Homeಕರ್ನಾಟಕಕೋಮುದ್ವೇಷ: ಕಾಳಿ ಸ್ವಾಮಿ ಮಾಡಿದ ಸಾಲುಸಾಲು ಪ್ರಚೋದನೆಗಳಿವು!

ಕೋಮುದ್ವೇಷ: ಕಾಳಿ ಸ್ವಾಮಿ ಮಾಡಿದ ಸಾಲುಸಾಲು ಪ್ರಚೋದನೆಗಳಿವು!

ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ನಿರಂತರ ದ್ವೇಷ ಕಾರುತ್ತಿರುವ ಕಾಳಿ ಸ್ವಾಮಿ ಮೇಲೆ ಸರ್ಕಾರ ಗಂಭೀರವಾದ ಕ್ರಮ ಜರುಗಿಸುವ ಅಗತ್ಯವಿದೆ.

- Advertisement -
- Advertisement -

“ಇನ್ನು ಒಂಬತ್ತು ಮುಸ್ಲಿಮರ ತಲೆಯನ್ನು ಕಡಿಯಬೇಕು” ಎಂದು ಪ್ರಚೋದನಾತ್ಮಕವಾಗಿ ಮಾತನಾಡಿದ ಕಾರಣ ಕಾಳಿ ಸ್ವಾಮಿ ಅಲಿಯಾಸ್ ಋಷಿಕುಮಾರ ಸ್ವಾಮೀಜಿ ವಿರುದ್ಧ ತುಮಕೂರಿನಲ್ಲಿ ಇಂದು ಪ್ರಕರಣ ದಾಖಲಾಗಿದೆ.

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ‍ ಕಾಳಿ ಸ್ವಾಮಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೂ ಪ್ರಚೋದನೆ ನೀಡಿ ಈಗ ಸುದ್ದಿಯಲ್ಲಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಈಗ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಪೊಲೀಸರು ಬಂಧಿಸುತ್ತಾರೋ ನೋಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾವಿ ಧರಿಸಿರುವ ವ್ಯಕ್ತಿಯೊಬ್ಬ ಹೀಗೆ ಅನಾಗರಿಕವಾಗಿ ಮಾತನಾಡುತ್ತಿರುವುದಕ್ಕೆ ಕನ್ನಡ ನಾಡಿನ ಜನತೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಕಾವಿಗೆ ಮಾಡುತ್ತಿರುವ ಅವಮಾನ ಇದೆಂದು ಪದೇ ಪದೇ ಜನಾಕ್ರೋಶ ವ್ಯಕ್ತವಾಗುತ್ತಿದ್ದರೂ ಕಾಳಿ ಸ್ವಾಮಿಯವರು ನಾಲಗೆ ಹರಿಬಿಡುವುದನ್ನು ನಿಲ್ಲಿಸಿಲ್ಲ.

ಇದನ್ನೂ ಓದಿರಿ: ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಕಳೆದ ಕೆಲವು ತಿಂಗಳಿಂದ ಕಾಳಿ ಸ್ವಾಮಿ ಸಾಮಾಜಿಕವಾಗಿ ಉಂಟು ಮಾಡಿರುವ ಕ್ಷೋಭೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕಾವಿ ಧರಿಸಿರುವ ವ್ಯಕ್ತಿಯೊಬ್ಬ ಮಾಡುತ್ತಿರುವ ಅವಾಂತರಗಳನ್ನು ಬೊಮ್ಮಾಯಿ ಸರ್ಕಾರ ಕಣ್ಣುಬಿಟ್ಟು ನೋಡಬೇಕಾದ ತುರ್ತಿದೆ.

ರಾಷ್ಟ್ರಕವಿ ಕುವೆಂಪುವಿಗೆ ಅಗೌರವ ವಿವಾದ

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮಿಯವರಿಗೆ ಮಸಿ ಬಳಿದ ಘಟನೆ ಮೇ ತಿಂಗಳಲ್ಲಿ ನಡೆದಿತ್ತು.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದರು.

