Homeಪುಸ್ತಕ ವಿಮರ್ಶೆಅರಸು ಕುರನ್ಗರಾಯ: ಮರೆತ ದಾರಿಗಳನ್ನು ಕೂಡಿಸುವ ಕೊಂಡಿ

ಅರಸು ಕುರನ್ಗರಾಯ: ಮರೆತ ದಾರಿಗಳನ್ನು ಕೂಡಿಸುವ ಕೊಂಡಿ

- Advertisement -
- Advertisement -

ಡಾ.ರವಿಕುಮಾರ್ ನೀಹ ಅವರ ಸಂಶೋಧನಾ ಕೃತಿಯಾದ ’ಅರಸು ಕುರನ್ಗರಾಯ’ ಮರೆತ ದಾರಿಗಳನ್ನು ಕೂಡಿಸುವ ಕೊಂಡಿಯಾಗಿದೆ. ಮೂಲತಃ ಉಪನ್ಯಾಸಕರಾದ ರವಿಕುಮಾರ್ ಸಂಶೋಧಕರೂ ಆಗಿರುವುದರಿಂದ ತಮ್ಮ ಜಿಲ್ಲೆಯ ಜಾನಪದ ನಿಧಿಯೇ ಆಗಿರುವ ಕುರನ್ಗರಾಯನ ಇತಿಹಾಸಕ್ಕೆ ಕೈಚಾಚಿದ್ದಾರೆ. ಮರೆತ ದಾರಿಗಳನ್ನು ಕೂಡಿಸುವ ಮಹತ್ಕಾರ್ಯದಲ್ಲಿ ರವಿಕುಮಾರ್ ಅವರ ಬೊಗಸೆ ತುಂಬುವಷ್ಟು ಕುರನ್ಗರಾಯ ದಕ್ಕಿದ್ದಾನೆ. ಆ ಮೂಲಕ ಕನ್ನಡ ನೆಲದ ಮಹೋನ್ನತ ಚರಿತ್ರೆಯೊಂದು ಅಕ್ಷರಗಳಲ್ಲಿ ದಾಖಲಾಗಲು ಸಾಧ್ಯವಾಗಿದೆ.

ಭಾರತದ ಚರಿತ್ರೆಯು ಉಳ್ಳವರ ಮತ್ತು ಉನ್ನತ ಜಾತಿಗಳ ’ಹೆಗ್ಗಳಿಕೆ’ಯ ದಾಖಲೆಯಷ್ಟೇ ಆಗಿದೆಯೆಂಬುದನ್ನು ಕೆಲವರಾದರೂ ಸಂಶೋಧಕರು ಕಂಡುಕೊಂಡು, ಅದು ಬದಲಾಗಬೇಕೆಂದ ಎಚ್ಚರ ವಹಿಸಿದ್ದಾರೆ. ಆದರೂ, ಇಡೀ ದೇಶದ ನೆಲದ ಮಣ್ಣಿನ ಕಣಕಣದಲ್ಲೂ ಬೆರೆತಿರುವ ನಮ್ಮ ತಳ ಸಮುದಾಯಗಳ ನಿಜದ ಚರಿತ್ರೆ ಅಕ್ಷರಕ್ಕೆ ದಕ್ಕಿಯೂ ದಕ್ಕದ ಹಾಗೆ ಸವಾಲು ಹಾಕುತ್ತಲೇ ಇದೆ. ಅಂಥಾ ನಿಜದ ಚರಿತ್ರೆ ಅರಸು ಕುರನ್ಗರಾಯನದು.

ತುಮಕೂರು ಜಿಲ್ಲೆಯಲ್ಲಿ ಗಿಡಮೂಲಿಕೆಗಳಿಗೆ ಹೆಸರಾದ ಸಿದ್ಧರಬೆಟ್ಟದ ಸುತ್ತಲಿನ ಪ್ರದೇಶವನ್ನು ಆಳ್ವಿಕೆ ಮಾಡುತ್ತಿದ್ದ ಕುರನ್ಗರಾಯನೆಂಬ ರಾಜ ಆ ಬೆಟ್ಟದ ದಕ್ಷಿಣ ದಿಕ್ಕಿನಲ್ಲೊಂದು ಕೋಟೆ ಕಟ್ಟಿಸಿ ಬಹಳಷ್ಟು ವರ್ಷಗಳ ಕಾಲ ರಾಜ್ಯಭಾರ ನಡೆಸಿದ್ದಾನೆ. ಈತ ತುಮಕೂರು, ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಹೆಚ್ಚು ಸಂಖ್ಯೆಯಲ್ಲಿರುವ ಮಾದಿಗ ಸಮುದಾಯಕ್ಕೆ ಸೇರಿದವನೆಂಬುದು ವಿಶೇಷ ಸಂಗತಿ. ಭಾರತದ ಚಾತುರ್ವರ್ಣ ವ್ಯವಸ್ಥೆಯು ಪ್ರತಿಪಾದಿಸುತ್ತಿದ್ದ ಮೌಲ್ಯಗಳಿಗೆ ವಿರುದ್ಧವಾಗಿ ಕನ್ನಡ ನೆಲದಲ್ಲಿ ನಡೆದಿರಬಹುದಾದ ಮಹತ್ ಕ್ರಾಂತಿಗಳಿಗೆ ಕುರನ್ಗರಾಯ ಒಂದು ಉದಾಹರಣೆ. ಸಿದ್ಧರಬೆಟ್ಟದ ಸುತ್ತಲಿನ ಭಾಗದಲ್ಲಿ ಕುರನ್ಗರಾಯನ ಕುರಿತ ಲಾವಣಿಗಳು ಪ್ರಚಲಿತದಲ್ಲಿವೆ ಎಂದರೆ ಅವನ ಕೀರ್ತಿ ಎಷ್ಟರಮಟ್ಟಿಗಿನದ್ದು ಎಂಬುದು ಅರ್ಥವಾಗುತ್ತದೆ.

