Homeಮುಖಪುಟನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಜೀವನ ಕಲೆಗಳು ಅಂಕಣ – 7 ಅನುಭೂತಿ (Empathy) -1

ನಾವು ಮನುಷ್ಯರಾಗಿ ಹುಟ್ಟಿದ ಮೇಲೆ ನಮಗಿರಬೇಕಾದ ಗುಣ ಮಾನವತ್ವ. ಅದರ ಮುಖ್ಯ ಲಕ್ಷಣ ಅನುಭೂತಿ. ಇದು ಮಾನವನಿಗೆ ಹುಟ್ಟುಗುಣ. ಕೇವಲ ಅನುಕಂಪ ಮತ್ತು ಸಹಾನುಭೂತಿಯ ಮಿಶ್ರಣ ಅನುಭೂತಿ ಅಲ್ಲ. ಅನುಭೂತಿಗೂ ಕನಿಕರಕ್ಕೂ ವ್ಯತ್ಯಾಸವಿದೆ; ಎರಡೂ ಬೇರೆ ಬೇರೆ. ಎಂಪಥಿ ನಮ್ಮ ಭಾವನಾತ್ಮಕ ಪ್ರಜ್ಞೆಯ ಒಂದು ಮುಖ್ಯ ಅಂಶ. ಇದು ನಮ್ಮ ಮತ್ತು ಇತರರ ನಡುವಿನ ಕೊಂಡಿ. ಇದರ ಶಕ್ತಿಯ ಆಧಾರದ ಮೇಲೆ ನಮ್ಮ ಅವರ ಸಂಬಂಧ ಎಷ್ಟು ಗಟ್ಟಿಯಾಗಿದೆ ಎಂದು ಅಳೆಯಬಹುದು. ಅನುಭೂತಿ ನಮಗೆ ನಮಗಿಂತ ಭಿನ್ನವಾದ ವ್ಯಕ್ತಿಗಳನ್ನು ನಮ್ಮವರಂತೆ ಕಾಣಲು ಸಹಾಯಕವಾಗುತ್ತದೆ. ಅವರು ದಿವ್ಯಾಂಗರಾಗಿರಬಹುದು, ಬೇರೆ ದೇಶ, ಪ್ರಾಂತ್ಯ, ಭಾಷೆ, ವೇಷ-ಭೂಷ-ಆಹಾರ-ವಿಚಾರದವರಾಗಿರಬಹುದು. ಸರಳವಾಗಿ ಹೇಳಬೇಕೆಂದರೆ, ಬೇರೆಯವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದರಲ್ಲಿ, ಹಂಚಿಕೊಳ್ಳುವುದರಲ್ಲಿ ನಾವು ಎಷ್ಟು ಸಮರ್ಥರು ಎನ್ನುವುದು ಅನುಭೂತಿ. ಇದರಲ್ಲಿ ಮೂರು ಬಗೆಗಳನ್ನು ಮನಶಾಸ್ತ್ರಜ್ಞರು ಗುರುತಿಸಿದ್ದಾರೆ.

ಕಾಗ್ನಿಟಿವ್ ಎಂಪಥಿ: ಇದನ್ನು ವೇದನಾ ಅನುಭೂತಿ ಎನ್ನಬಹುದು. ಇನ್ನೊಬ್ಬರ ಮುಖಚರ್ಯೆ, ಹಾವಭಾವದಲ್ಲಿ ಅವರ ಭಾವನೆಯನ್ನು ಗುರುತಿಸುವ ಕಲೆ. ಯಾರೋ ಹತ್ತಿರದವರು ದುಃಖದಲ್ಲಿದ್ದಾಗ ನಾವು ಸಂತಾಪ ಸೂಚಿಸುವ ಸಲುವಾಗಿ ಅವರಿಗೆ ಸಂತಾಪ ಸೂಚಕ ಪತ್ರ ಬರೆಯಬಹುದು, ಕರೆ ಮಾಡಬಹುದು, ಅನುಕಂಪ ಸೂಚಿಸಬಹುದು ಆದರೆ ಅವರ ದುಃಖವನ್ನು ಅರ್ಥಮಾಡಿಕೊಳ್ಳಲು ಅಥವಾ ಅವರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳಲು ಅದಕ್ಕಿಂತ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ದುಃಖದಲ್ಲಿರುವವರ ಹಾವಭಾವವನ್ನು ನಾವು ನಾವು ಬೇರೆ ಬೇರೆಯಾಗಿ ಅರ್ಥೈಸಬಹುದು. ಹೆಚ್ಚಾಗಿ ನಾವು ಅದನ್ನು ತಪ್ಪಾಗಿ ಅರ್ಥೈಸುತ್ತೇವೆ. ಅವರ ಮುಖದಲ್ಲಿ ಕಾಣುವ ಮುಗುಳ್ನಗೆ ಕೂಡ ದುಃಖಸೂಚಕವಾಗಿರಬಹುದು. ಚಿಕ್ಕ ಮಕ್ಕಳು ಕೂಡ ತಮ್ಮ ತಾಯಂದಿರ ದುಃಖ, ಕೋಪ, ಸಂತೋಷವನ್ನು ಕೂಡಲೇ ಅರ್ಥಮಾಡಿಕೊಂಡು ಅದಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡುತ್ತಾರೆ. ಇದು ಕೇವಲ ದುಃಖಕ್ಕೆ ಅಥವಾ ಸ್ತ್ರೀಯರಿಗೆ ಮೀಸಲಾದ ಪ್ರತಿಕ್ರಿಯೆಯಲ್ಲ, ಸುಖಕ್ಕೂ, ಪುರುಷರಿಗೂ ಅನ್ವಯಿಸುವ ಭಾವನಾತ್ಮಕ ಕಲೆ.

