Homeಮುಖಪುಟಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ.

- Advertisement -
- Advertisement -

ಸಾಕ್ಷರತೆಯಲ್ಲಿ ಮುಂದಿರುವ ಕೇರಳ ರಾಜ್ಯವು ಮತೀಯವಾದ, ಕಟ್ಟಳೆಗಳಿಗೆ ಸೊಪ್ಪು ಹಾಕುವುದಿಲ್ಲ ಎನ್ನುವುದನ್ನು ಅಲ್ಲಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಒಂದು ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ವಿರುದ್ಧ ವಿನೂತನವಾಗಿ ಸೆಡ್ಡು ಹೊಡೆದು ಸುದ್ದಿಯಾಗಿದ್ದಾರೆ.

ಕಾಲೇಜ್ ಆಫ್ ಇಂಜಿನಿಯರಿಂಗ್ ತ್ರಿವೇಂದ್ರಮ್ (ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಬಸ್‌ ನಿಲ್ದಾಣದಲ್ಲಿ ಲಿಂಗಬೇಧವೆಣಿಸದೆ ಒಬ್ಬರ ಕಾಲಿನ ಮೇಲೆ ಮತ್ತೊಬ್ಬರು ಕುಳಿತುಕೊಂಡು ತೆಗೆಸಿಕೊಂಡ ಸುಂದರ ಫೋಟೊ ಒಂದು ವೈರಲ್ ಆಗಿದೆ. ಹಲವಾರು ಜನ ಆ ಫೋಟೊವನ್ನು ಪ್ರೊಫೈಲ್ ಪಿಕ್ ಆಗಿ, ವಾಟ್ಸಾಪ್ ಸ್ಟೇಟಸ್ ಆಗಿ ಹಾಕಿಕೊಂಡು ಸಂಭ್ರಮಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಉಳಿದ ವಿದ್ಯಾರ್ಥಿಗಳು ಕೂಡ ಅದೇ ಜಾಗದಲ್ಲಿ ಕುಳಿತು ಫೋಟೊ ತೆಗೆಸಿದ್ದಾರೆ! ಆ ಮೂಲಕ ನೈತಿಕ ಪೊಲೀಸ್‌ಗಿರಿ ಮಾಡಲು ಮುಂದಾದವರಿಗೆ ತಕ್ಕ ಉತ್ತರ ನೀಡಿದ್ದಾರೆ.

ನಡೆದಿದ್ದಿಷ್ಟು..

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು. ಅದಕ್ಕಾಗಿ ಸ್ಥಳೀಯರು ಕಳೆದ ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಇದನ್ನು ನೋಡಿದ ವಿದ್ಯಾರ್ಥಿಗಳಿಗೆ ಆಶ್ಚರ್ಯ ಮತ್ತು ಆಘಾತವಾಗಿತ್ತು. ಇದನ್ನು ಪ್ರತಿಭಟಿಸಲು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಧರಿಸಿದರು. ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡರು.

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷರಾದ ಕೆ.ಪೆ ಫೆಬಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ ಪ್ರತಿಕ್ರಿಯಿಸಿ, “ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

ಈ ಮೊದಲು ಸಹ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ತಂದಾಗ ದೊಡ್ಡ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು. ಈಗ ಮತ್ತೊಮ್ಮೆ ಮತೀಯ ಗೂಂಡಾಗಿರಿ ವಿರುದ್ಧ ಸ್ಪಷ್ಟ ಸಂದೇಶ ನೀಡಿದ್ದಾರೆ.

ಕೃಪೆ: ಆನ್‌ಮನೋರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಗಂಡು ಹೆಣ್ಣಿನ ಸ್ನೇಹ ಅದು ಗಿಟ್ಟದ ಸಂಪ್ರದಾಯಿಗಳ ಲೈಂಗಿಕ ವಿಕರಾಳಗಳಿಗೆ ಸವಾಲೊಡ್ಡುತ್ತದೆ 😁ಪಾಪ ಆವರೇನು ಮಾಡಿಯಾರು?
    ಆದರೆ ಈ ತಾಲೆಬಾನಿಗಳಿಗೆ ವಿದ್ಯಾರ್ಥಿಗಳ ಉತ್ತರ ಸಮಂಜಸವಾದದ್ದೆ.

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...