Homeಮುಖಪುಟಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

- Advertisement -
- Advertisement -

ಎದೆ ನೋವು ಎಂದು ನೋವು ತೋಡಿಕೊಂಡರೂ ಬಿಡದೆ ಪೊಲೀಸರು ನಡೆಸಿರುವ ಹಲ್ಲೆಯಿಂದಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸ್ನೇಹಿತರಾದ ಜುಬೈರ್, ಸಜೀವನ್ ಮತ್ತು ಶಾಮನಾದ್ ಅವರು ತಲಶ್ಶೇರಿಯಿಂದ ವಡಕರ ಬಳಿ ಕಲ್ಲೇರಿ ಕಡೆಗೆ ಜುಲೈ 21ರಂದು ಹೋಗುತ್ತಿದ್ದಾಗ ರಾತ್ರಿ 11.30 ರ ಸುಮಾರಿಗೆ ಅವರ i20 ಕಾರು, ಸ್ವಿಫ್ಟ್‌ಗೆ ಡಿಕ್ಕಿ ಹೊಡೆದಿತ್ತು. ಈ ಅವಘಡದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಜೀವನ್ ಸಾವನ್ನಪ್ಪಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡಕರ ಸಮೀಪದ ಅಡ್ಯಕ್ಕತೆರುವು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಕಾರಣ ಶಾಮನಾದ್ ಪೊಲೀಸರು ವಶಕ್ಕೆ ಪಡೆದಿಲ್ಲ.

ವಡಕರದಲ್ಲಿ ಡ್ರೈವಿಂಗ್ ಲರ್ನಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಜುಬೇರ್‌ ಘಟನೆ ಕುರಿತು ಮಾತನಾಡಿ, “ನಾವು ಇನ್ನೊಂದು ಕಾರಿನಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯತ್ನಿಸಿದೆವು. ಅಷ್ಟರಲ್ಲಾಗಲೇ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದ ಕಾರಣ ನಮ್ಮನ್ನು ಠಾಣೆಗೆ ಕರೆದೊಯ್ದರು. ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ ಪೆಕ್ಟರ್ ನಮ್ಮ ಮೇಲೆ ಕೋಪಗೊಂಡಿದ್ದರು. ಆಗ ಸಜೀವನ್, ಇಂತಹ ಅವಘಡಗಳು ಸಹಜ ಎಂದು ಹೇಳಿದ. ಸಜೀವನ್‌ ಹಿಂತಿರುಗಿ ಮಾತನಾಡಿದ ಕಾರಣಕ್ಕೇನೋ ಸಬ್ ಇನ್ಸ್‌ಪೆಕ್ಟರ್ ಆತನನ್ನು ಹೊಡೆದು ನಮ್ಮನ್ನು ಠಾಣೆಯೊಳಗೆ ತಳ್ಳಿದರು” ಎಂದು ಮಾಹಿತಿ ನೀಡಿರುವುದಾಗಿ ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

“ಪೊಲೀಸ್ ಸಿಬ್ಬಂದಿ ಸಜೀವನ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಬಲವಾಗಿ ಹೊಡೆದರು. ಆಗ ಸಜೀವನ್‌ ಒಂದು ಕೈಯನ್ನು ಎದೆಗೆ ಮತ್ತು ಇನ್ನೊಂದು ಕೈಯನ್ನು ಮೇಲಕ್ಕೆತ್ತಿ ನೋವು ತೋಡಿಕೊಂಡನು. ಅಲ್ಲಿ ಇನ್ನೂ ಇಬ್ಬರು ಮೂವರು ಪೊಲೀಸರು ಇದ್ದರು. ಆದರೆ ಅವರು ನಮ್ಮನ್ನು ಬಿಡಲೇ ಇಲ್ಲ. ಅವರು ನಮ್ಮನ್ನು ಹೊರಗೆ ಬಿಡುವ ಮೊದಲು 45 ನಿಮಿಷಗಳ ಕಾಲ ಕಾಯಿಸಿದರು. ಮರುದಿನ ಕಾರನ್ನು ಬಿಡುಗಡೆ ಮಾಡಲಾಗುವುದು. ಕೀಲಿಯನ್ನು ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ನಮಗೆ ತಿಳಿಸಲಾಯಿತು” ಎಂದು ವಿವರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ತಮ್ಮನ್ನು ಥಳಿಸಿರುವುದಾಗಿ ಜುಬೇರ್‌ ಆರೋಪಿಸಿದ್ದಾರೆ.

“ಪೊಲೀಸರು ಅವನ ಮುಖ ಮತ್ತು ಬೆನ್ನಿನ ಮೇಲೆ ಕನಿಷ್ಠ ಐದರಿಂದ ಆರು ಬಾರಿ ಹೊಡೆದರು. ಪೊಲೀಸರು ಹೊಡೆಯಲು ಪ್ರಾರಂಭಿಸಿದ ಐದು ನಿಮಿಷಗಳಲ್ಲಿ ತನಗಾಗುತ್ತಿರುವ ಸಮಸ್ಯೆಯನ್ನು ಸಜೀವನ್‌ ಹೇಳಿದ್ದ. ಯಾಕೆ ಹೀಗೆ ಹೊಡೆಯುತ್ತಿದ್ದೀರ ಎಂದು ಪೊಲೀಸರನ್ನು ಕೇಳಿದಾಗ ನನಗೂ ಥಳಿಸಿದರು. ಸಜೀವನ್ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿರುವ ಕುರಿತು ಪೊಲೀಸರಿಗೆ ತಿಳಿಸಿದಾಗ- ಗ್ಯಾಸ್ ಆಗಿರಬಹುದು ಎಂದು ತಾತ್ಸಾರ ತೋರಿ ನೀರು ಕುಡಿಯಲು ತಿಳಿಸಿದರು” ಎಂದು ಜುಬೇರ್‌ ಹೇಳಿದ್ದಾರೆ.

