Homeಕರ್ನಾಟಕಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ...

ಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ ವೆಬ್ ಒಪಿಂಡಿಯಾ!

ಮಂಗಳೂರು ನಗರ ಕಮಿಷನರ್‌‌ ಶಶಿಕುಮಾರ್‌ ಅವರು ತಪ್ಪು ಸಂದೇಶ ಹರಿಬಿಡದಂತೆ ಎಂದು ಹೇಳಿದ್ದು, ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

- Advertisement -
- Advertisement -

ಪ್ರವೀಣ್ ಕೊಲೆ ನಡೆದು ಒಂದು ದಿನ ಮುಗಿಯುವುದರ ಒಳಗಾಗಿ ಮಂಗಳೂರು ಹೊರ ವಲಯದ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ಮಾಡಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಅಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸುವ ಮುಂಚೆಯೆ ಕೆಲವು ಬಿಜೆಪಿ ಬೆಂಬಲಿತ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರು ಫಾಝಿಲ್ ಕೊಲೆ ಸುನ್ನಿ-ಷಿಯಾ ಪ್ರೇಮ ಪ್ರಕರಣ ಕೊಲೆ ಎಂದು ತೀರ್ಪು ನೀಡಿ ದುರುದ್ದೇಶದಿಂದ ಹರಿಬಿಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲವ್ ವಿಷಯದಲ್ಲಿ ಸುನ್ನಿ ಮುಸಲ್ಮಾನ ಸಮುದಾಯದ ತಂಡ ಮತ್ತು ಶಿಯಾ ಮುಸಲ್ಮಾನ ಸಮುದಾಯದ ತಂಡದ ನಡುವೆ ಸುರತ್ಕಲ್‌ನಲ್ಲಿ ಮಾರಾಮಾರಿ. ಮೇಲ್ಜಾತಿ ಸುನ್ನಿ ಮುಸಲ್ಮಾನರ ಯುವತಿಯನ್ನು ಪ್ರೀತಿಸಿದ ಕೆಳಜಾತಿಯ ಷಿಯಾ ಮುಸಲ್ಮಾನ ಯುವಕನ ಮೇಲೆ ತಲವಾರು ದಾಳಿ ನಡೆಸಿ ಕೊಂದ ಸುನ್ನಿ ಮುಸಲ್ಮಾನರು. ಯುವಕನ ಸ್ಥಿತಿ ಗಂಭೀರ” ಎಂಬ ಸಂದೇಶವನ್ನು ಬಿಜೆಪಿ ಬೆಂಬಲಿಗರು ಹರಿಯಬಿಟ್ಟಿದ್ದರು.

ಕೊಲೆಯಾದ ಕೂಡಲೇ ಫೇಸ್‌ಬುಕ್‌ನಲ್ಲಿ ತಪ್ಪು ಸಂದೇಶ ಹರಿಯ ಬಿಟ್ಟ ಬಿಜೆಪಿ ಬೆಂಬಲಿಗರ ಕೆಲವು ಪೋಸ್ಟ್‌

ಕನ್ನಡದ ಮಾಧ್ಯಮಗಳು ಕೂಡಾ ಬಿಜೆಪಿ ಬೆಂಬಲಿಗರ ಸಂದೇಶದಂತೆ ಪ್ರೇಮ ಪ್ರಕರಣದಿಂದಾದ ಕೊಲೆ ಎಂದೆ ವರದಿ ಮಾಡಿದ್ದವು.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಯಾವುದೇ ಅಧಿಕೃತವಲ್ಲದ ಬಿಜೆಪಿ ಬೆಂಬಲಿಗರು ಹರಿಬಿಟ್ಟ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಕಮಿಷನರ್‌ ಶಶಿಕುಮಾರ್‌ ಅವರು ಕೂಡಾ ತಪ್ಪು ಸಂದೇಶ ಹರಿಬಿಡದಂತೆ ಹಾಗೂ ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ತಿಳಿಸಿದ್ದರು. ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

ಈ ನಡುವೆ ಸುರತ್ಕಲ್ ಕ್ಷೇತ್ರದ ಮಾಜಿ ಶಾಸಕ ಮೊಯಿದಿನ್ ಬಾವ ಅವರು, ‘‘ಇದು ಪ್ರೇಮ ಪ್ರಕರಣದ ಕಾರಣಕ್ಕೆ ನಡೆದ ಕೊಲೆ” ಎಂದು ಹೇಳಿದ್ದಾಗಿ ಕನ್ನಡ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಮತ್ತೇ ಸ್ಪಷ್ಟನೆ ನೀಡಿದ್ದ ಮೊಯಿದಿನ್ ಬಾವ ಅವರು, “ನಾನು ಈ ರೀತಿ ಹೇಳಿಕೆ ನೀಡಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನ್ನ ಹೇಳಿಕೆ ತಿರುಚಿರುವ ಸುವರ್ಣ ನ್ಯೂಸ್ ವಿರುದ್ಧ ಪ್ರಕರಣ ದಾಖಲಿಸುತ್ತೇನೆ” ಎಂದು ಹೇಳಿದ್ದರು.

