Homeಕರ್ನಾಟಕಶ್ರದ್ಧಾಂಜಲಿ: ದುರಿತ ಕಾಲದ ಎಚ್ಚರದ ದನಿಯೊಂದು ಕರಗಿ...

ಶ್ರದ್ಧಾಂಜಲಿ: ದುರಿತ ಕಾಲದ ಎಚ್ಚರದ ದನಿಯೊಂದು ಕರಗಿ…

- Advertisement -
- Advertisement -

ಜಿ ರಾಜಶೇಖರ್‌ರನ್ನು ನಾನು ಯಾವತ್ತೂ ಭೇಟಿಯಾಗಿಲ್ಲ. ಅವಕಾಶ ಬರಲಿಲ್ಲ. ಅಥವಾ ಅವಕಾಶ ಮಾಡಿಕೊಳ್ಳಲಿಲ್ಲ. ಆದರೆ ಜಿ ರಾಜಶೇಖರ್ ಹತ್ತಿರ ಅನ್ನಿಸುತ್ತಿದ್ದರು. ಪರಿಚಿತರು ಅನ್ನಿಸುತ್ತಿತ್ತು. ಅವರ ಬಿಡಿ ಬರಹಗಳನ್ನು, ಲೇಖನಗಳನ್ನು ಓದಿಕೊಂಡ ನನಗೆ ಮತ್ತು ನನ್ನಂತಹ ಅನೇಕರಿಗೆ ಹೀಗೆ ಅನ್ನಿಸಿರುವುದರಲ್ಲಿ ಅಚ್ಚರಿಯೇನಾದರೂ ಉಂಟೆ. ಚೆ ಗುವೆರಾ ಹೇಳುತ್ತಾನಲ್ಲ, “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ನಿನ್ನ ಎದೆ ಕಂಪಿಸಿದರೆ ನೀನು ನನ್ನ ಸಂಗಾತಿ”, ಹಾಗೇ ಅನ್ಯಾಯವೊ, ಅಹಿತಕರವಾದದ್ದೊ, ಜೀವವಿರೋಧಿಯಾದದ್ದೊ ನಡೆದಾಗ ಮಾತನಾಡುವವರು ನಮ್ಮದೆ ಮಾತನ್ನು ಮಾರ್ದನಿಸಿದಂತೆ ಇರುತ್ತದೆ ನೋಡಿ, ಹಾಗೇ ಅವರು ನಮ್ಮವರಾಗಿಬಿಡುತ್ತಾರೆ.

ಎಡಪಂಥೀಯ ಸಂಘಟನೆಯೊಳಗಿದ್ದು, ಅದರ ತಪ್ಪುಗಳನ್ನು ಕಟುವಾಗಿ ಟೀಕಿಸಬಲ್ಲವರಾಗಿದ್ದರು ಎಂಬುದೇ ಜಿಆರ್ ಬದ್ಧತೆ ಮತ್ತು ನ್ಯಾಯಕ್ಕೆ, ಸತ್ಯಕ್ಕೆ ಹೊರತಾದ ಚೌಕಟ್ಟುಗಳು ಅವರ ಬಳಿ ಸುಳಿಯಲಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಶಾಲೆಯ ಮೇಷ್ಟ್ರಾಗಿ, ವಿಮಾ ಸಂಸ್ಥೆಯ ಉದ್ಯೋಗಿಯಾಗಿ ಜನರೊಂದಿಗೆ ಬೆರೆತ ಜಿಆರ್ ಜೀವಪರ ಜೀವವಾಗಿ ಅಸಂಖ್ಯರ ಪ್ರೀತಿಗೆ ಪಾತ್ರರಾಗಿದ್ದನ್ನು ನಾನು ತಿಳಿದೆ.

