Homeಮುಖಪುಟಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು...

ಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು…

- Advertisement -
- Advertisement -

ದ್ರೌಪದಿ ಮುರ್ಮು ಸೋಮವಾರ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. “ಬುಡಕಟ್ಟು ಸಮುದಾಯದದ ಮಹಿಳೆಯೂ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಏರಿರುವುದು ಪ್ರಜಾಪ್ರಭುತ್ವದ ಶಕ್ತಿಯನ್ನು ತೋರಿಸುತ್ತದೆ. ಬಡವರು ಸಹ ತಮ್ಮ ಕನಸನ್ನು ನನಸು ಮಾಡಬಹುದು” ಎಂದು ಅವರು ಹೇಳಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದ ನಂತರ ನೂತನ ರಾಷ್ಟ್ರಪತಿ ಮುರ್ಮು ಅವರು ತಮ್ಮ ಮೊದಲ ಭಾಷಣ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಡಿಶಾದ ಬುಡಕಟ್ಟು ಗ್ರಾಮದಿಂದ ದೇಶದ ಅತ್ಯುನ್ನತ ಸಾಂವಿಧಾನಿಕ ಕಚೇರಿಗೆ ಮಾಡಿದ ಪ್ರಯಾಣವು ಪ್ರಜಾಪ್ರಭುತ್ವದ ಶಕ್ತಿಯನ್ನು ತೋರಿಸುತ್ತದೆ. ಇದು ವೈಯಕ್ತಿಕ ಸಾಧನೆಯಲ್ಲ, ಬದಲಾಗಿ ಪ್ರತಿಯೊಬ್ಬ ಬಡ ಭಾರತೀಯನ ಸಾಧನೆಯಾಗಿದೆ” ಎಂದು ತಿಳಿಸಿದರು.

“ನಾನು ಒಡಿಶಾದ ಬಡ ಬುಡಕಟ್ಟು ಗ್ರಾಮದಿಂದ ಬಂದಿದ್ದೇನೆ. ಅಲ್ಲಿ ಮೂಲಭೂತ ಶಿಕ್ಷಣವನ್ನು ಪಡೆಯುವುದು ಕನಸಾಗಿತ್ತು. ಆದರೆ ಅಡೆತಡೆಗಳ ನಡುವೆಯೂ ನಾನು ಜಗ್ಗಲಿಲ್ಲ. ನನ್ನ ಹಳ್ಳಿಯಲ್ಲಿ ಕಾಲೇಜು ಮೆಟ್ಟಿಲೇರಿದ ಮೊದಲ ವ್ಯಕ್ತಿ ನಾನಾಗಿದ್ದೆ” ಎಂದು ಸ್ಮರಿಸಿದ್ದಾರೆ.

“ನಾನು ಎಸ್‌ಟಿ (ಪರಿಶಿಷ್ಟ ಬುಡಕಟ್ಟು) ಸಮುದಾಯದಿಂದ ಬಂದವಳು. ವಾರ್ಡ್ ಕೌನ್ಸಿಲರ್ ಆಗುವುದರಿಂದ ಹಿಡಿದು ರಾಷ್ಟ್ರಪತಿ ಆಗುವವರೆಗೆ ಅವಕಾಶಗಳನ್ನು ಪಡೆದುಕೊಂಡಿದ್ದೇನೆ. ಇದು ಭಾರತದ ಪ್ರಜಾಪ್ರಭುತ್ವದ ಹಿರಿಮೆಯನ್ನು ತೋರಿಸುತ್ತದೆ. ದೂರದ ಹಳ್ಳಿಯ ಬಡ ಕುಟುಂಬದಲ್ಲಿ ಜನಿಸಿದ ಮಹಿಳೆ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ತಲುಪಿರುವುದು ಪ್ರಜಾಪ್ರಭುತ್ವದ ಶಕ್ತಿಯಾಗಿದೆ” ಎಂದು ಬಣ್ಣಿಸಿದ್ದಾರೆ.

ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮುರ್ಮು, ಜುಲೈ 21ರಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ 64.3% ಮತಗಳನ್ನು ಪಡೆದು ಆಯ್ಕೆಯಾದರು.

“ಭಾರತದ ಬಡವರು ಕನಸು ಕಾಣುತ್ತಾರೆ. ಅವರ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ನನ್ನ ಚುನಾವಣೆ ಸಾಕ್ಷಿಯಾಗಿದೆ. ಶತಮಾನಗಳಿಂದ ವಂಚಿತರಾದವರು, ಅಭಿವೃದ್ಧಿಯ ಲಾಭದಿಂದ ದೂರವಿರುವವರು, ಬಡವರು, ದೀನದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರು ತಮ್ಮ ಪ್ರತಿಬಿಂಬವನ್ನು ನನ್ನಲ್ಲಿ ಕಾಣುತ್ತಿರುವುದು ನನಗೆ ಅತ್ಯಂತ ತೃಪ್ತಿಯ ವಿಷಯವಾಗಿದೆ” ಎಂದಿರುವ ಅವರು ಬೆಂಬಲ ನೀಡಿದ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.

“ಇಂದು ನಾನು ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಭಾರತದ ಯುವಕರು ಮತ್ತು ಮಹಿಳೆಯರಿಗೆ ಭರವಸೆ ನೀಡುತ್ತೇನೆ. ಈ ಸ್ಥಾನದಲ್ಲಿ ಕೆಲಸ ಮಾಡುವಾಗ ನಿಮ್ಮ ಹಿತಾಸಕ್ತಿಯೇ ನನಗೆ ಅತ್ಯಂತ ಮಹತ್ವದ್ದಾಗಿದೆ” ಎಂದಿದ್ದಾರೆ.

ಸ್ವಾತಂತ್ರ್ಯದ ನಂತರ ಜನಿಸಿದವರಾದ ಮುರ್ಮು, ದೇಶವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿರುವ ನಿರ್ಣಾಯಕ ಸಮಯದಲ್ಲಿ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಮೊದಲು ಶಾಲಾ ಶಿಕ್ಷಕಿಯಾಗಿದ್ದ ಮುರ್ಮು ಅವರು, ದೇಶವು 50ನೇ ಸ್ವಾತಂತ್ರ್ಯದ ವರ್ಷವನ್ನು ಆಚರಿಸುತ್ತಿರುವಾಗ ತನ್ನ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದರು.

ಇದನ್ನೂ ಓದಿರಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

“ಇಂದು ಸ್ವಾತಂತ್ರ್ಯದ 75ನೇ ವರ್ಷದಲ್ಲಿ, ನಾನು ಈ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿದ್ದೇನೆ” ಎಂದಿರುವ ಅವರು, “ಭಾರತವು ಮುಂದಿನ 25 ವರ್ಷಗಳ ಮುನ್ನೋಟವನ್ನು ಸಾಧಿಸಲು ಸಜ್ಜಾಗುತ್ತಿರುವ ಐತಿಹಾಸಿಕ ಸಮಯದಲ್ಲಿ ಈ ಜವಾಬ್ದಾರಿಯನ್ನು ತನಗೆ ವಹಿಸಲಾಗಿದೆ” ಎಂದು ಹೇಳಿದ್ದಾರೆ.

“ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳನ್ನು ನನಸಾಗಿಸಲು ನಾವು ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕಾಗಿದೆ” ಎಂದು ಆಶಿಸಿದ್ದಾರೆ.

ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಅವರು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಸಂಸತ್ತಿಗೆ ಆಗಮಿಸಿದರು. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮತ್ತು ಸಿಜೆಐ ಅವರನ್ನು ಬರಮಾಡಿಕೊಂಡರು. ರಾಷ್ಟ್ರಪತಿ ಭವನಕ್ಕೆ ಆಗಮಿಸುವ ಮುನ್ನ ಅವರು ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....