ಕುರನ್ಗರಾಯ ಆಳುತ್ತಿದ್ದ ಭೂಭಾಗ ಸಿದ್ಧರು ಬದುಕಿದ ಪ್ರದೇಶವಾಗಿತ್ತು. ಬಹುದೊಡ್ಡ ಶ್ರಮಣ ಪರಂಪರೆಯ ನೆಲೆವೀಡನ್ನು ಆಳುತ್ತಿದ್ದ ರಾಜನೊಬ್ಬ ವೈದಿಕ ಸಂಸ್ಕೃತಿಯ ಚಾತುರ್ವರ್ಣ ಪದ್ಧತಿಯಾಚೆಗೆ, ಜನರೊಪ್ಪುವ ಹಾಗೆ, ಜನರ ಬಾಯಲ್ಲಿ ಲಾವಣಿಯಾಗುವ ಹಾಗೆ ಬದುಕಿದ್ದನೆಂಬುದು ನಮ್ಮ ನೆಲವು ಒಂದು ಕಾಲಕ್ಕೆ ಅನನ್ಯವಾದ ಸೌಹಾರ್ದ ಪರಂಪರೆಯೊಂದರ ಭಾಗವೆಂಬುದನ್ನು ಅರ್ಥಮಾಡಿಸುತ್ತದೆ. ಕರ್ನಾಟಕದಲ್ಲಿ ಸಿದ್ಧರ ಕಾಲವೆಂದು ಗುರುತಿಸುವ ಹದಿನೇಳು-ಹದಿನೆಂಟನೇ ಶತಮಾನದಲ್ಲಿ ಕುರನ್ಗರಾಯ ಆಳಿರಬಹುದೆಂದು ಹಲವು ಐತಿಹಾಸಿಕ ಮತ್ತು ಪೌರಾಣಿಕ ದಾಖಲೆಗಳ ಆಧಾರದ ಮೇಲೆ ರವಿಕುಮಾರ್ ಊಹಿಸಿದ್ದಾರೆ. ಹೈದರಾಲಿಯು ಕುರನ್ಗರಾಯನ ಆಡಳಿತಾವಧಿಯಲ್ಲಿ ಸಿದ್ಧರಬೆಟ್ಟಕ್ಕೆ ಬಂದು ಸಿದ್ಧರ ದರ್ಶನ ಪಡೆದನೆಂಬುದಕ್ಕೆ ಐತಿಹ್ಯಗಳಿವೆ. ಮಾದಿಗ ಸಮುದಾಯದ ರಾಜನೊಬ್ಬ ಆಳುತ್ತಿರುವ ಪ್ರದೇಶದ ಬಗ್ಗೆ ಹೈದರಾಲಿಗೆ ಇದ್ದಿರಬಹುದಾದ ಸ್ನೇಹಪರ ಕಾಳಜಿಯ ಕುರಿತು ಆ ಪ್ರದೇಶದಲ್ಲಿ ಲಾವಣಿಗಳಿವೆ. ಆತನು ತಮ್ಮ ಪ್ರದೇಶಕ್ಕೆ ಬಂದಾಗ ದನದ ಮಾಂಸದ ಅಡುಗೆ ಮಾಡಿ ಬಡಿಸಿದ ಬಗ್ಗೆ ವಿವರಗಳಿವೆ ಎಂದರೆ ಹೈದರ್ ಮತ್ತು ಕುರನ್ಗರಾಯನ ಸ್ನೇಹಸಂಬಂಧ ಎಷ್ಟು ಸಾವಯವ ಎನ್ನುವುದು ಅರ್ಥವಾಗುತ್ತದೆ. ಅಲ್ಲದೆ ಕುರನ್ಗರಾಯ ಆ ಭಾಗದಲ್ಲಿ ಪರಿಚಯಿಸಿದ್ದ ತೊಗಲಕಾಸು (ಚರ್‍ಮದ ನಾಣ್ಯ) ಚಲಾವಣೆಯ ಬಗ್ಗೆ ಹೈದರಾಲಿ ಪ್ರಶಂಸೆಯ ಮಾತುಗಳನ್ನಾಡಿರುವ ಕುರಿತು ವಿವರಗಳು ಸಿಕ್ಕುತ್ತವೆ.