ಅವರು ನಿಧನರಾದಾಗ ಫೇಸ್‌ಬುಕ್ಕಿನಲ್ಲಿ ಬಹಳಷ್ಟು ಮಂದಿ ಅವರನ್ನು ನೆನೆದು ತಮ್ಮ ನೆನಪು, ವಿದಾಯದ ಸಂಕಟಗಳನ್ನು ಹಂಚಿಕೊಂಡರು. ಕರಾವಳಿಯ ಕೋಮುವಾದದ ಬಗ್ಗೆ ಹಲವರು ಪ್ರಸ್ತಾಪಿಸಿದ್ದನ್ನು ಓದಿದೆ. ನನಗೂ ಜಿಆರ್ ಹೆಚ್ಚು ಪರಿಚಯವಾಗಿದ್ದು ಅದೇ ಕಾರಣಕ್ಕೆ. ದಕ್ಷಿಣ ಕನ್ನಡದವರೇ ಆದ ಹಿರಿಯ ಪತ್ರಕರ್ತರೊಂದಿಗೆ ಮಾತನಾಡುತ್ತಾ, ’ನೀವೂ ಕೋಮುವಾದದ ಬಗ್ಗೆ ಗಟ್ಟಿಯಾಗಿ ಮಾತನಾಡಿದಿರಿ. ಅವರೂ ಕೋಮುವಾದ ವಿರೋಧಿಸಿದವರು’ ಎಂದು ಮೆಲುಕು ಹಾಕಿದೆ.

ಕೋಮುವಾದದ ಬಗ್ಗೆ ಈಗಂತೂ ಮಾತನಾಡಿ ಅರಗಿಸಿಕೊಳ್ಳುವುದು ಸುಲಭವಲ್ಲ. ವ್ಯವಸ್ಥೆಯೇ ಬೇಟೆಗೆ ಸೀಳುನಾಯಿಗಳನ್ನು ಛೂ ಬಿಡುವಷ್ಟು ಪರಿಸ್ಥಿತಿ ಹದಗಟ್ಟಿದೆ. ಆದರೂ ಜಿಆರ್ ಕೋಮುವಾದ ಕುಲುಮೆಯಲ್ಲಿ ನಿಂತು ಕೆಂಡವನ್ನು ಆರಿಸುವ ಛಾತಿ ತೋರಿದರು.

ಕೋಮುವಾದದ ವಿರುದ್ಧ ಹೋರಾಡುತ್ತಾ, ಕೋಮುವಾದಕ್ಕೆ ಜೀವತೆತ್ತ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಕೊಡಿಸುವುದಕ್ಕೆ ಅವರು ಸದಾ ಓಡಾಡಿದ್ದನ್ನು ಕೇಳಿದೆ. ಅವರ ಕೋಮುವಾದದ ಹೋರಾಟ ಬಾಬ್ರಿ ಮಸೀದಿ ಧ್ವಂಸಕಾಲದಿಂದಲೂ ನಡೆಯುತ್ತಾ ಬಂದಿದೆ. ಇದೇ ಕಾರಣಕ್ಕೆ ಅವರು ಲಂಕೇಶ್ ಪತ್ರಿಕೆಗೆ ಬರೆಯುವುದಕ್ಕೂ ಶುರು ಮಾಡಿದ್ದು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಕನ್ನಡದ ಬಹುತೇಕ ಬುದ್ಧಿಜೀವಿಗಳು, ಚಿಂತಕರು ಬಾಯಿಮುಚ್ಚಿಕೊಂಡಿದ್ದಾಗ, ಲಂಕೇಶ್ ದೇಶ ಒಡೆದ ಘಟನೆಯನ್ನು ಖಂಡಿಸಿದ್ದರು ಎಂಬ ಕಾರಣಕ್ಕೆ ಜಿಆರ್ ಅವರ ಪತ್ರಿಕೆಗೆ ಬರೆಯಲಾರಂಭಿಸಿದ್ದರಂತೆ.

