Homeಚಳವಳಿಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು - ಮರೀಚಿಕೆಯಾದ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಎಷ್ಟು ವರ್ಷ ನಾವು ಹೀಗೆ ಪರದಾಡಬೇಕು ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯರು

- Advertisement -
- Advertisement -

ಮುಂಗಾರು ಆರಂಭವಾಗಿ ರಭಸದಿಂದ ಸುರಿಯುತ್ತಿದೆ. ಆಗಲೆ ಮಲೆನಾಡಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತದ ವರದಿಗಳು ಬರುತ್ತಿವೆ. ಮುನ್ನೆಚ್ಚರಿಸಿ ವಹಿಸಿ, ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಜನರಿಗೆ ನೋಟಿಸ್ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪ್ರತಿ ದಿನ ದೊಡ್ಡ ಮಳೆ  ಸುರಿಯುತ್ತಿದ್ದು, ಅಲ್ಲಿನ ಬಡಜನರು ಭಯಭೀತರಾಗಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಸರಣಿ ವರದಿ ಮಾಡಲು ಮುಂದಾಗಿದೆ. ಅದರ ಮೊದಲ ಕಂತು ಇಲ್ಲಿದೆ.

ಈ ಮೇಲಿನ ಚಿತ್ರ ನೋಡಿ. ಇದು ಕಳೆದ ವರ್ಷ ಸುರಿದ ಮಳೆಗೆ ಮನೆ ಪಕ್ಕದಲ್ಲಿಯೇ ಭೂಕುಸಿತ ಸಂಭವಿಸಿರುವುದು. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕಿನ, ಮೇಗುಂದ ಹೋಬಳಿ ಬಳಿಯ ಗುಡ್ಡೇತೋಟ ಗ್ರಾಮದಲ್ಲಿ ವಾಸವಾಗಿರುವ ನಾರಾಯಣ್ ಮತ್ತು ಸುಮತಿ ಎಂಬ ದಂಪತಿಗಳಿಗೆ ಸೇರಿದ ಮನೆ ಇದಾಗಿದೆ. ಈ ಘಟನೆ ನಡೆದ ವರ್ಷವಾದರೂ ಅವರಿಗೆ ಯಾವುದೇ ಪುನರ್ವಸತಿ ಕಲ್ಪಿಸಲಾಗಿಲ್ಲ. ಈಗ ಆ ಭಾಗದಲ್ಲಿ ಪುನರಸ ಮಳೆ ಆರಂಭವಾಗಿದೆ. ಈ ಬಾರಿ ಮಳೆಗೆ ಮನೆಯೆ ಕುಸಿಯಬಹುದು ಎಂಬುದು ಅವರ ಆತಂಕ. ಸದ್ಯಕ್ಕೆ ಅವರೀಗ ಗ್ರಾಮದ ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದಾರೆ. ಎಷ್ಟು ದಿನ ಎಂದು ಹೀಗೆಯೇ ಬದುಕುವುದು? ನಮಗೆ ನೆಮ್ಮದಿಯಿಂದ ಬದುಕುವ ಹಕ್ಕಿಲ್ಲವೇ? ಸರ್ಕಾರ, ಅಧಿಕಾರಿಗಳಿಗೆ ನಮ್ಮ ಕಷ್ಟ ತಿಳಿಯುವುದಿಲ್ಲವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದು ಅವರೊಬ್ಬರ ಪ್ರಶ್ನೆ ಮಾತ್ರ ಅಲ್ಲ. ಬದಲಿಗೆ ಗುಡ್ಡೆ ತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 16 ಕುಟುಂಬಗಳು ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬಹುತೇಕ ಕೂಲಿ ಕೆಲಸ ಮಾಡುವ ಇವರಿಗೆ ಮನೆ ಬಿಟ್ಟರೆ ಬೇರೆ ಯಾವುದೇ ಜಮೀನು ಇಲ್ಲ. ಪ್ರತಿ ವರ್ಷ ಮಳೆಗಾಲ ಬಂತೆದ್ದರೆ ಸಾಕು ಸಾವಿನ ದವಡೆಗೆ ಹೋದ ಅನುಭವ ಅವರದು. ಹೇಗಾದರೂ ಮಾಡಿ ನಮ್ಮನ್ನು ಇಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ. ಬದುಕಲು ಒಂದು ಚಿಕ್ಕ ಸೂರು ಕಟ್ಟಿಸಿಕೊಡಿ ಎಂಬುದು ಅವರ 5 ವರ್ಷದ ಬೇಡಿಕೆ. ಅದಕ್ಕಾಗಿ ಕಂಡ ಕಂಡವರ ಕಾಲು ಹಿಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರ ನೋವು ಕೇಳಬೇಕಾದವರು ಕಂಡು ಕಾಣದಂತಿದ್ದಾರೆ.

“ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ ಕಳೆದ ಒಂದು ವಾರದ ಮಳೆಯಿಂದ ಗುಡ್ಡೇತೋಟದ ಸೈಟ್ ಮನೆಯ ಹಿಂದಿನ ಮತ್ತು ಮುಂದಿನ ಧರೆಗಳು ಜರಿದು ಮನೆಗಳಿಗೆ ಅನಾಹುತವಾಗಿರುವುದರಿಂದ, ಹಾಗೂ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದ್ದು, ತಮ್ಮಗಳ ಮನೆಗಳಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಗಳಿದ್ದು, ನೀವು ಗ್ರಾಮ ಪಂಚಾಯಿತಿಯಿಂದ ಸೂಚಿಸುವವರೆಗೂ ತಮ್ಮ ವಾಸದ ಮನೆಯಿಂದ ಪಂಚಾಯ್ತಿಯಿಂದ ಸೂಚಿಸಿದ ಸ್ಥಳಗಳಿಗೆ ಸ್ಥಳಾಂತರವಾಗಬೇಕಾಗಿ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ವಾಸದ ಮನೆಗಳಲ್ಲಿ ವಾಸ ಇರಬಾರದಾಗಿ ಈ ಮೂಲಕ ಸೂಚಿಸಿದೆ”

ಇದು ಪ್ರತಿ ವರ್ಷ ಮಳೆಗಾಲ ಬಂದಾಗ ಅಧಿಕಾರಿಗಳು ಗ್ರಾಮಪಂಚಾಯತ್ ಮೂಲಕ ಮನೆ ಮನೆಗಳಿಗೆ ಅಂಟಿಸುವ ಎಚ್ಚರಿಕೆಯ ನೋಟಿಸ್. ಈ ನೋಟೀಸ್ ಅಂಟಿಸಿ ಅವರು ತಮ್ಮ ಜವಾಬ್ದಾರಿಗಳಿಂದ ಕೈ ತೊಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲೆಗಳಲ್ಲಿ ಉಳಿದುಕೊಳ್ಳಿ ಎಂದು ತಿಳಿಸಿದ್ದು ಬಿಟ್ಟರೆ, ಅವರಿಗೆ ಯಾವುದೇ ಸರಿಯಾದ ಸೌಕರ್ಯಗಳನ್ನು ಒದಗಿಸುವುದಿಲ್ಲ ಎಂಬುದು ನಿವಾಸಿಗಳ ಅಳಲು.

ನಮ್ಮ ಈ 16 ಕುಟುಂಬಗಳಿಗೆ ಒಂದು ಬಸ್‌ ಸ್ಟ್ಯಾಂಡ್ ಇಲ್ಲ. ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಕೆಲವರ ಮನೆ ಕುಸಿದ ಸಂದರ್ಭದಲ್ಲಿ ಎರಡು ವರ್ಷದ ಹಿಂದೆ ಪಂಚಾಯ್ತಿಯಲ್ಲಿ, ಶಾಲೆಯಲ್ಲಿ ನೆಲೆ ಪಡೆದಿದ್ದಾರೆ. ಆದರೆ ಇಂದಿಗೂ ಅವರು ಅಲ್ಲಿಯೇ ವಾಸವಿದ್ದಾರೆ ಹೊರತು ಅವರಿಗೆ ಮನೆ ಕಟ್ಟಿಸಿಕೊಟ್ಟಿಲ್ಲ. ಈಗ ಅವರಿಗೆ ಬಾಡಿಗೆ ಕಟ್ಟಿ ಎಂದು ಕೇಳುತ್ತಿದ್ದಾರೆ. ಇದು ನಮ್ಮ ದುಸ್ಥಿತಿ ಎನ್ನುತ್ತಾರೆ ಸಂತ್ರಸ್ತರಾದ ನಾರಾಯಣ್.

ಕಳೆದ 5 ವರ್ಷದಿಂದ ಒಂದು ಗೋಮಾಳದ ಜಾಗ ತೋರಿಸಿ, ಅಳತೆ ಮಾಡಿ ಅಲ್ಲಿ ನಿಮಗೆ ಮನೆ ಕಟ್ಟಿಕೊಡುತ್ತೇವೆ ಎಂದು ಎಲ್ಲರೂ ಭರವಸೆ ಕೊಡುತ್ತಿದ್ದಾರೆ. ಅಲ್ಲಿಂದ ನಾವು ಹಲವಾರು ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ ಅರಣ್ಯ ಇಲಾಖೆಯವರು ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ಗಲಾಟೆಯಲ್ಲಿ ನಾವು ಮಧ್ಯ ಸಿಕ್ಕಿಕೊಂಡಿದ್ದೇವೆ ಎಂದು ದೂರಿದರು.

ಆ ಭಾಗದಲ್ಲಿ ಜನರೊಟ್ಟಿಗೆ ಕೆಲಸ ಮಾಡುತ್ತಿರುವ ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಆನಂದ್‌ರವರು ಮಾತನಾಡಿ, “ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ. ಮಳೆ ಜೋರಾಗುತ್ತಿರುವುದರಿಂದ ಶಾಸಕರು, ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಈ ಕೂಡಲೇ ಗೋಮಾಳದಲ್ಲಿ ಜಾಗ ನೀಡಬೇಕು ಇಲ್ಲವೇ ಬೇರೆ ಕಡೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ಯಾವುದೇ ಜೀವ ಹಾನಿಯಾಗಲು ಬಿಡಬಾರದು” ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರಾದ ರಾಜೇಗೌಡರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ದೊರಕಿಲ್ಲ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...