Homeಕರ್ನಾಟಕಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ...

ಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ ವೆಬ್ ಒಪಿಂಡಿಯಾ!

ಮಂಗಳೂರು ನಗರ ಕಮಿಷನರ್‌‌ ಶಶಿಕುಮಾರ್‌ ಅವರು ತಪ್ಪು ಸಂದೇಶ ಹರಿಬಿಡದಂತೆ ಎಂದು ಹೇಳಿದ್ದು, ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

- Advertisement -
- Advertisement -

ಪ್ರವೀಣ್ ಕೊಲೆ ನಡೆದು ಒಂದು ದಿನ ಮುಗಿಯುವುದರ ಒಳಗಾಗಿ ಮಂಗಳೂರು ಹೊರ ವಲಯದ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ಮಾಡಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಅಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸುವ ಮುಂಚೆಯೆ ಕೆಲವು ಬಿಜೆಪಿ ಬೆಂಬಲಿತ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರು ಫಾಝಿಲ್ ಕೊಲೆ ಸುನ್ನಿ-ಷಿಯಾ ಪ್ರೇಮ ಪ್ರಕರಣ ಕೊಲೆ ಎಂದು ತೀರ್ಪು ನೀಡಿ ದುರುದ್ದೇಶದಿಂದ ಹರಿಬಿಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲವ್ ವಿಷಯದಲ್ಲಿ ಸುನ್ನಿ ಮುಸಲ್ಮಾನ ಸಮುದಾಯದ ತಂಡ ಮತ್ತು ಶಿಯಾ ಮುಸಲ್ಮಾನ ಸಮುದಾಯದ ತಂಡದ ನಡುವೆ ಸುರತ್ಕಲ್‌ನಲ್ಲಿ ಮಾರಾಮಾರಿ. ಮೇಲ್ಜಾತಿ ಸುನ್ನಿ ಮುಸಲ್ಮಾನರ ಯುವತಿಯನ್ನು ಪ್ರೀತಿಸಿದ ಕೆಳಜಾತಿಯ ಷಿಯಾ ಮುಸಲ್ಮಾನ ಯುವಕನ ಮೇಲೆ ತಲವಾರು ದಾಳಿ ನಡೆಸಿ ಕೊಂದ ಸುನ್ನಿ ಮುಸಲ್ಮಾನರು. ಯುವಕನ ಸ್ಥಿತಿ ಗಂಭೀರ” ಎಂಬ ಸಂದೇಶವನ್ನು ಬಿಜೆಪಿ ಬೆಂಬಲಿಗರು ಹರಿಯಬಿಟ್ಟಿದ್ದರು.

ಕೊಲೆಯಾದ ಕೂಡಲೇ ಫೇಸ್‌ಬುಕ್‌ನಲ್ಲಿ ತಪ್ಪು ಸಂದೇಶ ಹರಿಯ ಬಿಟ್ಟ ಬಿಜೆಪಿ ಬೆಂಬಲಿಗರ ಕೆಲವು ಪೋಸ್ಟ್‌

ಕನ್ನಡದ ಮಾಧ್ಯಮಗಳು ಕೂಡಾ ಬಿಜೆಪಿ ಬೆಂಬಲಿಗರ ಸಂದೇಶದಂತೆ ಪ್ರೇಮ ಪ್ರಕರಣದಿಂದಾದ ಕೊಲೆ ಎಂದೆ ವರದಿ ಮಾಡಿದ್ದವು.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಯಾವುದೇ ಅಧಿಕೃತವಲ್ಲದ ಬಿಜೆಪಿ ಬೆಂಬಲಿಗರು ಹರಿಬಿಟ್ಟ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಕಮಿಷನರ್‌ ಶಶಿಕುಮಾರ್‌ ಅವರು ಕೂಡಾ ತಪ್ಪು ಸಂದೇಶ ಹರಿಬಿಡದಂತೆ ಹಾಗೂ ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ತಿಳಿಸಿದ್ದರು. ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

ಈ ನಡುವೆ ಸುರತ್ಕಲ್ ಕ್ಷೇತ್ರದ ಮಾಜಿ ಶಾಸಕ ಮೊಯಿದಿನ್ ಬಾವ ಅವರು, ‘‘ಇದು ಪ್ರೇಮ ಪ್ರಕರಣದ ಕಾರಣಕ್ಕೆ ನಡೆದ ಕೊಲೆ” ಎಂದು ಹೇಳಿದ್ದಾಗಿ ಕನ್ನಡ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಮತ್ತೇ ಸ್ಪಷ್ಟನೆ ನೀಡಿದ್ದ ಮೊಯಿದಿನ್ ಬಾವ ಅವರು, “ನಾನು ಈ ರೀತಿ ಹೇಳಿಕೆ ನೀಡಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನ್ನ ಹೇಳಿಕೆ ತಿರುಚಿರುವ ಸುವರ್ಣ ನ್ಯೂಸ್ ವಿರುದ್ಧ ಪ್ರಕರಣ ದಾಖಲಿಸುತ್ತೇನೆ” ಎಂದು ಹೇಳಿದ್ದರು.