ಆ ನಂತರದಲ್ಲಿ ಸ್ವಲ್ಪ ಬದಿಗೆ ಸರಿದಿದ್ದ ಕಾಳಿ ಸ್ವಾಮಿ ಈಗ ಮತ್ತೆ ಕ್ಷೋಭೆ ಉಂಟು ಮಾಡಲು ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಯ ಬಳಿಕ ಫಾಝಿಲ್‌ ಎಂಬ ಯುವಕನ ನೆತ್ತರು ಹರಿದಿದೆ. ಇನ್ನೂ ಒಂಬತ್ತು ಮುಸ್ಲಿಮರನ್ನು ಕೊಲ್ಲುತ್ತೇವೆ ಎಂದು ಕಾಳಿ ಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಮಸೀದಿ ಒಡೆಯಲು ಪ್ರಚೋದನೆ

ಶ್ರೀರಂಗಪಟ್ಟಣದಲ್ಲಿನ ಮಸೀದಿಯು ದೇವಸ್ಥಾನದ ಮೇಲೆ ನಿರ್ಮಾಣವಾಗಿದೆ. ಬಾಬ್ರಿ ಮಸೀದಿಯನ್ನು ಕೆಡವಿ ರಾಮ ಮಂದಿರ ನಿರ್ಮಾಣ ಮಾಡಿದಂತೆ ಶ್ರೀರಂಗಪಟ್ಟಣ ಮಸೀದಿಯನ್ನು ಕೆಡವಿ ಹನುಮ ಮಂದಿರವನ್ನು ಕಟ್ಟಬೇಕು ಎಂದಿದ್ದರು ಕಾಳಿ ಸ್ವಾಮಿ. ಬಳಿಕ ಅವರನ್ನು ಬಂಧಿಸಿ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಆದರೆ ಮಸೀದಿಯನ್ನು ಕೆಡವಬೇಕೆಂಬ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತೆ ಸಮರ್ಥಿಸಿಕೊಂಡಿದ್ದರು.

“ಶ್ರೀರಂಗಪಟ್ಟಣ ಎಂದರೆ ಗತ ವೈಭವವನ್ನು ಸಾರುವ ನೆಲವೀಡು. ಗಂಗರು, ಹೊಯ್ಸಳರು, ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಆಳಿದ ನೆಲ. ಎಲ್ಲಕ್ಕಿಂತ ಹೆಚ್ಚಾಗಿ ಶ್ರೀರಂಗಪಟ್ಟಣ ಎಂದರೆ ಹಿಂದೂ ಮುಸ್ಲಿಮರ ಭಾವೈಕ್ಯ ತಾಣ. ಸಾಮರಸ್ಯವೇ ಇಲ್ಲಿನ ಶಕ್ತಿ. ಇತ್ತೀಚೆಗೆ ಕೆಲವು ಮತಾಂಧ ಶಕ್ತಿಗಳು ಈ ಸಾಮರಸ್ಯವನ್ನು ಕದಡುವ ಕೆಲಸವನ್ನು ಮಾಡುತ್ತಿವೆ” ಎಂದು ತಮ್ಮ ವರದಿಯಲ್ಲಿ ಅಭಿಪ್ರಾಯತಾಳುತ್ತಾರೆ ಪ್ರಜಾವಾಣಿ ಪತ್ರಿಕೆಯ ಮೈಸೂರು ಬ್ಯುರೊ ಮುಖ್ಯಸ್ಥರಾದ ಕೆ.ನರಸಿಂಹಮೂರ್ತಿ. “ಸ್ಥಳೀಯವಾಗಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಹೊರಗಿನಿಂದ ಬಂದವರೇ ವಿವಾದವನ್ನು ಸೃಷ್ಟಿಸುತ್ತಿದ್ದಾರೆ” ಎಂಬ ಸಂಗತಿಯನ್ನು ತಮ್ಮ ವರದಿಯಲ್ಲಿ ಪ್ರಸ್ತಾಪಿಸಿದ್ದರು.

