Homeಕರ್ನಾಟಕತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

ತುಮಕೂರು: ಬಲವಂತದ ಭೂ ಸ್ವಾಧೀನಕ್ಕೆ ರೈತ ಬಲಿ; ಆರೋಪ

- Advertisement -
- Advertisement -

ಪರಿಹಾರ ನೀಡದೆ ಭೂಮಿ ಕಿತ್ತುಕೊಂಡಿದ್ದರಿಂದಾಗಿ ಮನ ನೊಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲು ಕಟ್ಟೆ ಗ್ರಾಮದ ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆದ್ದಾರಿ ಕಾಮಗಾರಿ ವೇಗಕ್ಕೆ ಪಡೆದಿರುವ ಬಲಿ ಇದೆಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕೆ.ಬಿ.ಕ್ರಾಸ್‌ನಿಂದ ಹುಳಿಯಾರ್‌ವರೆಗೂ ರಸ್ತೆ ಕಾಮಗಾರಿ ನಡೆಸುವ ಉದ್ದೇಶಕ್ಕೆ ರಂಗಣ್ಣರವರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಪರಿಹಾರ ನೀಡಿರಲಿಲ್ಲ. ಪರಿಹಾರ ನೀಡದೆ ಭೂಮಿ ಬಿಡುವುದಿಲ್ಲ ಎಂದು ರಂಗಣ್ಣ ನ್ಯಾಯಯುತವಾಗಿ ಒತ್ತಾಯಿಸುತ್ತಿದ್ದರು. ಆದರೆ ರೈತನ ನ್ಯಾಯಬದ್ದವಾದ ಹಕ್ಕನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಲವಂತವಾಗಿ ಭೂಮಿ ಕಿತ್ತುಕೊಂಡಿದ್ದರು. ಇದರಿಂದ ಮನನೊಂದು ರೈತ ರಂಗಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರವೇ ಹೊಣೆ ಎಂದು ಸಮಿತಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ರಾಜ್ಯ ಸರ್ಕಾರವು 2019ರಲ್ಲಿ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತಂದಿತು. 10(ಎ) ಎನ್ನುವ ಹೊಸ ಪರಿಚ್ಛೇದವನ್ನು ಸೇರಿಸಿತು. ಆ ಮೂಲಕ ಭೂ ಸ್ವಾಧೀನಕ್ಕೆ ಬಾಧಿತ ರೈತ ಸಮುದಾಯದ ಒಪ್ಪಿಗೆ ಕಡ್ಡಾಯ ಎನ್ನುವ 2013ರ ಕಾಯ್ದೆಯ ಷರತ್ತನ್ನು ತೆಗೆದು ಹಾಕಿದೆ. ಪರಿಹಾರ ನೀಡದೇ ವಶಕ್ಕೆ ತೆಗೆದುಕೊಂಡ ಸಂದರ್ಭದಲ್ಲಿ ಕೋರ್ಟ್‌‌ನ ತಡೆಯಾಜ್ಞೆಯೂ ಯಾವುದೇ ಪರಿಣಾಮ ಬೀರದಂತೆ ಪರಿಚ್ಛೇದ 24(ಎ) ಗೆ ತಿದ್ದುಪಡಿ ತರಲಾಗಿದೆ. ಹೀಗೆ ಯಾವುದೇ ಸಾಮಾಜಿಕ ಪರಿಶೋಧನೆ ಇಲ್ಲದೇ, ರೈತ ಸಮುದಾಯದ ಒಪ್ಪಿಗೆ ಇಲ್ಲದೆ, ಯಾವುದೇ ಪರಿಹಾರ ನೀಡದೆ ರೈತರ ಭೂಮಿಯನ್ನು ಕಿತ್ತುಕೊಳ್ಳಲು ಸರ್ಕಾರಿ ಹಾಗೂ ಖಾಸಗಿ ಎಜೆನ್ಸಿಗಳಿಗೆ ಪರಮಾಧಿಕಾರ ನೀಡಿರುವ ಕರ್ನಾಟಕ ರಾಜ್ಯ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ಅನ್ನು ರದ್ದುಪಡಿಸಬೇಕು ಕೆಪಿಆರ್‌ಎಸ್‌ ಒತ್ತಾಯಿಸಿದೆ.