ಅದಾಗಿಯೂ ದೇಶದ ಪ್ರಮುಖ ಇಂಗ್ಲಿಷ್‌‌‌‌ ಪತ್ರಿಕೆಯಾಗಿರುವ ಡೆಕ್ಕನ್ ಹೆರಾಲ್ಡ್‌ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, “ಶಿಯಾ ಸಮುದಾಯದ ಹುಡುಗಿಯನ್ನು ಪ್ರೀತಿಸುತ್ತಿದ್ದ ಕಾರಣ ಫಾಝಿಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೊಹಮ್ಮದ್ ಫಾಝಿಲ್ ಅವರು ಸುನ್ನಿ ಮುಸ್ಲಿಂ ಎಂದು ಪೊಲೀಸ್ ಮೂಲಗಳು ತಿಳಿಸಿವೆ” ಎಂದು ವರದಿ ಮಾಡಿದೆ.

ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ

ಡೆಕ್ಕನ್ ಹೆರಾಲ್ಡ್‌‌ನ ಈ ವರದಿಯನ್ನು ಉಲ್ಲೇಖಿಸಿ ಭಾರತ ಮಟ್ಟದಲ್ಲಿ ಬಿಜೆಪಿಯ ಪರವಾಗಿ ಪ್ರೊಪಗಾಂಡ ಹರಡುವ ಒಪಿಂಡಿಯಾ ಎಂಬ ವೆಬ್‌ಸೈಟ್‌, “ಸುನ್ನಿ ಫಾಜಿಲ್ ಶಿಯಾ ಹುಡುಗಿಯನ್ನು ಪ್ರೀತಿಸುತ್ತಿರುವುದೇ ಹತ್ಯೆಗೆ ಕಾರಣ ಎಂದು ವರದಿಗಳು ಸೂಚಿಸುತ್ತವೆ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ.

ಆರ್ಕೈವ್‌‌ ಇಲ್ಲಿ ಕ್ಲಿಕ್ ಮಾಡಿ

ವಾಸ್ತವದಲ್ಲಿ ಕೊಲೆಯಾದ ಫಾಝಿಲ್‌ ಆದರೆ ಸುನ್ನಿ ಮುಸ್ಲಿಂ ಆಗಿದ್ದು, ಬಿಜೆಪಿ ಬೆಂಬಲಿಗರು ಹೇಳುವಂತೆ ಶಿಯಾ ಪಂಥವನ್ನು ಅನುಸರಿಸುವ ಯುವಕನಲ್ಲ. ಅವರ ಅಂತ್ಯ ಸಂಸ್ಕಾರವನ್ನು ಸುರತ್ಕಲ್‌ನ ಮಂಗಳಪೇಟೆಯ ಮುಹಿಯದ್ದೀನ್ ಮಸೀದಿಯಲ್ಲಿ ಮಾಡಲಾಗಿದೆ. ಈ ಮಸೀದಿ ಸುನ್ನಿ ಮಸೀದಿಯಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಫಾಝಿಲ್ ಅವರು ಸುನ್ನಿ ಪಂಥವನ್ನು ಅನುಸರಿಸುತ್ತಿದ್ದರು. ಅಷ್ಟಕ್ಕೂ ಸುರತ್ಕಲ್ ಆಸುಪಾಸಿನಲ್ಲಿ ಶಿಯಾ ಪಂಥದ ಜನರು ಕೂಡಾ ಇಲ್ಲ ಎಂದು ಸ್ಥಳೀಯರು ಉಲ್ಲೇಖಿಸುತ್ತಾರೆ. ಹೀಗಾಗಿ ಬಿಜೆಪಿ ಬೆಂಬಲಿಗರು ಸುನ್ನಿ ಶಿಯಾ ಕಟ್ಟುಕತೆಯನ್ನು ತನಿಖೆಯ ದಾರಿ ತಪ್ಪಿಸಲು ಬೇಕಾಗಿ ದುರುದ್ದೇಶ ಪೂರ್ವಕವಾಗಿ ಹರಿಯ ಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

