Homeಮುಖಪುಟ‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

- Advertisement -
- Advertisement -

ಕಳೆದ ವಾರವಷ್ಟೆ ಜಾಮೀನು ಪಡೆದ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ಪ್ರಕರಣದ ವಿವರವಾದ ತೀರ್ಪು ಮಂಗಳವಾರ ಹೊರಬಿದ್ದಿದೆ. ಜುಬೇರ್‌ ಅವರು ಕ್ರಿಮಿನಲ್ ಪ್ರಕ್ರಿಯೆಯ ವಿಷವರ್ತುಲದಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿನ ಪ್ರಕ್ರಿಯೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, “ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ” ಎಂದು ಎಚ್ಚರಿಸಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು, ತರಾತುರಿ ಮತ್ತು ವಿವೇಚನಾರಹಿತ ಬಂಧನಗಳು, ಜಾಮೀನು ಪಡೆಯುವಲ್ಲಿ ತೊಂದರೆ ಮತ್ತು ವಿಚಾರಣಾಧೀನ ಕೈದಿಗಳ ದೀರ್ಘಾವಧಿಯ ಕಾರಾಗೃಹವಾಸದ ವಿಷಯವನ್ನು ಎತ್ತಿಹಿಡಿದು ಟೀಸಿದ್ದರು. ಇದರ ನಂತರ ಜುಬೇರ್‌ ಅವರು ಸುಮಾರು 22 ದಿನಗಳ ಬಂಧನದಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಂಧನವು ದಂಡಿಸುವ ಸಾಧನವೆಂಬಂತೆ ಆಗಬಾರದು ಮತ್ತು ಅದನ್ನು ಹಾಗೆ ಬಳಸಬಾರದು. ಏಕೆಂದರೆ, ಕ್ರಿಮಿನಲ್ ಕಾನೂನಿನಿಂದ ಉಂಟಾಗುವ ಗಂಭೀರ ಪರಿಣಾಮಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯದ ನಷ್ಟವು ಒಂದಾಗಿದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು ನೀಡಿದ ತೀರ್ಪು ಹೇಳಿದೆ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

“ಕೇವಲ ಆರೋಪಗಳ ಆಧಾರದ ಮೇಲೆ ಮತ್ತು ನ್ಯಾಯಯುತ ವಿಚಾರಣೆಯಿಲ್ಲದೆ ವ್ಯಕ್ತಿಗಳನ್ನು ಶಿಕ್ಷಿಸಬಾರದು…ಬಂಧಿಸುವ ಅಧಿಕಾರವನ್ನು ಮನಸ್ಸಿನ ಅನ್ವಯವಿಲ್ಲದೆ ಮತ್ತು ಕಾನೂನನ್ನು ಪರಿಗಣಿಸದೆ ಚಲಾಯಿಸಿದಾಗ ಅದು ಅಧಿಕಾರದ ದುರುಪಯೋಗವಾಗುತ್ತದೆ” ತೀರ್ಪು ಹೇಳಿದೆ.

ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಪರಿಹಾರ ಕೋರಿದ್ದ ಮೊಹಮ್ಮದ್ ಜುಬೇರ್ ಅವರನ್ನು ಶೀಘ್ರ ಬಿಡುಗಡೆ ಮಾಡಲು ಜುಲೈ 20 ರಂದು ನ್ಯಾಯಾಲಯವು ತೀರ್ಪಿನ ಆಪರೇಟಿವ್ ಭಾಗವನ್ನು ಬಿಡುಗಡೆ ಮಾಡಿತ್ತು.

ನಾಲ್ಕು ವರ್ಷಗಳ ಹಿಂದೆ ಜುಬೇರ್‌ ಹಂಚಿಕೊಂಡಿದ್ದ ಜನಪ್ರಿಯ ಹಿಂದಿ ಚಲನಚಿತ್ರದ ಸ್ಕ್ರೀನ್‌ಶಾಟ್ ವಿಚಾರದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಸರಣಿ ಪ್ರಕರಣಗಳ ನಾಟಕೀಯ ಘಟನೆ ಪ್ರಾರಂಭವಾಯಿತು. ಇದರ ಜೊತೆಗೆ ಇತರ ದೂರುಗಳ ಮೇಲೂ ಜುಬೇರ್‌ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಯಿತು.

ಇದನ್ನೂ ಓದಿ: ಜುಬೇರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌; ನ್ಯಾಯಾಲಯದಲ್ಲಿ ಏನಾಯಿತು? | ಸಂಕ್ಷಿಪ್ತ ವಿವರಣೆ

ಬಂಧನಕ್ಕೆ ಕೆಲವು ದಿನಗಳ ಮೊದಲು, ಮೊಹಮ್ಮದ್ ಜುಬೈರ್ ಅವರು ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿಯ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ಹಂಚಿಕೊಂಡಿದ್ದರು. ಅದು ವಿಶ್ವದ ಗಮನ ಸೆಳೆದು ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಗಿ, ಆಡಳಿತರೂಢ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೆ ಈಡಾಗಿತ್ತು.

ಜುಲೈ 20 ರಂದು, ಸುಪ್ರೀಂಕೋರ್ಟ್‌ ಅವರಿಗೆ ಜಾಮೀನು ನೀಡಿ, ಯುಪಿಯ ವಿಶೇಷ ತನಿಖೆಯನ್ನು ರದ್ದುಗೊಳಿಸಿತು ಮತ್ತು ಎಲ್ಲಾ ಯುಪಿ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿತು. ಮೊಹಮ್ಮದ್ ಜುಬೇರ್ ಟ್ವೀಟ್ ಮಾಡುವುದನ್ನು ನಿಲ್ಲಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...