Homeಮುಖಪುಟಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್...

ಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ

ಚುನಾವಣೆಯಲ್ಲಿ ಬಿಜೆಪಿ ಒಟ್ಟು ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ

- Advertisement -
- Advertisement -

ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಬುಧವಾರ ಮಧ್ಯಪ್ರದೇಶದ ಮುನ್ಸಿಪಲ್ ಚುನಾವಣೆಯ ಬಗ್ಗೆ ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣೆಯಲ್ಲಿ ಆಡಳಿತರೂಢ ಪಕ್ಷವು “ಪೊಲೀಸ್, ಆಡಳಿತ ಮತ್ತು ಹಣವನ್ನು ನಿರ್ಲಜ್ಜವಾಗಿ ಬಳಸಿದೆ” ಎಂದು ಆರೋಪಿಸಿದ್ದಾರೆ. “ಬಿಜೆಪಿ ಜನರನ್ನು ಖರೀದಿಸಲು ಪ್ರಯತ್ನಿಸಬಹುದು, ಆದರೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಗೆದ್ದಿದ್ದೇವೆ ಮತ್ತು ತಲಾ ಒಂದನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. ಇದರರ್ಥ ಬಿಜೆಪಿ ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ. ಇದನ್ನೂ ಅವರು ಆಚರಿಸುವುದಾದರೆ ನಮಗೆ ಏನೂ ಸಮಸ್ಯೆ ಇಲ್ಲ. ಇದು ಹೇಗಂದರೆ ಬೇರೊಬ್ಬರ ಮನೆಯಲ್ಲಿ ಮಗು ಜನಿಸಿದ್ದಕ್ಕೆ, ಬಿಜೆಪಿಯವರು ಸಿಹಿ ಹಂಚಲು ಪ್ರಾರಂಭಿಸಿದಂತೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

347 ನಗರ ಪಾಲಿಕೆಗಳಲ್ಲಿ 300 ಪಾಲಿಕೆಗಳನ್ನು ಪಕ್ಷವೂ ಗೆದ್ದಿದೆ ಎಂದು ಬಿಜೆಪಿ ಪ್ರತಿಪಾದಿಸಿದ್ದು, ‘ಈ ಸಾಧನೆಯು ಐತಿಹಾಸಿಕ’ ಎಂದು ಬಣ್ಣಿಸಿದೆ.

ಇದನ್ನೂ ಓದಿ: ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ರಾಜ್ಯದ ಒಟ್ಟು 16 ಮೇಯರ್ ಹುದ್ದೆಗಳ ಪೈಕಿ ಬಿಜೆಪಿ ಒಂಬತ್ತು, ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ತಲಾ ಒಂದು ಸ್ಥಾನವನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. 2015ರಲ್ಲಿ ಬಿಜೆಪಿ ಎಲ್ಲಾ ಮೇಯರ್‌ ಹುದ್ದೆಗಳನ್ನು ಗೆದ್ದುಕೊಂಡಿತ್ತು.

ಅದರಲ್ಲೂ ಬಿಜೆಪಿ ಕಳೆದುಕೊಂಡಿರುವ ಮೇಯರ್ ಹುದ್ದೆಗಳಲ್ಲಿ ಒಂದು ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಭದ್ರಕೋಟೆಯಾದ ಮೊರೆನಾದಲ್ಲಿದ್ದರೆ, ಇನ್ನೊಂದು ಮಧ್ಯಪ್ರದೇಶದ ಬಿಜೆಪಿ ಅಧ್ಯಕ್ಷ, ಲೋಕಸಭಾ ಸಂಸದರಾದ ವಿಡಿ ಶರ್ಮಾ ಅವರ ಕಟ್ನಿಯದ್ದಾಗಿದೆ. ಮತ್ತೊಂದು ಬಿಜೆಪಿಯಿಂದ ಬಂಡಾಯ ಎದ್ದಿದ್ದ ಬಣ ಗೆದ್ದುಕೊಂಡಿದೆ. ಏತನ್ಮಧ್ಯೆ, ಕಾಂಗ್ರೆಸ್ ಶೂನ್ಯದಿಂದ ಐದಕ್ಕೆ ಏರಿದೆ ಮತ್ತು ಸಿಂಗ್ರೌಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಒಂದನ್ನು ಗೆದ್ದಿದೆ.

ರೇವಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಕಾಂಗ್ರೆಸ್‌ನ ಅಜಯ್ ಮಿಶ್ರಾ ಬಾಬಾ ಅವರು 10,301 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಬೋಧ್ ವ್ಯಾಸ್ ಅವರನ್ನು ಸೋಲಿಸಿದ್ದಾರೆ. 1999 ರ ನಂತರ ಕಾಂಗ್ರೆಸ್ ಮೊದಲ ಬಾರಿಗೆ ರೇವಾದಲ್ಲಿ ಮೇಯರ್ ಸ್ಥಾನವನ್ನು ಗೆದ್ದಿದೆ.

ಇದನ್ನೂ ಓದಿ: ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

ಮೊರೆನಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾರದ ಸೋಲಂಕಿ 14,631 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮೀನಾ ಮುಖೇಶ್ ಜಾತವ್ ಅವರನ್ನು ಸೋಲಿಸಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಶನ್ ಮೊರೆನಾ ಲೋಕಸಭಾ ಸ್ಥಾನದ ಭಾಗವಾಗಿದೆ. ಇದನ್ನೂ ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿನಿಧಿಸುತ್ತಾರೆ.

ದೇವಾಸ್‌ನಲ್ಲಿ ಬಿಜೆಪಿಯ ಗೀತಾ ಅಗರವಾಲ್ ಅವರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿನೋದಿನಿ ವ್ಯಾಸ್ ಅವರನ್ನು 45,889 ಮತಗಳಿಂದ ಸೋಲಿಸಿದ್ದಾರೆ. ರತ್ಲಾಮ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ ಪ್ರಹ್ಲಾದ್ ಪಟೇಲ್ ಅವರು ಕಾಂಗ್ರೆಸ್‌ನ ಮಯಾಂಕ್ ಸಿಂಗ್ ಜಾಟ್ ಅವರನ್ನು 8,591 ಮತಗಳಿಂದ ಸೋಲಿಸಿದ್ದಾರೆ.

ಕಟ್ನಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಪ್ರೀತಿ ಸಂಜೀವ್ ಸೂರಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಜ್ಯೋತಿ ದೀಕ್ಷಿತ್ ಅವರನ್ನು 5,287 ಮತಗಳಿಂದ ಸೋಲಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೂಲ್ಕಿ-ಮೂಡಬಿದಿರೆ: ಬಿಜೆಪಿ ಪಾಲಾಗಿರುವ ಹಳೆಯ ಕಾಂಗ್ರೆಸ್ ಕೋಟೆ! ಅದಲುಬದಲು ಸಾಧ್ಯವೇ?

ಎರಡನೇ ಹಂತದಲ್ಲಿ ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳು, 40 ನಗರ ಪಾಲಿಕೆಗಳು ಮತ್ತು 43 ಜಿಲ್ಲೆಗಳ 169 ನಗರ ಸಭೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಷ್ಟೆ ಇದ್ದು, ಸ್ಥಳೀಯ ಸಂಸ್ಥೆ ಚುಣಾವಣೆಯು ಅದರಕ್ಕೆ ದಿಕ್ಸೂಚಿ ಎನ್ನಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...