ಎಮೋಷನಲ್ ಎಂಪಥಿ: ಇದನ್ನು ಭಾವನಾತ್ಮಕ ಅನುಭೂತಿ ಎಂದು ಕರೆಯಬಹುದು. ಇದು ವ್ಯಕ್ತಿ ನಿಮ್ಮ ಎದುರಿಗೆ ಇಲ್ಲದಿದ್ದರೂ, ವಿಷಯ ತಿಳಿದ ಕೂಡಲೇ ಆಗುವ ನಿಮ್ಮ ಪ್ರತಿಕ್ರಿಯೆ. ಅವರ ಸ್ಥಳದಲ್ಲಿ ನಾವು ಇದ್ದು, ನಮಗೂ ಅದೇ ರೀತಿಯ ದುಃಖ ಅನುಭವಿಸಬೇಕಾಗಿದ್ದಲ್ಲಿ ನಮಗೆ ಆಗ ಹೇಗೆ ಅನಿಸುತ್ತದೆ ಅದನ್ನು ಊಹಿಸಿ (ಅಥವಾ ನೆನಪಿಸಿಕೊಂಡು) ನೀಡುವ ಪ್ರತಿಕ್ರಿಯೆ.

ಕಂಪ್ಯಾಷನೇಟ್ ಎಂಪಥಿ:  ಎಂದರೆ ಕನಿಕರದ ಅನುಭೂತಿ. ಇದು ನಮ್ಮನ್ನು ಭಾವನಾತ್ಮಕವಾಗಿ ವಿಚಲಿತ ಗೊಳಿಸುವುದರ ಜೊತೆಗೆ ಕ್ರಿಯಾಶೀಲರನ್ನಾಗಿಯೂ ಮಾಡುವಂತಹ ಶಕ್ತಿ. ಉದಾ: ಎಲ್ಲಾದರೂ ನೈಸರ್ಗಿಕ ದುರಂತ ಸಂಭವಿಸಿದಾಗ ನಾವು ನೀಡುವ ಸಹಾಯ ಹಸ್ತ. ಅಂತಹ ದುರಂತ ನಾವು ಅನುಭವಿಸಿರಲೇ ಬೇಕೆಂದಿಲ್ಲ. ಅದರ ಬಗ್ಗೆ ಕೇಳಿ, ತಿಳಿದು, ದೃಶ್ಯ ಮಾಧ್ಯಮದಲ್ಲಿ ನೋಡಿ ನಮಗೆ ಮನವರಿಕೆಯಾಗಿ ನಾವು ನೀಡುವ ಪ್ರತಿಕ್ರಿಯೆ ಇದಾಗಿರುತ್ತದೆ.

ಇವುಗಳನ್ನು ಬೆಳೆಸಿಕೊಳ್ಳುವುದು ಹೇಗೆ?

