Homeಮುಖಪುಟ$1=₹80 ಕಾರಣವೇನು ಮತ್ತು ಪರಿಣಾಮವೇನು?

$1=₹80 ಕಾರಣವೇನು ಮತ್ತು ಪರಿಣಾಮವೇನು?

- Advertisement -
- Advertisement -

ಈ ವರ್ಷದ ಜನವರಿಯಲ್ಲಿ (2022) ಒಂದು ಡಾಲರಿಗೆ, ರೂಪಾಯಿ ಮೌಲ್ಯ 74.50 ಇದ್ದದ್ದು ಆರು ತಿಂಗಳಲ್ಲಿ ನಿರಂತರ ಕುಸಿತ ಕಂಡು ಈಗ ಕೆಲವು ದಿನಗಳ ಹಿಂದೆ ಒಂದು ಡಾಲರಿಗೆ 80 ರೂಪಾಯಿ ದಾಟಿದೆ.

ನಮ್ಮ ದೇಶ ಹೊರದೇಶಗಳೊಂದಿಗೆ ಮಾಡುವ ಒಟ್ಟು ಆಮದು ರಫ್ತಿನಲ್ಲಿ ಶೇ.85.6ರಷ್ಟು ವ್ಯವಹಾರವನ್ನು ಡಾಲರಿನಲ್ಲಿ ಮಾಡುತ್ತದೆ. ಹಾಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಡಾಲರಿಗೆ ಬೇಡಿಕೆ ಜಾಸ್ತಿಯಾದಷ್ಟೂ ರೂಪಾಯಿಯ ಬೆಲೆ ಕುಸಿಯತೊಡಗುತ್ತದೆ. ಹಾಗೆಯೇ ಭಾರತ ತಾನು ಮಾಡುವ ರಫ್ತಿಗಿಂತ ಆಮದು ಜಾಸ್ತಿಯಾಗುತ್ತಾ ಹೋದಂತೆ ವ್ಯಾಪಾರದ ಕೊರತೆ ಜಾಸ್ತಿಯಾಗುವ ಜೊತೆಗೆ ಡಾಲರಿನ ಮುಂದೆ ರೂಪಾಯಿ ಬೆಲೆಯೂ ಕುಸಿಯುತ್ತಾ ಹೋಗುತ್ತದೆ.

2021ರ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್) 31 ಬಿಲಿಯನ್ ಡಾಲರುಗಳಷ್ಟಿದ್ದ ವ್ಯಾಪಾರದ ಕೊರತೆಯು (Trade deficit) ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 71 ಬಿಲಿಯನ್ ಡಾಲರುಗಳಷ್ಟಾಗಿದೆ. (ರಪ್ತು $119 ಬಿಲಿಯನ್ ಮತ್ತು ಆಮದು $190 ಬಿಲಿಯನ್). ಇದು ದಾಖಲೆ ಮಟ್ಟದ ವ್ಯಾಪಾರದ ಕೊರತೆಯಾಗಿದ್ದು ಡಾಲರಿನ ಮುಂದೆ ರೂಪಾಯಿ ಕುಸಿಯಲು ಒಂದು ಮುಖ್ಯ ಕಾರಣವಾದಂತಿದೆ.

ಹಾಗೆಯೇ ಕಡೆಯ ಎಂಟು ತಿಂಗಳುಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (Foreign Institutional Investors, FII) ಭಾರತದ ಮಾರುಕಟ್ಟೆಯಿಂದ 2.65 ಲಕ್ಷ ಕೋಟಿಯಷ್ಟು ಭಾರೀ ಮೊತ್ತದ ಹಣವನ್ನು ಹಿಂತೆಗೆದುಕೊಂಡಿದ್ದಾರೆ. ಅವರುಗಳು ಈ ಹಿಂತೆಗೆದಿರುವ ಹಣವನ್ನು ಡಾಲರಿಗೆ ಬದಲಾಯಿಸಿಕೊಳ್ಳುತ್ತಿರುವುದರಿಂದ ಡಾಲರಿಗೆ ಬೇಡಿಕೆ ಹೆಚ್ಚಾಗಿ, ಇದರಿಂದಲೂ ರೂಪಾಯಿ ಬೆಲೆ ಕುಸಿಯುತ್ತಾ ಬಂದಿದೆ.

ಒಂದು ಪಕ್ಷದಲ್ಲಿ ಇದೇ ಪರಿಸ್ಥಿತಿ ಉಲ್ಟಾ ಆಗಿದ್ದು, ಹೆಚ್ಚು ಡಾಲರು ಭಾರತದ ಮಾರುಕಟ್ಟಯಲ್ಲಿ ಹೂಡಿಕೆಯಾಗಿದ್ದರೆ ಆಗ ರೂಪಾಯಿಗೆ ಬೇಡಿಕೆ ಜಾಸ್ತಿಯಾಗಿರುತ್ತಿತ್ತು.

