Homeಕರ್ನಾಟಕಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ:...

ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ಸರ್ಕಾರವು ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದಷ್ಟು ಅಸಮರ್ಥವಾಗಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ತೀವ್ರವಾಗಿ ಹರಿಹಾಯ್ದಿದ್ದು, “ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ?” ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್’ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ’’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ ‘ಶಾಂತಿ ಕಾಪಾಡಿ’ ಎನ್ನುವ ಮಾತು ಬಂತಾ? ಬರಲಿಲ್ಲ. ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು” ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದಲ್ಲವೇ ವಿಪರ್ಯಾಸ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ರಾಜ್ಯ ಬಿಜೆಪಿ ಸರಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ NIAಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲವೆ, ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ” ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

“ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು?” ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ” ಎಂದು ಕುಮಾರ ಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...