Homeಪುಸ್ತಕ ವಿಮರ್ಶೆಅರಸು ಕುರನ್ಗರಾಯ: ಮರೆತ ದಾರಿಗಳನ್ನು ಕೂಡಿಸುವ ಕೊಂಡಿ

ಅರಸು ಕುರನ್ಗರಾಯ: ಮರೆತ ದಾರಿಗಳನ್ನು ಕೂಡಿಸುವ ಕೊಂಡಿ

- Advertisement -
- Advertisement -

ಡಾ.ರವಿಕುಮಾರ್ ನೀಹ ಅವರ ಸಂಶೋಧನಾ ಕೃತಿಯಾದ ’ಅರಸು ಕುರನ್ಗರಾಯ’ ಮರೆತ ದಾರಿಗಳನ್ನು ಕೂಡಿಸುವ ಕೊಂಡಿಯಾಗಿದೆ. ಮೂಲತಃ ಉಪನ್ಯಾಸಕರಾದ ರವಿಕುಮಾರ್ ಸಂಶೋಧಕರೂ ಆಗಿರುವುದರಿಂದ ತಮ್ಮ ಜಿಲ್ಲೆಯ ಜಾನಪದ ನಿಧಿಯೇ ಆಗಿರುವ ಕುರನ್ಗರಾಯನ ಇತಿಹಾಸಕ್ಕೆ ಕೈಚಾಚಿದ್ದಾರೆ. ಮರೆತ ದಾರಿಗಳನ್ನು ಕೂಡಿಸುವ ಮಹತ್ಕಾರ್ಯದಲ್ಲಿ ರವಿಕುಮಾರ್ ಅವರ ಬೊಗಸೆ ತುಂಬುವಷ್ಟು ಕುರನ್ಗರಾಯ ದಕ್ಕಿದ್ದಾನೆ. ಆ ಮೂಲಕ ಕನ್ನಡ ನೆಲದ ಮಹೋನ್ನತ ಚರಿತ್ರೆಯೊಂದು ಅಕ್ಷರಗಳಲ್ಲಿ ದಾಖಲಾಗಲು ಸಾಧ್ಯವಾಗಿದೆ.

ಭಾರತದ ಚರಿತ್ರೆಯು ಉಳ್ಳವರ ಮತ್ತು ಉನ್ನತ ಜಾತಿಗಳ ’ಹೆಗ್ಗಳಿಕೆ’ಯ ದಾಖಲೆಯಷ್ಟೇ ಆಗಿದೆಯೆಂಬುದನ್ನು ಕೆಲವರಾದರೂ ಸಂಶೋಧಕರು ಕಂಡುಕೊಂಡು, ಅದು ಬದಲಾಗಬೇಕೆಂದ ಎಚ್ಚರ ವಹಿಸಿದ್ದಾರೆ. ಆದರೂ, ಇಡೀ ದೇಶದ ನೆಲದ ಮಣ್ಣಿನ ಕಣಕಣದಲ್ಲೂ ಬೆರೆತಿರುವ ನಮ್ಮ ತಳ ಸಮುದಾಯಗಳ ನಿಜದ ಚರಿತ್ರೆ ಅಕ್ಷರಕ್ಕೆ ದಕ್ಕಿಯೂ ದಕ್ಕದ ಹಾಗೆ ಸವಾಲು ಹಾಕುತ್ತಲೇ ಇದೆ. ಅಂಥಾ ನಿಜದ ಚರಿತ್ರೆ ಅರಸು ಕುರನ್ಗರಾಯನದು.

ತುಮಕೂರು ಜಿಲ್ಲೆಯಲ್ಲಿ ಗಿಡಮೂಲಿಕೆಗಳಿಗೆ ಹೆಸರಾದ ಸಿದ್ಧರಬೆಟ್ಟದ ಸುತ್ತಲಿನ ಪ್ರದೇಶವನ್ನು ಆಳ್ವಿಕೆ ಮಾಡುತ್ತಿದ್ದ ಕುರನ್ಗರಾಯನೆಂಬ ರಾಜ ಆ ಬೆಟ್ಟದ ದಕ್ಷಿಣ ದಿಕ್ಕಿನಲ್ಲೊಂದು ಕೋಟೆ ಕಟ್ಟಿಸಿ ಬಹಳಷ್ಟು ವರ್ಷಗಳ ಕಾಲ ರಾಜ್ಯಭಾರ ನಡೆಸಿದ್ದಾನೆ. ಈತ ತುಮಕೂರು, ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಹೆಚ್ಚು ಸಂಖ್ಯೆಯಲ್ಲಿರುವ ಮಾದಿಗ ಸಮುದಾಯಕ್ಕೆ ಸೇರಿದವನೆಂಬುದು ವಿಶೇಷ ಸಂಗತಿ. ಭಾರತದ ಚಾತುರ್ವರ್ಣ ವ್ಯವಸ್ಥೆಯು ಪ್ರತಿಪಾದಿಸುತ್ತಿದ್ದ ಮೌಲ್ಯಗಳಿಗೆ ವಿರುದ್ಧವಾಗಿ ಕನ್ನಡ ನೆಲದಲ್ಲಿ ನಡೆದಿರಬಹುದಾದ ಮಹತ್ ಕ್ರಾಂತಿಗಳಿಗೆ ಕುರನ್ಗರಾಯ ಒಂದು ಉದಾಹರಣೆ. ಸಿದ್ಧರಬೆಟ್ಟದ ಸುತ್ತಲಿನ ಭಾಗದಲ್ಲಿ ಕುರನ್ಗರಾಯನ ಕುರಿತ ಲಾವಣಿಗಳು ಪ್ರಚಲಿತದಲ್ಲಿವೆ ಎಂದರೆ ಅವನ ಕೀರ್ತಿ ಎಷ್ಟರಮಟ್ಟಿಗಿನದ್ದು ಎಂಬುದು ಅರ್ಥವಾಗುತ್ತದೆ.