ಹೀಗೆ ಡಾಲರಿನ ಮುಂದೆ ರೂಪಾಯಿ ಬೆಲೆ ಕುಸಿಯುತ್ತಿರುವುದರಿಂದ ನಮ್ಮ ಮೇಲೆ ಏನು ಪರಿಣಾಮ ಬೀರುತ್ತಿದೆ?

2021-22ರಲ್ಲಿ ನಮಗೆ ಬೇಕಾದ ಒಟ್ಟು ಕಚ್ಚಾತೈಲದಲ್ಲಿ ಶೇ.85.6ರಷ್ಟನ್ನು ಆಮದು ಮಾಡಿಕೊಂಡಿದ್ದೇವೆ. ಈ ಕಚ್ಚಾತೈಲಕ್ಕೆ ನಾವು ಡಾಲರಿನಲ್ಲಿಯೆ ಪಾವತಿಸುತ್ತಿದ್ದೇವೆ. (ರಷ್ಯಾದಿಂದ ಶೇ.10ರಷ್ಟು ತೈಲ ಮಾತ್ರ ಖರೀದಿಸುತ್ತಿದ್ದೇವೆ, ಅದೂ ಕೇವಲ ಶೇ.6ರಷ್ಟು ಮಾತ್ರ ಕಡಿಮೆ ಬೆಲೆಗೆ).

ಡಾಲರಿನ ಎದುರು ರೂಪಾಯಿ ಕುಸಿದಷ್ಟೂ ಕಚ್ಚಾತೈಲಕ್ಕೆ ನಾವು ಕೊಡಬೇಕಾಗಿರುವ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ. ಇದರಿಂದಾಗಿ ದೇಶದೊಳಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್‌ನ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ (ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಿದಾಗ್ಯೂ ಕೂಡ).

ಈ ಕಾರಣಕ್ಕೇ ಕಳೆದ ಏಪ್ರಿಲ್-ಜೂನ್ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ.14ರಷ್ಟು ಮತ್ತು ಡೀಸೆಲ್ ಬೆಲೆ ಶೇ.9.3ರಷ್ಟು ಜಾಸ್ತಿಯಾಗಿದೆ. ನಮಗೆಲ್ಲಾ ತಿಳಿದಿರುವಂತೆ ಇದು ಎಲ್ಲಾ ದೈನಂದಿನ ಅಗತ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ.

ಹಾಗೆಯೇ ಭಾರತ ದೇಶವು ರಸಗೊಬ್ಬರವನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು ರೂಪಾಯಿ ಕುಸಿತದಿಂದಾಗಿ ರಸಗೊಬ್ಬರಕ್ಕೆ ಹೆಚ್ಚಿನ ಬೆಲೆ ತೆರಬೇಕಾಗಿ ಬರುತ್ತಿದೆ. ಇದು ಸರ್ಕಾರದ ಒಟ್ಟಾರೆ ವೆಚ್ಚವನ್ನು ಜಾಸ್ತಿ ಮಾಡುತ್ತಿದ್ದು, ಸರ್ಕಾರ ಸಾರ್ವಜನಿಕ ಸೇವೆಗಳಿಗೆ (ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಇತ್ಯಾದಿ) ಅಗತ್ಯವಾಗಿ ಮಾಡಬೇಕಾದ ವೆಚ್ಚಕ್ಕೆ ಕಡಿವಾಣ ಹಾಕಬೇಕಾದ ಪರಿಸ್ಥಿತಿ ಬರುತ್ತದೆ. ಇದು ಇಡೀ ಸಮಾಜದ ಅಭಿವೃದ್ದಿಯ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ತಪ್ಪಿಸಿಕೊಳ್ಳಲು ಕಷ್ಟವಾಗುವಂತ ಆರ್ಥಿಕ ವಿಷವರ್ತುಲದಲ್ಲಿ ಇಡೀ ದೇಶವನ್ನು ಸಿಲುಕಿಸುತ್ತದೆ.

ರೂಪಾಯಿ ಕುಸಿತದಿಂದ ಲಾಭವೇನಾದರೂ ಇದೆಯೆ?

ಡಾಲರಿನ ಮುಂದೆ ರೂಪಾಯಿಯ ಬೆಲೆ ಕಡಿಮೆಯಾದಷ್ಟೂ ನಾವು ರಫ್ತು ಮಾಡುವ ಸರಕು ಸೇವೆಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಬೆಲೆಗೆ ನಮ್ಮಿಂದ ರಫ್ತಾಗುವ ಸರಕು ಸೇವೆಗಳು ಲಭ್ಯವಾಗಿ ಅದರಿಂದ ರಫ್ತು ಹೆಚ್ಚಾಗುತ್ತಾ ವ್ಯಾಪಾರದ ಕೊರತೆ ಕಡಿಮೆಯಾಗಿ ನಮ್ಮ
ಅರ್ಥವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂಬ ವಾದವಿದೆ (ಈ ವಾದ ಚೈನಾ, ಜಪಾನುಗಳ ವಿಷಯದಲ್ಲಿ ನಿಜವೂ ಆಗಿದೆ).