ಲಂಕೇಶರಿಗೆ ಜಿಆರ್ ಎಂದರೆ ಅಷ್ಟೇ ಪ್ರೀತಿ. “ನಮ್ಮ ರಾಜಶೇಖರ ಎಷ್ಟು ಒಳ್ಳೆಯ ವಿಚಾರವಂತ. ನಿಷ್ಠುರತೆ ಮತ್ತು ಬದುಕಿನ ಬಗ್ಗೆ ಪ್ರೀತಿಯನ್ನು ಇಟ್ಟುಕೊಂಡ ಆತ ಶ್ರೇಷ್ಠ ಚಿಂತನಕಾರ ಎನ್ನುವುದು ನನಗೆ ಹೆಮ್ಮೆಯನ್ನುಂಟು ಮಾಡಿದೆ” ಎಂದು ಸ್ವತಃ ಲಂಕೇಶ್ ಹೇಳಿದ್ದರಂತೆ. ಆದರೆ ಅದೇ ಲಂಕೇಶ್ ಅವರನ್ನು ಟೀಕಿಸುವುದಕ್ಕೆ ಅವರ ಸ್ನೇಹ ಅಡ್ಡಿಪಡಿಸಿರಲಿಲ್ಲ. ಲಂಕೇಶ್ ಪ್ರಗತಿರಂಗ ಎಂಬ ಪಕ್ಷ ಕಟ್ಟಿ ರಾಜಕೀಯಕ್ಕೆ ಇಳಿದಾಗ ಅದರ ಪ್ರಣಾಳಿಕೆಯನ್ನು ಗಂಭೀರವಾಗಿ ವಿಮರ್ಶಿಸಿದ್ದರು ಜಿಆರ್.

ಸದಾ ಕಾಲ ತಮ್ಮನ್ನು ಕೇಳಿಕೊಳ್ಳುತ್ತಾ, ಸ್ಥಾಪಿತ ಮೌಲ್ಯಗಳನ್ನು ಪ್ರಶ್ನಿಸುತ್ತಾ ತತ್ವಕ್ಕಿಂತ ಜೀವಕ್ಕೆ ಬೆಲೆ ಕಟ್ಟಿ ಬದುಕಿದವರು ಜಿಆರ್ ಎಂಬುದನ್ನು ಅವರ ಬದುಕೇ ಹೇಳುತ್ತದೆ. ಕೋಮುವಾದದ ವಿರುದ್ಧದ ಹೋರಾಟದ ಜೊತೆಜೊತೆಗೇ ಅವರು ಪ್ರಭುತ್ವದ ಕ್ರೌರ್ಯಗಳನ್ನು ಟೀಕಿಸಿದ್ದಾರೆ. ಆದರೆ ಅವರ ಆತಂಕ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೋಮುವಾದದ ಕಡೆಗಿತ್ತು. ಈ ದೇಶದಲ್ಲಿ ಹಿಂದೂ ಕೋಮುವಾದ ಅಧಿಕಾರ ಹಿಡಿಯಬಹುದು ಎಂದು ಹೇಳಿದ್ದವರಲ್ಲಿ ಜಿಆರ್ ಕೂಡ ಒಬ್ಬರು. ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ನುಸುಳಿದ್ದಾಗ ಕನಲಿ ಎಚ್ಚರಿಸಿದವರು. ಜಿಆರ್ ಗಟ್ಟಿಯಾಗಿ ಕೋಮುವಾದದ ಕುರಿತು ಮಾತನಾಡುತ್ತಾ ಬಂದಿದ್ದರಿಂದಲೇ ಜೀವಪರವಾಗಿ ಮಿಡಿಯುವ ಯುವಪಡೆಯೊಂದು ಬೆಳೆದು
ನಿಂತಿದ್ದು ಎನ್ನುತ್ತಿದ್ದರು ಅಲ್ಲಿಯ ಗೆಳೆಯರು.

ಎಪ್ಪತ್ತರ ದಶಕದಿಂದ ಬೀದಿ ಹೋರಾಟಗಳಲ್ಲಿ ಭಾಗವಹಿಸುತ್ತಾ ಅದೆಷ್ಟು ಮನಸ್ಸುಗಳನ್ನು ಹುರಿದುಂಬಿಸುತ್ತಾ ಬಂದಿದ್ದಾರೊ ಲೆಕ್ಕವಿಲ್ಲ. “ಸಂವಿಧಾನವನ್ನು ಬದಲಾಯಿಸಲು ಅದನ್ನೆನು ಜನಿವಾರವೆ?” ಎಂಬ ಘೋಷಣೆಯ ಪ್ಲಕಾರ್ಡ್ ಹಿಡಿದು ನಿಂತ ಜಿಆರ್ ಅವರ ಕುಬ್ಜ ದೇಹ ಎಷ್ಟು ಅಗಾಧ ಆತ್ಮಶಕ್ತಿಯನ್ನು ಹೊಂದಿತ್ತು ಮತ್ತು ಅದು ಎಚ್ಚರವಾಗಿ ಕರಾವಳಿಯನ್ನು, ಈ ನಾಡನ್ನು ಹೇಗೆ ಆವರಿಸಿಕೊಂಡಿರಬಹುದು ಎಂಬುದು ಸಾಮಾನ್ಯದ ಬೆರಗಲ್ಲ.

