Homeಮುಖಪುಟಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

ಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

- Advertisement -
- Advertisement -

ದೈನಂದಿನ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಜಾರಿ, ಬೆಲೆ ಏರಿಕೆ, ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಬಗ್ಗೆ ಕೇಂದ್ರದ ಮೇಲೆ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದರಿಂದ ಲೋಕಸಭೆಯ ಕಲಾಪವನ್ನು ಇಂದು ಎರಡು ಭಾರಿ ಮುಂದೂಡಲಾಗಿದೆ. ಮೊದಲು ಮಧ್ಯಾಹ್ನದವರೆಗೆ ಮತ್ತು ನಂತರ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಲಾಯಿತು. ರಾಜ್ಯಸಭೆ ಕಲಾಪ 12 ಗಂಟೆಗೆ ಪುನರಾರಂಭವಾಯಿತು.

ಪ್ರಮುಖ ವಿಷಯಗಳ ಚರ್ಚೆಗಳಿಗೆ ಸರ್ಕಾರ ಬೆನ್ನು ತೋರಿಸಿ ಓಡಿ ಹೋಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಇದು ಮೋದಿ ಸರ್ಕಾರದ “ಹಠಮಾರಿತನ”ವನ್ನು ತೋರಿಸುತ್ತದೆ ಎಂದಿವೆ. ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಲೋಕಸಭೆ ಮತ್ತು ರಾಜ್ಯಸಭೆಗಳೆರಡೂ ನಿರಂತರ ಮುಂದೂಡಿಕೆ ಮಾಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಅಧಿವೇಶನದ ಸತತ ಐದನೇ ದಿನವಾದ ಇಂದು ಉಭಯ ಸದನಗಳು ಯಾವುದೇ ಚರ್ಚೆ ಇಲ್ಲ ಇಲ್ಲದೆ ಮುಂದೂಡಲ್ಪಟ್ಟಿವೆ.

ಪ್ರತಿಪಕ್ಷಗಳು ನಿರಂತರವಾಗಿ ವಾಗ್ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರದ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸಿದರು.

ನಿರುದ್ಯೋಗ ಮತ್ತು ಇತರ ಸಮಸ್ಯೆಗಳು ಚರ್ಚೆಗೆ ಬಂದಾಗ ಕನಿಷ್ಠ ಏಳು ಭಾರಿ ಮುಂದೂಡಿಕೆ ಸೂಚನೆಗಳನ್ನು ಉಭಯ ಸದನಗಳಲ್ಲಿ ನೀಡಲಾಗಿದೆ.

ಪ್ರತಿಪಕ್ಷಗಳು ತಮ್ಮ ನಿಲುವು ಸಡಿಲಿಸಲು ನಿರಾಕರಿಸಿವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಬೆಲೆ ಏರಿಕೆ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದು ಸರ್ಕಾರ ಬುಧವಾರ ಹೇಳಿದೆ.

“ಕಾಂಗ್ರೆಸ್ ಪ್ರಜಾಪ್ರಭುತ್ವದ ಬಗ್ಗೆ ವಿನಾಶಕಾರಿ ಧೋರಣೆ ಹೊಂದಿದೆ. ಸದನ ಕಾರ್ಯನಿರ್ವಹಿಸಲು ಅನುಮತಿಸದೆ ತೊಂದರೆ ನೀಡುತ್ತಿದೆ. ಜೈರಾಮ್ ರಮೇಶ್ ಅವರ ಟ್ವೀಟ್‌ ಮೂಲಕ ಕಾಂಗ್ರೆಸ್ ಯಶಸ್ವಿಯಾಗಿರುವುದು ಬಹಿರಂಗವಾಗಿದೆ” ಎಂದು ರಾಜ್ಯಸಭೆಯ ಸಭಾನಾಯಕರಾಗಿರುವ ಪಿಯೂಷ್ ಗೋಯಲ್ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

“ಮೋದಿ ಸರ್ಕಾರದ ಹಠಮಾರಿತನದಿಂದ ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಬುಧವಾರ ಹೇಳಿದ್ದರು.

“ಇಂದು ಬೆಳಗ್ಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಬೆಲೆ ಏರಿಕೆ ಮತ್ತು ಆಹಾರ ಪದಾರ್ಥಗಳ ಮೇಲಿನ ಅರ್ಥಹೀನ ಜಿಎಸ್‌ಟಿ ದರಗಳ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿದವು. ಇದನ್ನು ನಿರಾಕರಿಸಲಾಯಿತು. ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಮೋದಿ ಸರ್ಕಾರ ತನ್ನ ಹಠಮಾರಿತನ ಮುಂದುವರಿಸಿದೆ. ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಯ ಹಿನ್ನೆಲೆಯಲ್ಲಿ ಈ ಭಾರಿಯ ಮುಂಗಾರು ಅಧಿವೇಶನ ಮಹತ್ವ ಪಡೆದಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಭಾರತದ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಲಿದ್ದಾರೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಮುಕ್ತಾಯವಾಗಲಿದ್ದು, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18ರಂದು ಪ್ರಾರಂಭವಾಯಿತು. ಆಗಸ್ಟ್ 12ರವರೆಗೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...