Homeಚಳವಳಿಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

13,800 ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂಬ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆಗೆ ವೀರಣ್ಣ ಮಡಿವಾಳರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದರು.

- Advertisement -
- Advertisement -

13,800 ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ನೀಡಿದ್ದ ಹೇಳಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ.

ರಾಯಭಾಗದ ನಿಡಗುಂದಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವೀರಣ್ಣ ಮಡಿವಾಳರು ಆ ಶಾಲೆಯ ಅಭಿವೃದ್ದಿಗಾಗಿ ಸಾಕಷ್ಟು ಶ್ರಮಿಸಿ ಹೆಸರು ಗಳಿಸಿದ್ದಾರೆ. ದಾನಿಗಳ ನೆರವಿನಿಂದ ತಮ್ಮ ಶಾಲೆಯನ್ನು ಆಕರ್ಷಕ ಮತ್ತು ಕಲಿಕಾ ಸ್ನೇಹಿ ಶಾಲೆಯನ್ನಾಗಿ ಮಾಡುವುದರಲ್ಲಿ ಅವರ ಪಾತ್ರ ದೊಡ್ಡದು. ಅಂತಹ ಶಿಕ್ಷಕರು ಶಾಲೆ ವಿಲೀನ ಮಾಡಬೇಡಿ ಎಂದು ಹೇಳಿದ್ದಕ್ಕೆ ನೋಟಿಸ್ ನೀಡುರುವುದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ಒಟ್ಟು 48,000 ಸರ್ಕಾರಿ ಶಾಲೆಗಳಿದ್ದು 13,800 ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಆ ಶಾಲೆಗಳನ್ನು ಹೋಬಳಿ ಮಟ್ಟದಲ್ಲಿ ವಿಲೀನ ಮಾಡಿ ಮಕ್ಕಳು ಓಡಾಡಲು ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದರು. ಅದನ್ನು ವಿರೋಧಿಸಿ ವೀರಣ್ಣ ಮಡಿವಾಳರು, ಕನ್ನಡ ಪ್ರಭ ಪತ್ರಿಕೆಯ ವರದಿಯನ್ನು ಪೋಸ್ಟ್ ಮಾಡಿ “13800 ಶಾಲೆ ವಿಲೀನ ಅಲ್ಲ…. ಅಷ್ಟು ಶಾಲೆಗಳ ಹತ್ಯಾಕಾಂಡ…. ಸರಕಾರಿ ಶಾಲಾ ಮಕ್ಕಳ ಭವಿಷ್ಯದ ಮಾರಣಹೋಮ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎಲ್ ಹಂಚಾಟೆಯವರು 2022ರ ಜುಲೈ 22ರಂದು ನೋಟಿಸ್ ಕಳಿಸಿದ್ದು, ಅದರಲ್ಲಿ “13,800 ಸರ್ಕಾರಿ ಶಾಲೆ ವಿಲೀನ ಎಂಬ ತಲೆಬರಹದಡಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ನೀಡಿದ್ದ ಹೇಳಿಕೆಗೆ 13,800 ಶಾಲೆ ವಿಲೀನ ಅಲ್ಲ ಅಷ್ಟು ಶಾಲೆಗಳ ಹತ್ಯಾಕಾಂಡ, ಸರ್ಕಾರಿ ಶಾಲಾ ಮಕ್ಕಳ ಮಾರಣ ಹೋಮ ಎಂದು ಸರ್ಕಾರದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ನಿಮ್ಮ ಅಭಿಪ್ರಾಯವನ್ನು ಸಾಮಾಜಿಕ ಅಂತರ್ಜಾಲದಲ್ಲಿ ಹರಿಬಿಟ್ಟಿದ್ದು ಇದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ನೇಲ್ಮನವಿ) ನಿಯಮಗಳು 1957ಕ್ಕೆ ವ್ಯತಿರಿಕ್ತವಾಗಿದ್ದು, ಅಲ್ಲದೆ ನಡತೆ ನಿಯಮಗಳು 1966ರ ನಿಯಮ 3ನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದ್ದು ಈ ಕುರಿತು ನಿಮ್ಮ ಮೇಲೆ ಶಿಸ್ತು ಕ್ರಮ ಏಕೆ ಜರುಗಿಸಬಾರದು ಎಂಬುದಕ್ಕೆ ನೋಟಿಸ್ ನೀಡಿದ 03 ದಿನಗಳ ಒಳಗೆ ನಿಮ್ಮ ಸ್ಪಷ್ಟವಾದಿ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಬೇಕು. ಉತ್ತರ ಬಾರದೆ ಇದ್ದಲ್ಲಿ ನಿಮ್ಮ ಹೇಳಿಕೆ ಏನೂ ಇಲ್ಲ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು” ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಕ ವೀರಣ್ಣ ಮಡಿವಾಳರು, “ನಾನೊಬ್ಬ ಶಿಕ್ಷಕನಾಗಿ, ಬರಹಗಾರನಾಗಿ ಸರ್ಕಾರಿ ಶಾಲೆಗಳು ಉಳಿವಿನ ಪರ ದನಿ ಎತ್ತುವುದು ನನ್ನ ಕರ್ತವ್ಯ. ಹಾಗಾಗಿ ಕವಿ ಭಾಷೆಯಲ್ಲಿಯೇ ಎರಡು ಸಾಲು ಬರೆದಿದ್ದೇನೆ. ಈ ಕೆಲಸವನ್ನು ನಾನು ಮಾಡದಿದ್ದರೆ ಮತ್ಯಾರು ಮಾಡಬೇಕು? ಹಾಗಾಗಿ ನೋಟಿಸ್‌ಗೆ ಹೆದರುವ ಪ್ರಶ್ನೆ ಇಲ್ಲ ಎಂದರು.