ಡಾ.ರವಿಕುಮಾರ್ ನೀಹ

ಹೈದರಾಲಿ ಮತ್ತು ಕುರನ್ಗರಾಯನ ಈ ’ಅವೈದಿಕ ಪ್ರೀತಿ’ಯ ಕಾರಣದಿಂದ ಈ ದಲಿತರಾಜನನ್ನು ಭಾರತೀಯ ಇತಿಹಾಸ ಹೊರಗೇ ಇಟ್ಟಿದೆ. ಓ.ನಾಗರಾಜ್ ಅವರು ಬರೆದಿರುವ ’ಕುರಂಗರಾಜ ವೈಭವ’ ಎನ್ನುವ ಕಾದಂಬರಿಯೊಂದಿದ್ದು, ಅದು ಕುರನ್ಗರಾಯನ ಬಗೆಗಿನ ಜನರ ನಂಬಿಕೆಗಳನ್ನು ಆಧರಿಸಿದೆ. ರವಿಕುಮಾರ್ ನೀಹ ಈ ಜನರ ನಂಬಿಕೆಗಳಿಂದಲೇ ಇತಿಹಾಸದೊಳಗೆ ಪ್ರವೇಶಿಸಿದರೂ, ಸಂಶೋಧನೆಯ ಅಧ್ಯಯನ ಕ್ರಮದಿಂದ ಬಹಳಷ್ಟು ಅಕೆಡೆಮಿಕ್ ಕೃತಿಗಳನ್ನು, ಗೆಜೆಟಿಯರ್‌ಗಳನ್ನೂ ಅಭ್ಯಸಿಸಿ ತಮ್ಮ ಕೃತಿಯನ್ನು ಬೆಳೆಸಿದ್ದಾರೆ. ಈ ಮೂಲಕ ಇತಿಹಾಸದಲ್ಲಿ ಮುಚ್ಚಿ ಹೋಗಿರುವ ದಲಿತರ ಆಡಳಿತದ ಪದರುಗಳನ್ನು ಬಿಡಿಸಲು ಕಾರಣರಾಗಿದ್ದಾರೆ. ಕ್ಷತ್ರಿಯ ಧರ್ಮವೆಂದು ತಳಜಾತಿಗಳ ರಾಜ್ಯಾಡಳಿತದ ಸಾಧ್ಯತೆಗಳನ್ನೇ ಮುಚ್ಚಿಹಾಕಿದ ವೈದಿಕ ಇತಿಹಾಸವು ಅದಲಿತ ರಾಜರ ಬಗೆಗೂ ವಸ್ತುನಿಷ್ಠ ದಾಖಲೆಗಳನ್ನು ಮಾಡಿಲ್ಲ. ಒನಕೆ ಓಬವ್ವರಂತಹ ದಲಿತ ಹೋರಾಟಗಾರ್ತಿಯ ಬಗೆಗಿನ ಪ್ರಾದೇಶಿಕ ನಂಬಿಕೆಗಳನ್ನೂ ಅಪಮಾನಿಸುವಂತೆ ’ಕೆಲಸದವಳಾಗಿ’ ಬಿಂಬಿಸಿದ ಇತಿಹಾಸ ನಮ್ಮದು. ಇದರ ಭಾಗವಾಗಿಯೇ ಕನ್ನಡಿಗರ ಮನೆಮನೆಗಳಲ್ಲಿ ಅಭಿಮಾನವಿರಿಸಿಕೊಳ್ಳಬೇಕಿದ್ದ ಹೈದರಾಲಿ ಮತ್ತು ಟಿಪ್ಪು ಸುಲ್ತಾನರ ಕುರಿತ ಇತಿಹಾಸವನ್ನು ತಿರುಚಲಾಗುತ್ತಿದೆ. ಇಂತ ಇತಿಹಾಸದ ಉಬ್ಬುಶಿಲ್ಪಗಳಂಥ ದಾಖಲೆಗಳ ಒಳನುಗ್ಗಿ ರವಿಕುಮಾರ್ ಫಲವತ್ತಾದ ಸೌಹಾರ್ದವೂ, ಅವೈದಿಕವೂ, ಸಹಿಷ್ಣುವೂ ಆದ ದಲಿತ ಪರಂಪರೆಯ ಕಾರುಣ್ಯದ ನಿಜಕತೆಯನ್ನು ಹೆಕ್ಕಿದ್ದಾರೆ ಹಾಗೂ ಸಂಶೋಧಕರಿಗೆ ಮಾದರಿಯಾದ ಒಂದು ಮೇಲ್ಪಂಕ್ತಿಯನ್ನು ಹಾಕಿದ್ದಾರೆ.

