Homeಚಳವಳಿಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಮಂಡ್ಯ ಶ್ರಮಿಕರ ಹೋರಾಟಕ್ಕೆ ಮೊದಲ ಹಂತದ ಜಯ: ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾವು ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಬೇಕು, ಹಕ್ಕುಪತ್ರ ನೀಡಿ ಉಳಿಸಿಕೊಡಬೇಕು ಎಂದು ಒತ್ತಾಯಿಸಿ ಕಳೆದ 6 ದಿನಗಳಿಂದ ಹೋರಾಡುತ್ತಿದ್ದ ಮಂಡ್ಯದ ಶ್ರಮಿಕರಿಗೆ ಮೊದಲ ಹಂತದ ಜಯ ಸಿಕ್ಕಿದೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಕೆ.ಆರ್ ಪೇಟೆ ಕಡೆಗೆ ಪಾದಯಾತ್ರೆ ಹೊರಟಿದ್ದ ಪ್ರತಿಭಟನಾಕಾರನ್ನು ಪಾಂಡವಪುರದಲ್ಲಿ ಭೇಟಿ ಮಾಡಿ ಸಭೆ ನಡೆಸಿದ ಅಧಿಕಾರಿಗಳು 10 ದಿನಗಳ ಒಳಗೆ ಸ್ಲಂ ಎಂದು ಘೋಷಿಸಿ ಅಂತಿಮ ಡಿಕ್ಲರೇಷನ್ ಹೊರಡಿಸಲು ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಜುಲೈ 26ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಮತ್ತು ಪುರಸಭೆ ಅಧಿಕಾರಿಗಳು ಬಂದು ಕಾಳಪ್ಪ ಬಡಾವಣೆಯ ಮತ್ತು ಇನ್ನಿತರ ಶ್ರಮಿಕನಗರಗಳ (ಸ್ಲಂಗಳ) ಎಲ್ಲ ಸಮಸ್ಯೆಗಳನ್ನೂ ಚರ್ಚಿಸಲು ಜಿಲ್ಲಾಧಿಕಾರಿ ಕಛೇರಿಯಿಂದ ಕರೆಯಲಾಗಿರುವ ಸಭೆಯ ತಿಳುವಳಿಕೆ ಪತ್ರವನ್ನು ನೀಡಿದರು. ಅದೇ ರೀತಿ ಅಂತಿಮ ಘೋಷಣೆ ಹೊರಡಿಸಲು ಮತ್ತು ಹಕ್ಕುಪತ್ರ ನೀಡಲು ಪ್ರಕ್ರಿಯೆಯನ್ನು ಈ ತಕ್ಷಣದಿಂದಲೇ ಆರಂಭಿಸುವುದಾಗಿಯೂ ಹತ್ತು ದಿನದ ಒಳಗಾಗಿ ಮುಗಿಸುವುದಾಗಿಯೂ ಲಿಖಿತ ಪತ್ರ ನೀಡಿದರು.‌

ಇದಾದ ನಂತರ ಶ್ರಮಿಕ ನಿವಾಸಿಗಳು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, 10 ದಿನಗಳಲ್ಲಿ ಭರವಸೆಗಳು ಈಡೇರದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದರು.

ಹೋರಾಟದಲ್ಲಿ ಕಾಳಪ್ಪ ಬಡಾವಣೆಯ ಮುಖಂಡರಾದ ಆರ್ಮುಗಂ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ, ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು, ಕರ್ನಾಟಕ ಶ್ರಮಿಕ ಶಕ್ತಿಯ ನಾಯಕರಾದ ಸುಬ್ರಹ್ಮಣ್ಯ, ಶ್ರಮಿಕ ನಿವಾಸಿಗಳ ಒಕ್ಕೂಟದ ಪ್ರಕಾಶ್, ಕೃಷ್ಣಪ್ಪ, ರಾಜು, ನಿಂಗಮ್ಮ, ಮಹಿಳಾ ಮುನ್ನಡೆಯ ಕಮಲ, ಜ್ಯೋತಿ, ಶಿಲ್ಪ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಂಜಲಿ, ಪುನೀತ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಒರಿಸ್ಸಾ: ದೇವಾಲಯ ಸುಂದರೀಕರಣಕ್ಕಾಗಿ 400 ವರ್ಷದ ಹಳೆಯ ಸ್ಲಂ ತೆರವು- ಸಾವಿರಾರು ದಲಿತರ ಬದುಕು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...