Homeಕರ್ನಾಟಕಶ್ರದ್ಧಾಂಜಲಿ: ದುರಿತ ಕಾಲದ ಎಚ್ಚರದ ದನಿಯೊಂದು ಕರಗಿ...

ಶ್ರದ್ಧಾಂಜಲಿ: ದುರಿತ ಕಾಲದ ಎಚ್ಚರದ ದನಿಯೊಂದು ಕರಗಿ…

- Advertisement -
- Advertisement -

ಜಿ ರಾಜಶೇಖರ್‌ರನ್ನು ನಾನು ಯಾವತ್ತೂ ಭೇಟಿಯಾಗಿಲ್ಲ. ಅವಕಾಶ ಬರಲಿಲ್ಲ. ಅಥವಾ ಅವಕಾಶ ಮಾಡಿಕೊಳ್ಳಲಿಲ್ಲ. ಆದರೆ ಜಿ ರಾಜಶೇಖರ್ ಹತ್ತಿರ ಅನ್ನಿಸುತ್ತಿದ್ದರು. ಪರಿಚಿತರು ಅನ್ನಿಸುತ್ತಿತ್ತು. ಅವರ ಬಿಡಿ ಬರಹಗಳನ್ನು, ಲೇಖನಗಳನ್ನು ಓದಿಕೊಂಡ ನನಗೆ ಮತ್ತು ನನ್ನಂತಹ ಅನೇಕರಿಗೆ ಹೀಗೆ ಅನ್ನಿಸಿರುವುದರಲ್ಲಿ ಅಚ್ಚರಿಯೇನಾದರೂ ಉಂಟೆ. ಚೆ ಗುವೆರಾ ಹೇಳುತ್ತಾನಲ್ಲ, “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ನಿನ್ನ ಎದೆ ಕಂಪಿಸಿದರೆ ನೀನು ನನ್ನ ಸಂಗಾತಿ”, ಹಾಗೇ ಅನ್ಯಾಯವೊ, ಅಹಿತಕರವಾದದ್ದೊ, ಜೀವವಿರೋಧಿಯಾದದ್ದೊ ನಡೆದಾಗ ಮಾತನಾಡುವವರು ನಮ್ಮದೆ ಮಾತನ್ನು ಮಾರ್ದನಿಸಿದಂತೆ ಇರುತ್ತದೆ ನೋಡಿ, ಹಾಗೇ ಅವರು ನಮ್ಮವರಾಗಿಬಿಡುತ್ತಾರೆ.

ಎಡಪಂಥೀಯ ಸಂಘಟನೆಯೊಳಗಿದ್ದು, ಅದರ ತಪ್ಪುಗಳನ್ನು ಕಟುವಾಗಿ ಟೀಕಿಸಬಲ್ಲವರಾಗಿದ್ದರು ಎಂಬುದೇ ಜಿಆರ್ ಬದ್ಧತೆ ಮತ್ತು ನ್ಯಾಯಕ್ಕೆ, ಸತ್ಯಕ್ಕೆ ಹೊರತಾದ ಚೌಕಟ್ಟುಗಳು ಅವರ ಬಳಿ ಸುಳಿಯಲಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಶಾಲೆಯ ಮೇಷ್ಟ್ರಾಗಿ, ವಿಮಾ ಸಂಸ್ಥೆಯ ಉದ್ಯೋಗಿಯಾಗಿ ಜನರೊಂದಿಗೆ ಬೆರೆತ ಜಿಆರ್ ಜೀವಪರ ಜೀವವಾಗಿ ಅಸಂಖ್ಯರ ಪ್ರೀತಿಗೆ ಪಾತ್ರರಾಗಿದ್ದನ್ನು ನಾನು ತಿಳಿದೆ.

