Homeಸಿನಿಮಾಕ್ರೀಡೆ5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ...

5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

- Advertisement -
- Advertisement -

ಅತಿಥೇಯ ವೆಸ್ಟ್ ಇಂಡೀಸ್ ತಂಡದ ಎದುರು ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ದಾಖಲಿಸಿದೆ. ಬೌಲರ್ ಅಕ್ಸರ್ ಪಟೇಲ್ ಗೆಲುವಿಗೆ ಆರು ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಆ ಮೂಲಕ ಭಾರತ 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದೆ. ಆ ಮೂಲಕ ವೆಸ್ಟ್‌ ಇಂಡೀಸ್ ವಿರುದ್ಧ ಸತತ 12ನೇ ಸರಣಿ ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ಗಮನಾರ್ಹ ಪ್ರದರ್ಶನ ನೀಡಿತು. ಶಾಹ್ ಹೋಪ್ ತಮ್ಮ ನೂರನೇ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಸಾಧನೆಗೈದರೆ ತಂಡದ ನಾಯಕ ನಿಕೋಲಸ್ ಪೂರನ್ 74 ರನ್ ಗಳಿಸುವ ಮೂಲಕ ತಂಡ 311 ರನ್ ಪೇರಿಸಲು ಸಹಾಯ ಮಾಡಿದರು. ಆದರೆ ವೆಸ್ಟ್ ಇಂಡೀಸ್ ತಂಡದ ಗೆಲುವಿನ ಕನಸನ್ನು ಭಾರತದ ಬೌಲರ್ ಅಕ್ಸರ್ ಪಟೇಲ್ ಸ್ಪೋಟಕ ಬ್ಯಾಟಿಂಗ್ ಮೂಲಕ ನುಚ್ಚೂ ನೂರು ಮಾಡಿದರು. ಪರಿಣಾಮ ಭಾರತವು ಇನ್ನು ಎರಡು ಎಸೆತಗಳು ಬಾಕಿ ಇರುವಂತೆ 312ರನ ಗಳಿಸಿ ಎರಡು ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.

ಈ ಮೂಲಕ ಅಕ್ಸರ್ ಪಟೇಲ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ವೇಗದ ಅರ್ಧಶತಕ ದಾಖಲಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಚೇಸಿಂಗ್‌ನಲ್ಲಿ ಭಾರತ ಗೆಲುವು ಕಂಡ ಪಂದ್ಯಗಳಲ್ಲಿ 7 ಅಥವಾ ಅದಕ್ಕಿಂತ ನಂತರದ ಕ್ರಮಾಂಕದಲ್ಲಿ ಬಂದು ಅತಿ ಹೆಚ್ಚು ಸಿಕ್ಸರ್ ಗಳಿಸಿದ್ದ ಮಹೇಂದ್ರ ಸಿಂಗ್ ಧೋನಿಯವರ 17 ವರ್ಷದ ದಾಖಲೆಯನ್ನು ಅಳಿಸಿಹಾಕಿದರು. ಕೇವಲ 35 ಎಸೆತಗಳಲ್ಲಿ 64 ರನ್ ಗಳಿಸಿದ ಅಕ್ಸರ್ ಪಟೇಲ್ 5 ಸಿಕ್ಸರ್ ಸಿಡಿಸಿ ಈ ಸಾಧನೆಗೈದರು.

2005ರಲ್ಲಿ ಧೋನಿ ಜಿಂಬಾಬ್ವೆ ಎದುರಿನ ಚೇಸಿಂಗ್‌ನಲ್ಲಿ 7ನೇ ಕ್ರಮಾಂಕ ಆಟಗಾರನಾಗಿ ಕಣಕ್ಕಿಳಿದು 3 ಸಿಕ್ಸರ್ ಸಿಡಿಸಿ ತಂಡ ಗೆಲ್ಲಿಸುವಲ್ಲಿ ದಾಖಲೆ ಮಾಡಿದ್ದರು. ಆನಂತರ ಯುಸುಫ್ ಪಠಾಣ್ ಸಹ 2011ರಲ್ಲಿ ಎರಡು ಬಾರಿ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ಎದುರು ತಲಾ ಮೂರು ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ಅಕ್ಸರ್ ಪಟೇಲ್ ಒಟ್ಟು 5 ಸಿಕ್ಸರ್ ಸಿಡಿಸುವ ಮೂಲಕ ಆ ದಾಖಲೆ ಮುರಿದಿದ್ದಾರೆ. ಅವರ ಈ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳು ಸಹ ದಾಖಲಾಗಿವೆ.

312 ರನ್ ಬೆನ್ನಟ್ಟಿದ್ದ ಭಾರತ 18 ಓವರ್‌ನಲ್ಲಿ ಸಂದರ್ಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಕೇವಲ 79 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆನಂತರ ಶ್ರೇಯಸ್ ಅಯ್ಯರ್ (63) ಮತ್ತು ಸಂಜು ಸ್ಯಾಮ್ಸನ್ (54) ಇಬ್ಬರೂ ಅರ್ಧಶತಕ ಸಿಡಿಸಿ ತಂಡಕ್ಕೆ ಆಸೆಯಾದರು. 205 ರನ್ ಗಳಿಸಿದ್ದಾಗ ಸ್ಯಾಮ್ಸನ್ ರನ್ ಔಟ್ ಆದರು. ಆಗ ಭಾರತ 68 ಎಸೆತಗಳಲ್ಲಿ 107 ರನ್ ಗಳಿಸಬೇಕಾದ ಒತ್ತಡದಲ್ಲಿತ್ತು. ಆಗ ಕ್ರೀಸ್‌ಗಿಳಿಸಿದ ಅಕ್ಸರ್ ಪಟೇಲ್ ದಿಟ್ಟ ಆಟ ಪ್ರದರ್ಶಿಸಿದರು. ಇನ್ನೊಂದೆಡೆ ದೀಪಕ್ ಹೂಡ, ಶಾರ್ದುಲ್ ಠಾಕೂರ್, ಆವೇಶ್ ಖಾನ್ ಒಬ್ಬರ ನಂತರ ಒಬ್ಬರು ಔಟ್ ಆಗತ್ತಿದ್ದರೂ ಧೃತಿಗೆಡದೆ ಆಟವಾಡಿದರು. ಕೊನೆಯ ಓವರ್‌ನಲ್ಲಿ 6 ಎಸೆತಗಳಿಗೆ 8 ರನ್ ಗಳಿಸಬೇಕಿತ್ತು. ಅಕ್ಸರ್ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...