Homeಮುಖಪುಟರಾಷ್ಟ್ರಪತ್ನಿ ಹೇಳಿಕೆಗೆ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚಿಸಿ, ಸ್ಪಷ್ಟನೆ ನೀಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ

ರಾಷ್ಟ್ರಪತ್ನಿ ಹೇಳಿಕೆಗೆ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚಿಸಿ, ಸ್ಪಷ್ಟನೆ ನೀಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ

- Advertisement -
- Advertisement -

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಯವರು ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಷ್ಟ್ರಪತ್ನಿ ಪದ ಬಳಸಿದ್ದಕ್ಕೆ ಬಿಜೆಪಿಯು ಭಾರೀ ಪ್ರತಿಭಟನೆ ನಡೆಸಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ದೊಡ್ಡ ಗದ್ದಲ ಸೃಷ್ಟಿಯಾಗಿದ್ದು, ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದೆ.

ಬಿಜೆಪಿಯ ಮಹಿಳಾ ಸಚಿವರು ಮತ್ತು ಸಂಸದರ ನೇತೃತ್ವದಲ್ಲಿ ಎರಡೂ ಸದನಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಧ್ಯಾಹ್ನದವರೆಗೂ ಸದನವನ್ನು ಮುಂದೂಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿಯವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಯವರು ಕ್ಷಮೆಯಾಚಿಸಿದ್ದು, ಅಚಾನಕ್‌ ಆಗಿ ಬಾಯ್ತಪ್ಪಿನಿಂದಾಗಿ ಆ ಪದ ಬಳಸಿದ್ದರ ಕುರಿತು ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯು ಬೆಲೆ ಏರಿಕೆಯ ವಿರುದ್ಧದ ಪ್ರತಿಭಟನೆಯನ್ನು ದಿಕ್ಕು ತಪ್ಪಿಸಲು ಈ ವಿಷಯವನ್ನು ವಿನಾಕಾರಣ ವಿವಾದವಾಗಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶ ನೀಡಿರುವ ಅವರು, “ಭಾರತದ ಅಧ್ಯಕ್ಷರು ಅವರು ಬ್ರಾಹ್ಮಣರಾಗಿರಲಿ ಅಥವಾ ಬುಡಕಟ್ಟು ಸಮುದಾಯದವರಾಗಿರಲಿ ರಾಷ್ಟ್ರಪತಿಯೇ ಆಗಿರುತ್ತಾರೆ. ಆ ಹುದ್ದೆಗೆ ಮಹಾನ್ ಗೌರವ ಮತ್ತು ಹೆಮ್ಮೆ ಇದೆ. ನಿನ್ನೆ ನಾವು ಪ್ರತಿಭಟನೆ ನಡೆಸುತ್ತಿದ್ದಾಗ ಪತ್ರಕರ್ತರು ನಮ್ಮ ಮುಂದಿನ ನಡೆ ಬಗ್ಗೆ ಕೇಳಿದರು. ಆಗ ನಾನು ‘ನಾವು ರಾಷ್ಟ್ರಪತಿ ಭವನಕ್ಕೆ ಹೋಗಿ ರಾಷ್ಟ್ರಪತಿಯವರನ್ನು ಭೇಟಿ ಮಾಡುತ್ತೇವೆ’ ಎಂದು ಹೇಳಿದೆ. ಆಗ ಬಾಯಿ ತಪ್ಪಿ ರಾಷ್ಟ್ರಪತ್ನಿ ಎಂದು ಒಮ್ಮೆ ಉಲ್ಲೇಖಿಸಿದೆ. ಕೂಡಲೇ ತಪ್ಪನ್ನು ಸರಿಪಡಿಸಿಕೊಂಡೆ ಮತ್ತು ಇದನ್ನು ಪ್ರಸಾರ ಮಾಡಬೇಡಿ ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದೆ. ಆದರೂ ಪ್ರಸಾರ ಮಾಡಿದರು ಮತ್ತು ಬಿಜೆಪಿಯವರು ಅದನ್ನು ದೊಡ್ಡ ವಿಷಯ ಮಾಡುತ್ತಿದ್ದಾರೆ” ಎಂದಿದ್ದಾರೆ.

ಒಂದು ಬಾರಿ ಮಾತ್ರ ಬಾಯ್ತಪ್ಪಿನಿಂದ ಆಡಿದ ಒಂದು ಪದವನ್ನು ಹಿಡಿದುಕೊಂಡು ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ. ಏಕೆಂದರೆ ಅವರಿಗೆ ನಮ್ಮ ವಿರುದ್ಧ ಹೋರಾಡಲು ಯಾವುದೇ ಇಶ್ಯೂ ಇಲ್ಲ. ಹಾಗಾಗಿ ಈ ವಿಷಯಕ್ಕೆ ಮಸಾಲೆ ಸೇರಿಸುತ್ತಿದ್ದಾರೆ ಎಂದು ಚೌಧರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ‘ಸಂಸತ್ತಿನಲ್ಲಿ ಮತ್ತು ಭಾರತದ ಬೀದಿಗಳಲ್ಲಿ, ಭಾರತದ ಪ್ರತಿಯೊಬ್ಬ ನಾಗರಿಕರಲ್ಲಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು “ಚೌಧರಿ ಈಗಾಗಲೇ ಕ್ಷಮೆ ಯಾಚಿಸಿದ್ದಾರೆ” ಎಂದಿದ್ದಾರೆ. ಅಲ್ಲದೆ ಸದನದಲ್ಲಿ ಭಾರೀ ಗದ್ದಲ ನಡೆಯುತ್ತಿದ್ದಾಗ ಬಿಜೆಪಿ ಎಂಪಿ ರಮಾ ದೇವಿಯವರ ಬಳಿ ತೆರಳಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಂಗಾಳ ಸಚಿವನ ಸಹಾಯಕಿಯ ಮನೆಗಳಿಂದ 50 ಕೋಟಿ ರೂ ಹಣ, 5 ಕೆಜಿ ಚಿನ್ನ ವಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...