Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...