Homeಕರ್ನಾಟಕಕೋಮುದ್ವೇಷ: ಕಾಳಿ ಸ್ವಾಮಿ ಮಾಡಿದ ಸಾಲುಸಾಲು ಪ್ರಚೋದನೆಗಳಿವು!

ಕೋಮುದ್ವೇಷ: ಕಾಳಿ ಸ್ವಾಮಿ ಮಾಡಿದ ಸಾಲುಸಾಲು ಪ್ರಚೋದನೆಗಳಿವು!

ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ನಿರಂತರ ದ್ವೇಷ ಕಾರುತ್ತಿರುವ ಕಾಳಿ ಸ್ವಾಮಿ ಮೇಲೆ ಸರ್ಕಾರ ಗಂಭೀರವಾದ ಕ್ರಮ ಜರುಗಿಸುವ ಅಗತ್ಯವಿದೆ.

- Advertisement -
- Advertisement -

“ಇನ್ನು ಒಂಬತ್ತು ಮುಸ್ಲಿಮರ ತಲೆಯನ್ನು ಕಡಿಯಬೇಕು” ಎಂದು ಪ್ರಚೋದನಾತ್ಮಕವಾಗಿ ಮಾತನಾಡಿದ ಕಾರಣ ಕಾಳಿ ಸ್ವಾಮಿ ಅಲಿಯಾಸ್ ಋಷಿಕುಮಾರ ಸ್ವಾಮೀಜಿ ವಿರುದ್ಧ ತುಮಕೂರಿನಲ್ಲಿ ಇಂದು ಪ್ರಕರಣ ದಾಖಲಾಗಿದೆ.

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ‍ ಕಾಳಿ ಸ್ವಾಮಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೂ ಪ್ರಚೋದನೆ ನೀಡಿ ಈಗ ಸುದ್ದಿಯಲ್ಲಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಈಗ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಪೊಲೀಸರು ಬಂಧಿಸುತ್ತಾರೋ ನೋಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾವಿ ಧರಿಸಿರುವ ವ್ಯಕ್ತಿಯೊಬ್ಬ ಹೀಗೆ ಅನಾಗರಿಕವಾಗಿ ಮಾತನಾಡುತ್ತಿರುವುದಕ್ಕೆ ಕನ್ನಡ ನಾಡಿನ ಜನತೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಕಾವಿಗೆ ಮಾಡುತ್ತಿರುವ ಅವಮಾನ ಇದೆಂದು ಪದೇ ಪದೇ ಜನಾಕ್ರೋಶ ವ್ಯಕ್ತವಾಗುತ್ತಿದ್ದರೂ ಕಾಳಿ ಸ್ವಾಮಿಯವರು ನಾಲಗೆ ಹರಿಬಿಡುವುದನ್ನು ನಿಲ್ಲಿಸಿಲ್ಲ.

ಇದನ್ನೂ ಓದಿರಿ: ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಕಳೆದ ಕೆಲವು ತಿಂಗಳಿಂದ ಕಾಳಿ ಸ್ವಾಮಿ ಸಾಮಾಜಿಕವಾಗಿ ಉಂಟು ಮಾಡಿರುವ ಕ್ಷೋಭೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕಾವಿ ಧರಿಸಿರುವ ವ್ಯಕ್ತಿಯೊಬ್ಬ ಮಾಡುತ್ತಿರುವ ಅವಾಂತರಗಳನ್ನು ಬೊಮ್ಮಾಯಿ ಸರ್ಕಾರ ಕಣ್ಣುಬಿಟ್ಟು ನೋಡಬೇಕಾದ ತುರ್ತಿದೆ.

ರಾಷ್ಟ್ರಕವಿ ಕುವೆಂಪುವಿಗೆ ಅಗೌರವ ವಿವಾದ

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮಿಯವರಿಗೆ ಮಸಿ ಬಳಿದ ಘಟನೆ ಮೇ ತಿಂಗಳಲ್ಲಿ ನಡೆದಿತ್ತು.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದರು.

