Homeಮುಖಪುಟಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ.

- Advertisement -
- Advertisement -

ಸಾಕ್ಷರತೆಯಲ್ಲಿ ಮುಂದಿರುವ ಕೇರಳ ರಾಜ್ಯವು ಮತೀಯವಾದ, ಕಟ್ಟಳೆಗಳಿಗೆ ಸೊಪ್ಪು ಹಾಕುವುದಿಲ್ಲ ಎನ್ನುವುದನ್ನು ಅಲ್ಲಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಒಂದು ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ವಿರುದ್ಧ ವಿನೂತನವಾಗಿ ಸೆಡ್ಡು ಹೊಡೆದು ಸುದ್ದಿಯಾಗಿದ್ದಾರೆ.

ಕಾಲೇಜ್ ಆಫ್ ಇಂಜಿನಿಯರಿಂಗ್ ತ್ರಿವೇಂದ್ರಮ್ (ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಬಸ್‌ ನಿಲ್ದಾಣದಲ್ಲಿ ಲಿಂಗಬೇಧವೆಣಿಸದೆ ಒಬ್ಬರ ಕಾಲಿನ ಮೇಲೆ ಮತ್ತೊಬ್ಬರು ಕುಳಿತುಕೊಂಡು ತೆಗೆಸಿಕೊಂಡ ಸುಂದರ ಫೋಟೊ ಒಂದು ವೈರಲ್ ಆಗಿದೆ. ಹಲವಾರು ಜನ ಆ ಫೋಟೊವನ್ನು ಪ್ರೊಫೈಲ್ ಪಿಕ್ ಆಗಿ, ವಾಟ್ಸಾಪ್ ಸ್ಟೇಟಸ್ ಆಗಿ ಹಾಕಿಕೊಂಡು ಸಂಭ್ರಮಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಉಳಿದ ವಿದ್ಯಾರ್ಥಿಗಳು ಕೂಡ ಅದೇ ಜಾಗದಲ್ಲಿ ಕುಳಿತು ಫೋಟೊ ತೆಗೆಸಿದ್ದಾರೆ! ಆ ಮೂಲಕ ನೈತಿಕ ಪೊಲೀಸ್‌ಗಿರಿ ಮಾಡಲು ಮುಂದಾದವರಿಗೆ ತಕ್ಕ ಉತ್ತರ ನೀಡಿದ್ದಾರೆ.

ನಡೆದಿದ್ದಿಷ್ಟು..

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು. ಅದಕ್ಕಾಗಿ ಸ್ಥಳೀಯರು ಕಳೆದ ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಇದನ್ನು ನೋಡಿದ ವಿದ್ಯಾರ್ಥಿಗಳಿಗೆ ಆಶ್ಚರ್ಯ ಮತ್ತು ಆಘಾತವಾಗಿತ್ತು. ಇದನ್ನು ಪ್ರತಿಭಟಿಸಲು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಧರಿಸಿದರು. ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡರು.

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷರಾದ ಕೆ.ಪೆ ಫೆಬಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ ಪ್ರತಿಕ್ರಿಯಿಸಿ, “ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

ಈ ಮೊದಲು ಸಹ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ತಂದಾಗ ದೊಡ್ಡ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು. ಈಗ ಮತ್ತೊಮ್ಮೆ ಮತೀಯ ಗೂಂಡಾಗಿರಿ ವಿರುದ್ಧ ಸ್ಪಷ್ಟ ಸಂದೇಶ ನೀಡಿದ್ದಾರೆ.

ಕೃಪೆ: ಆನ್‌ಮನೋರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಗಂಡು ಹೆಣ್ಣಿನ ಸ್ನೇಹ ಅದು ಗಿಟ್ಟದ ಸಂಪ್ರದಾಯಿಗಳ ಲೈಂಗಿಕ ವಿಕರಾಳಗಳಿಗೆ ಸವಾಲೊಡ್ಡುತ್ತದೆ 😁ಪಾಪ ಆವರೇನು ಮಾಡಿಯಾರು?
    ಆದರೆ ಈ ತಾಲೆಬಾನಿಗಳಿಗೆ ವಿದ್ಯಾರ್ಥಿಗಳ ಉತ್ತರ ಸಮಂಜಸವಾದದ್ದೆ.

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...