‘‘ಸುನ್ನಿ-ಶಿಯಾ ಪ್ರೇಮ ವಿವಾದ’’ ಎಂಬುವುದು ಬಲಪಂಥೀಯರು ಕಟ್ಟಿದ ಅಪ್ಪಟ ಕಟ್ಟುಕತೆ ಎಂದು ಬ್ಯಾರಿ ಸಮುದಾಯದ ಸಂಸ್ಕೃತಿ ಚಿಂತಕ, ಬರಹಗಾರ ಇಸ್ಮತ್ ಪಜೀರ್‌ ಅವರು ಆರೋಪಿಸುತ್ತಾರೆ. “ವಾಸ್ತವದಲ್ಲಿ ಕರಾವಳಿಯಲ್ಲಿ ಶಿಯಾ ಸಮುದಾಯ ತೀರಾ ಇಲ್ಲವೆ ಇಲ್ಲ ಎನ್ನುವಷ್ಟು ಕಡಿಮೆ, ಇದ್ದರೂ ಒಂದಷ್ಟು ಬೆರಳೆಣಿಕೆಯ ಆಗರ್ಭ ಶ್ರೀಮಂತರು ವ್ಯಾಪರಕ್ಕೆ ಅಷ್ಟೆ ಬರುತ್ತಾರೆ. ಅವರು ಇಲ್ಲಿನ ಬ್ಯಾರಿ ಸಮುದಾಯ(ಸ್ಥಳೀಯ ಮುಸ್ಲಿಮರು)ದೊಂದಿಗೆ ಸಾಮಾಜಿಕವಾಗಿ ಬೆರೆಯುವುದೆ ಇಲ್ಲ. ಅವರಿಗೆ ಬ್ಯಾರಿ ಭಾಷೆಯು ಬರುವುದಿಲ್ಲ” ಎಂದು ಹೇಳಿದ್ದಾರೆ.

ಅದೂ ಅಲ್ಲದೆ ಶಿಯಾ-ಸುನ್ನಿ ಎಂಬುವುದು ಮುಸ್ಲಿಮರ ಒಳಗಿನ ಜಾತಿಗಳೂ ಅಲ್ಲ ಎಂದು ಇಸ್ಮತ್ ಹೇಳುತ್ತಾರೆ. ಸುನ್ನಿ-ಶಿಯಾ ಎಂಬುವುದು ತಾತ್ವಿಕ ಭಿನ್ನತೆಗಳ ಆಧಾರದಲ್ಲಿ ವಿಗಂಡನೆಗೊಂಡಿರುವ ಪಂಥಗಳಾಗಿವೆ. ಭಾರತದಲ್ಲಿ ಕಂಡು ಬರುವ ಜಾತಿ ಮಾದರಿಯಲ್ಲಿ ಅವುಗಳು ಇರುವುದಿಲ್ಲ. ಜಾತಿಗಳು ಜನ್ಮತಃ ಬರುತ್ತದೆ ಮತ್ತು ತಮ್ಮ ಹೆತ್ತವರ ಜಾತಿಯೆ ಮಕ್ಕಳ ಜಾತಿಯೂ ಆಗಿರುತ್ತದೆ. ಅವುಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಸುನ್ನಿ ಮುಸ್ಲಿಂ ಒಬ್ಬ ಯಾವುದೇ ಸಮಯಕ್ಕೆ ಶಿಯಾ ಆಗಬಹುದಾಗಿದೆ ಹಾಗೆಯೆ ಶಿಯಾ ಒಬ್ಬ ಸುನ್ನಿ ಕೂಡಾ ಆಗಬಹುದಾಗಿದೆ. ಅವುಗಳು ಕೇವಲ ಸೈದ್ಧಾಂತಿಕ ವಿಚಾರ ಧಾರೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

ಫಾಝಿಲ್ ಕೊಲೆಯು ಸುನ್ನಿ-ಶಿಯಾ ಪ್ರೇಮ ವಿಚಾರದ ಕಾರಣದಕ್ಕೆ ನಡೆದಿದೆ ಎಂಬ ವರದಿಯ ಬಗ್ಗೆ ಮಾತನಾಡಿದ ಇ‌ಸ್ಮತ್ ಪಜೀರ್‌, “Deccan herald‌ ನಂತಹ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯೂ ಈ‌ ಸಂಘಪರಿವಾರದ ಆಯಾಮವನ್ನು‌ ಸುದ್ಧಿ‌ಮೂಲವಾಗಿ ಎತ್ತಿಕೊಂಡು ವರದಿ ಮಾಡಿ‌‌ ಉನ್ನತ ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆಂದು ಪ್ರಕಟಿಸಿದೆ ಎಂಬುವುದು ಬೇಸರದ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...