Homeಮುಖಪುಟ‘ಮರೆತೇನೆಂದರೂ ಮರೆಯಲಿ ಹೆಂಗೆ’ - ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

‘ಮರೆತೇನೆಂದರೂ ಮರೆಯಲಿ ಹೆಂಗೆ’ – ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

- Advertisement -
- Advertisement -

ಅಜ್ಞಾತವಾಸದಲ್ಲಿದ್ದರೂ ಆಗಾಗ ಕೇಳುತ್ತಲೇ ಇದ್ದ ಹೆಸರು ಜಿ. ರಾಜಶೇಖರ್. ಕರಾವಳಿ ಕೋಮುವಾದಿ ಜ್ವಾಲೆಗೆ ಸಿಕ್ಕಿತ್ತು. ರಥಬೀದಿ ಗೆಳೆಯರು ಬಕೆಟ್ ಹಿಡಿದು ಬೆಂಕಿ ನಂದಿಸಲು ಹೆಣಗುತ್ತಿದ್ದರು. ನಕ್ಕು ಸುಮ್ಮನಿದ್ದವರ ಮುಂದೆ ಈ ಸಣ್ಣ ಫೈರ್ ಬ್ರಿಗೇಡ್ ನಮ್ಮ ಮನಕ್ಕೆ ಎಂಥದೋ ಹಿತ ನೀಡುತ್ತಿತ್ತು. ತುಂಬಾ ವರ್ಷಗಳ ಕಾಲ ಅವರ ಬಗ್ಗೆ ಬಹಳ ಕೇಳಿದೆ, ಸ್ವಲ್ಪ ಓದಿದೆ. ಜೀವನದಲ್ಲಿ ಏನೇನೋ ನಡೆದುಹೋಯಿತು.

ಒಂದು ವಿಶೇಷ ಸಂದರ್ಭದಲ್ಲಿ ಮುಖ್ಯವಾಹಿನಿಗೆ ಮರಳುವ ಅವಕಾಶವೂ ದೊರೆಯಿತು. ಪ್ರೀತಿಯ ಸಮಾಜ ಸ್ವಾಗತಿಸಿತ್ತು. ಆದರೆ ಕಾನೂನು ಪ್ರಕ್ರಿಯೆ ಬಾಕಿ ಉಳಿದಿತ್ತು. ಉಡುಪಿಯಲ್ಲಿ UAPA ಒಳಗೊಂಡಂತೆ ನನ್ನ ಮೇಲೆ ಹಲವು ಕೇಸುಗಳಿದ್ದವು. ಬೇಲ್ ಪಡೆಯಲು ಜಾಮೀನು ಬೇಕಿತ್ತು. ನಕ್ಸಲೈಟನಿಗೆ ಜಾಮೀನು ನೀಡುವುದು ಸುಲಭವಲ್ಲ. ವಿಶ್ವಾಸ, ಗುಂಡಿಗೆ ಎರಡೂ ಇರಬೇಕಿತ್ತು. ಆದರೆ ರಾಜಶೇಖರರಿಗೆ ಅವ್ಯಾವುವೂ ಅಗತ್ಯವಿರಲಿಲ್ಲ. ಕನ್ವಿನ್ಸ್ ಮಾಡೋಣ ಎಂದು ಮಿತ್ರರು ಹೋದರಂತೆ. ಆದರೆ ಪೀಠಿಕೆ ಹಾಕುವ ಅಗತ್ಯವೂ ಬೀಳಲಿಲ್ಲವಂತೆ. “ಸರಿ ಕೊಡೋಣಬಿಡಿ, ಅದಕ್ಕೇನು? ನಾನು ಕೋರ್ಟಿಗೆ ಏನೆಲ್ಲಾ ತರಬೇಕು?” ಎಂದು ಕೇಳಿದರಂತೆ. ಮನುಷ್ಯರನ್ನು ನಂಬಲು‌ ಮನುಷ್ಯರಾಗಿದ್ದರೆ ಸಾಕು ಎಂಬ ಸಹಜ ವ್ಯಕ್ತಿತ್ವ ನಮ್ಮ ಸಾರ್‌ದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲಿ ಇದು ಸಾಲಲ್ಲ ಎಂದು ರಿಜೆಕ್ಟ್ ಮಾಡಿಬಿಡ್ತಾರೋ ಅಂತ ಲಾಯರ ಬಳಿ ಹಲವಾರು ಬಾರಿ ವಿಚಾರಿಸಿ, ಓಡಾಡಿ ಡಾಕ್ಯುಮೆಂಟ್ ತೆಗೆಸಿ, ಡಬಲ್ ಡಬಲ್ ಫೋಟೋಗಳನ್ನು ತೆಗೆದುಕೊಂಡು, ತಮ್ಮ ಕೊಡೆಯೊಂದಿಗೆ ನಾವು ಬರುವ ಮುನ್ನವೇ ಕೋರ್ಟಲ್ಲಿ ಬಂದು ಕಾಯುತ್ತಿದ್ದರು. ನೋಡಿ “ಮತ್ತೆ…” ಎಂದರು….ಜೀವಮಾನದ ಒಡನಾಡಿ ಎಂಬಂತೆ. ನಾನು ಅವರನ್ನು ಮೊದಲ ಬಾರಿ ಕಂಡದ್ದು ಆ ಕ್ಷಣದಲ್ಲೆ.

