Homeರಾಜಕೀಯ‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು “ರಾಷ್ಟ್ರಪತ್ನಿ” ಎಂದು ಕರೆದಿದ್ದಕ್ಕಾಗಿ ಗುರುವಾರ ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿವೇಶನ ಮುಂದೂಡಿದ ನಂತರ ಬಿಜೆಪಿ ಸಂಸದೆಯೊಬ್ಬರ ಜೊತೆಗೆ ಮಾತನಾಡುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿಯವರೊಂದಿಗೆ “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸಚಿವೆ ಸ್ಮೃತಿ ಇರಾನಿ ಮತ್ತು ಇತರ ಬಿಜೆಪಿ ಸಂಸದರು ಸೋನಿಯಾ ಗಾಂಧಿಯನ್ನು ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸಂಸದರು ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೋಕಸಭೆಯ ಅಧಿವೇಶನವನ್ನು ಮುಂದೂಡಲಾಗಿತ್ತು. ಈ ನಡುವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಸಂಸದರು ‘‘ಸೋನಿಯಾ ಗಾಂಧಿ ಕ್ಷಮೆಯಾಚಿಸಿ’’ ಎಂದು ಆಗ್ರಹಿಸಿದ್ದರು. “ಸೋನಿಯಾ ಗಾಂಧಿ ಅವರೇ ನೀವು ದ್ರೌಪದಿ ಮುರ್ಮು ಅವರಿಗೆ ಆಗಿರುವ ಅವಮಾನವನ್ನು ಅನುಮೋದಿಸಿದ್ದೀರಿ” ಎಂದು ಸ್ಮೃತಿ ಇರಾನಿ ಹೇಳಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

ಪ್ರತಿಭಟನೆಯ ಕಾರಣಕ್ಕೆ ಸದನವನ್ನು ಮುಂದೂಡಿದ ನಂತರ, ಸೋನಿಯಾ ಗಾಂಧಿ ಅವರು ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ ಮಾತನಾಡಲು ನಿರ್ಧರಿಸಿ, ಇಬ್ಬರು ಕಾಂಗ್ರೆಸ್ ಸಂಸದರು ತೆರಳಿದರು. ಸದನದ ಮಹಡಿಯನ್ನು ದಾಟಿ ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ, “ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನನ್ನ ತಪ್ಪೇನು?” ಎಂದು ಕೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿ, “ಮೇಡಂ, ನಾನು ನಿಮಗೆ ಸಹಾಯ ಮಾಡಬಹುದೇ? ನಿಮ್ಮ ಹೆಸರನ್ನು ತೆಗೆದುಕೊಂಡಿದ್ದು ನಾನು” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ತಿರುಗೇಟು ನೀಡಿದ್ದಾರೆ.

ಸ್ಮೃತಿ ಇರಾನಿ ಅವರು ‘ಬೆರಳು’ ಮಾಡುತ್ತಾ ರಮಾದೇವಿ ಬಳಿ ಬಂದಾಗ ಸೋನಿಯಾ ಗಾಂಧಿ ಅವರು ಸಭ್ಯ ರೀತಿಯಲ್ಲಿ ಸಂಭಾಷಣೆ ನಡೆಸುತ್ತಿದ್ದರು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಈ ವೇಳೆ ಸ್ಮೃತಿ ಇರಾನಿ ಅವರು, “ನಿಮಗೆ ಎಷ್ಟು ಧೈರ್ಯ, ಈ ರೀತಿ ವರ್ತಿಸಬೇಡಿ, ಇದು ನಿಮ್ಮ ಪಕ್ಷದ ಕಚೇರಿಯಲ್ಲ…” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ಕಾಂಗ್ರೆಸ್ ನಾಯಕರೊಬ್ಬರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

