Homeಕರ್ನಾಟಕಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಸಂದರ್ಶನಕ್ಕೆ ಹಾಜರಾಗಿದ್ದ ಕಲಾವಿದನನ್ನು ಹೀಯಾಳಿಸಿ ಹೊರಗೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕಿರಿಯ ಕಲಾವಿದರೊಬ್ಬರಿಗೆ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಆಕ್ಷೇಪಾರ್ಹ ಪದಗಳನ್ನು ಕಿರಿಯ ರಂಗಕರ್ಮಿಗೆ ನಿರ್ದೇಶಕರು ಬಳಸಿರುವುದು ಆಡಿಯೊದಲ್ಲಿ ದಾಖಲಾಗಿದೆ.

ರಂಗಾಯಣದ ರೆಪರ್ಟರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಮೊನ್ನೆಯಷ್ಟೇ ಮೈಸೂರು ರಂಗಾಯಣದಲ್ಲಿ ನಡೆದಿತ್ತು. ರಂಗಾಯಣದಲ್ಲಿ ತರಬೇತಿ ಪಡೆದಿರುವ ಅನುರಾಗ್ ಶರ್ಮ ಎನ್ನುವ ಕಿರಿಯ ಕಲಾವಿದ ಅರ್ಜಿ ಹಾಕಿದ್ದರು. ಆದರೆ ಈ ಹಿಂದೆ ಕಾರ್ಯಪ್ಪ ಅವರ ವಿರುದ್ಧ ಅನುರಾಗ್‌ ಮಾತನಾಡಿದ್ದರು ಎಂಬ ಕಾರಣಕ್ಕೆ ಸಂದರ್ಶನ ನಡೆಸದೆ ವಾಪಸ್‌ ಕಳಿಸಲಾಗಿದೆ ಹಾಗೂ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದರೂ ಎಂದು ಆರೋಪಿಸಲಾಗಿದೆ. ನಂತರ ಅನುರಾಗ್ ಅವರು ರಂಗಾಯಣ ನಿರ್ದೇಶಕರಿಗೆ ಕರೆ ಮಾಡಿ, “ಏಕೆ ನನ್ನ ಸಂದರ್ಶನ ಮಾಡಲಿಲ್ಲ” ಎಂದು ಕೇಳಿದಾಗ ಆಕ್ಷೇಪಾರ್ಹ ಪದಗಳನ್ನು ಕಾರ್ಯಪ್ಪ ಅವರು ಬಳಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್‌ ಆಡಿಯೊದಲ್ಲಿ ಏನಿದೆ? 

ಅನುರಾಗ್‌: ನನ್ನನ್ನು ಸಂದರ್ಶನ ಮಾಡದೆ ನಿನ್ನೆ ಹೊರಗೆ ಕಳಿಸಿದ್ದು ಏಕೆ?

ಅಡ್ಡಂಡ ಕಾರ್ಯಪ್ಪ: ನೀನು ಯಾರೋ ಮಾರಾಯ ಫೋನ್‌ ಮಾಡೋದಕ್ಕೆ? ನೀ ಯಾರು ನನ್ನ ಕೇಳೋದಕ್ಕೆ… ಲೋ……. ಇಡೋ ಮಾರಾಯ ಫೋನು.

ಅನುರಾಗ್: ನಾನು ಏಕೆ ಫೋನ್ ಮಾಡಬಾರದು.

ಕಾರ್ಯಪ್ಪ: ನೀನ್ ಯಾರೋ ಫೋನ್ ಮಾಡೋಕೆ? ರಂಗಾಯಣಕ್ಕೆ ಕೆಟ್ಟ ಹೆಸರು ತರೋದಕ್ಕೆ… 

ಅನುರಾಗ್: ನಾನು ಯಾವಾಗ ಕೆಟ್ಟ ಹೆಸರು ತಂದಿದ್ದೀನಿ. ಇರೋ ವಿಷಯ ಹೇಳಿದ್ದೇನಲ್ಲವಾ? 

