Homeಮುಖಪುಟದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಬಿಜೆಪಿ ಜಾತಿ ಸಮೀಕರಣದ ಲೆಕ್ಕಾಚಾರ ಹಾಕುತ್ತಿದೆ. ಯುಪಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಇತ್ತ ಬ್ರಾಹ್ಮಣ ಲಾಬಿಯೂ ನಡೆಯುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿರುವ ಸ್ವತಂತ್ರದೇವ್ ಸಿಂಗ್ ಅವರ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ. ರಾಜಕೀಯವಾಗಿ ಪ್ರಮುಖ ಪಾತ್ರ ವಹಿಸುವ ಉತ್ತರ ಪ್ರದೇಶದಲ್ಲಿ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆಂಬ ಕುತೂಹಲ ಕೆರಳಿದೆ. ರಾಜ್ಯದಲ್ಲಿನ ಸಂಕೀರ್ಣ ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವ ಗುರುತರ ಜವಾಬ್ದಾರಿಯನ್ನು ಬಿಜೆಪಿ ಈಗ ಎದುರಿಸಬೇಕಾಗಿದೆ.

ಸ್ವತಂತ್ರದೇವ್ ಅವರ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾರು ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಕಾರಣದಿಂದ ಈ ಆಯ್ಕೆಯು ಪ್ರಮುಖ ಪಾತ್ರ ವಹಿಸಿದೆ.

ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐದನೇ ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರದೇವ್, ಯೋಗಿ ಆದಿತ್ಯನಾಥ್ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ಪ್ರಭಾವಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರೂ ಆಗಿದ್ದಾರೆ. ಅವರು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ನಾಯಕರೂ ಹೌದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯೋಗಿ ಸರ್ಕಾರವು ಎರಡನೇ ಅವಧಿಗೆ ಅಧಿಕಾರ ಹಿಡಿದ ಬಳಿಕ ಸ್ವತಂತ್ರದೇವ್ ಅವರು ಕಳೆದ ನಾಲ್ಕು ತಿಂಗಳಿನಿಂದ ಮಂತ್ರಿಯಾಗಿದ್ದಾರೆ. ಆದರೆ ಬಿಜೆಪಿಯು ‘ಒಂದು ಸದಸ್ಯ-ಒಂದು ಹುದ್ದೆ’ ಎಂಬ ತತ್ವವನ್ನು ಹೇಳುತ್ತಿದೆ. ಇದರ ನಡುವೆ ಶನಿವಾರ ಯುಪಿ ಬಿಜೆಪಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯನ್ನು ಸ್ವತಂತ್ರದೇವ್ ಪೂರ್ಣಗೊಳಿಸಿದ್ದಾರೆ.

“ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಎರಡು ಕಾರಣಗಳಿವೆ. ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಜೊತೆಗೆ ಉತ್ತರ ಪ್ರದೇಶದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿ ಚಿಂತಿಸಿದೆ. ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದೆ” ಎಂದು ಕೇಂದ್ರ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಮುಖ್ಯ ಕಾರಣವೆಂದರೆ ಬಿಜೆಪಿಯು ಬ್ರಾಹ್ಮಣ ಅಥವಾ ಒಬಿಸಿ ಎಂಬ ಎರಡು ಮುಖಗಳ ಆಯ್ಕೆಯ ಗೊಂದಲವನ್ನು ಎದುರಿಸುತ್ತಿದೆ. ಇದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಯುಪಿ ನಾಯಕರೊಂದಿಗೆ ಸಮಾಲೋಚನೆ ಪೂರ್ಣಗೊಂಡಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ಬ್ರಾಹ್ಮಣರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬ್ರಾಹ್ಮಣ ಲಾಬಿಯೂ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಅನೌಪಚಾರಿಕವಾಗಿ ಯುಪಿ ನಾಯಕರ ಜೊತೆ ಮಾತನಾಡಲಾಗಿದೆ. ಆದರೆ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರು ಹೇಳಿದ್ದಾರೆ. “ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವುದರ ಸಂದಿಗ್ಧತೆಯಲ್ಲೂ ಪಕ್ಷವಿದೆ” ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬ್ರಾಹ್ಮಣರಾಗಿದ್ದು, ಸಿಎಂ ಕೂಡ ಮೇಲ್ಜಾತಿಯವರಾದ್ದರಿಂದ (ಠಾಕೂರ್) ಸಮುದಾಯವನ್ನು ಕಡೆಗಣಿಸಲಾಗದಿದ್ದರೂ ಮತ್ತೊಬ್ಬ ಬ್ರಾಹ್ಮಣನನ್ನು ನೇಮಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಕಾರ್ಯಾಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿರಿ: ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

“ದಲಿತರು ಮತ್ತು ಒಬಿಸಿಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂಬ ಗೊಣಗಾಟ ಪಕ್ಷದಲ್ಲಿ ಮನೆ ಮಾಡಿದೆ. ಬ್ರಾಹ್ಮಣ ಮುಖದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ನಾಯಕರ ಜೊತೆ ನಡೆದ, ಮೊದಲ ಸಭೆಯಲ್ಲಿ, ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಯವರನ್ನು ಹುಡುಕುವಂತೆ ಸಂದೇಶ ರವಾನಿಸಲಾಗಿದೆ” ಎಂದಿದ್ದಾರೆ.

ಬ್ರಾಹ್ಮಣ ಮುಖವನ್ನು ಆರಿಸಿದ್ದರೆ, ಪಕ್ಷವು ಮೊದಲೇ ಘೋಷಣೆ ಮಾಡುತ್ತಿತ್ತು ಎಂದು ಕೇಂದ್ರದ ಬಿಜೆಪಿಯ ಮತ್ತೊಬ್ಬ ನಾಯಕ ಅಭಿಪ್ರಾಯಪಟ್ಟಿದ್ದಾರೆ.

“ಪಕ್ಷವು ಬ್ರಾಹ್ಮಣ ಮುಖಗಳ ಹೊರತಾಗಿ ನೋಡುತ್ತಿದೆ. ಒಬಿಸಿ ಮತ್ತು ದಲಿತರಲ್ಲಿ ಯಾರನ್ನಾದರೂ ಆಯ್ಕೆ ಮಾಡಲು ಯೋಚಿಸುತ್ತಿದೆ. ಸ್ವತಂತ್ರದೇವ್ ಅವರು ಕುರ್ಮಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಬದಲಿಗೆ ಒಬಿಸಿ ಅಭ್ಯರ್ಥಿಯನ್ನು ನೇಮಿಸುವುದು ಜಾಣತನ. ಅಲ್ಲದೆ, ರಾಜ್ಯ ಚುನಾವಣೆಯಲ್ಲಿ ದಲಿತರು ನಮ್ಮನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಆದ್ದರಿಂದ ದಲಿತ ನಾಯಕರೂ ಆಯ್ಕೆಯಾಗಬಹುದು. ಜಾತಿ ಪ್ರಾಬಲ್ಯದಿಂದ ಒಬಿಸಿಗಳೂ ಮುಖ್ಯವಾಗುತ್ತಾರೆ. ಹೀಗಾಗಿ ಯಾವುದೂ ಅಂತಿಮವಾಗಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...