ಆಜಾನ್‌ ವಿರುದ್ಧ ವಿವಾದ ಸೃಷ್ಟಿ 

ದಿನಕ್ಕೆ ಐದು ಬಾರಿ ಪ್ರಾರ್ಥನೆಯನ್ನು ಸಲ್ಲಿಸುವುದು ಇಸ್ಲಾಂನಲ್ಲಿ ನಡೆದು ಬಂದಿರುವ ಸಂಪ್ರದಾಯ. ಆಜಾನ್‌ ಅಥವಾ ಅದಾನ್‌ ಎಂಬುದು ಪ್ರಾರ್ಥನೆಗೆ ನೀಡುವ ಕರೆಯೇ ಹೊರತು, ಪ್ರಾರ್ಥನೆಯಲ್ಲ. ಆದರೆ ಆಜಾನ್‌ಗೆ ವಿರುದ್ಧವಾಗಿ ಹನುಮಾನ್ ಚಾಲೀಸ್ ಹಾಡುತ್ತೇವೆ ಎಂಬ ಚರ್ಚೆಯನ್ನು ಮುನ್ನೆಲೆಗೆ ತರಲಾಯಿತು. ಕ್ಯಾಮೆರಾ ಮುಂದೆ ಧಾರ್ಮಿಕತೆಯನ್ನು ಪ್ರದರ್ಶಿಸುವ ಕೆಲಸವೂ ಆಯಿತು.

ಆಜಾನ್‌ನ ಹಿನ್ನೆಲೆ ಉದ್ದೇಶ ತಿಳಿಯದ ಧರ್ಮಗುರು ಕಾಳಿ ಸ್ವಾಮಿ, ಮೈಕ್‌ ಹಿಡಿದು ರಾಮಜಪ ಮಾಡಿ ವಿಡಿಯೊ ಹರಿಬಿಟ್ಟಿದ್ದರು. ಬೆಂಗಳೂರಿನ ಚುಂಚನ ಘಟ್ಟದಲ್ಲಿರುವ ರಾಮಾಂಜನೇಯ ದೇವಾಲಯಲ್ಲಿ ಧ್ವನಿ ವರ್ಧಕ ಅಳವಡಿಸಿ ಬೆಳಿಗ್ಗೆ 5.33ಕ್ಕೆ 3 ಬಾರಿ ರಾಮ ಜಪ ಮಾಡಿದ್ದರು. ಇದು ಕೂಡ ಭಾರೀ ಟ್ರೋಲ್‌ಗೆ ಒಳಗಾಗಿತ್ತು.

ಹಲಾಲ್‌ ಕಟ್‌ v/s ಜಟ್ಕಾ ಕಟ್‌

ಯುಗಾದಿ ವರ್‍ಸತೊಡಕಿನ ಆಚೀಚೆ ಹಲಾಲ್‌ ಕಟ್‌ಗೆ ವಿರುದ್ಧವಾಗಿ ಜಟ್ಕಾ ಕಟ್‌ ಎಂಬ ವಿವಾದ ಸೃಷ್ಟಿಯಾಯಿತು. ಮುಸ್ಲಿಮರ ಬಳಿ ಮಾಂಸ ಖರೀದಿಸಬೇಡಿ ಎಂದು ಹಬ್ಬಿಸಲಾಯಿತು. ಹಿಂದೂ ಸಮಾಜದ ಜನರೇ ಸರಿಯಾಗಿ ಝಾಡಿಸಿದ ಮೇಲೆ ವಿವಾದ ಬದಿಗೆ ಸರಿಯಿತು.

ಹಲಾಲ್‌ ಕಟ್‌ ಎಂದರೇನು? ಜಟ್ಕಾ ಕಟ್ ಎಂದರೇನು? ಎಂದು ಪ್ರಜ್ಞಾವಂತರು ವಿವರಿಸಿದರು. ತಿನ್ನುವ ಅನ್ನದಲ್ಲೆಲ್ಲ ಮತಾಂಧತೆಯನ್ನು ಹುಡುಕುವುದನ್ನು ಜನರು ಟೀಕಿಸಿದರು.

