Homeಮುಖಪುಟಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

ಖಿನ್ನತೆಯ ನಂತರ ಹಿಜಾಬ್ ಧರಿಸಲು ನಿರ್ಧಾರ: ಕಾರಣ ಬಿಚ್ಚಿಟ್ಟ ನಟಿ ಸನಾ ಖಾನ್

- Advertisement -
- Advertisement -

ಸಿನಿಮಾ ಹಾಗೂ ಟಿ.ವಿ. ಶೋಗಳಿಂದ ದೂರ ಉಳಿದಿರುವ ಬಾಲಿವುಡ್‌ ನಟಿ ಸನಾ ಖಾನ್, ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿಯನ್ನ ಹಂಚಿಕೊಂಡಿದ್ದಾರೆ. ಜೊತೆಗೆ ತಾನೇಕೆ ಹಿಜಾಬ್ ಧರಿಸಲು ಮುಂದಾದೆ ಎಂದು ಹೇಳಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದಲ್ಲಿ ಅಭಿನಯಿಸಿದ, ಬಿಗ್ ಬಾಸ್ ಸೀಸನ್‌ 6ರಲ್ಲಿ ಫೈನಲಿಸ್ಟ್ ಆಗಿದ್ದ ನಟಿ ಸನಾ ಖಾನ್‌ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

2020ರಲ್ಲಿ ಮುಫ್ತಿ ಅನಾಸ್ ಸೈಯದ್ ಅವರನ್ನು ವಿವಾಹವಾಗಿರುವ ಸನಾ ಅವರು, ಇತ್ತೀಚೆಗೆ ಮಾತನಾಡಿದ್ದು ತಮ್ಮ ಜೀವನಶೈಲಿಯನ್ನು ಬದಲಾಯಿಸಲು ಕಾರಣವೇನೆಂದು, ಸಿನಿಮಾದಿಂದ ದೂರವಾಗಿದ್ದು ಏಕೆಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುರ್ಕಾ ಧರಿಸಿ ಮಾತನಾಡಿರುವ ಸನಾ, “ನನ್ನ ಹಿಂದಿನ ಜೀವನದಲ್ಲಿ ಸಹಜವಾಗಿ ಹೆಸರು, ಕೀರ್ತಿ, ಹಣ ಎಲ್ಲವೂ ಇತ್ತು. ನಾನು ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡಬಲ್ಲವಳಾಗಿದ್ದೆ. ಆದರೆ ನನ್ನ ಹೃದಯದಲ್ಲಿ ನೆಮ್ಮದಿ ಮಾತ್ರ ಇರಲಿಲ್ಲ. ನಾನು ಎಲ್ಲವನ್ನೂ ಪಡೆದಿದ್ದೇನೆ. ಆದರೆ ನಾನು ಏಕೆ ಸಂತೋಷವಾಗಿಲ್ಲ? ಇದು ತುಂಬಾ ಕಠಿಣವಾಗಿತ್ತು. ಖಿನ್ನತೆಗೆ ಒಳಗಾದೆ. ಅಲ್ಲಾನ ಸಂದೇಶಗಳನ್ನು ನೋಡಲಾರಂಭಿಸಿದೆ” ಎಂದಿದ್ದಾರೆ.

“2019ರ ಸಮಯ. ನನಗೆ ಇನ್ನೂ ನೆನಪಿದೆ, ಅದು ರಂಜಾನ್ ಅವಧಿ. ನನ್ನ ಕನಸಿನಲ್ಲಿ ನನ್ನದೇ ಸಮಾಧಿಯನ್ನು ನೋಡಿದೆ. ಸುಡುವ, ಉರಿಯುತ್ತಿರುವ ಸಮಾಧಿಯನ್ನು ನಾನು ಕಾಣುತ್ತಿದ್ದೆ. ನಾನು ಖಾಲಿ ಸಮಾಧಿಯನ್ನು ನೋಡಲಿಲ್ಲ, ನನ್ನನ್ನೇ ಅದರಲ್ಲಿ ನೋಡಿದೆ. ನಾನು ಬದಲಾಗದಿದ್ದರೆ, ಇದು ನನ್ನ ಅಂತ್ಯ ಎಂದು ದೇವರು ನನಗೆ ನೀಡುತ್ತಿರುವ ಸಂಕೇತವಾಗಿದೆ ಎಂದು ನಾನು ಭಾವಿಸಿದೆ. ಅದು ನನಗೆ ಸ್ವಲ್ಪ ಆತಂಕವನ್ನುಂಟು ಮಾಡಿತು. ಆಗುತ್ತಿದ್ದ ಬದಲಾವಣೆಗಳು ನನಗೆ ಇನ್ನೂ ನೆನಪಿದೆ. ನಾನು ಎಲ್ಲಾ ಸ್ಫೂರ್ತಿದಾಯಕವಾದ ಇಸ್ಲಾಮಿಕ್ ಭಾಷಣಗಳನ್ನು ಕೇಳಲಾರಂಭಿಸಿದೆ. ಒಂದು ರಾತ್ರಿ ನಾನು ತುಂಬಾ ಸುಂದರವಾದ ಸಂಗತಿಯನ್ನು ಓದಿದೆ” ಎಂದು ನೆನಪು ಮಾಡಿಕೊಂಡಿದ್ದಾರೆ.

