Homeಕರ್ನಾಟಕಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಿಸಿ: ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ‘ಜನೋತ್ಸವ’ ಮುಂದೂಡಿದ ಸಿಎಂ

ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಿಸಿ: ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ‘ಜನೋತ್ಸವ’ ಮುಂದೂಡಿದ ಸಿಎಂ

- Advertisement -
- Advertisement -

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ತಡರಾತ್ರಿ ಸುದ್ದಿಗೋಷ್ಠಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮ ರದ್ದುಪಡಿಸಿರುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ (ಜುಲೈ 28) ಜನೋತ್ಸವ ಆಯೋಜಿಸಿತ್ತು. ಆದರೆ ಪ್ರವೀಣ್‌ ಕೊಲೆಯ ಬಳಿಕ ಕಾರ್ಯಕರ್ತರು ಅಸಮಾಧಾನಗೊಂಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಡರಾತ್ರಿ 12.30ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದರು. ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಜನೋತ್ಸವವನ್ನು ರದ್ದುಪಡಿಸಲಾಗಿದೆ’ ಎಂದು ತಿಳಿಸಿದರು.

ಬೆಳಿಗ್ಗೆಯಿಂದ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಪ್ರವೀಣ ಹತ್ಯೆ ಹಾಗೂ ನಮ್ಮ ಪಕ್ಷದ ಯುವಕರ ಆಕ್ರೋಶವನ್ನೂ ಗಮನಿಸಿದೆ. ನನ್ನ ಮನಸ್ಸಿಗೂ ತುಂಬಾ ನೋವಾಗಿದೆ. ಬಹಳ ತೊಳಲಾಟದಲ್ಲಿದ್ದೆ.ಹತ್ಯೆಯಾದ ಪ್ರವೀಣ್‌ ಅವರ ತಾಯಿಯ ಆಕ್ರಂದನ ನೋಡಿದ ಬಳಿಕ ಕಾರ್ಯಕ್ರಮ ರದ್ದುಪಡಿಸಲು ತೀರ್ಮಾನಿಸಿದೆ. ಜನೋತ್ಸವ ಮಾಡಲು ನನ್ನ ಮನಃಸಾಕ್ಷಿ ಒಪ್ಪಲಿಲ್ಲ. ಹಾಗಾಗಿ ಮುಂದೂಡಲು ತೀರ್ಮಾನಿಸಿದೆ. ಪತ್ರಿಕಾಗೋಷ್ಠಿಗೆ ಬರುವ ಮುನ್ನ ನಮ್ಮ ಪಕ್ಷದ ಅಧ್ಯಕ್ಷರಾದ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖರಿಗೆ ಈ ಮಾಹಿತಿಯನ್ನು ನೀಡಲಾಗಿದೆ ಎಂದಿದ್ದಾರೆ.

ಜನೋತ್ಸವ ನಡೆಸುವ ಮೂಲಕ ನಮ್ಮ ಸರ್ಕಾರ ಜನಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು, ಮುಂದಿನ ಯೋಜನೆಗಳನ್ನು ಘೋಷಿಸಬೇಕು ಎಂದು ನಿಶ್ಚಯಿಸಿದ್ದೆವು. ನಮ್ಮ ಪಕ್ಷದ ಅಮಾಯಕ ಹಾಗೂ ನಿಷ್ಠಾವಂತ ಕಾರ್ಯಕರ್ತ ಪ್ರವೀಣರ ಹತ್ಯೆಯ ನೋವು  ಹಾಗೂ ಯುವ ಸಮುದಾಯದ ಭಾವನೆಯನ್ನು ಗಮನಿಸಿದೆ ಎಂದು ಹೇಳಿದ್ದಾರೆ.

ಯುವಕರು, ದಲಿತರು, ಹಿಂದುಳಿದವರು ಹಾಗೂ ಮಹಿಳೆಯರ ಪರವಾದ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ. ದೊಡ್ಡಬಳ್ಳಾಪುರ ಹಾಗೂ ವಿಧಾನಸೌಧದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಆದರೆ, ಜನಪರ ಕಾರ್ಯಕ್ರಮ-ಯೋಜನೆಗಳನ್ನು ಮಾಧ್ಯಮದವರ ಮೂಲಕ ಪ್ರಕಟಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಜನೋತ್ಸವ ರದ್ದಾಗಿರುವುದಕ್ಕೆ ಸಚಿವರಾದ ಸುಧಾಕರ್, ಮುನಿರತ್ನ, ನಾಗರಾಜ್ ಹಾಗೂ ಎಲ್ಲ ಕಾರ್ಯಕರ್ತರ ಕ್ಷಮೆ ಕೇಳುತ್ತೇನೆ ಎಂದಿರುವ ಅವರು, ಪ್ರವೀಣ್‌ ಹತ್ಯೆಯ ಆರೋಪಿಗಳನ್ನು ಸದೆಬಡಿಯಲು ಸರ್ಕಾರ ಬದ್ಧವಾಗಿದ್ದು, ಮಾಮೂಲಾದ ಕ್ರಮಗಳ ಹೊರತಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇಂಥ ಕೃತ್ಯದಲ್ಲಿ ಭಾಗಿಯಾದ ಸಂಘಟನೆಗಳನ್ನು ನಾಶ ಮಾಡಲು, ಈಗ ಇರುವ ವ್ಯವಸ್ಥೆಯ ಹೊರತಾಗಿ ವಿಶೇಷವಾದ ಭಯೋತ್ಪಾದನಾ ನಿಗ್ರಹ ಕಮಾಂಡೋವನ್ನು ರಚಿಸಲು ನಾವು ಉದ್ದೇಶಿಸಿದ್ದೇವೆ ಎಂದಿದ್ದಾರೆ.

ಕಾರ್ಯಕರ್ತರ ಆಕ್ರೋಶ

ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ ವೇಳೆ ಪ್ರತಿಭಟನೆಯನ್ನು ಎದುರಿಸಬೇಕಾಯಿತು.

ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದ್ದರು. ‘ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ’ ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದರು.

ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ್ದರು.

ಕಾರನ್ನು ಉರುಳಿಸಲೂ ಕಾರ್ಯಕರ್ತರು ಯತ್ನಿಸಿದರು. ಟೈರ್​ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆದರು.

ಇದನ್ನೂ ಓದಿರಿ: ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಹಲವು ಕಡೆ ಪದಾಧಿಕಾರಿಗಳು ಬಿಜೆಪಿಗೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇದರಿಂದ ಪಕ್ಷವು ಇಕ್ಕಟ್ಟಿಗೆ ಸಿಲುಕಿದಂತೆ ಭಾಸವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...