ಆ ನಂತರದಲ್ಲಿ ಸ್ವಲ್ಪ ಬದಿಗೆ ಸರಿದಿದ್ದ ಕಾಳಿ ಸ್ವಾಮಿ ಈಗ ಮತ್ತೆ ಕ್ಷೋಭೆ ಉಂಟು ಮಾಡಲು ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಯ ಬಳಿಕ ಫಾಝಿಲ್‌ ಎಂಬ ಯುವಕನ ನೆತ್ತರು ಹರಿದಿದೆ. ಇನ್ನೂ ಒಂಬತ್ತು ಮುಸ್ಲಿಮರನ್ನು ಕೊಲ್ಲುತ್ತೇವೆ ಎಂದು ಕಾಳಿ ಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಮಸೀದಿ ಒಡೆಯಲು ಪ್ರಚೋದನೆ

ಶ್ರೀರಂಗಪಟ್ಟಣದಲ್ಲಿನ ಮಸೀದಿಯು ದೇವಸ್ಥಾನದ ಮೇಲೆ ನಿರ್ಮಾಣವಾಗಿದೆ. ಬಾಬ್ರಿ ಮಸೀದಿಯನ್ನು ಕೆಡವಿ ರಾಮ ಮಂದಿರ ನಿರ್ಮಾಣ ಮಾಡಿದಂತೆ ಶ್ರೀರಂಗಪಟ್ಟಣ ಮಸೀದಿಯನ್ನು ಕೆಡವಿ ಹನುಮ ಮಂದಿರವನ್ನು ಕಟ್ಟಬೇಕು ಎಂದಿದ್ದರು ಕಾಳಿ ಸ್ವಾಮಿ. ಬಳಿಕ ಅವರನ್ನು ಬಂಧಿಸಿ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಆದರೆ ಮಸೀದಿಯನ್ನು ಕೆಡವಬೇಕೆಂಬ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತೆ ಸಮರ್ಥಿಸಿಕೊಂಡಿದ್ದರು.

“ಶ್ರೀರಂಗಪಟ್ಟಣ ಎಂದರೆ ಗತ ವೈಭವವನ್ನು ಸಾರುವ ನೆಲವೀಡು. ಗಂಗರು, ಹೊಯ್ಸಳರು, ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಆಳಿದ ನೆಲ. ಎಲ್ಲಕ್ಕಿಂತ ಹೆಚ್ಚಾಗಿ ಶ್ರೀರಂಗಪಟ್ಟಣ ಎಂದರೆ ಹಿಂದೂ ಮುಸ್ಲಿಮರ ಭಾವೈಕ್ಯ ತಾಣ. ಸಾಮರಸ್ಯವೇ ಇಲ್ಲಿನ ಶಕ್ತಿ. ಇತ್ತೀಚೆಗೆ ಕೆಲವು ಮತಾಂಧ ಶಕ್ತಿಗಳು ಈ ಸಾಮರಸ್ಯವನ್ನು ಕದಡುವ ಕೆಲಸವನ್ನು ಮಾಡುತ್ತಿವೆ” ಎಂದು ತಮ್ಮ ವರದಿಯಲ್ಲಿ ಅಭಿಪ್ರಾಯತಾಳುತ್ತಾರೆ ಪ್ರಜಾವಾಣಿ ಪತ್ರಿಕೆಯ ಮೈಸೂರು ಬ್ಯುರೊ ಮುಖ್ಯಸ್ಥರಾದ ಕೆ.ನರಸಿಂಹಮೂರ್ತಿ. “ಸ್ಥಳೀಯವಾಗಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಹೊರಗಿನಿಂದ ಬಂದವರೇ ವಿವಾದವನ್ನು ಸೃಷ್ಟಿಸುತ್ತಿದ್ದಾರೆ” ಎಂಬ ಸಂಗತಿಯನ್ನು ತಮ್ಮ ವರದಿಯಲ್ಲಿ ಪ್ರಸ್ತಾಪಿಸಿದ್ದರು.