ಇದುವರೆಗೂ ಮಕ್ಕಳ ಸಂಖ್ಯೆಯ ನೆಪವೊಡ್ಡಿ ಆಶ್ರಮ ಶಾಲೆಗಳನ್ನು ಮುಚ್ಚಲಾಗಿದೆ. ಹಾಸ್ಟೆಲ್‌ಗಳನ್ನು ಮುಚ್ಚಲಾಗಿದೆ. ಅಲ್ಲೆಲ್ಲ ಹಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದನ್ನು ನಾನು ಕಣ್ಣಾರೆ ಕಂಡಿದ್ದೇವೆ. ಆ ನೋವಿನಲ್ಲಿ ನನ್ನ ಪ್ರತಿಕ್ರಿಯೆ ನೀಡಿದ್ದೇನೆ ಅದರಿಂದ ಹಿಂದೆ ಸರಿಯುವುದಿಲ್ಲ ಎಂದರು.

“ಈ ಹಿಂದೆಯೂ 2010ರಲ್ಲಿ ಭಂಗಿಜೋಳ ಸಮುದಾಯಕ್ಕೆ ಅನ್ಯಾಯವಾಗುತ್ತಿರುವಾಗ ನಾನು ಅವರ ಜೊತೆ ನಿಂತು  ಆ ಕುರಿತು ಬರೆಯದೆ ಇದ್ದರೆ ಇಂದು ಆ ಸಮುದಾಯದ 18 ಜನರಿಗೆ ಸರ್ಕಾರಿ ನೌಕರಿ ಸಿಗುತ್ತಿರಲಿಲ್ಲ. ಅದೇ ರೀತಿ ನಾಯಕನೂರಿನ ದಲಿತರ ಮೇಲೆ ದೌರ್ಜನ್ಯದ ಕುರಿತು ನಾನು ಪ್ರಜಾವಾಣಿಯಲ್ಲಿ ಬರೆಯದೆ ಇದ್ದಿದ್ದರೆ ಅವರಿಗೆ ನ್ಯಾಯ ಮತ್ತು 17 ಎಕರೆ ಜಮೀನು ದೊರಕುತ್ತಿರಲಿಲ್ಲ. ಹಾಗಾಗಿ ನಾನು ಈ ಕೆಲಸ ಮಾಡದಿದ್ದರೆ ಬೇರೆಯವರು ಸಹ ಹಿಂದೆ ಸರಿಯುತ್ತಾರೆ ಎಂದರು.