ಆದರೆ, ಚೈನಾ ಅಥವಾ ಜಪಾನ್‌ಗಳ ಮಟ್ಟಕ್ಕೆ ರಫ್ತು ವ್ಯವಹಾರದಲ್ಲಿ ಭಾರತ ತಲುಪುವ ಲಕ್ಷಣಗಳು ಹತ್ತಿರದಲ್ಲೆಲ್ಲೂ ಕಾಣಿಸುತ್ತಿಲ್ಲ.

ಹಾಗಿದ್ದರೆ, ಸದ್ಯದಲ್ಲಿ ರೂಪಾಯಿ ಕುಸಿತ ತಡೆಯುವ ದಾರಿಗಳು ಇವೆಯೆ?

ಡಾಲರಿನ ಮುಂದೆ ರೂಪಾಯಿ ಶಕ್ತವಾಗಲು ಸದ್ಯ ಎರಡು ದಾರಿಗಳು ಕಾಣಿಸುತ್ತಿದ್ದರೂ ಅವು ಕ್ಷೀಣವಾದ ಸಾಧ್ಯತೆಗಳಾಗಿವೆ.

ಒಂದು, ಭಾರತದಿಂದ ಹೆಚ್ಚಿನ ಮಟ್ಟದಲ್ಲಿ ರಫ್ತಾಗುತ್ತಿರುವ ಐ.ಟಿ ಸೇವೆಗಳಿಂದ ರೂಪಾಯಿ ಬೆಲೆ ಹೆಚ್ಚಿಸಲು ಸಾಧ್ಯವಿದೆ. ಆದರೆ, ಯೂರೋಪ್ ಮತ್ತು ಅಮೆರಿಕದಲ್ಲಿ ಆರ್ಥಿಕ ಕುಸಿತದ/ ಹಿಂಜರಿತದ ನಿರೀಕ್ಷೆಯಿರುವುದರಿಂದ ಭಾರತದ ಐ.ಟಿ ಸೇವೆಗಳು ನಿರೀಕ್ಷೆಯ ಮಟ್ಟಕ್ಕೆ ರಫ್ತಾಗುವ ಸಾಧ್ಯತೆ ಕ್ಷೀಣವಾಗಿದೆ.

ಹಾಗಾಗಿ, ಐ.ಟಿ ಸೇವೆಗಳ ಹೆಚ್ಚಿನ ರಫ್ತಿನಿಂದ ರೂಪಾಯಿ ಕುಸಿತ ತಡೆಯಬಹುದೆನ್ನುವ ಸಾಧ್ಯತೆಯೂ ಫಲ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು, ಹೆಚ್ಚಿನ ವಿದೇಶಿ ನೇರ ಬಂಡವಾಳ ಹೂಡಿಕೆಯಿಂದ ಡಾಲರಿನ ಮುಂದೆ ರೂಪಾಯಿ ಬೇಡಿಕೆ ಹೆಚ್ಚಿಸಬಹುದು. ಅದರೆ, ಆರ್ಥಿಕ ಸದೃಢತೆಯ ಕೊರತೆಯಿಂದ ವಿದೇಶಿ ನೇರ ಬಂಡವಾಳವೂ ನಿರೀಕ್ಷಿತ ಮಟ್ಟಕ್ಕೆ ಬರುವುದು ಅಸಾಧ್ಯವಾಗಿದೆ.

ಜೊತೆಗೆ, ನಿರೀಕ್ಷಿತ ಜಾಗತಿಕ ಆರ್ಥಿಕ ಹಿಂಜರಿಕೆಯಿಂದಾಗಿ ಎನ್‌ಆರ್‌ಐಗಳಿಂದ (ವಿದೇಶದಲ್ಲಿ ನೆಲೆಸಿರುವ ಭಾರತೀಯರು) ಭಾರತಕ್ಕೆ ಬರುವ ಹಣವೂ ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚಿದೆ.

ಹೀಗೆ ಈ ಎಲ್ಲ ವಾಸ್ತವದ ಹಿನ್ನೆಲೆಯಲ್ಲಿ ಸದ್ಯಕ್ಕೆ ರೂಪಾಯಿಯ ಕುಸಿತ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳೇ ಕಾಣಿಸುತ್ತಿವೆ ಮತ್ತು ಇದರಿಂದ ಜನಸಾಮಾನ್ಯರ ಬದುಕು ಮತ್ತಷ್ಟು ದುಸ್ತರವಾಗುವ ಸಾಧ್ಯತೆಗಳೂ ನಿಚ್ಚಳವಾಗಿ ಗೋಚರಿಸುತ್ತಿವೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು 
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ಅಮೆರಿಕನ್ ಡಾಲರ್‌‌ ಮುಂದೆ 80ರೂ. ತಲುಪಲಿರುವ ಭಾರತೀಯ ರುಪಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...