ಕಾರ್ಯಪ್ಪ: ಇಡೋ ಮಾರಾಯ ಫೋನು. ನೀನೊಬ್ಬ ಲೋ….  ಇದ್ದೀಯ. ಇಡೋ ಫೋನು.

ಅನುರಾಗ್: ರಂಗಾಯಣ ನಿರ್ದೇಶಕರಾಗಿ ನೀವು ಈ ರೀತಿ ಮಾತನಾಡುವುದು ಸರಿಯೇ? 

ಕಾರ್ಯಪ್ಪ: ನೀನೊಬ್ಬ ಕಡಚಾ ಫೇಲೋ. ನೀನೊಬ್ಬ ಆರ್ಟಿಸ್ಟಾ?

ಅನುರಾಗ್‌: ನಿಮ್ಮ ಕುರ್ಚಿಗಾದರೂ ಮರ್ಯಾದೆ ಕೊಡೋದು ಬೇಡವಾ?

ಕಾರ್ಯಪ್ಪ: ರಂಗಾಯಣದ ಋಣಪಾತಕ ನೀನು. ಫೋನ್ ಮಾಡಲಿಕ್ಕೆ ನಿನಗೆಷ್ಟು ಸೊಕ್ಕು ಇದೆ. 

ಅನುರಾಗ್‌: ಇದಕ್ಕೆ ಉತ್ತರ ಕೊಡಿ ಸಾಕು, ಇಂಟರ್‌ವ್ಯೂಗೆ ಬಂದ ಕಲಾವಿದನನ್ನು….

ಕಾರ್ಯಪ್ಪ: ನೀನ್ಯಾವನೋ ಕೇಳೋಕೆ. ಸರಿಯಾಗಿ ಅಪ್ಲಿಕೇಷನ್‌ ಕೂಡ ಹಾಕದೆ, ಚೇಷ್ಟೇಗಾಗಿ ಬೇಕಂತಲೇ ಅಪ್ಲಿಕೇಷನ್ ಹಾಕಿದವನು ನೀನು. 

ಅನುರಾಗ್‌: ಎಷ್ಟೋ ಜನ ಡಿಪ್ಲೊಮಾ ಕೂಡ ಮಾಡದವರು ರಂಗಾಯಣಕ್ಕೆ ಅರ್ಜಿ ಹಾಕಿದ್ದಾರೆ. 

ಕಾರ್ಯಪ್ಪ: ನೀನು ಡಿಪ್ಲೊಮಾ ಮಾಡಿದವನು. ನಿನ್ನನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನಾಗಿ ಗೊತ್ತಿತ್ತು. ಆದರೆ ನೀನು ಹಾಕಿದ ಉದ್ದೇಶವೇ… (ಮಾತು ಅಸ್ಪಷ್ಟವಾಗಿದೆ).

ಅನುರಾಗ್: ಸುಮ್ಮನೇ ಕೂಗಾಡಬೇಡಿ ಸರ್‌. ಬೇರೆಯವರ ಮಾತನ್ನೂ ಕೇಳಿಸಿಕೊಳ್ಳಿ.

ಕಾರ್ಯಪ್ಪ: ನಾಯಿಗಳ ಜೊತೆ ನಾನು ಮಾತನಾಡುವುದಿಲ್ಲ.

