸಿದ ಸಂದರ್ಭದಲ್ಲಿ ಎರಡು ವರ್ಷದ ಹಿಂದೆ ಪಂಚಾಯ್ತಿಯಲ್ಲಿ, ಶಾಲೆಯಲ್ಲಿ ನೆಲೆ ಪಡೆದಿದ್ದಾರೆ. ಆದರೆ ಇಂದಿಗೂ ಅವರು ಅಲ್ಲಿಯೇ ವಾಸವಿದ್ದಾರೆ ಹೊರತು ಅವರಿಗೆ ಮನೆ ಕಟ್ಟಿಸಿಕೊಟ್ಟಿಲ್ಲ. ಈಗ ಅವರಿಗೆ ಬಾಡಿಗೆ ಕಟ್ಟಿ ಎಂದು ಕೇಳುತ್ತಿದ್ದಾರೆ. ಇದು ನಮ್ಮ ದುಸ್ಥಿತಿ ಎನ್ನುತ್ತಾರೆ ಸಂತ್ರಸ್ತರಾದ ನಾರಾಯಣ್.

ಕಳೆದ 5 ವರ್ಷದಿಂದ ಒಂದು ಗೋಮಾಳದ ಜಾಗ ತೋರಿಸಿ, ಅಳತೆ ಮಾಡಿ ಅಲ್ಲಿ ನಿಮಗೆ ಮನೆ ಕಟ್ಟಿಕೊಡುತ್ತೇವೆ ಎಂದು ಎಲ್ಲರೂ ಭರವಸೆ ಕೊಡುತ್ತಿದ್ದಾರೆ. ಅಲ್ಲಿಂದ ನಾವು ಹಲವಾರು ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ ಅರಣ್ಯ ಇಲಾಖೆಯವರು ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ಗಲಾಟೆಯಲ್ಲಿ ನಾವು ಮಧ್ಯ ಸಿಕ್ಕಿಕೊಂಡಿದ್ದೇವೆ ಎಂದು ದೂರಿದರು.

ಆ ಭಾಗದಲ್ಲಿ ಜನರೊಟ್ಟಿಗೆ ಕೆಲಸ ಮಾಡುತ್ತಿರುವ ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಆನಂದ್‌ರವರು ಮಾತನಾಡಿ, “ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ. ಮಳೆ ಜೋರಾಗುತ್ತಿರುವುದರಿಂದ ಶಾಸಕರು, ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಈ ಕೂಡಲೇ ಗೋಮಾಳದಲ್ಲಿ ಜಾಗ ನೀಡಬೇಕು ಇಲ್ಲವೇ ಬೇರೆ ಕಡೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ಯಾವುದೇ ಜೀವ ಹಾನಿಯಾಗಲು ಬಿಡಬಾರದು” ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರಾದ ರಾಜೇಗೌಡರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ದೊರಕಿಲ್ಲ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....