Homeರಾಷ್ಟ್ರೀಯಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

- Advertisement -
- Advertisement -

296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಒಂದು ವಾರದೊಳಗೆ ಭಾರೀ ಮಳೆಯಿಂದಾಗಿ ರಸ್ತೆಯ ಒಂದು ಭಾಗವು ಕುಸಿದು ಗುಂಡಿಯಾಗಿದ್ದು ವರದಿಯಾಗಿದೆ. ಕುಸಿದ ರಸ್ತೆಯ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪ್ರಧಾನಿ ಮೋದಿಯನ್ನು ಟೀಕಿಸಲಾಗುತ್ತಿದೆ.

ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಚಿರಿಯಾ ಸೇಲಂಪುರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಯಯಲ್ಲಿ 1.5 ಅಡಿ ಆಳದ ಗುಂಡಿ ಸೃಷ್ಟಿಯಾಗಿದೆ ಎಂದು ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇ ಕೈಗಾರಿಕಾ ಪ್ರಾಧಿಕಾರದ ವಕ್ತಾರ ದುರ್ಗೇಶ್ ಉಪಾಧ್ಯಾಯ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಡಿಗಳನ್ನು ಕೂಡಲೇ ಸರಿಪಡಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಂತವುಗಳನ್ನು ಸರಿಪಡಿಸಲು ಬುಲ್ಡೋಜರ್‌ಗಳು ಮತ್ತು ಅಗತ್ಯ ಉಪಕರಣಗಳೊಂದಿಗೆ ಒಂದು ತಂಡವನ್ನು ಪ್ರಾಧಿಕಾರ ನಿಯೋಜಿಸಿದೆ.

ರಸ್ತೆ ಕುಸಿದು ಗುಂಡಿ ಸೃಷ್ಟಿಯಾಗಿರುವ ಘಟನೆಗೆ ದೇಶದಾದ್ಯಂತ ಭಾರಿ ಟೀಕೆ ವ್ಯಕ್ತವಾಗಿದ್ದು, ಘಟನೆಗೆ ಉತ್ತರ ಪ್ರದೇಶದ ಪ್ರತಿಪಕ್ಷವಾದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಅಲ್ಲದೆ, ಬಿಜೆಪಿ ಸಂಸದ ವರುಣ್ ಗಾಂಧಿ ಅವರು ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿದ್ದಾರೆ. ಘಟನೆಯ ಹಿನ್ನಲೆಯಲ್ಲಿ ಅಧಿಕಾರಿಗಳು ಮತ್ತು ಸಂಬಂಧಿಸಿದ ಕಂಪನಿಗಳ ವಿರುದ್ಧ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ.

“15,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಕ್ಸ್‌ಪ್ರೆಸ್‌ವೇ ಐದು ದಿನಗಳ ಮಳೆಯನ್ನೂ ತಡೆದುಕೊಳ್ಳಲು ಸಾಧ್ಯವಾಗದಿದ್ದರೆ, ಅದರ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸುತ್ತವೆ. ಯೋಜನೆಯ ಮುಖ್ಯಸ್ಥರು, ಸಂಬಂಧಪಟ್ಟ ಎಂಜಿನಿಯರ್ ಮತ್ತು ಜವಾಬ್ದಾರಿಯುತ ಕಂಪನಿಗಳನ್ನು ಕರೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ವರುಣ್ ಗಾಂಧಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೋ: ಕೆಲಸದಿಂದ ಪೌರಕಾರ್ಮಿಕ ವಜಾ!

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಬಿಜೆಪಿಯ ಅರ್ಧಂಬರ್ಧ ಅಭಿವೃದ್ಧಿಯ ಗುಣಮಟ್ಟಕ್ಕೆ ಇದು ಒಂದು ಮಾದರಿಯಾಗಿದೆ. ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ದೊಡ್ಡ ಜನರು ಉದ್ಘಾಟಿಸಿದರು, ಆದರೆ ಒಂದೇ ವಾರದಲ್ಲಿ ಭ್ರಷ್ಟಾಚಾರದ ದೊಡ್ಡ ಹೊಂಡಗಳು ಹೊರಬಂದಿವೆ” ಎಂದು ಹೇಳಿದ್ದಾರೆ.

“ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ರಸ್ತೆ ನಿರ್ಮಾಣದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತುಪಡಿಸುತ್ತಿದೆ. ಅರ್ಧಬಂರ್ಧ ಕಾಮಗಾರಿಯಾದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸುವ ಮೂಲಕ ಜನರ ಜೀವಕ್ಕೆ ಅಪಾಯ ತಂದ ಸಿಎಂ ಕ್ಷಮೆಯಾಚಿಸಬೇಕು” ಎಂದು ಸಮಾಜವಾದಿ ಪಕ್ಷ ಹೇಳಿದ್ದು, ವೀಡಿಯೊವನ್ನು ಸಹ ಟ್ಯಾಗ್ ಮಾಡಿದೆ.

ಟ್ವಿಟರ್‌ನಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡ ಕಾಂಗ್ರೆಸ್, “ಸರ್ಕಾರವು ಗುಂಡಿ ಮುಕ್ತ ರಸ್ತೆಗಳ ಭರವಸೆ ನೀಡಿದೆ. ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೊಂಡ ನಾಲ್ಕು ದಿನಗಳಲ್ಲೇ ಅಭಿವೃದ್ಧಿಗೆ ಹೊಡೆತ ಬಿದ್ದಿದೆ” ಎಂದು ಹೇಳಿದೆ.

ಇದನ್ನೂ ಓದಿ: ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ದಿನದಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಯೋಗಿ ಆದಿತ್ಯನಾಥ್ ಸರ್ಕಾರದ “ಅರ್ಧ ಪೂರ್ಣಗೊಂಡ” ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಜುಲೈ 16 ರಂದು 296 ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...