Homeಕರ್ನಾಟಕಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ:...

ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ಸರ್ಕಾರವು ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದಷ್ಟು ಅಸಮರ್ಥವಾಗಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ತೀವ್ರವಾಗಿ ಹರಿಹಾಯ್ದಿದ್ದು, “ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ?” ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್’ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ’’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ ‘ಶಾಂತಿ ಕಾಪಾಡಿ’ ಎನ್ನುವ ಮಾತು ಬಂತಾ? ಬರಲಿಲ್ಲ. ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು” ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದಲ್ಲವೇ ವಿಪರ್ಯಾಸ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ರಾಜ್ಯ ಬಿಜೆಪಿ ಸರಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ NIAಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲವೆ, ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ” ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

“ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು?” ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ” ಎಂದು ಕುಮಾರ ಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...