ಅವರು ನಿಧನರಾದಾಗ ಫೇಸ್‌ಬುಕ್ಕಿನಲ್ಲಿ ಬಹಳಷ್ಟು ಮಂದಿ ಅವರನ್ನು ನೆನೆದು ತಮ್ಮ ನೆನಪು, ವಿದಾಯದ ಸಂಕಟಗಳನ್ನು ಹಂಚಿಕೊಂಡರು. ಕರಾವಳಿಯ ಕೋಮುವಾದದ ಬಗ್ಗೆ ಹಲವರು ಪ್ರಸ್ತಾಪಿಸಿದ್ದನ್ನು ಓದಿದೆ. ನನಗೂ ಜಿಆರ್ ಹೆಚ್ಚು ಪರಿಚಯವಾಗಿದ್ದು ಅದೇ ಕಾರಣಕ್ಕೆ. ದಕ್ಷಿಣ ಕನ್ನಡದವರೇ ಆದ ಹಿರಿಯ ಪತ್ರಕರ್ತರೊಂದಿಗೆ ಮಾತನಾಡುತ್ತಾ, ’ನೀವೂ ಕೋಮುವಾದದ ಬಗ್ಗೆ ಗಟ್ಟಿಯಾಗಿ ಮಾತನಾಡಿದಿರಿ. ಅವರೂ ಕೋಮುವಾದ ವಿರೋಧಿಸಿದವರು’ ಎಂದು ಮೆಲುಕು ಹಾಕಿದೆ.

ಕೋಮುವಾದದ ಬಗ್ಗೆ ಈಗಂತೂ ಮಾತನಾಡಿ ಅರಗಿಸಿಕೊಳ್ಳುವುದು ಸುಲಭವಲ್ಲ. ವ್ಯವಸ್ಥೆಯೇ ಬೇಟೆಗೆ ಸೀಳುನಾಯಿಗಳನ್ನು ಛೂ ಬಿಡುವಷ್ಟು ಪರಿಸ್ಥಿತಿ ಹದಗಟ್ಟಿದೆ. ಆದರೂ ಜಿಆರ್ ಕೋಮುವಾದ ಕುಲುಮೆಯಲ್ಲಿ ನಿಂತು ಕೆಂಡವನ್ನು ಆರಿಸುವ ಛಾತಿ ತೋರಿದರು.

ಕೋಮುವಾದದ ವಿರುದ್ಧ ಹೋರಾಡುತ್ತಾ, ಕೋಮುವಾದಕ್ಕೆ ಜೀವತೆತ್ತ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಕೊಡಿಸುವುದಕ್ಕೆ ಅವರು ಸದಾ ಓಡಾಡಿದ್ದನ್ನು ಕೇಳಿದೆ. ಅವರ ಕೋಮುವಾದದ ಹೋರಾಟ ಬಾಬ್ರಿ ಮಸೀದಿ ಧ್ವಂಸಕಾಲದಿಂದಲೂ ನಡೆಯುತ್ತಾ ಬಂದಿದೆ. ಇದೇ ಕಾರಣಕ್ಕೆ ಅವರು ಲಂಕೇಶ್ ಪತ್ರಿಕೆಗೆ ಬರೆಯುವುದಕ್ಕೂ ಶುರು ಮಾಡಿದ್ದು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಕನ್ನಡದ ಬಹುತೇಕ ಬುದ್ಧಿಜೀವಿಗಳು, ಚಿಂತಕರು ಬಾಯಿಮುಚ್ಚಿಕೊಂಡಿದ್ದಾಗ, ಲಂಕೇಶ್ ದೇಶ ಒಡೆದ ಘಟನೆಯನ್ನು ಖಂಡಿಸಿದ್ದರು ಎಂಬ ಕಾರಣಕ್ಕೆ ಜಿಆರ್ ಅವರ ಪತ್ರಿಕೆಗೆ ಬರೆಯಲಾರಂಭಿಸಿದ್ದರಂತೆ.

