Homeಮುಖಪುಟವಿಧಾನ ಪರಿಷತ್ ಚುನಾವಣೆ: ಬಾಬೂರಾವ್ ಚಿಂಚನಸೂರ್‌ಗೆ ಬಿಜೆಪಿ ಟಿಕೆಟ್

ವಿಧಾನ ಪರಿಷತ್ ಚುನಾವಣೆ: ಬಾಬೂರಾವ್ ಚಿಂಚನಸೂರ್‌ಗೆ ಬಿಜೆಪಿ ಟಿಕೆಟ್

- Advertisement -
- Advertisement -

ಸಿ.ಎಂ ಇಬ್ರಾಹಿಂರವರು ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಪಕ್ಷವು ಬಾಬೂರಾವ್ ಚಿಂಚನಸೂರ್‌ಗೆ ಟಿಕೆಟ್ ಘೋಷಿಸಿದೆ.

ಸಿಎಂ ಇಬ್ರಾಹಿಂರವರು ಕಾಂಗ್ರೆಸ್‌ನಿಂದ ವಿಧಾನಪರಿಷತ್ ಸದಸ್ಯರಾಗಿದ್ದರು. ಆ ನಂತರ ಕಾಂಗ್ರೆಸ್ ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ  ಆ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಸಲು ಆಗಸ್ಟ್ 1 ಕಡೆಯ ದಿನವಾಗಿದೆ.

ಕೋಲಿ ಸಮುದಾಯದವರಾದ ಚಿಂಚನಸೂರ್‌ರವರು ಪಕ್ಷದ ಒಳಗೆ ಭಿನ್ನಮತ ವ್ಯಕ್ತಪಡಿಸಿದ್ದರು. ವಿ.ಸೋಮಣ್ಣನವರ ಜೊತೆ ವಾಗ್ವಾದ ನಡೆಸಿ ಪಕ್ಷ ತ್ಯಜಿಸುವ ಸುಳಿವು ನೀಡಿದ್ದರು. ತಮ್ಮ ಹಳೆ ಪಕ್ಷ ಕಾಂಗ್ರೆಸ್‌ನತ್ತ ಚಿತ್ತ ನೆಟ್ಟಿದ್ದರು. ಈಗ ಅವರಿಗೆ ಟಿಕೆಟ್ ನೀಡಿ ಸಮಾಧಾನಪಡಿಸಲಾಗಿದೆ ಎನ್ನಲಾಗುತ್ತಿದೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಇದುವರೆಗೂ ಅಭ್ಯರ್ಥಿಯನ್ನು ಘೋಷಿಸಿಲ್ಲ.

ಇದನ್ನೂ ಓದಿ: ಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾನು ಆರ್‌ಎಸ್‌ಎಸ್ ಸದಸ್ಯ, ಕರೆದರೆ ಸಂಸ್ಥೆಗೆ ಹಿಂತಿರುಗಲು ಸಿದ್ಧ..’; ಬೀಳ್ಕೊಡುಗೆ ಸಮಾರಂಭದಲ್ಲಿ ಘೋಷಿಸಿದ ಹೈಕೋರ್ಟ್‌...

0
ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರು, 'ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯ' ಎಂದು ಹೇಳಿದ್ದಾರೆ. ನ್ಯಾಯಾಧೀಶರು ಮತ್ತು ಬಾರ್‌ ಕೌನ್ಸಿಲ್‌ ಸದಸ್ಯರ ಸಮ್ಮುಖದಲ್ಲಿ...