ತಮ್ಮ ತಾಯಿ ಕುರನ್ಗರಾಯನ ಕುರಿತು ಹೇಳಿದ ಒಂದು ಕತೆಯ ಜಾಡನ್ನು ಹಿಡಿದು ಆ ಪ್ರದೇಶಕ್ಕೆ ಪ್ರವೇಶಿಸಿದ ರವಿ ಕನ್ನಡ ನಾಡಿನಲ್ಲಿ ಸಮಾಧಿಯಾಗಿರಬಹುದಾದ ದಲಿತರ ಮಹತ್ತರ ಇತಿಹಾಸದ ಶೋಧನಾ ಕಾರ್ಯವನ್ನು ಉದ್ಘಾಟಿಸಿದ್ದಾರೆ. ಈಗಾಗಲೇ ಬಹಳಷ್ಟು ವಿದ್ವಾಂಸರು ಈ ರೀತಿಯ ಸಂಶೋಧನೆಯನ್ನು ಕೈಗೊಂಡಿರುವರಾದರೂ ದಲಿತ ಸಂಶೋಧಕರ ಕಣ್ಣೋಟಕ್ಕೆ ದಕ್ಕುವ ದಾಖಲೆಗಳು ಹೊಸಹಾದಿಯನ್ನು ತೋರಬಲ್ಲವು.

ಶರಣರು ಬಾಳಿ ಹೋದ ಕನ್ನಡದ ನೆಲದಲ್ಲಿ ದಲಿತ ರಾಜನೊಬ್ಬ ಯುದ್ಧ ಮಾಡದೆ, ಯಾರನ್ನೂ ಒತ್ತೆಯಾಗಿಸಿಟ್ಟುಕೊಳ್ಳದೆ, ಲೋಲುಪನಾಗದೆ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ಇತಿಹಾಸವನ್ನು ಡಾ.ರವಿಕುಮಾರ್ ನೀಹ ನಮ್ಮೆದುರು ತೆರೆದಿಟ್ಟಿದ್ದಾರೆ. ಅವರು ಸಂಶೋಧನೆಗೆ ತೊಡಗಿದ ಭೂಪ್ರದೇಶದಲ್ಲಿ ಕೊರಮ ಜಾತಿಯಂತಹ ಸಣ್ಣ ಸಮುದಾಯಗಳ ರಾಜರೂ ಆಳಿರುವ ಬಗ್ಗೆ ಕುರುಹುಗಳಿವೆ. ಇದನ್ನು ರವಿಕುಮಾರ್ ಸಮರ್ಥವಾಗಿ ಗುರುತಿಸಿದ್ದಾರೆ. ಆ ಮೂಲಕ ನಿಜವಾದ ಭಾರತ ಚರಿತ್ರೆಗೆ
ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಮುಂದಡಿಯಿಟ್ಟಿದ್ದಾರೆ. ಅವರ ಸಂಶೋಧನೆಯ ’ಅರಸು ಕುರನ್ಗರಾಯ’ ಕನ್ನಡಿಗರೆಲ್ಲರೂ ಓದಲೇಬೇಕಾದ ಕೃತಿಯಾಗಿದೆ.

ಹುಲಿಕುಂಟೆ ಮೂರ್ತಿ

ಹುಲಿಕುಂಟೆ ಮೂರ್ತಿ
ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆಯ ಮೂರ್ತಿ, ಕನ್ನಡ ಅಧ್ಯಾಪಕರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂಎ ಮಾಡುವ ಮುಂಚಿನಿಂದಲೂ ಸಾಮಾಜಿಕ ಚಳವಳಿಗಳಲ್ಲಿ ಕ್ರಿಯಾಶೀಲರು. ‘ನೀಲಿ ಗ್ಯಾನ’ ಕವನ ಸಂಕಲನಕ್ಕೂ ಮುಂಚೆಯೇ ಕವಿಯಾಗಿ ಗುರುತು ಪಡೆದುಕೊಂಡಿದ್ದರು. ಕೌದಿ ಚಿತ್ರದ ಗೀತರಚನೆಗಾಗಿ ರಾಜ್ಯಪ್ರಶಸ್ತಿ ಪಡೆದಿದ್ದಾರೆ.


ಇದನ್ನೂ ಓದಿ: ಪುಸ್ತಕ ಪರಿಚಯ; ಕಾಣೆಯಾಗಿದ್ದಾರೆ ಸಂಪಾದಕರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...