ಈ ಹಿಂದೆಯೂ ನನ್ನನ್ನು ಅಮಾನತ್ತು ಮಾಡುವುದಾಗಿ, ವಜಾ ಮಾಡುವುದಾಗಿ ಬೆದರಿಸಲಾಗಿತ್ತು. ಆಗ ಹಲವಾರು ಹೋರಾಟಗಾರರು ನನ್ನ ಜೊತೆ ನಿಂತರು. ಈ ದೇಶದ ಮತ್ತು ಈ ರಾಜ್ಯದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯನ್ನು ಸರ್ಕಾರವೇ ಕೊಟ್ಟಿದೆ. ಒಂದು ಕಡೆ ಅಭಿವ್ಯಕ್ತಿ ಸ್ವಾತಂತ್ರ್ಯ ಬೆಂಬಲಿಸುವ ಅದೇ ಸರ್ಕಾರ ಮತ್ತೊಂದೆಡೆ ಸರ್ಕಾರಿ ಶಾಲೆ ಉಳಿಸಿ ಎಂದರೆ ನೋಟಿಸ್ ನೀಡುವುದು ವಿಪರ್ಯಾಸವಾಗಿದೆ ಎಂದರು.

ಶಿಕ್ಷಣ ಸಚಿವರಾಗಿದ್ದ ಮಾನ್ಯ ಸುರೇಶ್ ಕುಮಾರ್ ರವರೂ ಕರೆ ಮಾಡಿ ನಮ್ಮ ಶಾಲೆ ಉಳಿಸುವ ಕೆಲಸವನ್ನು ಶ್ಲಾಘಿಸಿದ್ದರು, ಸರ್ಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ಯವರು ನಮ್ಮ ಬೆಳವಣಿಗೆ ಗಮನಿಸಿ ಅಭಿನಂದಿಸಿ ಹೃದ್ಯ ಪತ್ರ ಬರೆದಿದ್ದರು, ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರು ನಮ್ಮ ಕೆಲಸ ಕಾರ್ಯ ಬೆಂಬಲಿಸಿ ಅಭಿನಂದಿಸಿ ಪತ್ರ ಬರೆದು ಬೆನ್ನು ತಟ್ಟಿದ್ದರು. ಈಗ ಮಾನ್ಯ ಡಿಡಿಪಿಐ ಸಾಹೇಬರು ಕಾರಣ ಕೇಳಿ ನನಗೆ ನೋಟೀಸ್ ನೀಡಿದ್ದಾರೆ. ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸರಕಾರಿ ಶಾಲೆಯೊಂದರ ಶಿಸ್ತು ಸುಂದರತೆ ಮತ್ತು ಅರ್ಥವಂತಿಕೆ ಹೇಗಿರುತ್ತದೆ ಎಂದು ತೋರಿಸಿಕೊಟ್ಟವರು ನಾವು, ಈಗ ನನ್ನ ಮೇಲೆಯೇ ಶಿಸ್ತುಕ್ರಮ ಜರುಗಿಸುವುದಾದರೆ…. ಅದೂ ಕೂಡ ನಡೆಯಲಿ, ಅದಕ್ಕೆ ನಾನು ಸಿದ್ದನಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಪ್ರಾತಿನಿಧ್ಯದ ದಿಟ್ಟ ಪ್ರಶ್ನೆಗಳಿಗೆ ಒತ್ತರಿಸಿ ನಡೆಯುವುದು ಉತ್ತರವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...