ಕುರನ್ಗರಾಯ ಆಳುತ್ತಿದ್ದ ಭೂಭಾಗ ಸಿದ್ಧರು ಬದುಕಿದ ಪ್ರದೇಶವಾಗಿತ್ತು. ಬಹುದೊಡ್ಡ ಶ್ರಮಣ ಪರಂಪರೆಯ ನೆಲೆವೀಡನ್ನು ಆಳುತ್ತಿದ್ದ ರಾಜನೊಬ್ಬ ವೈದಿಕ ಸಂಸ್ಕೃತಿಯ ಚಾತುರ್ವರ್ಣ ಪದ್ಧತಿಯಾಚೆಗೆ, ಜನರೊಪ್ಪುವ ಹಾಗೆ, ಜನರ ಬಾಯಲ್ಲಿ ಲಾವಣಿಯಾಗುವ ಹಾಗೆ ಬದುಕಿದ್ದನೆಂಬುದು ನಮ್ಮ ನೆಲವು ಒಂದು ಕಾಲಕ್ಕೆ ಅನನ್ಯವಾದ ಸೌಹಾರ್ದ ಪರಂಪರೆಯೊಂದರ ಭಾಗವೆಂಬುದನ್ನು ಅರ್ಥಮಾಡಿಸುತ್ತದೆ. ಕರ್ನಾಟಕದಲ್ಲಿ ಸಿದ್ಧರ ಕಾಲವೆಂದು ಗುರುತಿಸುವ ಹದಿನೇಳು-ಹದಿನೆಂಟನೇ ಶತಮಾನದಲ್ಲಿ ಕುರನ್ಗರಾಯ ಆಳಿರಬಹುದೆಂದು ಹಲವು ಐತಿಹಾಸಿಕ ಮತ್ತು ಪೌರಾಣಿಕ ದಾಖಲೆಗಳ ಆಧಾರದ ಮೇಲೆ ರವಿಕುಮಾರ್ ಊಹಿಸಿದ್ದಾರೆ. ಹೈದರಾಲಿಯು ಕುರನ್ಗರಾಯನ ಆಡಳಿತಾವಧಿಯಲ್ಲಿ ಸಿದ್ಧರಬೆಟ್ಟಕ್ಕೆ ಬಂದು ಸಿದ್ಧರ ದರ್ಶನ ಪಡೆದನೆಂಬುದಕ್ಕೆ ಐತಿಹ್ಯಗಳಿವೆ. ಮಾದಿಗ ಸಮುದಾಯದ ರಾಜನೊಬ್ಬ ಆಳುತ್ತಿರುವ ಪ್ರದೇಶದ ಬಗ್ಗೆ ಹೈದರಾಲಿಗೆ ಇದ್ದಿರಬಹುದಾದ ಸ್ನೇಹಪರ ಕಾಳಜಿಯ ಕುರಿತು ಆ ಪ್ರದೇಶದಲ್ಲಿ ಲಾವಣಿಗಳಿವೆ. ಆತನು ತಮ್ಮ ಪ್ರದೇಶಕ್ಕೆ ಬಂದಾಗ ದನದ ಮಾಂಸದ ಅಡುಗೆ ಮಾಡಿ ಬಡಿಸಿದ ಬಗ್ಗೆ ವಿವರಗಳಿವೆ ಎಂದರೆ ಹೈದರ್ ಮತ್ತು ಕುರನ್ಗರಾಯನ ಸ್ನೇಹಸಂಬಂಧ ಎಷ್ಟು ಸಾವಯವ ಎನ್ನುವುದು ಅರ್ಥವಾಗುತ್ತದೆ. ಅಲ್ಲದೆ ಕುರನ್ಗರಾಯ ಆ ಭಾಗದಲ್ಲಿ ಪರಿಚಯಿಸಿದ್ದ ತೊಗಲಕಾಸು (ಚರ್‍ಮದ ನಾಣ್ಯ) ಚಲಾವಣೆಯ ಬಗ್ಗೆ ಹೈದರಾಲಿ ಪ್ರಶಂಸೆಯ ಮಾತುಗಳನ್ನಾಡಿರುವ ಕುರಿತು ವಿವರಗಳು ಸಿಕ್ಕುತ್ತವೆ.

