Homeರಾಷ್ಟ್ರೀಯಶೃಂಗಸಭೆಗೆ ತೆರಳದಂತೆ ತಡೆ: ಲೆಫ್ಟಿನೆಂಟ್ ಗವರ್ನರ್‌ರನ್ನು ಧಿಕ್ಕರಿಸಿದ ಅರವಿಂದ್ ಕೇಜ್ರಿವಾಲ್!

ಶೃಂಗಸಭೆಗೆ ತೆರಳದಂತೆ ತಡೆ: ಲೆಫ್ಟಿನೆಂಟ್ ಗವರ್ನರ್‌ರನ್ನು ಧಿಕ್ಕರಿಸಿದ ಅರವಿಂದ್ ಕೇಜ್ರಿವಾಲ್!

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿದೇಶದಲ್ಲಿ ಶೃಂಗಸಭೆಯಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ವಿನಯ್ ಕುಮಾರ್‌ ಸಕ್ಸೇನಾ ಅವರು ಎರಡನೇ ಬಾರಿಗೆ ತಡೆದಿದ್ದಾರೆ. ಆದರೆ ತಾನು ಈ ಬಾರಿ ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.

ನಡೆಯುವ ಕಾರ್ಯಕ್ರಮವೂ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮಂಜೂರಾತಿ ವಿಳಂಬವಾಗುತ್ತಿರುವುದರಿಂದ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ‘‘ಮುಖ್ಯಮಂತ್ರಿಯೊಬ್ಬರು ಇಂತಹ ಮಹತ್ವದ ವೇದಿಕೆಗೆ ಭೇಟಿ ನೀಡುವುದನ್ನು ತಡೆಯುವುದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ’’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

“ಇದು ಮೇಯರ್‌ಗಳ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು” ಎಂದು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ದೆಹಲಿ ಸರ್ಕಾರದ ಅನುಮತಿಗಾಗಿ ಬಂದಿರುವ ಮನವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೆ ಮತ್ತೆ ಪ್ರತ್ಯತ್ತರ ಬರೆದಿರುವ ಮುಖ್ಯಮಂತ್ರಿ, “ಸಂವಿಧಾನದ ಮೂರು ಪಟ್ಟಿಗಳಲ್ಲಿ ಉಲ್ಲೇಖಿಸಲಾದ ವಿಷಯಗಳಲ್ಲಿ ಮಾನವ ಜೀವನವನ್ನು ವಿಭಾಗಿಸಲಾಗಿಲ್ಲ. ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಯಾವ ವಿಷಯಗಳು ಬರುತ್ತವೆ ಎಂಬುದರ ಆಧಾರದ ಮೇಲೆ ನಿರ್ಧರಿಸಿದರೆ ಅದು ತಮಾಷೆಯ ಪರಿಸ್ಥತಿಯನ್ನು ಉಂಟು ಮಾಡುತ್ತದೆ” ಎಂದು ಹೇಳಿದ್ದಾರೆ.

“ಒಂದು ವೇಳೆ ಹಾಗೆ ನಿರ್ಧರಿಸಿದ್ದರೆ ಪ್ರಧಾನಿಯವರು ಎಲ್ಲಿಗೂ ಹೋಗಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಅವರ ಹೆಚ್ಚಿನ ಭೇಟಿಗಳಲ್ಲಿ ಅವರು ರಾಜ್ಯ ಪಟ್ಟಿಯಲ್ಲಿ ಬರುವ ಮತ್ತು ಅವರ ಅಧಿಕಾರ ವ್ಯಾಪ್ತಿಗೆ ಬರದ ವಿಷಯಗಳನ್ನು ಚರ್ಚಿಸುತ್ತಾರೆ” ಎಂದು ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕಿದ ದೆಹಲಿ ಪೊಲೀಸರು!

ತಮ್ಮ ಪತ್ರದಲ್ಲಿ ಅವರು ಲೆಫ್ಟಿನೆಂಟ್ ಗವರ್ನರ್‌ಗೆ “ದಯವಿಟ್ಟು ಕೇಂದ್ರ ಸರ್ಕಾರದಿಂದ ರಾಜಕೀಯ ಅನುಮತಿಗಾಗಿ ಅರ್ಜಿ ಸಲ್ಲಿಸಿ” ಎಂದು ಸಲಹೆ ನೀಡಿದ್ದಾರೆ.

“ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ್ ಭೇಟಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ನಿರ್ಬಂಧಿಸಿದ ನಂತರ, ಸಿಎಂ ಈಗ ‘ರಾಜಕೀಯ ಕ್ಲಿಯರೆನ್ಸ್’ಗಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಭೇಟಿಯು ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತದೆಯಾದ್ದರಿಂದ ಕೇಂದ್ರವು ಈ ಅನುಮತಿಯನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮೇಯರ್‌ಗಳ ಸಮ್ಮೇಳನವಾಗಿರುವುದರಿಂದ ಈ ಸಮಾವೇಶಕ್ಕೆ ಹಾಜರಾಗದಂತೆ ಎಲ್‌ಜಿ ಕೇಜ್ರಿವಾಲ್‌ಗೆ ಸೂಚಿಸಿದ್ದಾರೆ. ಈ ಹಿಂದೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಕೂಡ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಿಗೆ ಹೋಗುತ್ತಾರೆ. ಇದು ರಾಜಕೀಯ ಪ್ರೇರಿತ ಕೃತ್ಯವಾಗಿದೆ” ಎಂದು ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ: ಭಿನ್ನ ತೀರ್ಪು ನೀಡಿದ ದೆಹಲಿ ಹೈಕೋರ್ಟ್‌‌!; ಸುಪ್ರೀಂ ಮೆಟ್ಟಿಲೇರಲಿರುವ ಅರ್ಜಿದಾರರು

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...