ಇದನ್ನೂ ಓದಿರಿ: ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?

ವಿವಾದ ಮುಂಚೂಣಿಯಲ್ಲಿದ್ದ ಸಂದರ್ಭದಲ್ಲಿ ಗಾಯಕ್ಕೆ ಉಪ್ಪು ಸವರುವ ಕೆಲಸ ಮಾಡಿದ ಕಾಳಿ ಸ್ವಾಮೀಜಿ, “ಹಿಂದೂ ಧರ್ಮದ ಯುವಕರು ಜಟ್ಕಾ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು ಬಲಿಷ್ಠಗೊಳಿಸಬೇಕು” ಎಂದರು.

ಹಿಂದೂವೀ ಜಟ್ಕಾ ಮಾರ್ಟ್‌ ಎಂಬ ಮಳಿಗೆಯಲ್ಲಿ ದೇವರ ಫೋಟೋಕ್ಕೆ ಪೂಜೆ ಸಲ್ಲಿಸಿ ನಂತರ ಕರಿ ಕೋಳಿಯೊಂದನ್ನು ಜಟ್ಕಾ ಕಟ್ ಮಾಡಲು ಕಾಳಿ ಸ್ವಾಮಿ ಮುಂದಾದರು. ಈ ವಿಡಿಯೊ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಕಾಳಿ ಸ್ವಾಮಿಯವರ ವರ್ತನೆಯನ್ನು ಕೆಲವು ಸ್ವಾಮೀಜಿಗಳು ಟೀಕಿಸಿದ್ದರು. ಜನರು ವ್ಯಂಗ್ಯವಾಡಿದರು.

ಕೋಮು ಕೇಂದ್ರಿತ ಪ್ರಕರಣಗಳಲ್ಲಿ ಕಾಳಿ ಸ್ವಾಮೀಯವರ ಉಪಸ್ಥಿತಿ ಇದ್ದೇ ಇರುತ್ತದೆ. ಸಂವಿಧಾನ ಬಾಹಿರವಾಗಿ, ಒಂದು ಸಮುದಾಯದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ಸಮಾಜದಲ್ಲಿ ದ್ವೇಷ ಬೆಳೆಸುತ್ತಾ ಕಾಳಿ ಸ್ವಾಮೀಜಿ ವೈಯಕ್ತಿಯ ಪ್ರಚಾರವನ್ನು ಪಡೆಯುತ್ತಿದ್ದಾರೆ. ಇಂಥವರ ಎದುರು ಲೋಗೋಗಳನ್ನು ಹಿಡಿಯುವ ಮಾಧ್ಯಮ ಮಂದಿಯೂ ಪಾಠ ಕಲಿತಂತೆ ಕಾಣುತ್ತಿಲ್ಲ.

“ಎಲ್ಲ ಜನವರ್ಗವನ್ನು ಪ್ರೀತಿ, ಗೌರವದಿಂದ ಕಾಣುವವರು ನಿಜವಾದ ಸ್ವಾಮೀಜಿ” ಎನ್ನುತ್ತಾರೆ ಗದುಗಿನ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ. ಆದರೆ ಋಷಿಕುಮಾರ ಸ್ವಾಮಿಯಂಥವರು ಈ ಎಲ್ಲೆಗಳನ್ನು ಮೀರಿದಂತೆ ಕಾಣುತ್ತಾರೆ. ಹೀಗಾಗಿ ವಿಪರೀತ ಟ್ರೋಲ್‌ಗೂ ಒಳಗಾಗಿದ್ದಾರೆ. ಆದರೆ ಈ ಟ್ರೋಲ್‌ಗಳನ್ನೇ ಭೂಷಣವೆಂಬಂತೆ ಕಾಳಿ ಸ್ವಾಮೀಜಿ ಭಾವಿಸಿದ್ದಾರೇನೋ! ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು- ಇಂತಹ ಫ್ರಿಂಜ್‌ ಎಲಿಮೆಂಟ್‌ಗಳ ವಿರುದ್ಧ ಕ್ರಮ ಜರುಗಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...