ನಾನು ಕಟಕಟೆಯಲ್ಲಿ ನಿಂತಿದ್ದೆ. ಅವರು ಹೊರಗಿದ್ದರು. ಕಾರಕೂನ ಅವರ ಹೆಸರು ಕೂಗಿದೊಡನೆ ಲಗುಬಗೆಯಿಂದ ಒಳಬಂದವರೇ ಸೀದಾ ಕಟಕಟೆಯಲ್ಲಿ ಬಂದು ನನ್ನ ಜೊತೆ ನಿಂತರು. ಅಲ್ಲಿ ಬೇಡ ಇಲ್ಲಿ ಬನ್ನಿ ಎಂದು ವಕೀಲರು ಅವರನ್ನು ಜಡ್ಜ್ ಬಳಿಗೆ ಕರೆದೊಯ್ದರು. ಹೊರ ಬಂದರೆ ಶಿವಸುಂದರದು ಒಂದೇ ಸಮ ನಗು. ಸಹ ಆರೋಪಿ ರಾಜಶೇಖರ್ ಎಂದು ಗೇಲಿ ಮಾಡಿದ್ದರು. ಮುಗ್ದ ರಾಜಶೇಖರರಿಗೆ ಅದರಿಂದ ಮುಜುಗರವೂ ಅನಿಸಲಿಲ್ಲ. ಸಹಜವಾಗಿಯೇ ಅವರು ನಾನು ಜೊತೆಗಿದ್ದೇನೆ ಎಂದು ನನ್ನ ಜೊತೆ ಕಟಕಟೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

ಅಂದಿನಿಂದ ನನ್ನ ಕೇಸ್ ಮುಗಿಯುವ ತನಕ ನಾನು ತಪ್ಪಿಸಿದರೂ ಅವರು ಕೋರ್ಟಿಗೆ ತಪ್ಪಿಸಲಿಲ್ಲ. ಕೋರ್ಟಿಗೆ ಅವರು ಬೇಕಿರಲಿಲ್ಲ. ಆದರೆ ಅವರಿಗೆ ಕೋರ್ಟಿಗೆ ಬರುವುದು ಮುಖ್ಯವಿತ್ತು. ಕೋರ್ಟಿನಲ್ಲಿ ನನಗೆ ಒಂಟಿತನ ಕಾಡಬಾರದು ಎಂಬುದು ಅವರ ಕಾಳಜಿಯಾಗಿತ್ತು. ಪ್ರತಿ ಡೇಟಿಗೆ ಬಂದು ಮಾತನಾಡಿಸಿ, ಕ್ಯಾಂಟೀನಿಗೆ ಕರೆದುಕೊಂಡು ಹೋಗಿ ಮಂಗಳೂರು ಬಜಿ, ಎಳ್ಳಿನ ಪಾನಕ ಕೊಡಿಸಿ, “ಬರ್ತೇನೆ..” ಅಂತ ಹೊರಡುತ್ತಿದ್ದರು.

ನನ್ನ ಕೇಸಿನ ವಿಚಾರಣೆ ಮುಗಿದು ತೀರ್ಪಿನ ದಿನ ಬರುವ ಹೊತ್ತಿಗೆ ಅವರಿಗೆ ಪಾರ್ಕಿನ್ಸನ್ ಆಗಿತ್ತು, ದೇಹ ಕೃಷವಾಗಿತ್ತು. ಆದರೂ ಕೋರ್ಟಿಗೆ ಬಂದು ಮತ್ತೊಮ್ಮೆ ಜಾಮೀನು ಧೃಡೀಕರಿಸಬೇಕಿತ್ತು. ಮಗ ವಿಷ್ಣುವಿಗೆ ಚಿಂತೆ. ಕೋರ್ಟಿನ ಮೆಟ್ಟಿಲು ಹತ್ತಿಸಿ ಕರೆತರುವುದು ಹೇಗೆ? ಜಡ್ಜ್ ಕೇಳುವ ಪ್ರಶ್ನೆಗೆ ಉತ್ತರಿಸುವಂತೆ ಮಾಡುವುದು ಹೇಗೆ? ಆಟೋದಲ್ಲಿ ಹುಶಾರಾಗಿ ಕರೆತಂದರು. ರಾಜಶೇಖರರ ದೇಹ ನಡುಗುತ್ತಿದ್ದರೂ ಮುಖ ಎಂದಿನಂತೆ ನಿಶ್ಚಲವಾಗಿತ್ತು.