ಆಜಾನ್‌ ವಿರುದ್ಧ ವಿವಾದ ಸೃಷ್ಟಿ 

ದಿನಕ್ಕೆ ಐದು ಬಾರಿ ಪ್ರಾರ್ಥನೆಯನ್ನು ಸಲ್ಲಿಸುವುದು ಇಸ್ಲಾಂನಲ್ಲಿ ನಡೆದು ಬಂದಿರುವ ಸಂಪ್ರದಾಯ. ಆಜಾನ್‌ ಅಥವಾ ಅದಾನ್‌ ಎಂಬುದು ಪ್ರಾರ್ಥನೆಗೆ ನೀಡುವ ಕರೆಯೇ ಹೊರತು, ಪ್ರಾರ್ಥನೆಯಲ್ಲ. ಆದರೆ ಆಜಾನ್‌ಗೆ ವಿರುದ್ಧವಾಗಿ ಹನುಮಾನ್ ಚಾಲೀಸ್ ಹಾಡುತ್ತೇವೆ ಎಂಬ ಚರ್ಚೆಯನ್ನು ಮುನ್ನೆಲೆಗೆ ತರಲಾಯಿತು. ಕ್ಯಾಮೆರಾ ಮುಂದೆ ಧಾರ್ಮಿಕತೆಯನ್ನು ಪ್ರದರ್ಶಿಸುವ ಕೆಲಸವೂ ಆಯಿತು.

ಆಜಾನ್‌ನ ಹಿನ್ನೆಲೆ ಉದ್ದೇಶ ತಿಳಿಯದ ಧರ್ಮಗುರು ಕಾಳಿ ಸ್ವಾಮಿ, ಮೈಕ್‌ ಹಿಡಿದು ರಾಮಜಪ ಮಾಡಿ ವಿಡಿಯೊ ಹರಿಬಿಟ್ಟಿದ್ದರು. ಬೆಂಗಳೂರಿನ ಚುಂಚನ ಘಟ್ಟದಲ್ಲಿರುವ ರಾಮಾಂಜನೇಯ ದೇವಾಲಯಲ್ಲಿ ಧ್ವನಿ ವರ್ಧಕ ಅಳವಡಿಸಿ ಬೆಳಿಗ್ಗೆ 5.33ಕ್ಕೆ 3 ಬಾರಿ ರಾಮ ಜಪ ಮಾಡಿದ್ದರು. ಇದು ಕೂಡ ಭಾರೀ ಟ್ರೋಲ್‌ಗೆ ಒಳಗಾಗಿತ್ತು.

ಹಲಾಲ್‌ ಕಟ್‌ v/s ಜಟ್ಕಾ ಕಟ್‌

ಯುಗಾದಿ ವರ್‍ಸತೊಡಕಿನ ಆಚೀಚೆ ಹಲಾಲ್‌ ಕಟ್‌ಗೆ ವಿರುದ್ಧವಾಗಿ ಜಟ್ಕಾ ಕಟ್‌ ಎಂಬ ವಿವಾದ ಸೃಷ್ಟಿಯಾಯಿತು. ಮುಸ್ಲಿಮರ ಬಳಿ ಮಾಂಸ ಖರೀದಿಸಬೇಡಿ ಎಂದು ಹಬ್ಬಿಸಲಾಯಿತು. ಹಿಂದೂ ಸಮಾಜದ ಜನರೇ ಸರಿಯಾಗಿ ಝಾಡಿಸಿದ ಮೇಲೆ ವಿವಾದ ಬದಿಗೆ ಸರಿಯಿತು.

ಹಲಾಲ್‌ ಕಟ್‌ ಎಂದರೇನು? ಜಟ್ಕಾ ಕಟ್ ಎಂದರೇನು? ಎಂದು ಪ್ರಜ್ಞಾವಂತರು ವಿವರಿಸಿದರು. ತಿನ್ನುವ ಅನ್ನದಲ್ಲೆಲ್ಲ ಮತಾಂಧತೆಯನ್ನು ಹುಡುಕುವುದನ್ನು ಜನರು ಟೀಕಿಸಿದರು.

