Homeಕರ್ನಾಟಕಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

- Advertisement -
- Advertisement -

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ ರಿಷಿಕುಮಾರ ಸ್ವಾಮೀಜಿ ಅಲಿಯಾಸ್ ಕಾಳಿ ಸ್ವಾಮೀಜಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೆ ಪ್ರಚೋದನೆ ನೀಡಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀಜಿ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ವ್ಯಕ್ತಿಯನ್ನು ಕೊಂದಿರುವ ಕುರಿತು ಮಾತನಾಡಿರುವ ಕಾಳಿ ಸ್ವಾಮೀಜಿ, “ನಮ್ಮವರೇ ಏನಾದರೂ ಹೊಡೆದಿದ್ದರೆ ನಾನು ಅವರಿಗೆ ಅಭಿನಂದನೆ ಸಲ್ಲಿಸುವೆ. ಇನ್ನು ಒಬ್ಬರನ್ನೇ ಕೊಂದಿರುವುದೆಂದು ಹೇಳುತ್ತಿದ್ದೀರಿ. ಇನ್ನು 9 ತಲೆ ಬೇಕು. ಅವರವರೇ ಹೊಡೆದುಕೊಂಡು ಸತ್ತು ಹೋಗಿದ್ದರೆ ನಮ್ಮವರಿಗೆ ಇನ್ನೂ ಮನಸ್ಥಿತಿ ಗಟ್ಟಿಯಾಗಿಲ್ಲ ಎಂದಷ್ಟೇ. ತುರುಕರೇ ನಿಮ್ಮ ಒಂದೊಂದು ಕತ್ತು ತಗಿಯಲಿಲ್ಲ ಎಂದರೆ ದೇವರಾಣೆಯೂ ಸುಧಾರಿಸಿಕೊಳ್ಳುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ನೀವು ನನ್ನನ್ನು ಎತ್ತಿ. ಎಸ್‌ಡಿಪಿಐ, ಪಿಎಫ್‌ಐ ………. ನನ್ನನ್ನು ಎತ್ತಿ. ನಿಮ್ಮ ಕೈಲಾದ್ರೆ ನಳಿನ್‌ ಕುಮಾರ್‌ ಕಟೀಲ್‌ರನ್ನು ಎತ್ತಿ. ನಿಮ್ಮ ಕೈಲಾದರೆ ಬೊಮ್ಮಾಯಿ, ಹೋಮ್‌ಮಿನಿಸ್ಟರ್‌ರನ್ನು ಎತ್ತಿ….” ಎಂದು ಹೇಳಿಕೆ ನೀಡಿದ್ದಾರೆ.

ಅತ್ಯಂತ ಕೆಟ್ಟ ಪದಗಳನ್ನು ಮುಸ್ಲಿಂ ಸಮುದಾಯದ ವಿರುದ್ಧ ಕಾಳಿ ಸ್ವಾಮೀಜಿ ಬಳಸಿದ್ದಾರೆ. “ನೀವು ನನ್ನನ್ನು ಹೊಡೆದ ತಕ್ಷಣ ಗೋದ್ರಾ ಹತ್ಯಾಕಾಂಡ ಶುರುವಾಗುತ್ತದೆ. ಗೋರಿಪಾಳ್ಯ, ಕಲಾಸಿಪಾಳ್ಯಕ್ಕೆ ನುಗ್ಗಿ ಬೆಂಕಿ ಹಚ್ಚಲಾಗುತ್ತದೆ. ನಮ್ಮ ತಾಕತ್ತು ಏನೆಂಬುದು ತೋರಿಸುತ್ತೇವೆ. ಹೊಡೆಯುವುದಾದರೆ ದೊಡ್ಡದನ್ನು ಹೊಡೆಯಿರಿ…. ಯಾವ ಶಾಂತಿ ಕಾಪಾಡಬೇಕು ಮುಖ್ಯಮಂತ್ರಿಗಳೇ…” ಎಂದು ಬಾಯಿಗೆ ಬಂದಂತೆ ಮಾತನಾಡಿರುವ ಅವರು ಸಿಕ್ಕಸಿಕ್ಕವರನ್ನು ಗುಂಡಿಕ್ಕಿ ಕೊಲ್ಲಲು ಪ್ರಚೋದಿಸಿದ್ದಾರೆ.

“ಮೂರು ದಿನದೊಳಗೆ ಎನ್‌ಕೌಂಟರ್‌ ಮಾಡಿ. ಇಲ್ಲವಾದರೆ ಪಾದಯಾತ್ರೆ ಮಾಡ್ತೀವಿ. ಒಂದು ಕತ್ತಿಗೆ ಹತ್ತು ಕತ್ತು ಉದುರಿಸಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಸರಣಿ ಕೊಲೆಗಳಿಂದ ಕರಾವಳಿ ಜನರು ಆತಂಕಿತರಾಗಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಉರಿಯೋ ಬೆಂಕಿಗೆ ಪೆಟ್ರೋಲ್ ಸುರಿಯುವಂತೆ ಸ್ವಾಮೀಜಿ ಮಾತನಾಡಿದ್ದಾರೆ. ‌ಎಲ್ಲ ಸಮುದಾಯಗಳನ್ನು ಪ್ರೀತಿಯಿಂದ ನೋಡಬೇಕಾದ ಸ್ವಾಮೀಜಿ ಪಟ್ಟಕ್ಕೆ ಅಗೌರವ ತೋರಿದ್ದಾರೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲೆ ಪ್ರಕರಣಗಳ ತನಿಖೆ ನಡೆಯುತ್ತಿದ್ದು, ನಿಜ ಆರೋಪಿಗಳು ಯಾರೆಂಬುದು ಇನ್ನೂ ಬಯಲಾಗಿಲ್ಲ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ನ್ಯಾಯಾಂಗ ವ್ಯವಸ್ಥೆ ಇರುವಾಗ- ಫ್ರಿಂಜ್ ಎಲಿಮೆಂಟ್‌ಗಳೇ ಎಲ್ಲ ತೀರ್ಪುಗಳನ್ನು ನೀಡುತ್ತಿವೆ. ಸಮುದಾಯಗಳ ನಡುವೆ ಬೆಂಕಿ ಹಚ್ಚಲು ಪ್ರಚೋದಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಳಿ ಸ್ವಾಮೀಜಿಯಂತಹ ಕೋಮುದ್ವೇಷಿಗಳ ಮೇಲೆ ಸಾಂವಿಧಾನಿಕವಾಗಿ ಕ್ರಮ ಜರುಗಿಸುತ್ತಾರೋ ಎಂಬುದೇ ಸದ್ಯದ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜ್ಯ ಸರ್ಕಾರ ಮೊದಲು ಈ ಕಾಳಿ ಸ್ವಾಮೀಜಿಯ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...