Homeರಾಷ್ಟ್ರೀಯಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

ಶಾಲೆ ಮುಚ್ಚಿಸಲು ಬಂದ ಎಬಿವಿಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿ ವಾಪಾಸು ಕಳುಹಿಸಿದ ಮುಖ್ಯೋಪಾಧ್ಯಾಯಿನಿ

- Advertisement -
- Advertisement -

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಜಂಪೇಟೆ ಪಟ್ಟಣದ ಜಿಲ್ಲಾ ಪಂಚಾಯತ್‌‌ ಬಾಲಕಿಯರ ಪ್ರೌಢಶಾಲೆಯಲ್ಲಿ, ಶಾಲೆ ಮುಚ್ಚುವಂತೆ ಒತ್ತಾಯಿಸಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಾಯಕ ದಾಸರಿ ಅಶೋಕ್ ಎಂಬವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಎಬಿವಿಪಿ ಆಂಧ್ರಪ್ರದೇಶದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವ ಅಶೋಕ್‌ ಅವರು ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದರಿಂದ ಕಪಾಲ ಮೋಕ್ಷ ಮಾಲಾಗಿದೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಗಳ ವಿಲೀನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಎಬಿವಿಪಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿಸಿದ್ದರು. ಇದೆ ವೇಳೆ ಎಬಿವಿಪಿ ನಾಯಕ ಅಶೋಕ್ ಅವರು ತಮ್ಮ ಇತರ ಮುಖಂಡರೊಂದಿಗೆ ಗರ್ಲ್ಸ್ ಹೈಸ್ಕೂಲ್‌ಗೆ ಬೆಳಿಗ್ಗೆ 11 ಗಂಟೆಗೆ ಶಾಲೆಗೆ ತಲುಪಿದ್ದರು. ಅಲ್ಲಿ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವಿ ಅವರೊಂದಿಗೆ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಶಾಲೆ ಮುಚ್ಚುವಂತೆ ಕೇಳಿದ್ದರು.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ಆದರೆ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿದೇವೆ ಅವರು ಇದಕ್ಕೆ ಒಪ್ಪದೆ, ಮಧ್ಯಾಹ್ನದ ಊಟದ ನಂತರ ಮಕ್ಕಳನ್ನು ಮನೆಗೆ ಕಳುಹಿಸುವುದಾಗಿ ಎಬಿವಿಪಿ ಮುಖಂಡರಿಗೆ ತಿಳಿಸಿದ್ದರು. ಆದರೆ ಇದಕ್ಕೆ ಒಪ್ಪದ ಅಶೋಕ್ ಅವರು ವಿದ್ಯಾರ್ಥಿನಿಯರನ್ನು ತಕ್ಷಣವೆ ಮನೆಗೆ ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳನ್ನು ಈಗಲೇ ಮನೆಗೆ ಕಳುಹಿಸಿದರೆ ಮಧ್ಯಾಹ್ನದ ಊಟ ಮತ್ತು ಅವರಿಗಾಗಿ ಬೇಯಿಸಿ ಸಿದ್ಧಪಡಿಸಿದ ಮೊಟ್ಟೆಗಳು ವ್ಯರ್ಥವಾಗುತ್ತವೆ ಎಂದು ವಿವರಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅನೇಕ ವಿದ್ಯಾರ್ಥಿಗಳ ಪೋಷಕರು ಮನೆಯಲ್ಲಿ ಇರುವುದಿಲ್ಲ, ಕೆಲಸಕ್ಕೆ ಹೋಗಿರುತ್ತಾರೆ. ಹಾಗಾಗಿ ಈಗಲೇ ಮಕ್ಕಳನ್ನು ಕಳುಹಿಸಿದರೆ ಅವರು ಊಟವಿಲ್ಲದೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದರು.

ಆದರೆ ಅಶೋಕ್ ಇದನ್ನು ಒಪ್ಪದೆ ಹಠಮಾರಿ ದೋರಣೆ ತೆಳೆದು ಮುಖ್ಯೋಪಾಧ್ಯಾಯಿನಿ ಮೇಲೆ ರೇಗಲು ಪ್ರಾರಂಭಿಸಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ವರದಿ ಮಾಡಿದೆ. ಈ ವೇಳೆ ಅವರ ಮಾತಿಗೆ ಕುಪಿತಗೊಂಡ ಲಕ್ಷ್ಮಿದೇವಿ ಅವರು ಬಿಗಿಯಾಗಿ ಕಪಾಳ ಮೋಕ್ಷ ಮಾಡಿ ಅವರನ್ನು ವಾಪಾಸು ಕಳುಹಿಸಿದ್ದಾರೆ.

ಇದನ್ನೂ ಓದಿ: 60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

ಘಟನೆಯ ವೇಳೆ ಪೊಲೀಸರು ಕೂಡಾ ಸ್ಥಳದಲ್ಲಿ ಇದ್ದರು. “ವಿದ್ಯಾರ್ಥಿಗಳಿಗೆ ಊಟ ನೀಡಿದ ನಂತರ ಅವರನ್ನು ಮನೆಗೆ ಕಳುಹಿಸಿ ನಂತರ ಶಾಲೆಯನ್ನು ಮುಚ್ಚಲು ಮುಖ್ಯೋಪಾಧ್ಯಾಯಿನಿ ಸಿದ್ದರಿದ್ದರು. ಆದರೆ ಅಶೋಕ್ ಹಠಮಾರಿ ಧೋರಣೆ ತೆಳೆದು ಅಸಭ್ಯವಾಗಿ ನಡೆದಿದ್ದರಿಂದ ಇದು ನಡೆದಿದೆ” ಎಂದು ಪ್ರತ್ಯಕ್ಷದರ್ಶಿಗಳು ಮುಖ್ಯೋಪಾಧ್ಯಾಯಿನಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಸಾಕ್ಷಿ ಪತ್ರಿಕೆ ಹೇಳಿದೆ.

ವಿಡಿಯೊ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲಾ ಮುಖ್ಯೋಪಾಧ್ಯಾಯರು ಆ ದರಿದ್ರ ಮುಂಡೆಮಗನಿಗೆ ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ಎಬಿವಿಪಿ ಲೋಫರ್ಸ್‌ಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಒದ್ದು ಒಳಗೆ ಹಾಕಿ ಎಲುಬು ಮರಿಬೇಕು.

  2. Inviting troubles ಅನ್ನೋದು ಇದಕ್ಕೇ. ಸಂಘಿಗಳು ತೀರಾ ನೀಚ ಮತ್ತು ಕೊಳಕು ಸ್ವಭಾವದವರು. ಆ ಶಿಕ್ಷಕಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಲಿ.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...