ಲಂಕೇಶರಿಗೆ ಜಿಆರ್ ಎಂದರೆ ಅಷ್ಟೇ ಪ್ರೀತಿ. “ನಮ್ಮ ರಾಜಶೇಖರ ಎಷ್ಟು ಒಳ್ಳೆಯ ವಿಚಾರವಂತ. ನಿಷ್ಠುರತೆ ಮತ್ತು ಬದುಕಿನ ಬಗ್ಗೆ ಪ್ರೀತಿಯನ್ನು ಇಟ್ಟುಕೊಂಡ ಆತ ಶ್ರೇಷ್ಠ ಚಿಂತನಕಾರ ಎನ್ನುವುದು ನನಗೆ ಹೆಮ್ಮೆಯನ್ನುಂಟು ಮಾಡಿದೆ” ಎಂದು ಸ್ವತಃ ಲಂಕೇಶ್ ಹೇಳಿದ್ದರಂತೆ. ಆದರೆ ಅದೇ ಲಂಕೇಶ್ ಅವರನ್ನು ಟೀಕಿಸುವುದಕ್ಕೆ ಅವರ ಸ್ನೇಹ ಅಡ್ಡಿಪಡಿಸಿರಲಿಲ್ಲ. ಲಂಕೇಶ್ ಪ್ರಗತಿರಂಗ ಎಂಬ ಪಕ್ಷ ಕಟ್ಟಿ ರಾಜಕೀಯಕ್ಕೆ ಇಳಿದಾಗ ಅದರ ಪ್ರಣಾಳಿಕೆಯನ್ನು ಗಂಭೀರವಾಗಿ ವಿಮರ್ಶಿಸಿದ್ದರು ಜಿಆರ್.

ಸದಾ ಕಾಲ ತಮ್ಮನ್ನು ಕೇಳಿಕೊಳ್ಳುತ್ತಾ, ಸ್ಥಾಪಿತ ಮೌಲ್ಯಗಳನ್ನು ಪ್ರಶ್ನಿಸುತ್ತಾ ತತ್ವಕ್ಕಿಂತ ಜೀವಕ್ಕೆ ಬೆಲೆ ಕಟ್ಟಿ ಬದುಕಿದವರು ಜಿಆರ್ ಎಂಬುದನ್ನು ಅವರ ಬದುಕೇ ಹೇಳುತ್ತದೆ. ಕೋಮುವಾದದ ವಿರುದ್ಧದ ಹೋರಾಟದ ಜೊತೆಜೊತೆಗೇ ಅವರು ಪ್ರಭುತ್ವದ ಕ್ರೌರ್ಯಗಳನ್ನು ಟೀಕಿಸಿದ್ದಾರೆ. ಆದರೆ ಅವರ ಆತಂಕ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೋಮುವಾದದ ಕಡೆಗಿತ್ತು. ಈ ದೇಶದಲ್ಲಿ ಹಿಂದೂ ಕೋಮುವಾದ ಅಧಿಕಾರ ಹಿಡಿಯಬಹುದು ಎಂದು ಹೇಳಿದ್ದವರಲ್ಲಿ ಜಿಆರ್ ಕೂಡ ಒಬ್ಬರು. ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ನುಸುಳಿದ್ದಾಗ ಕನಲಿ ಎಚ್ಚರಿಸಿದವರು. ಜಿಆರ್ ಗಟ್ಟಿಯಾಗಿ ಕೋಮುವಾದದ ಕುರಿತು ಮಾತನಾಡುತ್ತಾ ಬಂದಿದ್ದರಿಂದಲೇ ಜೀವಪರವಾಗಿ ಮಿಡಿಯುವ ಯುವಪಡೆಯೊಂದು ಬೆಳೆದು
ನಿಂತಿದ್ದು ಎನ್ನುತ್ತಿದ್ದರು ಅಲ್ಲಿಯ ಗೆಳೆಯರು.

ಎಪ್ಪತ್ತರ ದಶಕದಿಂದ ಬೀದಿ ಹೋರಾಟಗಳಲ್ಲಿ ಭಾಗವಹಿಸುತ್ತಾ ಅದೆಷ್ಟು ಮನಸ್ಸುಗಳನ್ನು ಹುರಿದುಂಬಿಸುತ್ತಾ ಬಂದಿದ್ದಾರೊ ಲೆಕ್ಕವಿಲ್ಲ. “ಸಂವಿಧಾನವನ್ನು ಬದಲಾಯಿಸಲು ಅದನ್ನೆನು ಜನಿವಾರವೆ?” ಎಂಬ ಘೋಷಣೆಯ ಪ್ಲಕಾರ್ಡ್ ಹಿಡಿದು ನಿಂತ ಜಿಆರ್ ಅವರ ಕುಬ್ಜ ದೇಹ ಎಷ್ಟು ಅಗಾಧ ಆತ್ಮಶಕ್ತಿಯನ್ನು ಹೊಂದಿತ್ತು ಮತ್ತು ಅದು ಎಚ್ಚರವಾಗಿ ಕರಾವಳಿಯನ್ನು, ಈ ನಾಡನ್ನು ಹೇಗೆ ಆವರಿಸಿಕೊಂಡಿರಬಹುದು ಎಂಬುದು ಸಾಮಾನ್ಯದ ಬೆರಗಲ್ಲ.

