Homeಮುಖಪುಟಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು - ಜಾಮೀನು ಮಂಜೂರು

ಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು – ಜಾಮೀನು ಮಂಜೂರು

ಇದೇ ಹೈದರಾಬಾದ್‌ನಲ್ಲಿ 2019ರಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿತ್ತು!

- Advertisement -
- Advertisement -

ಹೈದರಾಬಾದ್‌ನಲ್ಲಿ ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ರಾಜಕಾರಣಿಗಳು ಮತ್ತು ಪ್ರಭಾವಿಗಳ ಪುತ್ರರು ಸೇರಿ ನಡೆಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಅಪ್ರಾಪ್ತರು ಎಂದು ಪರಿಗಣಿಸಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು. 18 ವರ್ಷದ ವಯಸ್ಕ ಆರೋಪಿ ಸದುದ್ದೀನ್ ಮಲಿಕ್ ಸೇರಿದಂತೆ ಮೊದಲ ಐವರು ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ, ಅಪಹರಣ, ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು ಮತ್ತು POCSO ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿತ್ತು.

ಪ್ರಕರಣದಲ್ಲಿ ಎಲ್ಲಾ ಐದು ಆರೋಪಿಗಳು ಕಿರಿಯರು 16 ಮತ್ತು 18 ವರ್ಷಗಳ ನಡುವೆ ಇದ್ದಾರೆ. ಅವರಲ್ಲಿ ಒಬ್ಬ ಆರೋಪಿಗೆ 18 ವರ್ಷ ತುಂಬಲು ಕೇವಲ ಒಂದು ತಿಂಗಳ ಕಡಿಮೆಯಿದೆ. ಇವರೆಲ್ಲರೂ ಪ್ರಭಾವಿ ರಾಜಕೀಯ ಕುಟುಂಬಗಳಿಂದ ಬಂದವರು ಅಥವಾ ಪ್ರಬಲ ರಾಜಕೀಯ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಇದರಲ್ಲಿ 18 ವರ್ಷದೊಳಗಿನ ಐವರು ಆರೋಪಿಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಒತ್ತಾಯಿಸಿದ್ದರು. ಇದರಿಂದಾಗಿ ಈ ಐವರು ಗರಿಷ್ಠ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬುದು ಪೊಲೀಸರ ವಾದವಾಗಿತ್ತು. ಆದರೆ ನ್ಯಾಯಾಲಯವು ಆ ಮನವಿಯನ್ನು ಪುರಸ್ಕರಿಸದ ಕಾರಣ ನಾಲ್ವರನ್ನು ಇಂದು ಬಿಡುಗಡೆ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ

ಮೇ 28 ರಂದು ಈ ಘಟನೆ ನಡೆದಿತ್ತು. 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿತ್ತು.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಆಡಳಿತರೂಢ ಟಿಆರ್‌ಎಸ್ ಪಕ್ಷ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ಸಹ ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಹಿಂದೆ ನಡೆದಿತ್ತು ನಕಲಿ ಎನ್‌ಕೌಂಟರ್

ಇದೇ ಹೈದರಾಬಾದ್‌ನಲ್ಲಿ 2019ರ ನವೆಂಬರ್‌ನಲ್ಲಿ ಪಶುವೈದ್ಯೆಯ ಮೇಲೆ ನಾಲ್ವರು ಅತ್ಯಾಚಾರವೆಸಗಿ ಸುಟ್ಟು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು. ನಾಲ್ವರು ಆರೋಪಿಗಳಾದ ಜೊಲ್ಲು ಶಿವ, ಮೊಹಮ್ಮದ್ ಆರಿಫ್, ಜೊಲ್ಲು ನವೀನ್ ಮತ್ತು ಚೆನ್ನಕೇಶವುಲುರನ್ನು 2019ರ ಡಿಸೆಂಬರ್ 06 ರ ಮುಂಜಾನೆ 03 ಗಂಟೆಯ ಸಮಯದಲ್ಲಿ ಹೈದರಾಬಾದ್ ಪೊಲೀಸರು ಗುಂಡಿಟ್ಟು ಕೊಂದಿದ್ದರು. ಅದನ್ನು ಎನ್‌ಕೌಂಟರ್ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರು.

ಆದರೆ ಸುಪ್ರೀಂಕೋರ್ಟ್ ನೇಮಿಸಿದ ತನಿಖಾ ಆಯೋಗ, ತನ್ನ ವರದಿಯಲ್ಲಿ ಎನ್‌ಕೌಂಟರ್ ಅನ್ನು ‘ನಕಲಿ’ ಎಂದು ಕರೆದಿದೆ. ಆರೋಪಿಗಳನ್ನು “ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಲಾಗಿದೆ” ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳು ಎಂದು ಆಯೋಗವು ಹೇಳಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪಗಳನ್ನು ಹೊರಿಸಲು ಶಿಫಾರಸು ಮಾಡಿದೆ.

ಪ್ರಸ್ತುತ ಅಪ್ರಾಪ್ತ ಬಾಲಕರ ಪ್ರಕರಣದಲ್ಲಿ ಅವರಿಗೆ ಕೇವಲ ಎರಡು ತಿಂಗಳಿನಲ್ಲಿ ಜಾಮೀನು ದೊರೆತು ಬಿಡುಗಡೆಗೊಂಡಿದ್ದಾರೆ. ಅಪ್ರಾಪ್ತರಾದ ಕಾರಣ ಅವರಿಗೆ ಜಾಮೀನು ನೀಡಿರುವುದು ಸಮರ್ಪಕ ಎನಿಸಿಕೊಂಡರು ಅವರು ಪ್ರಭಾವಿ ರಾಜಕೀಯ ಹಿನ್ನೆಲೆಯಿಂದ ಬಂದ ಕಾರಣಕ್ಕೆ ಜಾಮೀನು ದೊರೆತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಪಶು ವೈದ್ಯೆಯ ಪ್ರಕರಣದಲ್ಲಿ ಆರೋಪಿಗಳು ತಳಸಮುದಾಯ, ಬಡವರಾದ ಕಾರಣಕ್ಕೆ ಸಮರ್ಪಕ ವಿಚಾರಣೆ ಸಹ ನಡೆಸದೇ 10 ದಿನಗಳಲ್ಲಿಯೇ ಕೊಂದು ಹಾಕಲಾಯಿತು. ಇದೇ ವಿಷಯವನ್ನು ಆಧರಿಸಿ ಮಲೆಯಾಳಂನಲ್ಲಿ ಜನಗಣಮನ ಎಂಬ ಸಿನಿಮಾ ಸಹ ತಯಾರಾಗಿ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...