ಜಡ್ಜ್ ಕೇಳಿದರು
“ಇವರ್ಯಾರು ಗೊತ್ತಾ?”
“ಗೊತ್ತು”.
“ಇವರು ನಿಮಗೆ ಏನಾಗಬೇಕು?”
“ನನ್ನ ಸ್ನೇಹಿತರು”
“ಇವರಿಗೆ ನೀವು ಶ್ಯೂರಿಟಿ ಕೊಡ್ತೀರಾ?”
“ಕೊಡ್ತೇನೆ”

ಕೇಸ್ ಖುಲಾಸ್ ಆಯಿತು. ನಾನು ಕಾನೂನಾತ್ಮಕವಾಗಿಯೂ ಬಿಡುಗಡೆಗೊಂಡೆ. ಎಂದಿನಂತೆ “ಬರ್ಲಾ…” ಎಂದು ವಿಷ್ಣು ಕೈ ಹಿಡಿದು ಹೊರಟರು.

ಇದನ್ನೂ ಓದಿ: ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಮತ್ತೆ ಕಂಡದ್ದು ಇತ್ತೀಚಿನ ಸಹಬಾಳ್ವೆ ಸಮಯದಲ್ಲೆ. ನಾನು, ಅಶೋಕ್, ದಿನಕರ ಬೇಂಗ್ರೆ ಮನೆಗೆ ಹೋದೆವು. ಗುರುಗಳು ಬದಲಾಗೇ ಇಲ್ಲ. ಮುಖದಲ್ಲಿ ಅದೇ ದೃಡತೆ, ಮಾತಿನಲ್ಲಿ ಅದೇ ಲವಲವಿಕೆ. ಭಾವನೆ ಕಾಣದ ಮುಖದಿಂದ ನಿಲ್ಲದ ನಗೆ ಚಟಾಕಿ. ಗೆಳೆಯರು‌ ಮನೆಗೆ ಬಂದಿದ್ದಾರೆ ಎಂದು ಇನ್ನಷ್ಟು ಹುರುಪು. ವಿಷ್ಣು ವಿಡಿಯೋ ಮಾಡತೊಡಗಿದರು. ಮಗನ ಕೆಣಕುವ ಪ್ರಶ್ನೆಗಳಿಗೆ ಅಪ್ಪನ ಖಚಿತತೆಯ ಉತ್ತರ.

“ಮತ್ತೆ ಏನ್ಸಮಾಚಾರ”
“ಮೇ 7 ಕ್ಕೆ ಕಾರ್ಯಕ್ರಮ”
“ಯಾವ ಕಾರ್ಯಕ್ರಮ?”
“ಕೋಮು ಸೌಹಾರ್ದದ್ದು”
“ನೀವು ಹೋಗ್ತೀರಾ?”
“ಹಾಂ ಹೋಗ್ತೇನೆ….ನಾನು ಹೋಗದಿದ್ದರೆ ಆಗಲ್ಲ”.

ಇದು ನಮ್ಮ ರಾಜಶೇಖರ್ ಸಾರ್…

ನನ್ನ ಜೀವನದಲ್ಲಿ ಅನಿರೀಕ್ಷಿತ ಆಪದ್ಬಾಂಧವರಾಗಿ ಬಂದ ಹಿರಿ ಜೀವ ಅದು. ಅವರ ಆತ್ಮೀಯತೆ, ಅಚಲತೆ, ಸರಳತೆ, ಸಹಜತೆ, ಕನಸು, ವಿಶ್ವಾಸ ಎಲ್ಲವೂ ಮರೆಯಲಾಗದಂಹವು. ಅಧ್ಯಾಯನ ಯೋಗ್ಯವಾದಂತಹವು. ನಮ್ಮ ಅರಿವಿಗೇ ಬರದಂತೆ ನಮ್ಮ ವ್ಯಕ್ತಿತ್ವವನ್ನು ಪ್ರಭಾವಿಸುವಂತಹವು.

ಇದನ್ನೂ ಓದಿ: ಜಿ ರಾಜಶೇಖರ್‌ರವರಿಗೆ ಎಪ್ಪತ್ತೈದು; ರಾಜಶೇಖರರ ‘ತಿರುಕನ ಕನಸು’

ಹಾಗಾಗಿಯೇ ನಾಡಿನ ಪಾಲಿಗಷ್ಟೇ ಅಲ್ಲ ನನ್ನ ಪಾಲಿಗೆ ರಾಜಶೇಖರರು ಅಜರಾಮರರು. ಅವರನ್ನು ಮರೆತೇನೆಂದರೂ ಮರೆಯಲು ಅಸಾಧ್ಯವಾದವರು.

ಉಡುಪಿಗೆ ಬಂದಾಗೆಲ್ಲಾ ಸಿಗ್ತೇನೆ ಸಾರ್…ಒಂದು ಗಳಿಗೆ ಸಿಕ್ಕು ಎಳ್ಳು ಪಾನಕ ಕುಡಿಸಿ ಸಾಕು.

ನಿಮ್ಮ ರುಣಿ
ನೂರ್ ಶ್ರೀಧರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...