ಡಾ.ರವಿಕುಮಾರ್ ನೀಹ

ಹೈದರಾಲಿ ಮತ್ತು ಕುರನ್ಗರಾಯನ ಈ ’ಅವೈದಿಕ ಪ್ರೀತಿ’ಯ ಕಾರಣದಿಂದ ಈ ದಲಿತರಾಜನನ್ನು ಭಾರತೀಯ ಇತಿಹಾಸ ಹೊರಗೇ ಇಟ್ಟಿದೆ. ಓ.ನಾಗರಾಜ್ ಅವರು ಬರೆದಿರುವ ’ಕುರಂಗರಾಜ ವೈಭವ’ ಎನ್ನುವ ಕಾದಂಬರಿಯೊಂದಿದ್ದು, ಅದು ಕುರನ್ಗರಾಯನ ಬಗೆಗಿನ ಜನರ ನಂಬಿಕೆಗಳನ್ನು ಆಧರಿಸಿದೆ. ರವಿಕುಮಾರ್ ನೀಹ ಈ ಜನರ ನಂಬಿಕೆಗಳಿಂದಲೇ ಇತಿಹಾಸದೊಳಗೆ ಪ್ರವೇಶಿಸಿದರೂ, ಸಂಶೋಧನೆಯ ಅಧ್ಯಯನ ಕ್ರಮದಿಂದ ಬಹಳಷ್ಟು ಅಕೆಡೆಮಿಕ್ ಕೃತಿಗಳನ್ನು, ಗೆಜೆಟಿಯರ್‌ಗಳನ್ನೂ ಅಭ್ಯಸಿಸಿ ತಮ್ಮ ಕೃತಿಯನ್ನು ಬೆಳೆಸಿದ್ದಾರೆ. ಈ ಮೂಲಕ ಇತಿಹಾಸದಲ್ಲಿ ಮುಚ್ಚಿ ಹೋಗಿರುವ ದಲಿತರ ಆಡಳಿತದ ಪದರುಗಳನ್ನು ಬಿಡಿಸಲು ಕಾರಣರಾಗಿದ್ದಾರೆ. ಕ್ಷತ್ರಿಯ ಧರ್ಮವೆಂದು ತಳಜಾತಿಗಳ ರಾಜ್ಯಾಡಳಿತದ ಸಾಧ್ಯತೆಗಳನ್ನೇ ಮುಚ್ಚಿಹಾಕಿದ ವೈದಿಕ ಇತಿಹಾಸವು ಅದಲಿತ ರಾಜರ ಬಗೆಗೂ ವಸ್ತುನಿಷ್ಠ ದಾಖಲೆಗಳನ್ನು ಮಾಡಿಲ್ಲ. ಒನಕೆ ಓಬವ್ವರಂತಹ ದಲಿತ ಹೋರಾಟಗಾರ್ತಿಯ ಬಗೆಗಿನ ಪ್ರಾದೇಶಿಕ ನಂಬಿಕೆಗಳನ್ನೂ ಅಪಮಾನಿಸುವಂತೆ ’ಕೆಲಸದವಳಾಗಿ’ ಬಿಂಬಿಸಿದ ಇತಿಹಾಸ ನಮ್ಮದು. ಇದರ ಭಾಗವಾಗಿಯೇ ಕನ್ನಡಿಗರ ಮನೆಮನೆಗಳಲ್ಲಿ ಅಭಿಮಾನವಿರಿಸಿಕೊಳ್ಳಬೇಕಿದ್ದ ಹೈದರಾಲಿ ಮತ್ತು ಟಿಪ್ಪು ಸುಲ್ತಾನರ ಕುರಿತ ಇತಿಹಾಸವನ್ನು ತಿರುಚಲಾಗುತ್ತಿದೆ. ಇಂತ ಇತಿಹಾಸದ ಉಬ್ಬುಶಿಲ್ಪಗಳಂಥ ದಾಖಲೆಗಳ ಒಳನುಗ್ಗಿ ರವಿಕುಮಾರ್ ಫಲವತ್ತಾದ ಸೌಹಾರ್ದವೂ, ಅವೈದಿಕವೂ, ಸಹಿಷ್ಣುವೂ ಆದ ದಲಿತ ಪರಂಪರೆಯ ಕಾರುಣ್ಯದ ನಿಜಕತೆಯನ್ನು ಹೆಕ್ಕಿದ್ದಾರೆ ಹಾಗೂ ಸಂಶೋಧಕರಿಗೆ ಮಾದರಿಯಾದ ಒಂದು ಮೇಲ್ಪಂಕ್ತಿಯನ್ನು ಹಾಕಿದ್ದಾರೆ.