ಇದನ್ನೂ ಓದಿರಿ: ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?

ವಿವಾದ ಮುಂಚೂಣಿಯಲ್ಲಿದ್ದ ಸಂದರ್ಭದಲ್ಲಿ ಗಾಯಕ್ಕೆ ಉಪ್ಪು ಸವರುವ ಕೆಲಸ ಮಾಡಿದ ಕಾಳಿ ಸ್ವಾಮೀಜಿ, “ಹಿಂದೂ ಧರ್ಮದ ಯುವಕರು ಜಟ್ಕಾ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು ಬಲಿಷ್ಠಗೊಳಿಸಬೇಕು” ಎಂದರು.

ಹಿಂದೂವೀ ಜಟ್ಕಾ ಮಾರ್ಟ್‌ ಎಂಬ ಮಳಿಗೆಯಲ್ಲಿ ದೇವರ ಫೋಟೋಕ್ಕೆ ಪೂಜೆ ಸಲ್ಲಿಸಿ ನಂತರ ಕರಿ ಕೋಳಿಯೊಂದನ್ನು ಜಟ್ಕಾ ಕಟ್ ಮಾಡಲು ಕಾಳಿ ಸ್ವಾಮಿ ಮುಂದಾದರು. ಈ ವಿಡಿಯೊ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಕಾಳಿ ಸ್ವಾಮಿಯವರ ವರ್ತನೆಯನ್ನು ಕೆಲವು ಸ್ವಾಮೀಜಿಗಳು ಟೀಕಿಸಿದ್ದರು. ಜನರು ವ್ಯಂಗ್ಯವಾಡಿದರು.

ಕೋಮು ಕೇಂದ್ರಿತ ಪ್ರಕರಣಗಳಲ್ಲಿ ಕಾಳಿ ಸ್ವಾಮೀಯವರ ಉಪಸ್ಥಿತಿ ಇದ್ದೇ ಇರುತ್ತದೆ. ಸಂವಿಧಾನ ಬಾಹಿರವಾಗಿ, ಒಂದು ಸಮುದಾಯದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ಸಮಾಜದಲ್ಲಿ ದ್ವೇಷ ಬೆಳೆಸುತ್ತಾ ಕಾಳಿ ಸ್ವಾಮೀಜಿ ವೈಯಕ್ತಿಯ ಪ್ರಚಾರವನ್ನು ಪಡೆಯುತ್ತಿದ್ದಾರೆ. ಇಂಥವರ ಎದುರು ಲೋಗೋಗಳನ್ನು ಹಿಡಿಯುವ ಮಾಧ್ಯಮ ಮಂದಿಯೂ ಪಾಠ ಕಲಿತಂತೆ ಕಾಣುತ್ತಿಲ್ಲ.

“ಎಲ್ಲ ಜನವರ್ಗವನ್ನು ಪ್ರೀತಿ, ಗೌರವದಿಂದ ಕಾಣುವವರು ನಿಜವಾದ ಸ್ವಾಮೀಜಿ” ಎನ್ನುತ್ತಾರೆ ಗದುಗಿನ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ. ಆದರೆ ಋಷಿಕುಮಾರ ಸ್ವಾಮಿಯಂಥವರು ಈ ಎಲ್ಲೆಗಳನ್ನು ಮೀರಿದಂತೆ ಕಾಣುತ್ತಾರೆ. ಹೀಗಾಗಿ ವಿಪರೀತ ಟ್ರೋಲ್‌ಗೂ ಒಳಗಾಗಿದ್ದಾರೆ. ಆದರೆ ಈ ಟ್ರೋಲ್‌ಗಳನ್ನೇ ಭೂಷಣವೆಂಬಂತೆ ಕಾಳಿ ಸ್ವಾಮೀಜಿ ಭಾವಿಸಿದ್ದಾರೇನೋ! ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು- ಇಂತಹ ಫ್ರಿಂಜ್‌ ಎಲಿಮೆಂಟ್‌ಗಳ ವಿರುದ್ಧ ಕ್ರಮ ಜರುಗಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...