– ಹೀಗೆ ಸಂಭಾಷಣೆ ಇರುವ ಆಡಿಯೊ ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಹರಿದಾಡಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಿರಿಯ ಕಲಾವಿದ ಅನುರಾಗ್‌ ಶರ್ಮಾ ಅವರು, “ನಾನೊಬ್ಬ ಕಲಾವಿದನಾಗಿ ರಂಗಾಯಣ ಕೆಲವು ನಾಟಕಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಹೊಸ ಕಲಾವಿದ ಅಲ್ಲ. ‘ಶ್ರೀ ರಾಮಾಯಣ ದರ್ಶನಂ’ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದೆ. ‘ಪರ್ವ’ದಲ್ಲಿ ಕರ್ಣನ ಪಾತ್ರ ಮಾಡಿದ್ದೆ. ಆದರೆ ಕೆಲವು ದಿನಗಳಿಂದ ರಂಗಾಯಣ ನಿರ್ದೇಶಕರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತನ್ನು ಎಲ್ಲ ಕಡೆ ತುರುಕುತ್ತಾ ಹೋಗಿದ್ದರಿಂದ ಇರುಸುಮುರುಸಾಗಿ ಕೆಲವು ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡಿದ್ದೆ. ಈ ವೈಯಕ್ತಿಕ ವೈಷಮ್ಯ ಇಟ್ಟುಕೊಂಡು ಹೀಗೆ ವರ್ತಿಸಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

“ಸಂದರ್ಶನದ ವೇಳೆ- ನೀನು ಕರ್ಣನ ಪಾತ್ರ ಮಾಡಿದವನು. ಆದರೆ ನೀನು ಶಕುನಿ. ನಿನಗೆ ರಂಗಾಯಣಕ್ಕೆ ಅರ್ಜಿ ಹಾಕುವ ಯೋಗ್ಯತೆ ಇಲ್ಲ. ನಿನ್ನ ಸಂದರ್ಶನ ಮಾಡುವುದಿಲ್ಲ. ಹೊರಗೆ ಹೋಗು- ಎಂದು ಬಲವಂತವಾಗಿ ಹೊರದಬ್ಬಿದರು. ಆ ನಂತರದಲ್ಲಿ ಅವರಿಗೆ ಕರೆ ಮಾಡಿದ್ದೆ. ‘ಹೀಗ್ಯಾಕೆ ಮಾಡಿದಿರಿ, ಕನಿಷ್ಟಪಕ್ಷ ಸಂದರ್ಶನವಾದರೂ ಮಾಡಬಹುದಿತ್ತಲ್ಲ’ ಎಂದು ಕೇಳಿದಾಗ ಹೀಗೆ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಪೊಲೀಸರಿಗೆ ದೂರು ನೀಡಿದ್ದೇನೆ: ಅಡ್ಡಂಡ ಕಾರ್ಯಪ್ಪ

ವೈರಲ್ ಆಡಿಯೊಕ್ಕೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು, “ಸಂದರ್ಶನ ಮುಗಿದ ಮೇಲೆ ಸುಮಾರು ಐವತ್ತು ಭಾರಿ ಕರೆ ಮಾಡಿ ನನಗೆ ಅನುರಾಗ್ ತೊಂದರೆ ಕೊಟ್ಟಿದ್ದಾನೆ. ಆನಂತರದಲ್ಲಿ ನಾನು ಆತನೊಂದಿಗೆ ಮಾತನಾಡಿದ್ದೇನೆ. ಪೊಲೀಸರಿಗೆ ದೂರು ಕೂಡ ನೀಡಿದ್ದೇನೆ” ಎಂದರು.

ಸಂದರ್ಶನ ಮಾಡದೆ ಕಳುಹಿಸಿದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಕಳೆದ ಒಂದು ವರ್ಷದಿಂದ ರಂಗಾಯಣದ ವಿರುದ್ಧ, ನಿರ್ದೇಶಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಂಗಾಯಣದ ಚರಿಷ್ಮಾವನ್ನು ಹಾಳು ಮಾಡುತ್ತಾ ಬಂದಿದ್ದಾನೆ. ರಂಗಾಯಣದ ಇಬ್ಬರು ಹಿರಿಯ ಕಲಾವಿದರು, ರಂಗ ಸಮಾಜದ ಇಬ್ಬರು ಸದಸ್ಯರು ಒಳಗೊಂಡು ಸಂದರ್ಶನ ಸಮಿತಿ ಮಾಡಿದ ತೀರ್ಮಾನವಿದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...