ಎಲ್ಲೇ ಏನೇ ಗಲಭೆ, ಅಹಿತಕರ ಘಟನೆಗಳು ನಡೆದರೆ ಅಲ್ಲಿಗೆ ಖುದ್ದು ಭೇಟಿ ನೀಡಿ ಸತ್ಯಶೋಧನೆ ನಡೆಸಿ ಸಿದ್ಧಪಡಿಸಿದ ವರದಿಗಳು ಬಹುಶಃ ಯಾವ ಪತ್ರಕರ್ತನೂ, ಸತ್ಯಶೋಧನಾ ತಂಡಗಳು ಮಾಡಿರಲಾರವು. ಸುರತ್ಕಲ್ ಗಲಭೆ, ಮಂಗಳೂರಿನ ಪಬ್‌ದಾಳಿ, ಹೋಮ್‌ಸ್ಟೇ ದಾಳಿ, ಕುಂದಾಪುರದಲ್ಲಿ ನಡೆದ ಗಲಭೆ, ಆದಿ ಉಡುಪಿಯ ಬೆತ್ತಲೆ ಪ್ರಕರಣ ಹೀಗೆ ಹಲವು ಘಟನೆಗಳ ಹಿಂದಿನ ಅಮಾನವೀಯ, ಜೀವವಿರೋಧಿ ಶಕ್ತಿ ಮತ್ತು ಉದ್ದೇಶಗಳನ್ನು ಬೆತ್ತಲು ಮಾಡಿದವರು ಜಿಆರ್.

ಸಾಮಾಜಿಕ, ರಾಜಕೀಯ ವಿದ್ಯಮಾನಗಳಿಗೆ ಸ್ಪಂದಿಸಿ ನೂರಾರು ಲೇಖನಗಳನ್ನು ಬರೆದು, ಬಹುತ್ವದ ಚಿಂತನೆಗಳ ಮೂಲಕ ಈ ದೇಶ, ಈ ನಾಡು ಎದುರಿಸಿದ ಹಿಂಸೆಯ ವಿಕೃತಿಗಳನ್ನು ಅಕ್ಷರಗಳ ರೂಪದಲ್ಲಿ ಎಚ್ಚರಿಸಿದವರು ಜಿಆರ್.

ನಿರಂಕುಶತೆ, ಮತಾಂಧತೆ ಹಲವು ರೂಪಗಳಲ್ಲಿ ಆವರಿಸಿಕೊಳ್ಳುತ್ತಿರುವಾಗ, ಜಿಆರ್ ಹಾಕಿಕೊಟ್ಟಿರುವ ಹೋರಾಟದ ಮಾರ್ಗದಲ್ಲಿ ಬೆಳಕಿದ್ದು, ಆ ಮಾರ್ಗದಲ್ಲಿ ನಡೆಯುವುದು ಅವರಿಗೆ ಸಲ್ಲಿಸುವ ನಿಜ ಶ್ರದ್ಧಾಂಜಲಿಯಾಗಬಹುದು.

ಎಸ್ ಕುಮಾರ್
ಸಂಪಾದಕರು, ಈದಿನ.ಕಾಂ


ಇದನ್ನೂ ಓದಿ: “ಜನಪ್ರಿಯತೆಯನ್ನು ನಾವು ಸಾಹಿತ್ಯಿಕ ಅರ್ಹತೆಯೆಂದು ಗೊಂದಲಿಸಬಾರದು” – ಜಿ. ರಾಜಶೇಖರ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....