ಅದಾಗಿಯೂ ದೇಶದ ಪ್ರಮುಖ ಇಂಗ್ಲಿಷ್‌‌‌‌ ಪತ್ರಿಕೆಯಾಗಿರುವ ಡೆಕ್ಕನ್ ಹೆರಾಲ್ಡ್‌ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, “ಶಿಯಾ ಸಮುದಾಯದ ಹುಡುಗಿಯನ್ನು ಪ್ರೀತಿಸುತ್ತಿದ್ದ ಕಾರಣ ಫಾಝಿಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೊಹಮ್ಮದ್ ಫಾಝಿಲ್ ಅವರು ಸುನ್ನಿ ಮುಸ್ಲಿಂ ಎಂದು ಪೊಲೀಸ್ ಮೂಲಗಳು ತಿಳಿಸಿವೆ” ಎಂದು ವರದಿ ಮಾಡಿದೆ.

ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ

ಡೆಕ್ಕನ್ ಹೆರಾಲ್ಡ್‌‌ನ ಈ ವರದಿಯನ್ನು ಉಲ್ಲೇಖಿಸಿ ಭಾರತ ಮಟ್ಟದಲ್ಲಿ ಬಿಜೆಪಿಯ ಪರವಾಗಿ ಪ್ರೊಪಗಾಂಡ ಹರಡುವ ಒಪಿಂಡಿಯಾ ಎಂಬ ವೆಬ್‌ಸೈಟ್‌, “ಸುನ್ನಿ ಫಾಜಿಲ್ ಶಿಯಾ ಹುಡುಗಿಯನ್ನು ಪ್ರೀತಿಸುತ್ತಿರುವುದೇ ಹತ್ಯೆಗೆ ಕಾರಣ ಎಂದು ವರದಿಗಳು ಸೂಚಿಸುತ್ತವೆ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ.

ಆರ್ಕೈವ್‌‌ ಇಲ್ಲಿ ಕ್ಲಿಕ್ ಮಾಡಿ

ವಾಸ್ತವದಲ್ಲಿ ಕೊಲೆಯಾದ ಫಾಝಿಲ್‌ ಆದರೆ ಸುನ್ನಿ ಮುಸ್ಲಿಂ ಆಗಿದ್ದು, ಬಿಜೆಪಿ ಬೆಂಬಲಿಗರು ಹೇಳುವಂತೆ ಶಿಯಾ ಪಂಥವನ್ನು ಅನುಸರಿಸುವ ಯುವಕನಲ್ಲ. ಅವರ ಅಂತ್ಯ ಸಂಸ್ಕಾರವನ್ನು ಸುರತ್ಕಲ್‌ನ ಮಂಗಳಪೇಟೆಯ ಮುಹಿಯದ್ದೀನ್ ಮಸೀದಿಯಲ್ಲಿ ಮಾಡಲಾಗಿದೆ. ಈ ಮಸೀದಿ ಸುನ್ನಿ ಮಸೀದಿಯಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಫಾಝಿಲ್ ಅವರು ಸುನ್ನಿ ಪಂಥವನ್ನು ಅನುಸರಿಸುತ್ತಿದ್ದರು. ಅಷ್ಟಕ್ಕೂ ಸುರತ್ಕಲ್ ಆಸುಪಾಸಿನಲ್ಲಿ ಶಿಯಾ ಪಂಥದ ಜನರು ಕೂಡಾ ಇಲ್ಲ ಎಂದು ಸ್ಥಳೀಯರು ಉಲ್ಲೇಖಿಸುತ್ತಾರೆ. ಹೀಗಾಗಿ ಬಿಜೆಪಿ ಬೆಂಬಲಿಗರು ಸುನ್ನಿ ಶಿಯಾ ಕಟ್ಟುಕತೆಯನ್ನು ತನಿಖೆಯ ದಾರಿ ತಪ್ಪಿಸಲು ಬೇಕಾಗಿ ದುರುದ್ದೇಶ ಪೂರ್ವಕವಾಗಿ ಹರಿಯ ಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

