Homeಮುಖಪುಟಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಮಂಕಿಪಾಕ್ಸ್: ಲಸಿಕೆ ಮತ್ತು ರೋಗನಿರ್ಣಯ ಕಿಟ್‌‌ ಅಭಿವೃದ್ಧಿಗೆ ಬಿಡ್‌ ಆಹ್ವಾನಿಸಿದ ICMR

ಸೋಂಕಿನ ವಿರುದ್ಧ ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ

- Advertisement -
- Advertisement -

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಬುಧವಾರ ಮಂಕಿಪಾಕ್ಸ್ ಲಸಿಕೆ ತಯಾರಿಸಲು ಮತ್ತು ರೋಗವನ್ನು ಪತ್ತೆಹಚ್ಚುವ ಕಿಟ್‌ಗಳನ್ನು ಅಭಿವೃದ್ಧಿಪಡಿಸಲು ಬಿಡ್‌ಗಳನ್ನು ಆಹ್ವಾನಿಸಿದೆ. ಈ ಘೋಷಣೆಯ ನಂತರ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯು ಮಂಕಿಪಾಕ್ಸ್ ವೈರಸ್‌ನ ತಳಿಯನ್ನು ಯಶಸ್ವಿಯಾಗಿ ಪ್ರತ್ಯೇಕಿಸಿರುವುದಾಗಿ ಹೇಳಿದೆ.

ಭಾರತದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮೂರು ಕೇರಳದಲ್ಲಿ ವರದಿಯಾಗಿದ್ದು, ಒಂದು ಪ್ರಕರಣ ನವದೆಹಲಿಯಲ್ಲಿ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಗ್ಲೇಂಡ್‌ನ ರಾಷ್ಟ್ರೀಯ ಆರೋಗ್ಯ ಸೇವೆಯ ಪ್ರಕಾರ, ಮಂಕಿಪಾಕ್ಸ್ ಅಪರೂಪದ ಸೋಂಕಾಗಿದ್ದು, ಇದು ಪಶ್ಚಿಮ ಅಥವಾ ಮಧ್ಯ ಆಫ್ರಿಕಾದ ಕೆಲವು ಭಾಗಗಳಲ್ಲಿ ದಂಶಕಗಳು (ಇಲಿ, ಅಳಿಲು, ಮುಳ್ಳುಹಂದಿ, ಮೊಲದ ರೀತಿಯ ಪ್ರಬೇಧಗಳು-Rodents) ಮತ್ತು ಸಸ್ತನಿಗಳಂತಹ ಕಾಡು ಪ್ರಾಣಿಗಳ ಮೂಲಕ ಹರಡುತ್ತದೆ.

ಈ ವೈರಸ್ ಸೌಮ್ಯವಾದ ಅನಾರೋಗ್ಯವನ್ನು ಉಂಟುಮಾಡುತ್ತದೆ ಮತ್ತು ಜ್ವರ, ತಲೆನೋವು, ಬೆನ್ನುನೋವು ಮತ್ತು ಚಿಕನ್‌‌ ಫಾಕ್ಸ್‌ ತರಹದ ಗುಳ್ಳೆಗಳಂತಹ ರೋಗಲಕ್ಷಣಗಳನ್ನು ಉಂಟುಮಾಡಬಹುದಾಗಿದೆ. ಸೋಂಕಿತ ವ್ಯಕ್ತಿಯ ಮಂಕಿಪಾಕ್ಸ್ ಚರ್ಮದ ಗುಳ್ಳೆಗಳನ್ನು ಮುಟ್ಟಿದರೆ ಅಥವಾ ರೋಗದಿಂದ ಬಳಲುತ್ತಿರುವವರ ಬಟ್ಟೆ, ಬೆಡ್ ಶೀಟ್ ಅಥವಾ ಟವೆಲ್ ಅನ್ನು ಬಳಸಿದರೆ ಸೋಂಕು ಹರಡಬಹುದು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು, ಅಂತಿಮ ಉತ್ಪನ್ನದ ನಿವ್ವಳ ಮಾರಾಟದಲ್ಲಿ 5% ಕ್ಕಿಂತ ಕಡಿಮೆಯಿಲ್ಲದ ರಾಯಧನದ ಆಧಾರದ ಮೇಲೆ ಅನುಭವಿ ಲಸಿಕೆ ಮತ್ತು ರೋಗ ಪತ್ತೆ ಹಚ್ಚುವ ತಯಾರಕರೊಂದಿಗೆ ತಾವು ಸಹಕರಿಸಲು ಸಿದ್ಧವಾಗಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ರೋಗನಿರ್ಣಯ ಕಿಟ್‌‌ ಅಭಿವೃದ್ಧಿಪಡಿಸಲು ಮತ್ತು ಮೌಲ್ಯೀಕರಿಸಲು ತಯಾರಕರಿಗೆ ಇದು ಸಹಾಯ ಮಾಡುತ್ತದೆ ಎಂದು ಸಂಶೋಧನಾ ಸಂಸ್ಥೆ ಹೇಳಿದೆ.

ಸಾಮೂಹಿಕ ವ್ಯಾಕ್ಸಿನೇಷನ್ ಅಗತ್ಯವಿಲ್ಲ: WHO

ಮಂಕಿಪಾಕ್ಸ್ ವಿರುದ್ಧ ದೇಶಗಳು ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ರೋಗ ಪತ್ತೆ ಮತ್ತು ತಡೆಗಟ್ಟುವಿಕೆಗೆ ಸರ್ಕಾರಗಳು ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

“ಸಿಡುಬು ವಿರುದ್ಧ ಲಭ್ಯವಿರುವ ಲಸಿಕೆಯು ಮಂಗನ ಕಾಯಿಲೆಯ ವಿರುದ್ಧ ಕಾರ್ಯನಿರ್ವಹಿಸುತ್ತದೆಯೇ ಎಂಬ ಸಂಪೂರ್ಣ ಪರಿಣಾಮಕಾರಿತ್ವದ ಮಾಹಿತಿಯನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಸೌಮ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿ, ಪುರುಷರೊಂದಿಗೆ ಲೈಂಗಿಕ ಸಂಬಂಧ ಇರಿಸಿಕೊಂಡಿರುವ ಪುರುಷರು ವೈರಸ್‌ನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ ಎಂದು ಅವರು ಹೇಳಿದ್ದಾರೆ. ಇಂತಹ ಪುರುಷರು ತಮ್ಮ ಲೈಂಗಿಕ ಸಂಗಾತಿಗಳನ್ನು ಮಿತಿಗೊಳಿಸಲು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ರಾಜ್ಯ ಸರ್ಕಾರ

“ಪುರುಷರೊಂದಿಗೆ ಲೈಂಗಿಕ ಸಂಬಂಧ ಇಟ್ಟುಕೊಳ್ಳುವ ಪುರುಷರು ಈ ಕ್ಷಣದಲ್ಲಿ ನಿಮ್ಮ ಲೈಂಗಿಕ ಸಂಗಾತಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು, ಹೊಸ ಪುರುಷ ಸಂಗಾತಿಗಳೊಂದಿಗೆ ಲೈಂಗಿಕ ಸಂಪರ್ಕ ಏರ್ಪಡುವ ಮುನ್ನ ಮರುಪರಿಶೀಲಿಸಬೇಕು” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...