Homeಮುಖಪುಟಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಥರದ ಸಂಘಟನೆಗಳನ್ನು ನಿಷೇಧಿಸಬೇಕೆಂಬ ನಿರ್ಣಯವನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಸೇರಿದಂತೆ ಧಾರ್ಮಿಕ ಮುಖಂಡರು ತಾಳಿದ್ದಾರೆ.

“ಪಿಎಫ್‌ಐ ಥರದ ಸಂಘಟನೆಗಳು ವಿಭಜಕ ಅಜೆಂಡಾ ಹೊಂದಿವೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ” ಎಂಬ ಅಭಿಪ್ರಾಯ ನವದೆಹಲಿಯಲ್ಲಿ ಶನಿವಾರ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ, ವಿಭಜಕ ಕಾರ್ಯಸೂಚಿಯನ್ನು ಅನುಸರಿಸುವ, ನಮ್ಮ ನಾಗರಿಕರ ನಡುವೆ ವೈಷಮ್ಯವನ್ನು ಸೃಷ್ಟಿಸುವ ಪಿಎಫ್‌ಐ ಮತ್ತು ಅಂತಹ ಯಾವುದೇ ಸಂಘಟನೆಗಳನ್ನು ನಿಷೇಧಿಸಬೇಕು. ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಎಐಎಸ್‌ಎಸ್‌ಸಿ ಅಭಿಪ್ರಾಯ ತಾಳಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಯಾವುದಾದರೂ ಚರ್ಚೆಯ ವೇಳೆ ಯಾರಾದರೂ ಯಾವುದೇ ದೇವರುಗಳನ್ನು, ಪ್ರವಾದಿಗಳನ್ನು ಟಾರ್ಗೆಟ್ ಮಾಡಿ ಮಾತನಾಡಿದರೆ ಜನರು ಆ ಹೇಳಿಕೆಗಳನ್ನು ಖಂಡಿಸಬೇಕು ಎಂದು ಸೂಫಿಗಳು ಒತ್ತಾಯಿಸಿದ್ದಾರೆ.

ಎಐಎಸ್‌ಎಸ್‌ಸಿ ಮುಖ್ಯಸ್ಥ ಸೈಯದ್ ನಾಸಿರುದ್ದೀನ್ ಚಿಶ್ತಿ ಮಾತನಾಡಿ, “ಭಾರತದ ಜವಾಬ್ದಾರಿಯುತ ನಾಗರಿಕರಾಗಲು ತಮ್ಮ ಸಮುದಾಯವನ್ನು, ವಿಶೇಷವಾಗಿ ಯುವಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಎಲ್ಲಾ ಧಾರ್ಮಿಕ ಮುಖಂಡರು ಹೊಂದಿದ್ದಾರೆ ಎಂಬ ಸಂದೇಶವನ್ನು ನಾವು ನೀಡಲು ಬಯಸುತ್ತೇವೆ” ಎಂದಿದ್ದಾರೆ. (ಇಂಡಿಯಾ ಟುಡೇ ವರದಿ)

“ಧರ್ಮಗಳು ಮತ್ತು ಅವುಗಳ ಅನುಯಾಯಿಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. “ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುವ, ಅಂತರರಾಷ್ಟ್ರೀಯ ಪರಿಣಾಮಗಳನ್ನು ಉಂಟು ಮಾಡುವ, ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ತೀವ್ರಗಾಮಿ ಶಕ್ತಿಗಳನ್ನು ಎದುರಿಸಲು ವಿವಿಧ ಧರ್ಮಗಳ ನಾಯಕರು ಕ್ರಮ ವಹಿಸಬೇಕು” ಎಂದು ಆಶಿಸಿದರು.

“ಕೆಲವರು ಧರ್ಮದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಾರೆ. ಅದು ಇಡೀ ದೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿರಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಈ ಘಟನೆಗಳನ್ನು ನೋಡಿ ನಾವು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಧಾರ್ಮಿಕ ದ್ವೇಷವನ್ನು ಎದುರಿಸಲು, ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಯೊಂದು ಧಾರ್ಮಿಕ ಸಂಸ್ಥೆಯನ್ನು ಭಾರತದ ಭಾಗವಾಗಿ ಭಾವಿಸಬೇಕು. ಇದರಲ್ಲಿ ನಾವು ಒಟ್ಟಿಗೆ ಸಾಗಬೇಕು” ಎಂದು ದೋವಲ್ ಹೇಳಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆ ಹೊರಬಿದ್ದಿದೆ.

ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆಗೆ ಸಂಬಂಧಿಸಿದಂತೆ ಗಂಭೀರವಾದ ಚರ್ಚೆಯನ್ನು ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳ ನಡುವೆ ನಡೆಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಸಂಘಟಕರು ಪಿಟಿಐಗೆ ಪ್ರತಿಕ್ರಿಯಿಸಿದ್ದಾರೆ.

ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರಲು, ಮೂಲಭೂತವಾದಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲಾ ಧರ್ಮಗಳನ್ನು ಒಳಗೊಂಡಂತೆ ಹೊಸ ಸಂಸ್ಥೆಯನ್ನು ರಚಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...