“ನಿಮ್ಮ ಕೊನೆಯ ದಿನವು ಹಿಜಾಬ್ ಧರಿಸಿದ ಮೊದಲ ದಿನವಾಗಿರಲು ನೀವು ಬಯಸುವುದಿಲ್ಲ ಎಂದು ಸಂದೇಶವಿತ್ತು. ಅದು ನನ್ನನ್ನು ತುಂಬಾ ಆಳವಾಗಿ ಪ್ರಭಾವಿಸಿದ ವಿಷಯ” ಎನ್ನುವ ಸನಾ ಖಾನ್‌ ಭಾವುಕರಾಗುತ್ತಾರೆ.

 ಜೀವನದಲ್ಲಿ ಶಾಶ್ವತವಾಗಿ ಹಿಜಾಬ್ ಧರಿಸುವುದಾಗಿ ಹೇಳಿರುವ ನಟಿ ಸನಾ, “ಮರುದಿನ ಬೆಳಿಗ್ಗೆ ನಾನು ಎದ್ದದ್ದು ನನಗೆ ನೆನಪಿದೆ. ಅದು ನನ್ನ ಜನ್ಮದಿನವಾಗಿತ್ತು. ನಾನು ಮೊದಲು ಸಾಕಷ್ಟು ಸ್ಕಾರ್ಫ್‌ಗಳನ್ನು ಖರೀದಿಸಿದ್ದೆ. ನಾನು ಕ್ಯಾಪ್‌ ತೆಗೆದು ಹಾಕಿ, ಸ್ಕಾರ್ಫ್ ಧರಿಸಲಾರಂಭಿಸಿದೆ. ನಾನು ಇನ್ನೆಂದೂ ಹಿಬಾಜ್‌ ತೆಗೆಯುವುದಿಲ್ಲ ಎಂದು ನಿರ್ಧರಿಸಿ” ಎಂದಿದ್ದಾರೆ.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ; ವೈರಲ್‌ ವಿಡಿಯೊದ ವಾಸ್ತವವೇನು?

ಸನಾ ಮತ್ತು ಅವರ ಪತಿ ಅನಾಸ್ ಸೈಯದ್ ಇತ್ತೀಚೆಗೆ ಹಜ್‌ಗೆ ಒಟ್ಟಿಗೆ ಭೇಟಿ ನೀಡಿದ್ದರು. ಬದಲಾದ ವ್ಯಕ್ತಿಯಾಗಿ ಧಾರ್ಮಿಕ ಪ್ರವಾಸಕ್ಕೆ ಹೋಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಈಗ ನಾನು ಬದಲಾಗಿದ್ದೇನೆ, ನಾನು ಮತ್ತೆ ವಾಪಸ್‌ ಆಗುವುದಿಲ್ಲ. ನನ್ನ ಅಬಯಾ (ಹಿಜಾಬ್) ಅನ್ನು ತೆಗೆದು ಎಸೆಯುವುದಿಲ್ಲ ಎಂದು ನನಗೆ ಸಂತೋಷವಾಗಿದೆ” ಎಂದಿದ್ದಾರೆ.

ಸನಾ ಅವರು ಧನ್ ಧನಾ ಧನ್ ಗೋಲ್‌ನ ‘ಬಿಲ್ಲೋ ರಾಣಿ’ ಮತ್ತು ಇತರ ನೃತ್ಯದ ಹಾಡುಗಳ ಮೂಲಕ ಪ್ರಸಿದ್ಧರಾದರು. ‘ಜೈ ಹೋ’, ‘ವಜಾ ತುಮ್ ಹೋ’ ಮತ್ತು ‘ಟಾಯ್ಲೆಟ್: ಏಕ್ ಪ್ರೇಮ್ ಕಥಾ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...