Homeರಾಷ್ಟ್ರೀಯತ್ರಿವರ್ಣ ಧ್ವಜದ ಕುರಿತು ಪ್ರಧಾನಿ ಮೋದಿ ಟ್ವೀಟ್; ‘ಬೂಟಾಟಿಕೆ ಜಿಂದಾಬಾದ್!’ ಎಂದ ಕಾಂಗ್ರೆಸ್

ತ್ರಿವರ್ಣ ಧ್ವಜದ ಕುರಿತು ಪ್ರಧಾನಿ ಮೋದಿ ಟ್ವೀಟ್; ‘ಬೂಟಾಟಿಕೆ ಜಿಂದಾಬಾದ್!’ ಎಂದ ಕಾಂಗ್ರೆಸ್

- Advertisement -
- Advertisement -

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಮತ್ತು ತ್ರಿವರ್ಣ ಧ್ವಜದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬರೆದುಕೊಂಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ‘ಹಿಪಾಕ್ರಸಿ ಜಿಂದಾಬಾದ್(ಬೂಟಾಟಿಕೆಗೆ ಜಯವಾಗಲಿ)’ ಎಂದು ವ್ಯಂಗ್ಯವಾಡಿದೆ.

ಆಗಸ್ಟ್ 13-15 ರ ನಡುವೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಅಥವಾ ಪ್ರದರ್ಶಿಸಲು ಭಾರತದ ಜನರಿಗೆ ಪ್ರಧಾನಿ ಮನವಿ ಮಾಡಿದ್ದಾರೆ. ಜವಾಹರಲಾಲ್‌ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜದ ಚಿತ್ರ ಮತ್ತು ತ್ರಿವರ್ಣವನ್ನು ರಾಷ್ಟ್ರಧ್ವಜವಾಗಿ ಅಳವಡಿಸಿಕೊಳ್ಳಲು ಕಾರಣವಾದ ಅಧಿಕೃತ ಸಂವಹನಗಳ ವಿವರಗಳನ್ನು ಪ್ರಧಾನಿ ಮೋದಿ ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು ಜುಲೈ 22 ಆಗಿದ್ದು, ನಮ್ಮ ಇತಿಹಾಸದಲ್ಲಿ ವಿಶೇಷ ಪ್ರಸ್ತುತತೆಯನ್ನು ಹೊಂದಿದೆ. 1947 ರ ಈ ದಿನ ನಮ್ಮ ರಾಷ್ಟ್ರಧ್ವಜವನ್ನು ಅಳವಡಿಸಲಾಯಿತು. ನಮ್ಮ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಸಮಿತಿಯ ವಿವರಗಳು ಮತ್ತು ಪಂಡಿತ್ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜ ಸೇರಿದಂತೆ ಇತಿಹಾಸದಿಂದ ಕೆಲವು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ” ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿರುವಾಗ ಸ್ವತಂತ್ರ ಭಾರತಕ್ಕಾಗಿ ಧ್ವಜದ ಕನಸು ಕಂಡವರೆಲ್ಲರ ಅನುಸ್ಮರಣೀಯ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನಾವು ನೆನಪಿಸಿಕೊಳ್ಳುತ್ತೇವೆ. ಅವರ ಆಶಯಗಳನ್ನು ಈಡೇರಿಸಲು ಮತ್ತು ಅವರ ಕನಸುಗಳ ಭಾರತವನ್ನು ನಿರ್ಮಿಸಲು ನಾವು ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ಪ್ರಧಾನಿ ಮೋದಿ ಅವರ ಸರಣಿ ಟ್ವೀಟ್‌ಗಳಿಗೆ ಕಾಂಗ್ರೆಸ್‌ನ ಹಿರಿಯ ನಾಯಕ, ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಅವರು ಕಟುವಾದ ಪ್ರತಿಕ್ರಿಯೆಯನ್ನು ನೀಡಿದ್ದು, “ಬೂಟಾಟಿಕೆ ಜಿಂದಾಬಾದ್!” ಎಂದು ಹೇಳಿದ್ದಾರೆ.

“ನಾಗ್ಪುರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು 52 ವರ್ಷಗಳನ್ನು ತೆಗೆದುಕೊಂಡ ಸಂಘಟನೆಯಲ್ಲಿ ಪ್ರಚಾರಕರಾಗಿದ್ದವರು, ನೆಹರೂ ಅವರು ‘ಭಾರತದ ಸ್ವಾತಂತ್ರ್ಯದ ಉಡುಗೆ’ ಎಂದು ಬಣ್ಣಿಸಿದ ಖಾದಿಯಿಂದ ರಾಷ್ಟ್ರಧ್ವಜವನ್ನು ತಯಾರಿಸಿದವರ ಜೀವನೋಪಾಯವನ್ನು ನಾಶಪಡಿಸುತ್ತಿದ್ದಾರೆ” ಎಂದು ಜೈರಾಮ್ ರಮೇಶ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಭಾರತದ ಧ್ವಜ ಸಂಹಿತೆ-2002 ಅನ್ನು ಡಿಸೆಂಬರ್ 2021 ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ಪಾಲಿಯೆಸ್ಟರ್ ಮತ್ತು ಯಂತ್ರ ನಿರ್ಮಿತ ಧ್ವಜಗಳನ್ನು ತಯಾರಿಸಲು ಮತ್ತು ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬಿಜೆಪಿಗೆ ಸ್ವಾತಂತ್ರ್ಯ ಹೋರಾಟ ಮತ್ತು ಅದರ ಚಿಹ್ನೆಗಳ ಬಗ್ಗೆ ಯಾವುದೇ ತಿಳುವಳಿಕೆ ಇಲ್ಲ ಎಂದು ಆರೋಪಿಸಿ ಕಾಂಗ್ರೆಸ್ ತಿದ್ದುಪಡಿಯನ್ನು ಹಿಂಪಡೆಯಲು ಒತ್ತಾಯಿಸುತ್ತಿದೆ.

ಇದನ್ನೂ ಓದಿ: ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

“ಯಂತ್ರ ನಿರ್ಮಿತ ಮತ್ತು ಆಮದುದಿನ ಪಾಲಿಯೆಸ್ಟರ್ ಧ್ವಜಗಳ ಆಮದು ಮಾಡಿಕೊಳ್ಳಲು ಅನುಮತಿ ನೀಡುವ ಮೂಲಕ ಪ್ರಧಾನಿ ಮೋದಿ ಅವರು ‘ಖಾದಿ’ಯ ಮೂಲತತ್ವ ಮತ್ತು ಮಹಾತ್ಮ ಗಾಂಧಿಯವರ ಪರಂಪರೆಯ ಮೇಲೆ ದಾಳಿ ಮಾಡಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಈ ತಿಂಗಳ ಆರಂಭದಲ್ಲಿ ಮೋದಿ ವಿರುದ್ಧ ಕಿಡಿ ಕಾರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...