ತಮ್ಮ ತಾಯಿ ಕುರನ್ಗರಾಯನ ಕುರಿತು ಹೇಳಿದ ಒಂದು ಕತೆಯ ಜಾಡನ್ನು ಹಿಡಿದು ಆ ಪ್ರದೇಶಕ್ಕೆ ಪ್ರವೇಶಿಸಿದ ರವಿ ಕನ್ನಡ ನಾಡಿನಲ್ಲಿ ಸಮಾಧಿಯಾಗಿರಬಹುದಾದ ದಲಿತರ ಮಹತ್ತರ ಇತಿಹಾಸದ ಶೋಧನಾ ಕಾರ್ಯವನ್ನು ಉದ್ಘಾಟಿಸಿದ್ದಾರೆ. ಈಗಾಗಲೇ ಬಹಳಷ್ಟು ವಿದ್ವಾಂಸರು ಈ ರೀತಿಯ ಸಂಶೋಧನೆಯನ್ನು ಕೈಗೊಂಡಿರುವರಾದರೂ ದಲಿತ ಸಂಶೋಧಕರ ಕಣ್ಣೋಟಕ್ಕೆ ದಕ್ಕುವ ದಾಖಲೆಗಳು ಹೊಸಹಾದಿಯನ್ನು ತೋರಬಲ್ಲವು.

ಶರಣರು ಬಾಳಿ ಹೋದ ಕನ್ನಡದ ನೆಲದಲ್ಲಿ ದಲಿತ ರಾಜನೊಬ್ಬ ಯುದ್ಧ ಮಾಡದೆ, ಯಾರನ್ನೂ ಒತ್ತೆಯಾಗಿಸಿಟ್ಟುಕೊಳ್ಳದೆ, ಲೋಲುಪನಾಗದೆ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ಇತಿಹಾಸವನ್ನು ಡಾ.ರವಿಕುಮಾರ್ ನೀಹ ನಮ್ಮೆದುರು ತೆರೆದಿಟ್ಟಿದ್ದಾರೆ. ಅವರು ಸಂಶೋಧನೆಗೆ ತೊಡಗಿದ ಭೂಪ್ರದೇಶದಲ್ಲಿ ಕೊರಮ ಜಾತಿಯಂತಹ ಸಣ್ಣ ಸಮುದಾಯಗಳ ರಾಜರೂ ಆಳಿರುವ ಬಗ್ಗೆ ಕುರುಹುಗಳಿವೆ. ಇದನ್ನು ರವಿಕುಮಾರ್ ಸಮರ್ಥವಾಗಿ ಗುರುತಿಸಿದ್ದಾರೆ. ಆ ಮೂಲಕ ನಿಜವಾದ ಭಾರತ ಚರಿತ್ರೆಗೆ
ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಮುಂದಡಿಯಿಟ್ಟಿದ್ದಾರೆ. ಅವರ ಸಂಶೋಧನೆಯ ’ಅರಸು ಕುರನ್ಗರಾಯ’ ಕನ್ನಡಿಗರೆಲ್ಲರೂ ಓದಲೇಬೇಕಾದ ಕೃತಿಯಾಗಿದೆ.

ಹುಲಿಕುಂಟೆ ಮೂರ್ತಿ

ಹುಲಿಕುಂಟೆ ಮೂರ್ತಿ
ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆಯ ಮೂರ್ತಿ, ಕನ್ನಡ ಅಧ್ಯಾಪಕರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂಎ ಮಾಡುವ ಮುಂಚಿನಿಂದಲೂ ಸಾಮಾಜಿಕ ಚಳವಳಿಗಳಲ್ಲಿ ಕ್ರಿಯಾಶೀಲರು. ‘ನೀಲಿ ಗ್ಯಾನ’ ಕವನ ಸಂಕಲನಕ್ಕೂ ಮುಂಚೆಯೇ ಕವಿಯಾಗಿ ಗುರುತು ಪಡೆದುಕೊಂಡಿದ್ದರು. ಕೌದಿ ಚಿತ್ರದ ಗೀತರಚನೆಗಾಗಿ ರಾಜ್ಯಪ್ರಶಸ್ತಿ ಪಡೆದಿದ್ದಾರೆ.


ಇದನ್ನೂ ಓದಿ: ಪುಸ್ತಕ ಪರಿಚಯ; ಕಾಣೆಯಾಗಿದ್ದಾರೆ ಸಂಪಾದಕರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...