‘‘ಸುನ್ನಿ-ಶಿಯಾ ಪ್ರೇಮ ವಿವಾದ’’ ಎಂಬುವುದು ಬಲಪಂಥೀಯರು ಕಟ್ಟಿದ ಅಪ್ಪಟ ಕಟ್ಟುಕತೆ ಎಂದು ಬ್ಯಾರಿ ಸಮುದಾಯದ ಸಂಸ್ಕೃತಿ ಚಿಂತಕ, ಬರಹಗಾರ ಇಸ್ಮತ್ ಪಜೀರ್‌ ಅವರು ಆರೋಪಿಸುತ್ತಾರೆ. “ವಾಸ್ತವದಲ್ಲಿ ಕರಾವಳಿಯಲ್ಲಿ ಶಿಯಾ ಸಮುದಾಯ ತೀರಾ ಇಲ್ಲವೆ ಇಲ್ಲ ಎನ್ನುವಷ್ಟು ಕಡಿಮೆ, ಇದ್ದರೂ ಒಂದಷ್ಟು ಬೆರಳೆಣಿಕೆಯ ಆಗರ್ಭ ಶ್ರೀಮಂತರು ವ್ಯಾಪರಕ್ಕೆ ಅಷ್ಟೆ ಬರುತ್ತಾರೆ. ಅವರು ಇಲ್ಲಿನ ಬ್ಯಾರಿ ಸಮುದಾಯ(ಸ್ಥಳೀಯ ಮುಸ್ಲಿಮರು)ದೊಂದಿಗೆ ಸಾಮಾಜಿಕವಾಗಿ ಬೆರೆಯುವುದೆ ಇಲ್ಲ. ಅವರಿಗೆ ಬ್ಯಾರಿ ಭಾಷೆಯು ಬರುವುದಿಲ್ಲ” ಎಂದು ಹೇಳಿದ್ದಾರೆ.

ಅದೂ ಅಲ್ಲದೆ ಶಿಯಾ-ಸುನ್ನಿ ಎಂಬುವುದು ಮುಸ್ಲಿಮರ ಒಳಗಿನ ಜಾತಿಗಳೂ ಅಲ್ಲ ಎಂದು ಇಸ್ಮತ್ ಹೇಳುತ್ತಾರೆ. ಸುನ್ನಿ-ಶಿಯಾ ಎಂಬುವುದು ತಾತ್ವಿಕ ಭಿನ್ನತೆಗಳ ಆಧಾರದಲ್ಲಿ ವಿಗಂಡನೆಗೊಂಡಿರುವ ಪಂಥಗಳಾಗಿವೆ. ಭಾರತದಲ್ಲಿ ಕಂಡು ಬರುವ ಜಾತಿ ಮಾದರಿಯಲ್ಲಿ ಅವುಗಳು ಇರುವುದಿಲ್ಲ. ಜಾತಿಗಳು ಜನ್ಮತಃ ಬರುತ್ತದೆ ಮತ್ತು ತಮ್ಮ ಹೆತ್ತವರ ಜಾತಿಯೆ ಮಕ್ಕಳ ಜಾತಿಯೂ ಆಗಿರುತ್ತದೆ. ಅವುಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಸುನ್ನಿ ಮುಸ್ಲಿಂ ಒಬ್ಬ ಯಾವುದೇ ಸಮಯಕ್ಕೆ ಶಿಯಾ ಆಗಬಹುದಾಗಿದೆ ಹಾಗೆಯೆ ಶಿಯಾ ಒಬ್ಬ ಸುನ್ನಿ ಕೂಡಾ ಆಗಬಹುದಾಗಿದೆ. ಅವುಗಳು ಕೇವಲ ಸೈದ್ಧಾಂತಿಕ ವಿಚಾರ ಧಾರೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

ಫಾಝಿಲ್ ಕೊಲೆಯು ಸುನ್ನಿ-ಶಿಯಾ ಪ್ರೇಮ ವಿಚಾರದ ಕಾರಣದಕ್ಕೆ ನಡೆದಿದೆ ಎಂಬ ವರದಿಯ ಬಗ್ಗೆ ಮಾತನಾಡಿದ ಇ‌ಸ್ಮತ್ ಪಜೀರ್‌, “Deccan herald‌ ನಂತಹ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯೂ ಈ‌ ಸಂಘಪರಿವಾರದ ಆಯಾಮವನ್ನು‌ ಸುದ್ಧಿ‌ಮೂಲವಾಗಿ ಎತ್ತಿಕೊಂಡು ವರದಿ ಮಾಡಿ‌‌ ಉನ್ನತ ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆಂದು ಪ್ರಕಟಿಸಿದೆ ಎಂಬುವುದು ಬೇಸರದ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...