“ಸೋನಿಯಾ ಗಾಂಧಿ ಅವರು ಸ್ಮೃತಿ ಇರಾನಿ ಅವರಿಗೆ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎಂದು ಎರಡು ಬಾರಿ ಹೇಳಿದ್ದಾರೆ. ಆದರೂ ಅವರು ಸೋನಿಯಾ ಗಾಂಧಿ ಅವರನ್ನು ಸುತ್ತುವರೆದಿದ್ದರು ಮತ್ತು ಅಲ್ಲಿನ ಪರಿಸ್ಥಿತಿ ಗಂಭೀರವಾಯಿತು” ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದರಾದ ಮಹುವಾ ಮೊಯಿತ್ರಾ ಮತ್ತು ಅಪರೂಪಾ ಪೊದ್ದಾರ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಸದಸ್ಯರ ನಡುವಿನಿಂದ ಸೋನಿಯಾ ಗಾಂಧಿಯವರನ್ನು ದೂರ ಸೆಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದರ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು ಎಂದು ಅದು ಹೇಳಿದೆ.

ರಮಾ ದೇವಿ ಅವರು ತನಗೆ ತಿಳಿದಿರುವುದರಿಂದ ಅವರೊಂದಿಗೆ ಮಾತನಾಡುತ್ತಿದ್ದೆ ಎಂದು ಸೋನಿಯಾ ಗಾಂಧಿ ಅವರು ನಂತರ ಹೇಳಿದ್ದಾರೆ. ‘‘ನಾನು ಭಯ ಪಟ್ಟುಕೊಂಡಿಲ್ಲ. ನನಗೆ ರಮಾದೇವಿಯ ಪರಿಚಯವಿದೆ, ಹಾಗಾಗಿ ನಾನು ‘ಅಧೀರ್ ಕ್ಷಮೆಯಾಚಿಸಿದ್ದಾರೆ ಆದರೆ ನೀವು ಯಾಕೆ ನನ್ನ ಮೇಲೆ ದಾಳಿ ಮಾಡುತ್ತಿದ್ದೀರಿ?’ ಎಂದು ಅವರೊಂದಿಗೆ ಹೇಳಲು ಹೋದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ ಬೆಂಕಿ

ಸಂಸದೆ ಮಹುವಾ ಮೊಯಿತ್ರಾ ಅವರು ಘಟನೆಯನ್ನು, “ಸೋನಿಯಾ ಗಾಂಧಿಯವರ ಮೇಲೆ ನಡೆದ ಸಂಯೋಜಿತ ದಾಳಿ” ಎಂದು ಕರೆದಿದ್ದಾರೆ.

ಸ್ಮೃತಿ ಇರಾನಿ ಅವರು ತಮ್ಮ ಪಕ್ಷದ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

“ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಇಂದು ಲೋಕಸಭೆಯಲ್ಲಿ ಅಸಭ್ಯವಾಗಿ ಮತ್ತು ನಿಂದನಾತ್ಮಕವಾಗಿ ವರ್ತಿಸಿದ್ದಾರೆ! ಆದರೆ ಸ್ಪೀಕರ್ ಇದನ್ನು ಖಂಡಿಸುತ್ತಾರೆಯೇ? ನಿಯಮಗಳು ವಿರೋಧ ಪಕ್ಷಕ್ಕೆ ಮಾತ್ರ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಆದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘಟನೆಯ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ, “ಸೋನಿಯಾ ಗಾಂಧಿ ನಮ್ಮ ಹಿರಿಯ ನಾಯಕಿ ರಮಾದೇವಿ ಬಳಿಗೆ ಬಂದಾಗ, ಅಲ್ಲಿ ಏನಾಗುತ್ತಿದೆ ಎಂದು ತಿಳಿಯಲು ನಮ್ಮ ಕೆಲವು ಸಂಸದರು ಹೋಗಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು, ನೀವು ನನ್ನೊಂದಿಗೆ ಮಾತನಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಮತ್ತು ಕೆಲವು ಪುರುಷ ಬಿಜೆಪಿ ಸಂಸದರು ಸಹ ಸೋನಿಯಾ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದರಾದ ಗೀತಾ ಕೋರಾ ಮತ್ತು ಜ್ಯೋತ್ಸ್ನಾ ಮಹಂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...