Homeಮುಖಪುಟದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಬಿಜೆಪಿ ಜಾತಿ ಸಮೀಕರಣದ ಲೆಕ್ಕಾಚಾರ ಹಾಕುತ್ತಿದೆ. ಯುಪಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಇತ್ತ ಬ್ರಾಹ್ಮಣ ಲಾಬಿಯೂ ನಡೆಯುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿರುವ ಸ್ವತಂತ್ರದೇವ್ ಸಿಂಗ್ ಅವರ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ. ರಾಜಕೀಯವಾಗಿ ಪ್ರಮುಖ ಪಾತ್ರ ವಹಿಸುವ ಉತ್ತರ ಪ್ರದೇಶದಲ್ಲಿ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆಂಬ ಕುತೂಹಲ ಕೆರಳಿದೆ. ರಾಜ್ಯದಲ್ಲಿನ ಸಂಕೀರ್ಣ ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವ ಗುರುತರ ಜವಾಬ್ದಾರಿಯನ್ನು ಬಿಜೆಪಿ ಈಗ ಎದುರಿಸಬೇಕಾಗಿದೆ.

ಸ್ವತಂತ್ರದೇವ್ ಅವರ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾರು ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಕಾರಣದಿಂದ ಈ ಆಯ್ಕೆಯು ಪ್ರಮುಖ ಪಾತ್ರ ವಹಿಸಿದೆ.

ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐದನೇ ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರದೇವ್, ಯೋಗಿ ಆದಿತ್ಯನಾಥ್ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ಪ್ರಭಾವಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರೂ ಆಗಿದ್ದಾರೆ. ಅವರು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ನಾಯಕರೂ ಹೌದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯೋಗಿ ಸರ್ಕಾರವು ಎರಡನೇ ಅವಧಿಗೆ ಅಧಿಕಾರ ಹಿಡಿದ ಬಳಿಕ ಸ್ವತಂತ್ರದೇವ್ ಅವರು ಕಳೆದ ನಾಲ್ಕು ತಿಂಗಳಿನಿಂದ ಮಂತ್ರಿಯಾಗಿದ್ದಾರೆ. ಆದರೆ ಬಿಜೆಪಿಯು ‘ಒಂದು ಸದಸ್ಯ-ಒಂದು ಹುದ್ದೆ’ ಎಂಬ ತತ್ವವನ್ನು ಹೇಳುತ್ತಿದೆ. ಇದರ ನಡುವೆ ಶನಿವಾರ ಯುಪಿ ಬಿಜೆಪಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯನ್ನು ಸ್ವತಂತ್ರದೇವ್ ಪೂರ್ಣಗೊಳಿಸಿದ್ದಾರೆ.

“ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಎರಡು ಕಾರಣಗಳಿವೆ. ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಜೊತೆಗೆ ಉತ್ತರ ಪ್ರದೇಶದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿ ಚಿಂತಿಸಿದೆ. ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದೆ” ಎಂದು ಕೇಂದ್ರ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಮುಖ್ಯ ಕಾರಣವೆಂದರೆ ಬಿಜೆಪಿಯು ಬ್ರಾಹ್ಮಣ ಅಥವಾ ಒಬಿಸಿ ಎಂಬ ಎರಡು ಮುಖಗಳ ಆಯ್ಕೆಯ ಗೊಂದಲವನ್ನು ಎದುರಿಸುತ್ತಿದೆ. ಇದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಯುಪಿ ನಾಯಕರೊಂದಿಗೆ ಸಮಾಲೋಚನೆ ಪೂರ್ಣಗೊಂಡಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ಬ್ರಾಹ್ಮಣರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬ್ರಾಹ್ಮಣ ಲಾಬಿಯೂ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಅನೌಪಚಾರಿಕವಾಗಿ ಯುಪಿ ನಾಯಕರ ಜೊತೆ ಮಾತನಾಡಲಾಗಿದೆ. ಆದರೆ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರು ಹೇಳಿದ್ದಾರೆ. “ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವುದರ ಸಂದಿಗ್ಧತೆಯಲ್ಲೂ ಪಕ್ಷವಿದೆ” ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬ್ರಾಹ್ಮಣರಾಗಿದ್ದು, ಸಿಎಂ ಕೂಡ ಮೇಲ್ಜಾತಿಯವರಾದ್ದರಿಂದ (ಠಾಕೂರ್) ಸಮುದಾಯವನ್ನು ಕಡೆಗಣಿಸಲಾಗದಿದ್ದರೂ ಮತ್ತೊಬ್ಬ ಬ್ರಾಹ್ಮಣನನ್ನು ನೇಮಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಕಾರ್ಯಾಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿರಿ: ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

“ದಲಿತರು ಮತ್ತು ಒಬಿಸಿಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂಬ ಗೊಣಗಾಟ ಪಕ್ಷದಲ್ಲಿ ಮನೆ ಮಾಡಿದೆ. ಬ್ರಾಹ್ಮಣ ಮುಖದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ನಾಯಕರ ಜೊತೆ ನಡೆದ, ಮೊದಲ ಸಭೆಯಲ್ಲಿ, ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಯವರನ್ನು ಹುಡುಕುವಂತೆ ಸಂದೇಶ ರವಾನಿಸಲಾಗಿದೆ” ಎಂದಿದ್ದಾರೆ.

ಬ್ರಾಹ್ಮಣ ಮುಖವನ್ನು ಆರಿಸಿದ್ದರೆ, ಪಕ್ಷವು ಮೊದಲೇ ಘೋಷಣೆ ಮಾಡುತ್ತಿತ್ತು ಎಂದು ಕೇಂದ್ರದ ಬಿಜೆಪಿಯ ಮತ್ತೊಬ್ಬ ನಾಯಕ ಅಭಿಪ್ರಾಯಪಟ್ಟಿದ್ದಾರೆ.

“ಪಕ್ಷವು ಬ್ರಾಹ್ಮಣ ಮುಖಗಳ ಹೊರತಾಗಿ ನೋಡುತ್ತಿದೆ. ಒಬಿಸಿ ಮತ್ತು ದಲಿತರಲ್ಲಿ ಯಾರನ್ನಾದರೂ ಆಯ್ಕೆ ಮಾಡಲು ಯೋಚಿಸುತ್ತಿದೆ. ಸ್ವತಂತ್ರದೇವ್ ಅವರು ಕುರ್ಮಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಬದಲಿಗೆ ಒಬಿಸಿ ಅಭ್ಯರ್ಥಿಯನ್ನು ನೇಮಿಸುವುದು ಜಾಣತನ. ಅಲ್ಲದೆ, ರಾಜ್ಯ ಚುನಾವಣೆಯಲ್ಲಿ ದಲಿತರು ನಮ್ಮನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಆದ್ದರಿಂದ ದಲಿತ ನಾಯಕರೂ ಆಯ್ಕೆಯಾಗಬಹುದು. ಜಾತಿ ಪ್ರಾಬಲ್ಯದಿಂದ ಒಬಿಸಿಗಳೂ ಮುಖ್ಯವಾಗುತ್ತಾರೆ. ಹೀಗಾಗಿ ಯಾವುದೂ ಅಂತಿಮವಾಗಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...