Homeಮುಖಪುಟ‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

- Advertisement -
- Advertisement -

ಕಳೆದ ವಾರವಷ್ಟೆ ಜಾಮೀನು ಪಡೆದ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ಪ್ರಕರಣದ ವಿವರವಾದ ತೀರ್ಪು ಮಂಗಳವಾರ ಹೊರಬಿದ್ದಿದೆ. ಜುಬೇರ್‌ ಅವರು ಕ್ರಿಮಿನಲ್ ಪ್ರಕ್ರಿಯೆಯ ವಿಷವರ್ತುಲದಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿನ ಪ್ರಕ್ರಿಯೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, “ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ” ಎಂದು ಎಚ್ಚರಿಸಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು, ತರಾತುರಿ ಮತ್ತು ವಿವೇಚನಾರಹಿತ ಬಂಧನಗಳು, ಜಾಮೀನು ಪಡೆಯುವಲ್ಲಿ ತೊಂದರೆ ಮತ್ತು ವಿಚಾರಣಾಧೀನ ಕೈದಿಗಳ ದೀರ್ಘಾವಧಿಯ ಕಾರಾಗೃಹವಾಸದ ವಿಷಯವನ್ನು ಎತ್ತಿಹಿಡಿದು ಟೀಸಿದ್ದರು. ಇದರ ನಂತರ ಜುಬೇರ್‌ ಅವರು ಸುಮಾರು 22 ದಿನಗಳ ಬಂಧನದಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಂಧನವು ದಂಡಿಸುವ ಸಾಧನವೆಂಬಂತೆ ಆಗಬಾರದು ಮತ್ತು ಅದನ್ನು ಹಾಗೆ ಬಳಸಬಾರದು. ಏಕೆಂದರೆ, ಕ್ರಿಮಿನಲ್ ಕಾನೂನಿನಿಂದ ಉಂಟಾಗುವ ಗಂಭೀರ ಪರಿಣಾಮಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯದ ನಷ್ಟವು ಒಂದಾಗಿದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು ನೀಡಿದ ತೀರ್ಪು ಹೇಳಿದೆ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

“ಕೇವಲ ಆರೋಪಗಳ ಆಧಾರದ ಮೇಲೆ ಮತ್ತು ನ್ಯಾಯಯುತ ವಿಚಾರಣೆಯಿಲ್ಲದೆ ವ್ಯಕ್ತಿಗಳನ್ನು ಶಿಕ್ಷಿಸಬಾರದು…ಬಂಧಿಸುವ ಅಧಿಕಾರವನ್ನು ಮನಸ್ಸಿನ ಅನ್ವಯವಿಲ್ಲದೆ ಮತ್ತು ಕಾನೂನನ್ನು ಪರಿಗಣಿಸದೆ ಚಲಾಯಿಸಿದಾಗ ಅದು ಅಧಿಕಾರದ ದುರುಪಯೋಗವಾಗುತ್ತದೆ” ತೀರ್ಪು ಹೇಳಿದೆ.

ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಪರಿಹಾರ ಕೋರಿದ್ದ ಮೊಹಮ್ಮದ್ ಜುಬೇರ್ ಅವರನ್ನು ಶೀಘ್ರ ಬಿಡುಗಡೆ ಮಾಡಲು ಜುಲೈ 20 ರಂದು ನ್ಯಾಯಾಲಯವು ತೀರ್ಪಿನ ಆಪರೇಟಿವ್ ಭಾಗವನ್ನು ಬಿಡುಗಡೆ ಮಾಡಿತ್ತು.

ನಾಲ್ಕು ವರ್ಷಗಳ ಹಿಂದೆ ಜುಬೇರ್‌ ಹಂಚಿಕೊಂಡಿದ್ದ ಜನಪ್ರಿಯ ಹಿಂದಿ ಚಲನಚಿತ್ರದ ಸ್ಕ್ರೀನ್‌ಶಾಟ್ ವಿಚಾರದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಸರಣಿ ಪ್ರಕರಣಗಳ ನಾಟಕೀಯ ಘಟನೆ ಪ್ರಾರಂಭವಾಯಿತು. ಇದರ ಜೊತೆಗೆ ಇತರ ದೂರುಗಳ ಮೇಲೂ ಜುಬೇರ್‌ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಯಿತು.

ಇದನ್ನೂ ಓದಿ: ಜುಬೇರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌; ನ್ಯಾಯಾಲಯದಲ್ಲಿ ಏನಾಯಿತು? | ಸಂಕ್ಷಿಪ್ತ ವಿವರಣೆ

ಬಂಧನಕ್ಕೆ ಕೆಲವು ದಿನಗಳ ಮೊದಲು, ಮೊಹಮ್ಮದ್ ಜುಬೈರ್ ಅವರು ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿಯ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ಹಂಚಿಕೊಂಡಿದ್ದರು. ಅದು ವಿಶ್ವದ ಗಮನ ಸೆಳೆದು ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಗಿ, ಆಡಳಿತರೂಢ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೆ ಈಡಾಗಿತ್ತು.

ಜುಲೈ 20 ರಂದು, ಸುಪ್ರೀಂಕೋರ್ಟ್‌ ಅವರಿಗೆ ಜಾಮೀನು ನೀಡಿ, ಯುಪಿಯ ವಿಶೇಷ ತನಿಖೆಯನ್ನು ರದ್ದುಗೊಳಿಸಿತು ಮತ್ತು ಎಲ್ಲಾ ಯುಪಿ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿತು. ಮೊಹಮ್ಮದ್ ಜುಬೇರ್ ಟ್ವೀಟ್ ಮಾಡುವುದನ್ನು ನಿಲ್ಲಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...