Homeರಾಷ್ಟ್ರೀಯನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ...

ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

- Advertisement -
- Advertisement -

ನಾನು ಗಾಂಧಿ ಕಟುಂಬದ ವಿರುದ್ಧ ಮಾತನಾಡುತ್ತೇನೆ ಎಂಬ ಕಾರಣಕ್ಕೆ ಕಾಂಗ್ರೆಸ್ ನನ್ನ ಮಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಶನಿವಾರ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದ್ದಾರೆ. ತನ್ನ ಮಗಳ ಮೇಲೆ ಇರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗೋವಾದಲ್ಲಿ ತನ್ನ ಮಗಳು ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ್ದಾರೆ.

“18ರ ಹರೆಯದ ಬಾಲಕಿಯೊಬ್ಬಳ ಚಾರಿತ್ರ್ಯಹತ್ಯೆಗೆ ಇಬ್ಬರು ಮಧ್ಯವಯಸ್ಕ ಕಾಂಗ್ರೆಸ್ಸಿಗರೇ ಕಾರಣ. ಬಾಲಕಿಯ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಬಗ್ಗೆ ಮಾತನಾಡಿದ್ದು ಮಾತ್ರ ಅವರು ಮಾಡಿರುವ ತಪ್ಪು” ಎಂದು ತನ್ನ ಮಗಳ ಮೇಲಿನ  ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಬ್ಲಿಕ್ ಫ್ಲಾಟ್‌ಫಾರ್ಮ್ ಅಲ್ಲಿರುವ ಮಾಹಿತಿಯ ಪ್ರಕಾರ ಸ್ಮೃತಿ ಇರಾನಿ ಅವರ ಮಗಳ ಹುಟ್ಟಿದ ದಿನ, ‘23 ಸೆಪ್ಟೆಂಬರ್‌ 2003’ ಎಂದಿದೆ. ಅದರಂತೆ ಅವರಿಗೆ 18 ವರ್ಷ ಕಳೆದಿದ್ದು ಸೆಪ್ಟೆಂಬರ್‌ 2022ಕ್ಕೆ ಅವರ ವಯಸ್ಸು 19 ಆಗಲಿದೆ. ಭಾರತದ ಪ್ರಜೆಯೊಬ್ಬರಿಗೆ 18 ವರ್ಷ ತುಂಬಿದ ನಂತರ ಅವರನ್ನು ವಯಸ್ಕ ಎಂದು ಗುರುತಿಸಲಾಗುತ್ತದೆ.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಮಾಡಿರುವ 5,000 ರೂಪಾಯಿ ಲೂಟಿಯ ಬಗ್ಗೆ ಬಾಲಕಿಯ ತಾಯಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು ಬಾಲಕಿ ಮಾಡಿರುವ ತಪ್ಪು ಎಂದು ಸಚಿವೆ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

“ನನ್ನ ಮಗಳು ಕಾಲೇಜಿನಲ್ಲಿ ಓದುತ್ತಾಳೆ, ಅವಳು ಬಾರ್ ನಡೆಸುತ್ತಿಲ್ಲ, ದಯವಿಟ್ಟು ದಾಖಲೆಗಳನ್ನು ಪರಿಶೀಲಿಸಿ. ಅದರಲ್ಲಿ ನನ್ನ ಮಗಳ ಹೆಸರು ಎಲ್ಲಿದೆ? ಅವರು ಮಾಹಿತಿ ಹಕ್ಕು (ಆರ್‌ಟಿಐ) ಆಧಾರದ ಮೇಲೆ ನನ್ನ ಮಗಳ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಇಬ್ಬರು ಗಾಂಧಿಗಳ ವಿರುದ್ಧ ಬಾಲಕಿಯ ಆಕೆಯ ತಾಯಿ ಪತ್ರಿಕಾಗೋಷ್ಠಿ ನಡೆಸಿದ್ದು ಬಾಲಕಿ ಮಾಡಿರುವ ತಪ್ಪು. ನನ್ನ ಮಗಳು ರಾಜಕಾರಣಿಯಲ್ಲ ಬದಲಾಗಿ ವಿದ್ಯಾರ್ಥಿಯಾಗಿ ಸಾಮಾನ್ಯ ಜೀವನವನ್ನು ನಡೆಸುತ್ತಿದ್ದಾರೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

