Homeಮುಖಪುಟ‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

‘ಮೋದಿ ಪೊಲೀಸ್‌ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ತನ್ನ ತಾಯಿ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ವಿರುದ್ಧ ದೆಹಲಿಯ ರಾಜಪಥದ ರಸ್ತೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಹುಲ್‌‌ ಗಾಂಧಿ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಬೆಲೆ ಏರಿಕೆ, ಜಿಎಸ್‌ಟಿ ಹಾಗೂ ತನಿಖಾ ಸಂಸ್ಥೆಗಳನ್ನು ಬಳಸಿ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಸದರು ಪ್ರತಿಭಟಿಸುತ್ತಿದ್ದರು. ಸುಮಾರು 30 ನಿಮಿಷಗಳ ನೂಕುನುಗ್ಗಲಿನ ನಂತರ, ರಾಹುಲ್‌ ಗಾಂಧಿಯನ್ನು ಪೊಲೀಸರು ತಡೆದು ನಿಲ್ಲಿಸಿ, ಈಗಾಗಲೇ ಬಂಧಿತರಾಗಿದ್ದ ಇತರ ಸಂಸದರೊಂದಿಗೆ ಅವರನ್ನು ಬಸ್‌ನಲ್ಲಿ ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಪೊಲೀಸ್ ರಾಜ್ಯವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅದರ ದೊರೆ” ಎಂದು ರಾಹುಲ್ ಗಾಂಧಿ ಬಂಧನಕ್ಕೂ ಮುನ್ನ ಹೇಳಿದ್ದಾರೆ.

ದೆಹಲಿಯ ಇನ್ನೊಂದು ಭಾಗದಲ್ಲಿ, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗಾಗಿ ಅವರ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದಲ್ಲಿದ್ದರು. ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ತನಿಖಾ ಸಂಸ್ಥೆಯ ಕಚೇರಿಗೆ ತೆರಳಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ರಾಹುಲ್ ಗಾಂಧಿ ಕೂಡ ಅಲ್ಲಿಗೆ ತೆರಳಿದ್ದರು.

ಇದನ್ನೂ ಓದಿ: ‘ಮತ್ತೆ ಗಬ್ಬರ್‌ ಸಿಂಗ್ ಸ್ಟ್ರೈಕ್‌’: ಜಿಎಸ್‌ಟಿ ಏರಿಕೆಯ ಬಗ್ಗೆ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಕಾಂಗ್ರೆಸ್‌ನ ನಾಲ್ಕು ಸಂಸದರನ್ನು ಪೂರ್ತಿ ಮುಂಗಾರು ಅಧಿವೇಶನದಿಂದ ಅಮಾನತುಗೊಳಿಸಿದ ಕ್ರಮವನ್ನು ರಾಹುಲ್ ಗಾಂಧಿ ಟೀಕಿಸಿದ್ದು, “ಸಂಸತ್ತಿನಲ್ಲಿ ಪ್ರತಿಪಕ್ಷಗಳನ್ನು ಮೌನಗೊಳಿಸಲಾಗಿದೆ” ಎಂದು ಹೇಳಿದ್ದಾರೆ. ರಾಷ್ಟ್ರಪತಿ ಭವನದತ್ತ ಮೆರವಣಿಗೆ ನಡೆಸಲು ಉದ್ದೇಶಿಸಿದ್ದ ಸಂಸದರನ್ನು ವಿಜಯ್ ಚೌಕ್ ಕ್ರಾಸಿಂಗ್‌ನಲ್ಲಿ ತಡೆದ್ದಾರೆ.

“ಪೊಲೀಸರ ಸೂಚನೆಯಂತೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಇದೆಲ್ಲವೂ ವಿರೋಧ ಪಕ್ಷಗಳನ್ನು ಸಂಪೂರ್ಣವಾಗಿ ನಾಶಮಾಡಲು ಮತ್ತು ನಮ್ಮ ಧ್ವನಿಯನ್ನು ಅಡಗಿಸಲು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಪಿತೂರಿಯಾಗಿದೆ. ನಾವು ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...