ವೇದನಾ ಅನುಭೂತಿ ನಮ್ಮ ಊಹಾಶಕ್ತಿಯನ್ನು ಆಧರಿಸಿರುತ್ತದೆ. ಇನ್ನೊಬ್ಬರ ಜೊತೆ ನಮ್ಮ ಸಂಬಂಧ ಎಷ್ಟು ಗಾಢವಾಗಿದೆ ಎನ್ನುವುದರ ಮೇಲೂ ಇದು ಹೋಗುತ್ತದೆ. ಉದಾ: ಸಿನಿಮಾ, ನಾಟಕ, ಟಿವಿ ಸೀರಿಯಲ್ಲಿನಲ್ಲಿ ಬರುವ ಭಾವನಾತ್ಮಕ ದೃಶ್ಯಗಳನ್ನು ಇವರು, ತಮ್ಮ ಮನೆಯಲ್ಲಿ ಕುಳಿತು, ನೋಡಿ, ಕಣ್ಣೀರು ಸುರಿಸುವವರೂ ಇರುತ್ತಾರೆ, ಅದು ಕೇವಲ ನಾಟಕೀಯ ಸನ್ನಿವೇಶ ಎಂದು ತಿಳಿದಿದ್ದರೂ ಸಹ. ಅವರಿಗೆ ಆ ಪಾತ್ರಧಾರಿಯ ಜೊತೆಗೆ ಇರುವ ಕಾಲ್ಪನಿಕ ಸಂಬಂಧ ಮತ್ತು ಪಾತ್ರದ/ಪಾತ್ರಧಾರಿಯ ಭಾವನೆಗೆ ಇವರು ನೀಡುವ ಸ್ವಂತ ಪ್ರತಿಕ್ರಿಯೆ ಆಗಿರುತ್ತದೆ. ಅವರ ಪಕ್ಕದಲ್ಲಿ ಕುಳಿತು ಅದೇ ದೃಶ್ಯವನ್ನು ನೋಡುತ್ತಿರುವ ಇನ್ನೋರ್ವ ವ್ಯಕ್ತಿ ಅದಕ್ಕೆ ತೀರಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಬಹುದು. ಪುರುಷರು ಕ್ರಿಕೆಟ್/ಫುಟ್ಬಾಲ್ ಪಂದ್ಯ ನೋಡುವಾಗ, ಅದರಲ್ಲಿ ಅವರ ಭಾಗವಹಿಸುವಿಕೆ/ತಲ್ಲೀನತೆಯೂ ಸಹಿತ ಅನುಭೂತಿಯನ್ನು ತೋರಿಸುತ್ತದೆ. ವೇದನಾ ಅನುಭೂತಿ ಬೆಳೆಸಿಕೊಳ್ಳಲು ಮೊದಲು ಇನ್ನೋರ್ವ ವ್ಯಕ್ತಿಯ/ಸನ್ನಿವೇಶದ ಬಗ್ಗೆ ನಾವು ಸಾಕಷ್ಟು ತಿಳಿದಿರಬೇಕು, ಇಲ್ಲದಿದ್ದಲ್ಲಿ ನಮ್ಮ ಊಹಾ ಶಕ್ತಿ ನಮಗೆ ಮೋಸ ಮಾಡಬಹುದು. ಎಷ್ಟೋ ಆತ್ಮಹತ್ಯೆ ಪ್ರಕರಣದಲ್ಲಿ ವ್ಯಕ್ತಿಗೆ ಹತ್ತಿರವಿದ್ದವರು ಅವರ ವೇದನೆಯನ್ನು ಅರ್ಥಮಾಡಿಕೊಳ್ಳದೇ, ಅವರ ನಗುವನ್ನು ಸಂತೋಷವೆಂದು ತಪ್ಪಾಗಿ ಗ್ರಹಿಸಿ, ಸಮಯವಿದ್ದಾಗ ಕ್ರಮ ವಹಿಸದೇ, ಪ್ರಸಂಗ ಕೈಮೀರಿ ಹೋಗಿರುವುದನ್ನು ನಾವು ಕಂಡಿದ್ದೇವೆ, ಕೇಳಿದ್ದೇವೆ. ಇಂದಿನಿಂದ ಟಿವಿ ಸೀರಿಯಲ್ ನೋಡಿ ನೀವೂ ಸಹ ಕಣ್ಣೀರು ಸುರಿಸಿ ಎಂದು ನಾನು ಹೇಳುವುದಿಲ್ಲ, ಆದರೆ ಅಂತಹವರನ್ನು ಕಂಡರೆ ನೀವು ಅವರಿಂದ ಅನುಭೂತಿಯ ಬಗ್ಗೆ ಏನು ಕಲಿಯಬಹುದು ಯೋಚಿಸಿ.

