Homeಮುಖಪುಟಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

ಸಚಿವ ಸ್ಥಾನ ಕೊಡಿಸುವುದಾಗಿ BJP ಶಾಸಕನಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ ನಾಲ್ವರ ಬಂಧನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ಹೇಳಿ ಬಿಜೆಪಿ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ. ಆರೋಪಿಗಳನ್ನು ರಿಯಾಜ್ ಶೇಖ್ (41), ಯೋಗೇಶ್ ಕುಲಕರ್ಣಿ (57), ಸಾಗರ್ ಸಂಗ್ವಾಯ್ (37) ಮತ್ತು ಜಾಫರ್ ಅಹ್ಮದ್ ರಶೀದ್ ಅಹ್ಮದ್ ಉಸ್ಮಾನಿ (53) ಎಂದು ಗುರುತಿಸಲಾಗಿದೆ.

ದೌಂಡ್‌ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು, ತಮ್ಮ ಆಪ್ತ ಸಹಾಯಕನಿಗೆ ಜುಲೈ 16 ರಂದು ತನ್ನನ್ನು ರಿಯಾಜ್ ಶೇಖ್ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಕರೆ ಮಾಡಿದ್ದಾರೆ ಎಂದು ಪೊಲೀಸ್ ದೂರು ನೀಡಿದ್ದರು. ಅವರು ದೂರು ನೀಡಿದ ನಂತರ ಈ ಬಂಧನಗಳನ್ನು ಮಾಡಲಾಗಿದೆ. ಸಚಿವ ಸ್ಥಾನ ನೀಡುವ ಬಗ್ಗೆಗಿನ ಪ್ರಸ್ತಾಪವನ್ನು ಚರ್ಚಿಸಲು ಕುಲ್ ಅವರನ್ನು ಭೇಟಿಯಾಗಲು ಬಯಸುವುದಾಗಿ ರಿಯಾಜ್ ಹೇಳಿದ್ದಾರೆ ಎಂದು ಅವರು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದರ ಬೆನ್ನಲ್ಲೇ ಮುಂಬೈನ ಹೋಟೆಲ್‌ವೊಂದರಲ್ಲಿ ಶಾಸಕ ರಾಹುಲ್‌ ಕುಲ್ ಆರೋಪಿಯನ್ನು ಭೇಟಿಯಾಗಿದ್ದಾರೆ. ಅಲ್ಲಿ ಆರೋಪಿಯು, ಸಚಿವ ಸ್ಥಾನ ನೀಡಲು ಹಿರಿಯ ರಾಜಕಾರಣಿಯೊಬ್ಬರು ಕೆಲಸ ಮಾಡಲಿದ್ದು, ಅದಕ್ಕಾಗಿ 100 ಕೋಟಿ ರೂ. ನೀಡುವಂತೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…

ನಂತರ ಮಾತುಕತೆ ನಡೆಸಿದ ಶಾಸಕ ರಾಹುಲ್ ಅಂತಿಮವಾಗಿ 100 ಕೋಟಿಗಳ ಬದಲಿಗೆ 90 ಕೋಟಿ ರೂ.ಗಳು ಪಾವತಿಸುವುದಾಗಿ ಆರೋಪಿಗಳೊಂದಿಗೆ ಒಪ್ಪಿಕೊಂಡಿದ್ದಾರೆ. ಆದರೆ ಆರೋಪಿ ರಿಯಾಜ್ ಮುಂಗಡವಾಗಿ 20%ದಷ್ಟು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಈ ವೇಳೆ ಶಾಸಕ ಕೂಡ 20% ಹಣ ಮುಂಗಡವಾಗಿ ಕೊಡಲು ಒಪ್ಪಿಕೊಂಡು ಮತ್ತೊಮ್ಮೆ ಭೇಟಿಯಾಗುವುದಾಗಿ ಹೇಳಿದ್ದಾರೆ.

ಈ ಮಧ್ಯೆ ರಾಹುಲ್ ಕುಲ್ ಅವರು ಘಟನೆಯ ಬಗ್ಗೆ ಮರೈನ್ ಡ್ರೈವ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರು ತನಿಖೆಯ ಮೇಲ್ವಿಚಾರಣೆ ನಡೆಸಿ, ಪ್ರಕರಣವನ್ನು ನಗರ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದರು.

ಬಳಿಕ ನಗರ ಅಪರಾಧ ವಿಭಾಗದ ಪೊಲೀಸರು ಆರೋಪಿಗೆ ಬಲೆ ಬೀಸಿ, 18 ಕೋಟಿ ಮುಂಗಡವಾಗಿ ವಸೂಲಿ ಮಾಡಲು ಶಾಸಕರನ್ನು ಭೇಟಿ ಮಾಡಲು ಹೋಟೆಲ್‌ಗೆ ಬಂದಿದ್ದ ಆರೋಪಿ ಮತ್ತು ಆತನ ಸಹಚರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಅವರನ್ನು ವಿಚಾರಣೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ಕರೆತರಲಾಗಿದೆ. ನಾಲ್ವರನ್ನು ಜುಲೈ 26ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಗಳಿಂದ ಮೂರು ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್ ಠಾಕ್ರೆ

“ಜಾಫರ್‌‌ ಉಸ್ಮಾನಿ ದೆಹಲಿಯಲ್ಲಿ ಯಾರೊಂದಿಗೊ ಸಂಪರ್ಕದಲ್ಲಿರುವ ಗ್ಯಾಂಗ್‌ನ ಕಿಂಗ್‌ಪಿನ್ ಎಂದು ತೋರುತ್ತದೆ” ಎಂದು ಪೊಲೀಸರು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಹೇಳಿದೆ. ಪ್ರಕರಣದಲ್ಲಿ ದೆಹಲಿ ಮೂಲದ ವ್ಯಕ್ತಿಯ ಪಾತ್ರವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ಧಿ ಸಂಸ್ಥೆ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...