Homeಮುಖಪುಟತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ತಮಿಳುನಾಡಿನ ವಿಸಿಕೆ ಪಕ್ಷ ನೀಡುವ ಡಾ.ಅಂಬೇಡ್ಕರ್‌ ಪ್ರಶಸ್ತಿಗೆ ಸಿದ್ದರಾಮಯ್ಯ ಆಯ್ಕೆ

ವಿಸಿಕೆಯು ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಜಾತೀಯತೆಯ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

ತಮಿಳುನಾಡಿನ ವಿಡುದಲೈ ಚಿರುದೈಗಳ್ ಕಚ್ಚಿ (ವಿಸಿಕೆ) ಪ್ರತಿ ವರ್ಷ ನೀಡುವ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಕರ್ನಾಟಕ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, “ವಿಡುದಲೈ ಚಿರುದೈಗಳ್ ಪಕ್ಷ ನೀಡುವ ಡಾ.ಬಿ.ಆರ್‌.ಅಂಬೇಡ್ಕರ್‌‌ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು. ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ನೀಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದರು” ಎಂದು ತಿಳಿಸಿದ್ದಾರೆ.

ವಿಡುದಲೈ ಚಿರುದೈಗಳ್ ಪಕ್ಷವು (ಲಿಬರೇಶನ್ ಪ್ಯಾಂಥರ್ ಪಾರ್ಟಿ) ದಲಿತ ಪ್ಯಾಂಥರ್ಸ್ ಚಳವಳಿಯಿಂದ ಹುಟ್ಟಿಕೊಂಡಿತು. ಭಾರತದಲ್ಲಿನ ಅಸಮಾನತೆ ವಿರುದ್ಧ ಈ ಪಕ್ಷ ಹೋರಾಡುತ್ತಿದೆ. ಜಾತಿ ಆಧಾರಿತ ತಾರತಮ್ಯದ ವಿರುದ್ಧ ತಮಿಳುನಾಡಿನಲ್ಲಿ  ಸಕ್ರಿಯವಾಗಿದೆ.

1970ರಲ್ಲಿ ಮಹಾರಾಷ್ಟ್ರದಲ್ಲಿ ಹುಟ್ಟಿಕೊಂಡ ದಲಿತ್ ಪ್ಯಾಂಥರ್ಸ್ ಆಫ್ ಇಂಡಿಯಾದಿಂದ ಪ್ರೇರೇಪಣೆಯಾಗಿ 1982ರಲ್ಲಿ ತಮಿಳುನಾಡಿನ ಮಧುರೈನಲ್ಲಿ ದಲಿತ ಪ್ಯಾಂಥರ್ಸ್ ರಚನೆಯಾಯಿತು. ಜಾತಿ ದೌರ್ಜನ್ಯಗಳಿಂದ ದಲಿತರ ರಕ್ಷಣೆ ಮಾಡುವಲ್ಲಿ ಸಕ್ರಿಯವಾಯಿತು. 1999 ರಲ್ಲಿ ವಿಸಿಕೆ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿತು. ಅಂದಿನಿಂದ ಎರಡು ದಶಕಗಳಲ್ಲಿ, ಪಕ್ಷವು ಹಲವಾರು ಏರಿಳಿತಗಳನ್ನು ಎದುರಿಸಿದೆ.

ವಿಸಿಕೆ ಈಗ ತನ್ನ ರಾಜಕೀಯ ಜೀವನದಲ್ಲಿ ಪರಿವರ್ತನೆಯ ಹಂತವನ್ನು ತಲುಪಿದೆ. ಇಬ್ಬರು ಸಂಸದರು ಮತ್ತು ನಾಲ್ವರು ಶಾಸಕರನ್ನು ಹೊಂದಿದೆ. ವಿಧಾನಸಭಾ ಚುನಾವಣೆಯಲ್ಲಿ ವಿಸಿಕೆ ಸ್ಪರ್ಧಿಸಿದ ಆರು ಸ್ಥಾನಗಳಲ್ಲಿ, ಎರಡು ಸಾಮಾನ್ಯ ಕ್ಷೇತ್ರಗಳನ್ನು ಒಳಗೊಂಡಂತೆ ನಾಲ್ಕು ಸ್ಥಾನಗಳಲ್ಲಿ ಗೆದ್ದಿದೆ.

ಕಳೆದ ಕೆಲವು ವರ್ಷಗಳಿಂದ ಈ ಪಕ್ಷವು  ಬಿಜೆಪಿಯ ಹಿಂದೂ ಬಹುಸಂಖ್ಯಾತ ರಾಜಕೀಯ, ಮನುಸ್ಮೃತಿಯ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)ಯ ಅಸ್ಪಷ್ಟ ಜಾತಿವಾದದ ವಿರುದ್ಧ ಹೋರಾಡುವಲ್ಲಿ ವಿಸಿಕೆ ಮುಂಚೂಣಿಯಲ್ಲಿದೆ.

ವಿಸಿಕೆ ನಡೆಸಿದ ‘ಸೇವ್ ದಿ ನೇಷನ್’ ಸಮಾವೇಶಗಳಿಗೆ 80,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಡಿಎಂಕೆಯು ಹಿಂದೂ ಬಹುಸಂಖ್ಯಾತ ರಾಜಕೀಯದ ವಿರುದ್ಧ ಮೃದುವಾದಾಗ, ವಿಸಿಕೆ ಹಿಂದುತ್ವ ವಿರೋಧಿ ರಾಜಕೀಯದ ಹೊಸ ಮುಖವಾಗಿ ಹೊರಹೊಮ್ಮಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಯ ಭಾಗವಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...