ಪೊಲೀಸರು ಇಬ್ಬರಿಗೂ ತೆರಳಲು ಅವಕಾಶ ನೀಡಿದ ನಂತರ, ಸಜೀವನ್ ಆಟೊ ಹತ್ತಲು ಪೊಲೀಸ್ ಠಾಣೆಯಿಂದ ಹೊರಬಂದನು. “ಕಾರಿನ ಕೀಯನ್ನು ಪೊಲೀಸರಿಗೆ ಕೊಟ್ಟು ನಾನು ಹೊರಗೆ ಬರುವಷ್ಟರಲ್ಲಿ ಆತ ಪೊಲೀಸ್ ಠಾಣೆಯ ಆವರಣದಲ್ಲಿ ಕುಸಿದು ಬಿದ್ದಿದ್ದ. ಆ ಸಮಯದಲ್ಲಿ ಕಾಂಪೌಂಡ್ ಹೊರಗೆ ಆಟೋ ರಿಕ್ಷಾಗಳಿದ್ದವು. ನಂತರ ಆಟೋ ರಿಕ್ಷಾ ಚಾಲಕರು ಸಜೀವನ್‌ನನ್ನು ಆಟೋಗೆ ಸ್ಥಳಾಂತರಿಸಲು ಪ್ರಯತ್ನಿಸಿದರು. ಆದರೆ ಆತ ದಪ್ಪವಾಗಿದ್ದ ಕಾರಣ ಕಷ್ಟವಾಯಿತು. ಪೊಲೀಸ್ ಪೇದೆಯೊಬ್ಬರು ಠಾಣೆಯಿಂದ ಹೊರಬಂದರು. ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರನ್ನು ಕೊಡುವಂತೆ ಅವರಲ್ಲಿ ಮನವಿ ಮಾಡಿದೆ. ಅದಕ್ಕೆ ಅವರು ನಿರಾಕರಿಸಿದರು. ನಂತರ ಆಟೋ ರಿಕ್ಷಾ ಚಾಲಕರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಬಂದಿತು” ಎಂದು ಘಟನೆಯ ಕುರಿತು ತಿಳಿಸಿದ್ದಾರೆ.

ಇದನ್ನೂ ಓದಿರಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ಸಜೀವನ್‌ ತನಗಾಗುತ್ತಿರುವ ನೋವುನ್ನು ವ್ಯಕ್ತಪಡಿಸಿದಾಗಲೇ ಹೊರಹೋಗಲು ಪೊಲೀಸರು ಅವಕಾಶ ನೀಡಿದ್ದರೆ ಆತನ ಜೀವವನ್ನು ಉಳಿಸಬಹುದಿತ್ತು. ನಾನು ಆತನೊಂದಿಗೆ ಆಸ್ಪತ್ರೆಗೆ ಹೋಗಿದ್ದೆ. ಕೆಲವೇ ನಿಮಿಷಗಳಲ್ಲಿ, ಸಜೀವನ್‌ ತೀರಿಕೊಂಡರು ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ ಸಾವಿಗೆ ಕಾರಣವೇನೆಂದು ತಿಳಿಸಲಿಲ್ಲ. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಸಾಕಷ್ಟು ಸಮಯ ವ್ಯರ್ಥವಾಯಿತು. ಹತ್ತು ನಿಮಿಷ ಮುಂಚಿತವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಆತನ ಜೀವ ಉಳಿಸಬಹುದಿತ್ತು” ಎಂದು ವೈದ್ಯರು ಹೇಳಿದ್ದಾರೆ.

ಸಜೀವನ್ ಅವರ ಸಂಬಂಧಿ ಅರ್ಜುನ್ ಕೂಡ ಇದೇ ಆತಂಕವನ್ನು ‘ನ್ಯೂಸ್‌ ಮಿನಿಟ್‌’ನೊಂದಿಗೆ  ಹಂಚಿಕೊಂಡಿದ್ದಾರೆ. ಸಜೀವನ್ ಅವರ ಎದೆನೋವಿನ ದೂರನ್ನು ಪೊಲೀಸರು ನಿರ್ಲಕ್ಷಿಸಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಟಿ.ವಿಕ್ರಮ್ ಘಟನೆಯ ಕುರಿತು ತನಿಖಾ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಕ್ರೈಂ ಬ್ರಾಂಚ್ ಜುಲೈ 25ರ ಭಾನುವಾರ ಹೇಳಿಕೆ ದಾಖಲಿಸಲು ಜುಬೈರ್‌ಗೆ ಸಮನ್ಸ್ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...