ಭಾವನಾತ್ಮಕ ಅನುಭೂತಿ ಇನ್ನೊಬ್ಬರ ನೋವು ನಮಗೇ ಆದಂತೆ ಭಾವಿಸುವ ಕಲೆ. ಇಂಗ್ಲಿಷಿನಲ್ಲಿ ಇದನ್ನು “ವಾಕಿಂಗ್ ಇನ್ ಅದರ್ಸ್ ಶೂಸ್” ಎನ್ನುತ್ತಾರೆ. ಇದರಲ್ಲೂ ನಮ್ಮ ಕಲ್ಪನಾ ಶಕ್ತಿ ಕೆಲಸ ಮಾಡುತ್ತದೆ. ನಮಗೂ ಅಂತಹದೇ ಸನ್ನಿವೇಶ ಹಿಂದೆ ಎದುರಾಗಿದ್ದಾಗ, ನಾವು ಅದರಿಂದ ಆಗ ಹೇಗೆ ಪಾರಾದೆವು ಎಂಬುದನ್ನು ನೀವು ಅವರೊಂದಿಗೆ ಹಂಚಿಕೊಳ್ಳಬಹುದು. ಅಂತಹ ಸನ್ನಿವೇಶ ನಿಮ್ಮ ಜೀವನದಲ್ಲಿ ನಡೆಯದೇ ಇದ್ದರೂ, ಕಾಲ್ಪನಿಕವಾಗಿ ನೀವು ತೆಗೆದುಕೊಂಡ ಕ್ರಮ ಹೇಗೆ ಪ್ರಯೋಜನಕಾರಿಯಾಯಿತು, ಎಂಬುದು ನಿಮಗೆ ಹೇಳಿ-ಕೇಳಿ ತಿಳಿದಿದ್ದಲ್ಲಿ, ಅಂತಹ ಸಲಹೆ ಹಂಚಿಕೊಳ್ಳಬಹುದು. ಉದಾ: ಸ್ನೇಹಿತರೊಬ್ಬರು ಕೆಲಸದ ಸಮಯದಲ್ಲಿ ತಾವು ಮಾಡಿದ ತಪ್ಪಿನಿಂದ ಅವರಿಗಾದ ತೊಂದರೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಹುದು. ಆಗ ಅವರ ಸ್ಥಳದಲ್ಲಿ ನೀವಿದ್ದರೆ ಏನು ಮಾಡುತ್ತಿದ್ದಿರಿ ಅಥವಾ ಅವರ ತೊಂದರೆ ಹೇಗೆ ಪರಿಹಾರವಾಯಿತು ಎಂಬುದನ್ನು ಕೇಳಿ ತಿಳಿದುಕೊಳ್ಳಿ. ಮಾಹಿತಿ ನಿಮಗೆ ಮುಂದೆ ಯಾವಾಗಲಾದರೂ ಪ್ರಯೋಜನಕ್ಕೆ ಬರಬಹುದು. ಇಂತಹ ಸಲಹೆ ಪ್ರತಿಯೊಂದು ಸಮಯ/ಸನ್ನಿವೇಷದಲ್ಲಿ ಕೆಲಸ ಮಾಡದಿರಬಹುದು ಎಂಬುದನ್ನು ನೆನಪಿಡಿ.

ಕನಿಕರದ ಅನುಭೂತಿ ರೂಢಿಸಿಕೊಳ್ಳುವುದು ಸುಲಭ. ದುಃಖದಲ್ಲಿರುವವರಿಗೆ ಸಹಾಯ ಹಸ್ತ ನೀಡಿ. ನಿಮ್ಮ ಹತ್ತಿರದವರಾಗಿದ್ದರೆ, ಸಮಯ-ಸಂದರ್ಭಕ್ಕನುಸಾರ, ಅವರಿಗೆ ಕುಡಿಯಲು ನೀರು ಕೊಡಿ, ಊಟ-ತಿಂಡಿ-ವಸತಿ ವ್ಯವಸ್ಥೆ ಮಾಡಿ. ಅವರು ಒಂಟಿಯಾಗಿರಲು ಇಷ್ಟಪಟ್ಟಲ್ಲಿ, ಇರಲು ಬಿಡಿ. ಅವರ ಸಣ್ಣ-ಪುಟ್ಟ ಕೆಲಸಗಳನ್ನು ಮಾಡಿಕೊಡಿ, ಅವರ ಮನೆಯ ಮಕ್ಕಳನ್ನು ವೃದ್ಧರನ್ನು ನೋಡಿಕೊಳ್ಳಿ. ನಿಮ್ಮ ಸಲಹೆಯನ್ನು ಅವರ ಮೇಲೆ ಹೇರಲು ಹೋಗಬೇಡಿ.

ಎಲ್ಲರೂ ತಮ್ಮ ತಮ್ಮ ಯುದ್ಧಗಳನ್ನು ತಾವೇ ಕಾದಾಡಿ ಗೆಲ್ಲಬೇಕು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...