“ನಾನು ಕಾನೂನಿನ ನ್ಯಾಯಾಲಯದಲ್ಲಿ ಮತ್ತು ಜನರ ನ್ಯಾಯಾಲಯದಲ್ಲಿ ಉತ್ತರವನ್ನು ಕಂಡುಕೊಳ್ಳುತ್ತೇನೆ. ಈ ದಾಖಲೆಗಳಲ್ಲಿ ನನ್ನ ಮಗಳ ಹೆಸರು ಎಲ್ಲಿದೆ ಎಂದು ನಾನು ಕೇಳಲು ಬಯಸುತ್ತೇನೆ. 2024 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಮತ್ತೊಮ್ಮೆ ಅಮೇಥಿಗೆ ಕಳುಹಿಸಿ. ನಾವು ಮತ್ತೊಮ್ಮೆ ರಾಹುಲ್ ಗಾಂಧಿಯನ್ನು ಸೋಲಿಸುತ್ತೇವೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇಂದು ಸಂಜೆಯೊಳಗೆ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಅವರಿಗೆ ತಮ್ಮ ತಂಡ ಲೀಗಲ್ ನೋಟಿಸ್ ಕಳುಹಿಸಲಿದೆ ಎಂದು ಸಚಿವೆ ತಿಳಿಸಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಒಂದು ದಿನದ ಹಿಂದೆಯಷ್ಟೆ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಾರ್‌ ಅನ್ನು ‘ನಕಲಿ ಪರವಾನಗಿ’ ಪಡೆದು ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ನರೇಂದ್ರ ಮೋದಿ ಸರ್ಕಾರವು ಸಚಿವೆ ಸ್ಮೃತಿ ಇರಾನಿ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆಗ್ರಹಿಸಿದ್ದಾರೆ.

ಸ್ಮೃತಿ ಇರಾನಿ ಅವರ ವಕೀಲರ ಸಮಸ್ಯಾತ್ಮಕ ಹೇಳಿಕೆ

ಜೋಯಿಶ್ ಇರಾನಿ ಅವರ ವಕೀಲ ಕಿರಾತ್ ನಾಗ್ರಾ ಅವರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರ ಕಕ್ಷಿದಾರರ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.

ಸ್ಮೃತಿ ಇರಾನಿ ಅವರ ರಾಜಕೀಯ ವಿರೋಧಿಗಳು ರಾಜಕೀಯ ನಾಯಕರ ಮಗಳು ಎಂಬ ಕಾರಣಕ್ಕಾಗಿ ಅವರನ್ನು ಮಾನಹಾನಿ ಮಾಡುವ ಪೂರ್ವನಿರ್ಧರಿತ ಉದ್ದೇಶದಿಂದ ಅವರ ವಿರುದ್ಧ ಹಲವಾರು ‘ಸೃಷ್ಟಿಸಲಾದ’ ಆರೋಪಗಳನ್ನು ಮಾಡಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಜೊಯಿಶ್ ಅವರ ವಕೀಲರು, ಆಕೆಗೆ ಯಾವುದೇ ಪ್ರಾಧಿಕಾರದಿಂದ ಯಾವುದೇ ಶೋಕಾಸ್ ನೋಟಿಸ್ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಹಿಂಸೆಗೆ ಕರೆ ನೀಡಿದ್ದಾರೆ: ಸ್ಮೃತಿ ಇರಾನಿ

ದೆಹಲಿಯ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಆರೋಪವನ್ನು ನಿರಾಕರಿಸಿದ್ದು, ಸ್ಮೃತಿ ಇರಾನಿ ಅವರ ಮಗಳು ಅಮೆರಿಕಾದಲ್ಲಿ ಓದುತ್ತಿದ್ದಾರೆ. ಜೊಯಿಶ್‌ ಅವರಿಗೂ ಬಾರ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...