ರೈತರನ್ನು ದಿವಾಳಿ ಮಾಡಿ ಅಭಿವೃದ್ಧಿ ಸಾಧಿಸುವ ಬಂಡವಾಳಶಾಹಿ ಅಭಿವೃದ್ಧಿ ಕಣ್ಣೋಟವನ್ನು ಕೈ ಬಿಟ್ಟು ಅಭಿವೃದ್ಧಿಯಲ್ಲಿ ರೈತ ಸಮುದಾಯದ ಉನ್ನತಿಯನ್ನು ಪ್ರಧಾನವಾಗಿ ಒಳಗೊಳ್ಳುವ ಸಂವಿಧಾನದ ಕಲ್ಯಾಣ ರಾಜ್ಯ ಕಣ್ಣೋಟವನ್ನು ಅಳವಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರ ಗಮನಕ್ಕೆ ತರದೇ, ರೈತರ ಒಪ್ಪಿಗೆ ಪಡೆಯದೇ, ರೈತರಿಗೆ ಪರಿಹಾರ ನೀಡದೇ ಭೂಮಿ ವಶಕ್ಕೆ ಪಡೆಯಬಾರದು ಎಂದು ಸಂಘಟನೆಯ ಅಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಯು.ಬಸವರಾಜು ಆಗ್ರಹಿಸಿದ್ದಾರೆ.

ಈಗಾಗಲೇ ಬೇಸಾಯ ನಷ್ಟ, ಸಾಲ ಬಾಧೆ ಕಾರಣಗಳಿಂದ ನಡೆಯುತ್ತಿರುವ ರೈತರ ಆತ್ಮಹತ್ಯೆ ಪಟ್ಟಿಗೆ ಸ್ವಾಧೀನದ ವಂಚನೆಯೂ ಸೇರ್ಪಡೆ ಆಗಿರುವುದು ಸರ್ಕಾರದ ಕ್ರೂರ ಮುಖವನ್ನು ಬಯಲುಗೊಳಿಸುತ್ತದೆ ಎಂದು ವಿಷಾದಿಸಿದ್ದಾರೆ.

ಬಲವಂತವಾಗಿ, ಯಾವುದೇ ಪರಿಹಾರ ನೀಡದೆ ಭೂ ಸ್ವಾಧೀನಕ್ಕೆ ಅವಕಾಶ ನೀಡಿರುವ ಕರ್ನಾಟಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ 2019 ರದ್ದಾಗಬೇಕು. ಈ ಕೂಡಲೇ ಹೆದ್ದಾರಿ ಕಾಮಗಾರಿಗೆ ಭೂಮಿ ಕಳೆದುಕೊಂಡಿರುವ ರೈತ ರಂಗಣ್ಣ ಕುಟುಂಬಕ್ಕೆ ಭೂ ಸ್ವಾಧೀನ ಪರಿಹಾರ ಹಣವನ್ನು 2013ರ ಕಾಯ್ದೆ ಪ್ರಕಾರ ಮಾರುಕಟ್ಟೆ ದರದ ನಾಲ್ಕು ಪಟ್ಟು ಪಾವತಿಸಬೇಕು. ಹೆದ್ದಾರಿ ಪ್ರಾಧಿಕಾರದ ಹಾಗೂ ರಾಜ್ಯ ಸರ್ಕಾರದ ಕಿರುಕುಳದಿಂದ ಪ್ರಾಣ ಕಳೆದುಕೊಂಡ ರಂಗಣ್ಣರವರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಯಂ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...