Homeಮುಖಪುಟನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

- Advertisement -
- Advertisement -

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಬದಲಿಗೆ ನಮ್ಮ ಇಡೀ ಪಕ್ಷ ಬ್ರಿಟಿಷರೆದುರು ನಡುಬಗ್ಗಿಸದೆ ನೇಣುಗಂಬಕ್ಕೆ ಕೊರಳೊಡ್ಡಿದ ವೀರ ಭಗತ್‌ಸಿಂಗ್‌ರವರ ಸಂತತಿ. ಹಾಗಾಗಿ ಜೈಲಿಗೆ ಹೋಗಲು ಹೆದರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಮೇಲೆ ಲಿಕ್ಕರ್ ಟೆಂಡರ್‌ನಲ್ಲಿ ಅಕ್ರಮ ಆರೋಪದ ಮೇಲೆ ಲೆಫ್ಟಿನೆಂಟ್ ವಿನಯ್ ಕುಮಾರ್‌ ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿರುವುದಕ್ಕೆ ಕೇಜ್ರಿವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲಿಕ್ಕರ್ ಮಾಫಿಯಾದ ಎಲ್ಲಾ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ನಿರಾಧಾರದಿಂದ ಕೂಡಿವೆ. ನಾನು ಬಹಳ ಹಿಂದಿನಿಂದಲೂ ಸಿಸೋಡಿಯರವರನ್ನು 22 ವರ್ಷಗಳಿಂದ ಹತ್ತಿರದಿಂದ ಬಲ್ಲೆ. ಅವರು ಕಡು ಪ್ರಾಮಾಣಿಕರು ಮತ್ತು ಶ್ರಮ ಜೀವಿಗಳು. ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಉನ್ನತ ಮಟ್ಟಕ್ಕೇರಿಸಿ ಶ್ಲಾಘನೆ ಪಡೆದಿದ್ದಾರೆ. ಹಾಗಾಗಿ ಜನ ನಮ್ಮ ಪಕ್ಷಕ್ಕೆ ಮತ ಹಾಕುತ್ತಿದ್ದಾರೆ. ಇದರಿಂದ ಹತಾಶೆಗೆ ಒಳಗಾಗಿರುವ ಕೇಂದ್ರ ಸರ್ಕಾರ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಸಿಸೋಡಿಯ ಮೇಲಿನ ಆರೋಪಗಳಲ್ಲಿ ಎಳ್ಳಷ್ಟು ಸತ್ಯವಿಲ್ಲ. ಅದು ಶುದ್ದ ಸುಳ್ಳು ಕೇಸ್. ಆದರೂ ಸಿಬಿಐ ಅವರನ್ನು ಬಂಧಿಸಲು ಯತ್ನಿಸುತ್ತಿದೆ. ಆ ಮೂಲಕ ನಾವು ಕೆಲಸ ಮಾಡಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಬಾರದೆಂಬ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ಆಜ್ಞೆಯನ್ನು ಕೇಜ್ರಿವಾಲ್ ಉಲ್ಲಂಘಿಸಿದ ಬೆನ್ನಲ್ಲೆ ಅವರ ಪಕ್ಷದ ವಿರುದ್ದ ಲಿಕ್ಕರ್ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೇರವಾಗಿ ಹೆಸರಿಸಿರುವ ಲೆಫ್ಟಿನೆಂಟ್ ಗವರ್ನರ್, ವರದಿಯು ಉನ್ನತ ರಾಜಕೀಯ ಮಟ್ಟದಲ್ಲಿ “ಗಣನೀಯ” ಹಣಕಾಸಿನ ಅನುಕೂಲಗಳನ್ನು ಸೂಚಿಸುತ್ತದೆ ಎಂದು ಆರೋಪಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಆದರೆ ಆ ಕಾರ್ಯಕ್ರಮ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿ ಸಭೆಗೆ ಹೋಗುವುದಾಗಿ ಘೋಷಿಸಿದ್ದಾರೆ.

ದೆಹಲಿ ಮಾದರಿ ಕುರಿತು ಸಿಂಗಾಪುರ್‌ನಲ್ಲಿ ನಾನು ಮಾತನಾಡಲಿದ್ದೇನೆ. ಇದನ್ನು ತಡೆಯುವ ಸಲುವಾಗಿ ವಿನಾಕಾರಣ ತಡೆ ನೀಡಲಾಗುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದರು.

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...