ಎಲ್ಲೇ ಏನೇ ಗಲಭೆ, ಅಹಿತಕರ ಘಟನೆಗಳು ನಡೆದರೆ ಅಲ್ಲಿಗೆ ಖುದ್ದು ಭೇಟಿ ನೀಡಿ ಸತ್ಯಶೋಧನೆ ನಡೆಸಿ ಸಿದ್ಧಪಡಿಸಿದ ವರದಿಗಳು ಬಹುಶಃ ಯಾವ ಪತ್ರಕರ್ತನೂ, ಸತ್ಯಶೋಧನಾ ತಂಡಗಳು ಮಾಡಿರಲಾರವು. ಸುರತ್ಕಲ್ ಗಲಭೆ, ಮಂಗಳೂರಿನ ಪಬ್‌ದಾಳಿ, ಹೋಮ್‌ಸ್ಟೇ ದಾಳಿ, ಕುಂದಾಪುರದಲ್ಲಿ ನಡೆದ ಗಲಭೆ, ಆದಿ ಉಡುಪಿಯ ಬೆತ್ತಲೆ ಪ್ರಕರಣ ಹೀಗೆ ಹಲವು ಘಟನೆಗಳ ಹಿಂದಿನ ಅಮಾನವೀಯ, ಜೀವವಿರೋಧಿ ಶಕ್ತಿ ಮತ್ತು ಉದ್ದೇಶಗಳನ್ನು ಬೆತ್ತಲು ಮಾಡಿದವರು ಜಿಆರ್.

ಸಾಮಾಜಿಕ, ರಾಜಕೀಯ ವಿದ್ಯಮಾನಗಳಿಗೆ ಸ್ಪಂದಿಸಿ ನೂರಾರು ಲೇಖನಗಳನ್ನು ಬರೆದು, ಬಹುತ್ವದ ಚಿಂತನೆಗಳ ಮೂಲಕ ಈ ದೇಶ, ಈ ನಾಡು ಎದುರಿಸಿದ ಹಿಂಸೆಯ ವಿಕೃತಿಗಳನ್ನು ಅಕ್ಷರಗಳ ರೂಪದಲ್ಲಿ ಎಚ್ಚರಿಸಿದವರು ಜಿಆರ್.

ನಿರಂಕುಶತೆ, ಮತಾಂಧತೆ ಹಲವು ರೂಪಗಳಲ್ಲಿ ಆವರಿಸಿಕೊಳ್ಳುತ್ತಿರುವಾಗ, ಜಿಆರ್ ಹಾಕಿಕೊಟ್ಟಿರುವ ಹೋರಾಟದ ಮಾರ್ಗದಲ್ಲಿ ಬೆಳಕಿದ್ದು, ಆ ಮಾರ್ಗದಲ್ಲಿ ನಡೆಯುವುದು ಅವರಿಗೆ ಸಲ್ಲಿಸುವ ನಿಜ ಶ್ರದ್ಧಾಂಜಲಿಯಾಗಬಹುದು.

ಎಸ್ ಕುಮಾರ್
ಸಂಪಾದಕರು, ಈದಿನ.ಕಾಂ


ಇದನ್ನೂ ಓದಿ: “ಜನಪ್ರಿಯತೆಯನ್ನು ನಾವು ಸಾಹಿತ್ಯಿಕ ಅರ್ಹತೆಯೆಂದು ಗೊಂದಲಿಸಬಾರದು” – ಜಿ. ರಾಜಶೇಖರ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...