Homeಮುಖಪುಟ‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಸಂಜಯ್ ರಾವುತ್ ಅವರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಇಂದು ಸಂಜಯ್ ರಾವುತ್ ಅವರ ನಿವಾಸವನ್ನು ತಲುಪಿದೆ. “ಕೇಂದ್ರೀಯ ಸಂಸ್ಥೆಯ ತನಿಖೆಯು ನಕಲಿ ಸಾಕ್ಷ್ಯ ಆಧರಿಸಿದೆ” ಎಂದು ಶಿವಸೇನೆ ನಾಯಕ ರಾವುತ್‌ ಟ್ವೀಟ್ ಮಾಡಿದ್ದಾರೆ.

ಸಂಜಯ್‌ ರಾವುತ್‌ ಅವರಿಗೆ ಜುಲೈ 20 ಮತ್ತು ಜುಲೈ 27 ರಂದು ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಇ.ಡಿ. ಮುಂದೆ ಹಾಜರಾಗದ ಕಾರಣ, ಇ.ಡಿ. ತನಿಖಾಧಿಕಾರಿಗಳು ಇಂದು ರಾವುತ್‌ ಮನೆಗೆ ತಲುಪಿದ್ದಾರೆ. ಮುಂಬೈನಲ್ಲಿ ಚಾಲ್‌ (ವಠಾರ) ಪುನರಾಭಿವೃದ್ಧಿಗೆ ಸಂಬಂಧಿಸಿದಂತೆ ಸಂಜಯ್‌ ಅವರನ್ನು ಪ್ರಶ್ನಿಸಲು ಅಧಿಕಾರಿಗಳು ಆಗಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತರಾಗಿರುವ ರಾವುತ್ ಅವರು, ‘ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ದ್ವೇಷದಿಂದ ನನ್ನನ್ನು ಟಾರ್ಗೆಟ್ ಮಾಡಲಾಗಿದೆ’ ಎಂದು ಆರೋಪಿಸಿದ್ದಾರೆ.

“ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ. ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಮೇಲೆ ಪ್ರಾಮಾಣ ಮಾಡಿ ಇದನ್ನು ಹೇಳುತ್ತಿದ್ದೇನೆ. ಬಾಳಾಸಾಹೇಬರು ನಮಗೆ ಹೋರಾಡಲು ಕಲಿಸಿದರು. ನಾನು ಶಿವಸೇನೆಗಾಗಿ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಅವರು ಇಂದು ಬೆಳಿಗ್ಗೆ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ. “ನಕಲಿ ಕ್ರಮವಿದು. ಸುಳ್ಳು ಸಾಕ್ಷ್ಯಗಳಿವು. ನಾನು ಶಿವಸೇನೆಯನ್ನು ಬಿಡುವುದಿಲ್ಲ. ಸತ್ತರೂ ನಾನು ಶರಣಾಗುವುದಿಲ್ಲ. ಜೈ ಮಹಾರಾಷ್ಟ್ರ” ಎಂದು ರಾವುತ್‌ ತಿಳಿಸಿದ್ದಾರೆ.

ಬಿಜೆಪಿ ಶಾಸಕ ರಾಮ್ ಕದಂ ಅವರು, “ಶಿವಸೇನಾ ನಾಯಕ ಏಕೆ ಸಮನ್ಸ್‌ಗೆ ಉತ್ತರ ನೀಡಿಲ್ಲ? ರಾವುತ್‌ ಅವರು ಅಮಾಯಕರಾಗಿದ್ದರೆ ಜಾರಿ ನಿರ್ದೇಶನಾಲಯಕ್ಕೆ ಏಕೆ ಹೆದರುತ್ತಾರೆ? ಅವರು ಪತ್ರಿಕಾಗೋಷ್ಠಿಗಳನ್ನು ನಡೆಸಲು ಸಮಯ ಹೊಂದಿದ್ದಾರೆ. ಆದರೆ ವಿಚಾರಣೆಗಾಗಿ ತನಿಖಾ ಸಂಸ್ಥೆಯ ಕಚೇರಿಗೆ ಭೇಟಿ ನೀಡಲು ಸಮಯ ಹೊಂದಿಲ್ಲ” ಎಂದು ಟೀಕಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 1 ರಂದು ರಾವುತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಜುಲೈ 20 ರಂದು ಮತ್ತೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಯಿತು. ಆದರೆ ಸಂಸತ್‌ ಅಧಿವೇಶನದ ಕಾರಣ ಹಾಜರಾಗಲು ಸಾಧ್ಯವಿಲ್ಲ ಎಂದಿದ್ದರು. ಜುಲೈ 27 ರಂದು ಹಾಜರಾಗುವಂತೆ ತಿಳಿಸಲಾಯಿತು. ಆದರೆ ಅವರು ಹಾಜರಾಗಿರಲಿಲ್ಲ.

ಇದನ್ನೂ ಓದಿರಿ: ಕೇಶವಕೃಪಾದಲ್ಲಿ ಸಿದ್ಧವಾಯಿತೇ ಬಿಬಿಎಂಪಿ ವಾರ್ಡ್ ವಿಂಗಡಣೆಯ ವರದಿ?

ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿ, ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸಿದ ಏಕನಾಥ್ ಶಿಂಧೆಯವರ ಬಂಡಾಯದ ನಂತರ ಶಿವಸೇನೆಯ ಬಿಕ್ಕಟ್ಟನ್ನು ಶಮನ ಮಾಡುವಲ್ಲಿ ಸಂಜಯ್‌ ನಿರತರಾಗಿದ್ದಾರೆ. ಉದ್ಧವ್ ಠಾಕ್ರೆಯವರ ಬೆಂಬಲಕ್ಕೆ ರಾವುತ್ ನಿಂತಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ರಾಜಕೀಯ ನಾಟಕದ ನಡುವೆಯೇ ಜೂನ್ 28ರಂದು ಅವರಿಗೆ ಸಮನ್ಸ್ ನೀಡಿದಾಗ, “ಇಡಿ ನನ್ನನ್ನು ಕರೆಸಿದೆ ಎಂದು ನನಗೆ ಈಗಷ್ಟೇ ತಿಳಿದು ಬಂದಿದೆ. ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಬಾಳಾಸಾಹೇಬರ ಶಿವಸೈನಿಕರು ದೊಡ್ಡ ಕದನವನ್ನೇ ನಡೆಸುತ್ತಿದ್ದಾರೆ. ಇದು ನನ್ನನ್ನು ತಡೆಯುವ ಸಂಚು. ನೀವು ನನ್ನ ತಲೆ ಕಡಿದರೂ, ನಾನು ಗುವಾಹಟಿ ಮಾರ್ಗವನ್ನು ಹಿಡಿಯುವುದಿಲ್ಲ. ನನ್ನನ್ನು ಬಂಧಿಸಿ! ಜೈ ಹಿಂದ್!” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...